Homeಕರ್ನಾಟಕಗುಜರಾತಿ ಮಾತೃಭಾಷೆಯ ಅಮಿತ್‌ ಶಾ ಹಿಂದಿ ಭಾಷೆಯ ಗುಲಾಮಗಿರಿ‌ ಮಾಡುತ್ತಿದ್ದಾರೆ: ಸಿದ್ದರಾಮಯ್ಯ ವಿಷಾದ

ಗುಜರಾತಿ ಮಾತೃಭಾಷೆಯ ಅಮಿತ್‌ ಶಾ ಹಿಂದಿ ಭಾಷೆಯ ಗುಲಾಮಗಿರಿ‌ ಮಾಡುತ್ತಿದ್ದಾರೆ: ಸಿದ್ದರಾಮಯ್ಯ ವಿಷಾದ

ವಿವಿಧ ರಾಜ್ಯಗಳ ಜನರು ಪರಸ್ಪರ ಹಿಂದಿಯಲ್ಲಿ ಸಂವಹಿಸಿ ಎಂದ ಗೃಹ ಸಚಿವನ ವಿರುದ್ದ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ರಾಜ್ಯಗಳು ಪರಸ್ಪರ ಸಂಪರ್ಕ ಭಾಷೆಯಾಗಿ ಹಿಂದಿಯನ್ನು‌ ಬಳಸಬೇಕೆಂದು ಒಕ್ಕೂಟ ಸರ್ಕಾರದ ಗೃಹಸಚಿವ ಅಮಿತ್ ಶಾ ಅವರು ಫರ್ಮಾನು ಹೊರಡಿಸಿರುವುದು ಅತ್ಯಂತ‌ ಆಕ್ಷೇಪಾರ್ಹ ನಡವಳಿಕೆಯಾಗಿದೆ. ಒಬ್ಬ ಸ್ವಾಭಿಮಾನಿ‌ ಕನ್ನಡಿಗನಾಗಿ‌ ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

“ಹಿಂದಿ, ಇಂಗ್ಲೀಷ್, ತಮಿಳು,‌ಮಲೆಯಾಳಿ, ಗುಜರಾತಿ ಸೇರಿದಂತೆ ಯಾವ ಭಾಷೆಗೂ ನಾವು ವಿರೋಧಿಗಳಲ್ಲ. ಆದರೆ ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಸ್ಥಾನ. ಯಾವುದೇ ಒಂದು ಭಾಷೆಯನ್ನು ಹೇರಲು ಹೊರಟರೆ ಸಹಿಸಲು ಸಾಧ್ಯ ಇಲ್ಲ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಮ್ಮ ಭಾಷಾ ನಿಲುವು ಮತ್ತು ದೇಶ-ರಾಜ್ಯಗಳ ಸಂಬಂಧವನ್ನು ರಾಷ್ಟ್ರಕವಿ‌ ಕುವೆಂಪು ಅವರು ದಶಕಗಳ ಹಿಂದೆಯೇ ಸ್ಪಷ್ಟವಾಗಿ ವ್ಯಾಖ್ಯಾನಿಸಿದ್ದಾರೆ. ಜಯಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ’ ಎನ್ನುವ ಕವಿ ನುಡಿಯೇ ನಮ್ಮ ಭಾಷಾ ಸಿದ್ಧಾಂತ” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಇದನ್ನೂ ಓದಿ: ವಿವಿಧ ರಾಜ್ಯಗಳ ಜನರು ಪರಸ್ಪರ ಹಿಂದಿಯಲ್ಲಿ ಸಂವಹಿಸಿ, ಇಂಗ್ಲಿಷ್‌ ಬೇಡ: ಅಮಿತ್‌ ಶಾ

“ಗುಜರಾತಿನಿಂದ ಬಂದಿರುವ ಅಮಿತ್ ಶಾ ಅವರ ಮಾತೃಭಾಷೆ ಗುಜರಾತಿ. ಇವರು ತಮ್ಮ ಮಾತೃಭಾಷೆಯನ್ನೇ ಕಡೆಗಣಿಸಿ ಹಿಂದಿ ಭಾಷೆಯ ಗುಲಾಮಗಿರಿ‌ ಮಾಡುತ್ತಿರುವುದು ವಿಷಾದನೀಯ. ಅಮಿತ್ ಶಾ ಅವರ ತವರು ಗುಜರಾತ್ ರಾಜ್ಯದ ಮಣ್ಣಿನ‌ ಮಗನಾದ ಮಹಾತ್ಮ ಗಾಂಧೀಜಿ ಬಹು ಸಂಸ್ಕೃತಿ, ಬಹುಭಾಷೆಗಳ ಪ್ರತಿಪಾದಕರಾಗಿದ್ದರು. ಆದರೆ ಅಮಿತ್ ಶಾ ಅವರಿಗೆ ಗಾಂಧೀಜಿಯವರಿಗಿಂತ ಏಕ ಸಂಸ್ಕೃತಿ, ಏಕಭಾಷೆಯ ಪ್ರತಿಪಾದಕರಾದ ಸೂಡೊ ರಾಷ್ಟ್ರೀಯವಾದಿ ಸಾವರ್ಕರ್ ಪ್ರಿಯರಾಗಿರುವುದು ದುರಂತ” ಎಂದು ಹೇಳಿದ್ದಾರೆ.

“ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದ ಹಿಂದಿಯನ್ನು ರಾಷ್ಟ್ರಭಾಷೆ ಎನ್ನುವ ರೀತಿಯಲ್ಲಿ ಬಿಂಬಿಸುವ ಜೊತೆಯಲ್ಲಿ, ರಾಜ್ಯ ಭಾಷೆಗಳನ್ನು ದಮನಿಸುವ ಪ್ರಯತ್ನ ನಡೆಯುತ್ತಲೇ ಇದೆ. ಇದನ್ನು ಹಿಂದಿಯೇತರ ಭಾಷೆಗಳನ್ನಾಡುವ ರಾಜ್ಯಗಳು ಕೂಡಿ ಪ್ರತಿಭಟಿಸುವ ಕಾಲ ಸನ್ನಿಹಿತವಾಗಿದೆ” ಎಂದು ಸಿದ್ದರಾಮಯ್ಯ ಅವರು ಎಚ್ಚರಿಸಿದ್ದಾರೆ.

“ತಮಿಳುನಾಡು, ಕೇರಳ,‌ಆಂಧ್ರಪ್ರದೇಶ, ಒಡಿಸ್ಸಾ, ಪಶ್ಚಿಮ ಬಂಗಾಳ ಮತ್ತು ಈಶಾನ್ಯ ರಾಜ್ಯಗಳು ಸೇರಿದಂತೆ ದೇಶದ ಬಹುತೇಕ ರಾಜ್ಯಗಳು ಹಿಂದಿಯನ್ನು ಅಧಿಕೃತ ಸಂಪರ್ಕಭಾಷೆಯಾಗಿ ಬಳಸುವುದಿಲ್ಲ. ಅವುಗಳ ಜೊತೆಯಲ್ಲಿ ಹಿಂದಿಯಲ್ಲಿ ವ್ಯವಹರಿಸಬೇಕೆನ್ನುವುದು ಸಾಂಸ್ಕೃತಿಕ ಭಯೋತ್ಪಾದನೆಯಾಗಿದೆ” ಎಂದು ಅವರು ಹೇಳಿದ್ದಾರೆ.

“ಒಕ್ಕೂಟ ಸರ್ಕಾರದ ಗೃಹಸಚಿವರ ಈ ಹೇಳಿಕೆ ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವಿರುದ್ಧವಾಗಿರುವುದು ಮಾತ್ರವಲ್ಲ ಮಾತೃಭಾಷೆಗಳಿಗೆ ಮಾಡಿರುವ ಅವಮಾನವಾಗಿದೆ. ಅನಗತ್ಯ ಘರ್ಷಣೆಗೆ ಎಡೆಮಾಡಿಕೊಡುವ ಈ ಬೇಜವಾಬ್ದಾರಿ ಹೇಳಿಕೆಯನ್ನು ಅಮಿತ್ ಶಾ ಅವರು ತಕ್ಷಣ ಹಿಂದೆಗೆದುಕೊಳ್ಳಬೇಕು” ಎಂದು ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ‘ಇವ ನಮ್ಮವ’ ಪರಂಪರೆ ನಮ್ಮದು: ನಿಜ ಆಧ್ಯಾತ್ಮಿಕ ಮಠಾಧೀಶರ ಮನದಾಳದ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...