Homeರಾಜಕೀಯ‘ಅಮಿತ್‌ ಶಾ, ಬಿ.ಎಲ್. ಸಂತೋಷ್ ಮತ್ತು ಜೆ.ಪಿ. ನಡ್ಡಾ’: ಆಪರೇಷನ್‌ ಕಮಲ ಹ್ಯಾಂಡಲ್ ಮಾಡುವ ರಾಷ್ಟ್ರೀಯ...

‘ಅಮಿತ್‌ ಶಾ, ಬಿ.ಎಲ್. ಸಂತೋಷ್ ಮತ್ತು ಜೆ.ಪಿ. ನಡ್ಡಾ’: ಆಪರೇಷನ್‌ ಕಮಲ ಹ್ಯಾಂಡಲ್ ಮಾಡುವ ರಾಷ್ಟ್ರೀಯ ತಂಡ!

ಪ್ರಧಾನಿ ಮೋದಿ ಎಲ್ಲವನ್ನೂ ಗಮನಿಸುತ್ತಾ ಇರುತ್ತಾರೆ ಮತ್ತು ಅವರಿಗೆ ಕಾಲಕಾಲಕ್ಕೆ ಮಾಹಿತಿಗಳನ್ನು ನೀಡುತ್ತಾರೆ

- Advertisement -
- Advertisement -

ತೆಲಂಗಾಣದಲ್ಲಿ ಆಪರೇಷನ್‌ ಕಮಲ ನಡೆಸಲು ಬಿಜೆಪಿ ದಳ್ಳಾಳಿಗಳನ್ನು ಕಳುಹಿಸಿದೆ ಎಂದು ಆರೋಪಿಸಿ ಇತ್ತೀಚೆಗೆ ಮೂವರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದರು. ಆದರೆ ಬಿಜೆಪಿ ಈ ಆರೋಪವನ್ನು ನಿರಾಕರಿಸಿತ್ತು. ಆದರೆ ಆಡಳಿತರೂಢ ಟಿಆರ್‌ಎಸ್‌ ಆಪಾದಿತ ಬಿಜೆಪಿಯ ದಳ್ಳಾಳಿಗಳು ತಮ್ಮ ಪಕ್ಷದ ಶಾಸಕರೊಂದಿಗೆ ನಡೆಸಿದ ವಿಡಿಯೊವನ್ನು ಇದೀಗ ಬಿಡುಗಡೆ ಮಾಡಿದೆ.

ಟಿಆರ್‌‌ಎಸ್‌ ಪಕ್ಷ ಬಿಡುಗಡೆ ಮಾಡಿರುವ ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಟ್ವಿಟರ್‌ನಲ್ಲಿ #LotusLeaks (ಲೋಟಸ್‌ ಲೀಕ್) ಟ್ರೆಂಡ್ ಆಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಡಿಯೊದಲ್ಲಿ, ‘‘ರಾಷ್ಟ್ರಮಟ್ಟದ ತಂಡ ಆಪರೇಷಣ್ ಕಮಲ ಮಾಡುತ್ತದೆ ಮತ್ತು ಈ ತಂಡದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌, ಗೃಹ ಸಚಿವ ಅಮಿತ್‌ ಶಾ ಮತ್ತು ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಇದ್ದಾರೆ” ಎಂದು ಆಪಾದಿತ ದಳ್ಳಾಳಿಗಳು ಹೇಳಿರುವುದು ದಾಖಲಾಗಿದೆ.

ಇದನ್ನೂ ಓದಿ: ತೆಲಂಗಾಣ ಶಾಸಕರ ಖರೀದಿಗೆ ಬಿಜೆಪಿ ಯತ್ನ ಆರೋಪ: ವಿಡಿಯೊ ಪ್ರದರ್ಶಿಸಿದ ಮುಖ್ಯಮಂತ್ರಿ ಕೆಸಿಆರ್‌

ವೈರಲ್ ಆಗಿರುವ ಒಂದು ವಿಡಿಯೊದಲ್ಲಿ ಟಿಆರ್‌ಎಸ್‌ ಶಾಸಕ ಕೇರಳದ ಬಿಜೆಡಿಎಸ್‌ ನಾಯಕ ತುಷಾರ್‌ ವೆಳ್ಳಪ್ಪಳ್ಳಿ ಅವರೊಂದಿಗೆ ಮಾತನಾಡಿದ್ದಾರೆ. ತುಷಾರ್‌ ವೆಳ್ಳಪಳ್ಳಿ ಅವರು ಕೇರಳದಲ್ಲಿ ಬಿಜೆಪಿಯ ಮೈತ್ರಿ ಪಕ್ಷವಾಗಿದ್ದು, ಕಳೆದ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರ ವಿರುದ್ಧ ಸ್ಪರ್ಧಿಸಿದ್ದರು. ಜೊತೆಗೆ ಅವರು ಅಮಿತ್ ಶಾ ಅವರ ಆಪ್ತ ಎಂದು ವರದಿಯಾಗಿದೆ.

ಟಿಆರ್‌ಎಸ್‌ ಶಾಸಕ ತುಷಾರ್‌ ವೆಳ್ಳಪ್ಪಳ್ಳಿ ಅವರೊಂದಿಗೆ ಫೋನ್‌ ಮೂಲಕ ಮಾತನಾಡಿದ್ದು ವಿಡಿಯೊದಲ್ಲಿ ದಾಖಲಾಗಿದ್ದು, ಅವರು ಆಪರೇಷನ್ ಕಮಲ ಬಗ್ಗೆ ಮಾತನಾಡಲು ಬಿ.ಎಲ್. ಸಂತೋಷ್ ಅವರ ಭೇಟಿಯ ಬಗ್ಗೆ ಬಗ್ಗೆ ಹೇಳುತ್ತಾರೆ. ಜೊತೆಗೆ ಜೆ.ಪಿ. ನಡ್ಡಾ ಅವರ ಹೆಸರನ್ನು ಕೂಡಾ ತುಷಾರ್‌ ಅವರು ಹೇಳುತ್ತಾರೆ.

ಇದನ್ನೂ ಓದಿ: ‘ಬಿಜೆಪಿಯಿಂದ ಆಪರೇಷನ್ ಕಮಲಕ್ಕೆ ಯತ್ನ, 30 ಶಾಸಕರಿಗೆ ತಲಾ 100 ಕೋಟಿ ರೂ. ಆಫರ್‌‌’: ತೆಲಂಗಾಣ ಸಿಎಂ ಕೆಸಿಆರ್ 

ಮತ್ತೊಂದು ವಿಡಿಯೊದಲ್ಲಿ ಬಿಜೆಪಿಯ ದಳ್ಳಾಳಿಯೊಬ್ಬ ಮಾತನಾಡುತ್ತಾ, ‘‘ನೀವು ಸೇರಿದ ಕೂಡಲೆ ನಿಮಗೆ ಪಕ್ಷದ ವತಿಯಿಂದ ಬಿ ಫಾರ್ಮ್‌‌ ನೀಡುವುದು ಖಚಿತವಾಗಿದೆ. ಬಿಜೆಪಿ ಪಕ್ಷದಲ್ಲಿ ಇವು ಎಲ್ಲವನ್ನು ನಿಭಾಯಿಸುವುದು ನಮ್ಮ ರಾಷ್ಟ್ರೀಯ ತಂಡವಾಗಿದ್ದು, ರಾಜ್ಯದ ತಂಡ ಇದರಲ್ಲಿ ತಲೆಹಾಕುವುದಿಲ್ಲ. ಈ ತಂಡದಲ್ಲಿ ಒಂದನೆಯದಾಗಿ ಬಿ.ಎಲ್. ಸಂತೋಷ್, ಎರಡನೆಯದ್ದಾಗಿ ಅಮಿತ್ ಶಾ ಹಾಗೂ ಮೂರನೆಯದ್ದಾಗಿ ಜೆಪಿ ನಡ್ಡಾ” ಎಂದು ಹೇಳುತ್ತಾರೆ.

ಮತ್ತೊಂದು ವಿಡಿಯೊದಲ್ಲಿ ಪ್ರತಿ ಶಾಕರಿಗೆ 50 ಕೋಟಿ ನೀಡುವುದಾಗಿ ಆಪಾದಿತ ಬಿಜೆಪಿ ದಳ್ಳಾಳಿಗಳು ಹೇಳುವುದು ದಾಖಲಾಗಿದ್ದು, ಬಿಎಲ್‌ ಸಂತೋಷ್ ಮತ್ತು ಅಮಿತ್‌ ಶಾ ಅವರೊಂದಿಗೆ ಸಭೆ ನಡೆಸುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ತೆಲಂಗಾಣ: ಬಿಜೆಪಿಯಿಂದ ಆಪರೇಷನ್‌ ಕಮಲಕ್ಕೆ ಯತ್ನ; ಕೇಂದ್ರ ಸಚಿವರ ಆಪ್ತ ಸೇರಿದಂತೆ ಮೂವರ ಬಂಧನ

ಆಪರೇಷನ್‌ ಕಮಲದಲ್ಲಿ ಪ್ರಧಾನ ಮಂತ್ರಿ ಇಲ್ಲವೆ ಎಂಬ ಬಗ್ಗೆ ಕೇಳಿದಾಗ, ಅವರು ಇದರಲ್ಲಿ ಡೈರೆಕ್ಟ್‌ ಆಗಿ ಇರುವುದಿಲ್ಲ. ಎಲ್ಲವನ್ನೂ ಅವರು ಗಮನಿಸುತ್ತಾ ಇರುತ್ತಾರೆ ಮತ್ತು ಅವರಿಗೆ ಕಾಲಕಾಲಕ್ಕೆ ಮಾಹಿತಿಗಳನ್ನು ನೀಡುತ್ತಲೆ ಇರುತ್ತಾರೆ ಎಂದು ಆಪಾದಿತ ಬಿಜೆಪಿಯ ದಳ್ಳಾಳಿಯೊಬ್ಬ ಹೇಳುತ್ತಾರೆ.

ಇಷ್ಟೆ ಅಲ್ಲದೆ, ದಳ್ಳಾಳಿಗಳ ತಂಡದಲ್ಲಿದ್ದ ಸ್ವಾಮಿಜಿಯೊಬ್ಬ ಕರ್ನಾಟಕ ಮತ್ತು ಮಹಾರಾಷ್ಟ್ರದ ಸರ್ಕಾರಗಳನ್ನು ಉರುಳಿಸಿರುವ ಬಗ್ಗೆ ಹೆಮ್ಮೆಯಿಂದ ಮಾತನಾಡುತ್ತಾನೆ.

ಇದನ್ನೂ ಓದಿ: ತೆಲಂಗಾಣ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಮಾಧಿ ಮಾಡಿ ಪ್ರತಿಭಟನೆ!

ಬಿಜೆಪಿಯ ದಳ್ಳಾಳಿಗಳು ಎನ್ನಲಾಗಿರುವ ಮೂವರ ಜೊತೆಗೆ ಟಿಆರ್‌ಎಸ್‌ ಪಕ್ಷದ ಶಾಸಕರು ಸಭೆ ನಡೆಸಿದ ನಂತರ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರಿಗೆ ಸಿಕ್ಕಿಬಿದ್ದ ಮೂವರು ಪ್ರಮುಖ ಆರೋಪಿಗಳು ಬಿಜೆಪಿ ಹಿನ್ನೆಲೆಯವರು ಎಂದು ವರದಿಯಾಗಿದೆ. ಆರೋಪಿಗಳನ್ನು ಹರಿಯಾಣದ ಫರಿದಾಬಾದ್ ಮೂಲದ ಪೂಜಾರಿಯಾಗಿರುವ ಸತೀಶ್ ಶರ್ಮಾ (33), ತಿರುಪತಿಯ ಶ್ರೀಮನಾಥ ರಾಜ ಪೀಠದ ಪೀಠಾಧಿಪತಿ D. ಸಿಂಹಯಾಜಿ(45), ಹಾಗೂ ಸರೂರನಗರದ ಉದ್ಯಮಿ ನಂದಕುಮಾರ್ (48) ಎಂದು ಗುರುತಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...