Homeರಾಜಕೀಯ‘ಅಮಿತ್‌ ಶಾ, ಬಿ.ಎಲ್. ಸಂತೋಷ್ ಮತ್ತು ಜೆ.ಪಿ. ನಡ್ಡಾ’: ಆಪರೇಷನ್‌ ಕಮಲ ಹ್ಯಾಂಡಲ್ ಮಾಡುವ ರಾಷ್ಟ್ರೀಯ...

‘ಅಮಿತ್‌ ಶಾ, ಬಿ.ಎಲ್. ಸಂತೋಷ್ ಮತ್ತು ಜೆ.ಪಿ. ನಡ್ಡಾ’: ಆಪರೇಷನ್‌ ಕಮಲ ಹ್ಯಾಂಡಲ್ ಮಾಡುವ ರಾಷ್ಟ್ರೀಯ ತಂಡ!

ಪ್ರಧಾನಿ ಮೋದಿ ಎಲ್ಲವನ್ನೂ ಗಮನಿಸುತ್ತಾ ಇರುತ್ತಾರೆ ಮತ್ತು ಅವರಿಗೆ ಕಾಲಕಾಲಕ್ಕೆ ಮಾಹಿತಿಗಳನ್ನು ನೀಡುತ್ತಾರೆ

- Advertisement -
- Advertisement -

ತೆಲಂಗಾಣದಲ್ಲಿ ಆಪರೇಷನ್‌ ಕಮಲ ನಡೆಸಲು ಬಿಜೆಪಿ ದಳ್ಳಾಳಿಗಳನ್ನು ಕಳುಹಿಸಿದೆ ಎಂದು ಆರೋಪಿಸಿ ಇತ್ತೀಚೆಗೆ ಮೂವರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದರು. ಆದರೆ ಬಿಜೆಪಿ ಈ ಆರೋಪವನ್ನು ನಿರಾಕರಿಸಿತ್ತು. ಆದರೆ ಆಡಳಿತರೂಢ ಟಿಆರ್‌ಎಸ್‌ ಆಪಾದಿತ ಬಿಜೆಪಿಯ ದಳ್ಳಾಳಿಗಳು ತಮ್ಮ ಪಕ್ಷದ ಶಾಸಕರೊಂದಿಗೆ ನಡೆಸಿದ ವಿಡಿಯೊವನ್ನು ಇದೀಗ ಬಿಡುಗಡೆ ಮಾಡಿದೆ.

ಟಿಆರ್‌‌ಎಸ್‌ ಪಕ್ಷ ಬಿಡುಗಡೆ ಮಾಡಿರುವ ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಟ್ವಿಟರ್‌ನಲ್ಲಿ #LotusLeaks (ಲೋಟಸ್‌ ಲೀಕ್) ಟ್ರೆಂಡ್ ಆಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಡಿಯೊದಲ್ಲಿ, ‘‘ರಾಷ್ಟ್ರಮಟ್ಟದ ತಂಡ ಆಪರೇಷಣ್ ಕಮಲ ಮಾಡುತ್ತದೆ ಮತ್ತು ಈ ತಂಡದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌, ಗೃಹ ಸಚಿವ ಅಮಿತ್‌ ಶಾ ಮತ್ತು ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಇದ್ದಾರೆ” ಎಂದು ಆಪಾದಿತ ದಳ್ಳಾಳಿಗಳು ಹೇಳಿರುವುದು ದಾಖಲಾಗಿದೆ.

ಇದನ್ನೂ ಓದಿ: ತೆಲಂಗಾಣ ಶಾಸಕರ ಖರೀದಿಗೆ ಬಿಜೆಪಿ ಯತ್ನ ಆರೋಪ: ವಿಡಿಯೊ ಪ್ರದರ್ಶಿಸಿದ ಮುಖ್ಯಮಂತ್ರಿ ಕೆಸಿಆರ್‌

ವೈರಲ್ ಆಗಿರುವ ಒಂದು ವಿಡಿಯೊದಲ್ಲಿ ಟಿಆರ್‌ಎಸ್‌ ಶಾಸಕ ಕೇರಳದ ಬಿಜೆಡಿಎಸ್‌ ನಾಯಕ ತುಷಾರ್‌ ವೆಳ್ಳಪ್ಪಳ್ಳಿ ಅವರೊಂದಿಗೆ ಮಾತನಾಡಿದ್ದಾರೆ. ತುಷಾರ್‌ ವೆಳ್ಳಪಳ್ಳಿ ಅವರು ಕೇರಳದಲ್ಲಿ ಬಿಜೆಪಿಯ ಮೈತ್ರಿ ಪಕ್ಷವಾಗಿದ್ದು, ಕಳೆದ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರ ವಿರುದ್ಧ ಸ್ಪರ್ಧಿಸಿದ್ದರು. ಜೊತೆಗೆ ಅವರು ಅಮಿತ್ ಶಾ ಅವರ ಆಪ್ತ ಎಂದು ವರದಿಯಾಗಿದೆ.

ಟಿಆರ್‌ಎಸ್‌ ಶಾಸಕ ತುಷಾರ್‌ ವೆಳ್ಳಪ್ಪಳ್ಳಿ ಅವರೊಂದಿಗೆ ಫೋನ್‌ ಮೂಲಕ ಮಾತನಾಡಿದ್ದು ವಿಡಿಯೊದಲ್ಲಿ ದಾಖಲಾಗಿದ್ದು, ಅವರು ಆಪರೇಷನ್ ಕಮಲ ಬಗ್ಗೆ ಮಾತನಾಡಲು ಬಿ.ಎಲ್. ಸಂತೋಷ್ ಅವರ ಭೇಟಿಯ ಬಗ್ಗೆ ಬಗ್ಗೆ ಹೇಳುತ್ತಾರೆ. ಜೊತೆಗೆ ಜೆ.ಪಿ. ನಡ್ಡಾ ಅವರ ಹೆಸರನ್ನು ಕೂಡಾ ತುಷಾರ್‌ ಅವರು ಹೇಳುತ್ತಾರೆ.

ಇದನ್ನೂ ಓದಿ: ‘ಬಿಜೆಪಿಯಿಂದ ಆಪರೇಷನ್ ಕಮಲಕ್ಕೆ ಯತ್ನ, 30 ಶಾಸಕರಿಗೆ ತಲಾ 100 ಕೋಟಿ ರೂ. ಆಫರ್‌‌’: ತೆಲಂಗಾಣ ಸಿಎಂ ಕೆಸಿಆರ್ 

ಮತ್ತೊಂದು ವಿಡಿಯೊದಲ್ಲಿ ಬಿಜೆಪಿಯ ದಳ್ಳಾಳಿಯೊಬ್ಬ ಮಾತನಾಡುತ್ತಾ, ‘‘ನೀವು ಸೇರಿದ ಕೂಡಲೆ ನಿಮಗೆ ಪಕ್ಷದ ವತಿಯಿಂದ ಬಿ ಫಾರ್ಮ್‌‌ ನೀಡುವುದು ಖಚಿತವಾಗಿದೆ. ಬಿಜೆಪಿ ಪಕ್ಷದಲ್ಲಿ ಇವು ಎಲ್ಲವನ್ನು ನಿಭಾಯಿಸುವುದು ನಮ್ಮ ರಾಷ್ಟ್ರೀಯ ತಂಡವಾಗಿದ್ದು, ರಾಜ್ಯದ ತಂಡ ಇದರಲ್ಲಿ ತಲೆಹಾಕುವುದಿಲ್ಲ. ಈ ತಂಡದಲ್ಲಿ ಒಂದನೆಯದಾಗಿ ಬಿ.ಎಲ್. ಸಂತೋಷ್, ಎರಡನೆಯದ್ದಾಗಿ ಅಮಿತ್ ಶಾ ಹಾಗೂ ಮೂರನೆಯದ್ದಾಗಿ ಜೆಪಿ ನಡ್ಡಾ” ಎಂದು ಹೇಳುತ್ತಾರೆ.

ಮತ್ತೊಂದು ವಿಡಿಯೊದಲ್ಲಿ ಪ್ರತಿ ಶಾಕರಿಗೆ 50 ಕೋಟಿ ನೀಡುವುದಾಗಿ ಆಪಾದಿತ ಬಿಜೆಪಿ ದಳ್ಳಾಳಿಗಳು ಹೇಳುವುದು ದಾಖಲಾಗಿದ್ದು, ಬಿಎಲ್‌ ಸಂತೋಷ್ ಮತ್ತು ಅಮಿತ್‌ ಶಾ ಅವರೊಂದಿಗೆ ಸಭೆ ನಡೆಸುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ತೆಲಂಗಾಣ: ಬಿಜೆಪಿಯಿಂದ ಆಪರೇಷನ್‌ ಕಮಲಕ್ಕೆ ಯತ್ನ; ಕೇಂದ್ರ ಸಚಿವರ ಆಪ್ತ ಸೇರಿದಂತೆ ಮೂವರ ಬಂಧನ

ಆಪರೇಷನ್‌ ಕಮಲದಲ್ಲಿ ಪ್ರಧಾನ ಮಂತ್ರಿ ಇಲ್ಲವೆ ಎಂಬ ಬಗ್ಗೆ ಕೇಳಿದಾಗ, ಅವರು ಇದರಲ್ಲಿ ಡೈರೆಕ್ಟ್‌ ಆಗಿ ಇರುವುದಿಲ್ಲ. ಎಲ್ಲವನ್ನೂ ಅವರು ಗಮನಿಸುತ್ತಾ ಇರುತ್ತಾರೆ ಮತ್ತು ಅವರಿಗೆ ಕಾಲಕಾಲಕ್ಕೆ ಮಾಹಿತಿಗಳನ್ನು ನೀಡುತ್ತಲೆ ಇರುತ್ತಾರೆ ಎಂದು ಆಪಾದಿತ ಬಿಜೆಪಿಯ ದಳ್ಳಾಳಿಯೊಬ್ಬ ಹೇಳುತ್ತಾರೆ.

ಇಷ್ಟೆ ಅಲ್ಲದೆ, ದಳ್ಳಾಳಿಗಳ ತಂಡದಲ್ಲಿದ್ದ ಸ್ವಾಮಿಜಿಯೊಬ್ಬ ಕರ್ನಾಟಕ ಮತ್ತು ಮಹಾರಾಷ್ಟ್ರದ ಸರ್ಕಾರಗಳನ್ನು ಉರುಳಿಸಿರುವ ಬಗ್ಗೆ ಹೆಮ್ಮೆಯಿಂದ ಮಾತನಾಡುತ್ತಾನೆ.

ಇದನ್ನೂ ಓದಿ: ತೆಲಂಗಾಣ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಮಾಧಿ ಮಾಡಿ ಪ್ರತಿಭಟನೆ!

ಬಿಜೆಪಿಯ ದಳ್ಳಾಳಿಗಳು ಎನ್ನಲಾಗಿರುವ ಮೂವರ ಜೊತೆಗೆ ಟಿಆರ್‌ಎಸ್‌ ಪಕ್ಷದ ಶಾಸಕರು ಸಭೆ ನಡೆಸಿದ ನಂತರ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರಿಗೆ ಸಿಕ್ಕಿಬಿದ್ದ ಮೂವರು ಪ್ರಮುಖ ಆರೋಪಿಗಳು ಬಿಜೆಪಿ ಹಿನ್ನೆಲೆಯವರು ಎಂದು ವರದಿಯಾಗಿದೆ. ಆರೋಪಿಗಳನ್ನು ಹರಿಯಾಣದ ಫರಿದಾಬಾದ್ ಮೂಲದ ಪೂಜಾರಿಯಾಗಿರುವ ಸತೀಶ್ ಶರ್ಮಾ (33), ತಿರುಪತಿಯ ಶ್ರೀಮನಾಥ ರಾಜ ಪೀಠದ ಪೀಠಾಧಿಪತಿ D. ಸಿಂಹಯಾಜಿ(45), ಹಾಗೂ ಸರೂರನಗರದ ಉದ್ಯಮಿ ನಂದಕುಮಾರ್ (48) ಎಂದು ಗುರುತಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....