Homeರಾಜಕೀಯ‘ಅಮಿತ್‌ ಶಾ, ಬಿ.ಎಲ್. ಸಂತೋಷ್ ಮತ್ತು ಜೆ.ಪಿ. ನಡ್ಡಾ’: ಆಪರೇಷನ್‌ ಕಮಲ ಹ್ಯಾಂಡಲ್ ಮಾಡುವ ರಾಷ್ಟ್ರೀಯ...

‘ಅಮಿತ್‌ ಶಾ, ಬಿ.ಎಲ್. ಸಂತೋಷ್ ಮತ್ತು ಜೆ.ಪಿ. ನಡ್ಡಾ’: ಆಪರೇಷನ್‌ ಕಮಲ ಹ್ಯಾಂಡಲ್ ಮಾಡುವ ರಾಷ್ಟ್ರೀಯ ತಂಡ!

ಪ್ರಧಾನಿ ಮೋದಿ ಎಲ್ಲವನ್ನೂ ಗಮನಿಸುತ್ತಾ ಇರುತ್ತಾರೆ ಮತ್ತು ಅವರಿಗೆ ಕಾಲಕಾಲಕ್ಕೆ ಮಾಹಿತಿಗಳನ್ನು ನೀಡುತ್ತಾರೆ

- Advertisement -
- Advertisement -

ತೆಲಂಗಾಣದಲ್ಲಿ ಆಪರೇಷನ್‌ ಕಮಲ ನಡೆಸಲು ಬಿಜೆಪಿ ದಳ್ಳಾಳಿಗಳನ್ನು ಕಳುಹಿಸಿದೆ ಎಂದು ಆರೋಪಿಸಿ ಇತ್ತೀಚೆಗೆ ಮೂವರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದರು. ಆದರೆ ಬಿಜೆಪಿ ಈ ಆರೋಪವನ್ನು ನಿರಾಕರಿಸಿತ್ತು. ಆದರೆ ಆಡಳಿತರೂಢ ಟಿಆರ್‌ಎಸ್‌ ಆಪಾದಿತ ಬಿಜೆಪಿಯ ದಳ್ಳಾಳಿಗಳು ತಮ್ಮ ಪಕ್ಷದ ಶಾಸಕರೊಂದಿಗೆ ನಡೆಸಿದ ವಿಡಿಯೊವನ್ನು ಇದೀಗ ಬಿಡುಗಡೆ ಮಾಡಿದೆ.

ಟಿಆರ್‌‌ಎಸ್‌ ಪಕ್ಷ ಬಿಡುಗಡೆ ಮಾಡಿರುವ ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಟ್ವಿಟರ್‌ನಲ್ಲಿ #LotusLeaks (ಲೋಟಸ್‌ ಲೀಕ್) ಟ್ರೆಂಡ್ ಆಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಡಿಯೊದಲ್ಲಿ, ‘‘ರಾಷ್ಟ್ರಮಟ್ಟದ ತಂಡ ಆಪರೇಷಣ್ ಕಮಲ ಮಾಡುತ್ತದೆ ಮತ್ತು ಈ ತಂಡದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌, ಗೃಹ ಸಚಿವ ಅಮಿತ್‌ ಶಾ ಮತ್ತು ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಇದ್ದಾರೆ” ಎಂದು ಆಪಾದಿತ ದಳ್ಳಾಳಿಗಳು ಹೇಳಿರುವುದು ದಾಖಲಾಗಿದೆ.

ಇದನ್ನೂ ಓದಿ: ತೆಲಂಗಾಣ ಶಾಸಕರ ಖರೀದಿಗೆ ಬಿಜೆಪಿ ಯತ್ನ ಆರೋಪ: ವಿಡಿಯೊ ಪ್ರದರ್ಶಿಸಿದ ಮುಖ್ಯಮಂತ್ರಿ ಕೆಸಿಆರ್‌

ವೈರಲ್ ಆಗಿರುವ ಒಂದು ವಿಡಿಯೊದಲ್ಲಿ ಟಿಆರ್‌ಎಸ್‌ ಶಾಸಕ ಕೇರಳದ ಬಿಜೆಡಿಎಸ್‌ ನಾಯಕ ತುಷಾರ್‌ ವೆಳ್ಳಪ್ಪಳ್ಳಿ ಅವರೊಂದಿಗೆ ಮಾತನಾಡಿದ್ದಾರೆ. ತುಷಾರ್‌ ವೆಳ್ಳಪಳ್ಳಿ ಅವರು ಕೇರಳದಲ್ಲಿ ಬಿಜೆಪಿಯ ಮೈತ್ರಿ ಪಕ್ಷವಾಗಿದ್ದು, ಕಳೆದ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರ ವಿರುದ್ಧ ಸ್ಪರ್ಧಿಸಿದ್ದರು. ಜೊತೆಗೆ ಅವರು ಅಮಿತ್ ಶಾ ಅವರ ಆಪ್ತ ಎಂದು ವರದಿಯಾಗಿದೆ.

ಟಿಆರ್‌ಎಸ್‌ ಶಾಸಕ ತುಷಾರ್‌ ವೆಳ್ಳಪ್ಪಳ್ಳಿ ಅವರೊಂದಿಗೆ ಫೋನ್‌ ಮೂಲಕ ಮಾತನಾಡಿದ್ದು ವಿಡಿಯೊದಲ್ಲಿ ದಾಖಲಾಗಿದ್ದು, ಅವರು ಆಪರೇಷನ್ ಕಮಲ ಬಗ್ಗೆ ಮಾತನಾಡಲು ಬಿ.ಎಲ್. ಸಂತೋಷ್ ಅವರ ಭೇಟಿಯ ಬಗ್ಗೆ ಬಗ್ಗೆ ಹೇಳುತ್ತಾರೆ. ಜೊತೆಗೆ ಜೆ.ಪಿ. ನಡ್ಡಾ ಅವರ ಹೆಸರನ್ನು ಕೂಡಾ ತುಷಾರ್‌ ಅವರು ಹೇಳುತ್ತಾರೆ.

ಇದನ್ನೂ ಓದಿ: ‘ಬಿಜೆಪಿಯಿಂದ ಆಪರೇಷನ್ ಕಮಲಕ್ಕೆ ಯತ್ನ, 30 ಶಾಸಕರಿಗೆ ತಲಾ 100 ಕೋಟಿ ರೂ. ಆಫರ್‌‌’: ತೆಲಂಗಾಣ ಸಿಎಂ ಕೆಸಿಆರ್ 

ಮತ್ತೊಂದು ವಿಡಿಯೊದಲ್ಲಿ ಬಿಜೆಪಿಯ ದಳ್ಳಾಳಿಯೊಬ್ಬ ಮಾತನಾಡುತ್ತಾ, ‘‘ನೀವು ಸೇರಿದ ಕೂಡಲೆ ನಿಮಗೆ ಪಕ್ಷದ ವತಿಯಿಂದ ಬಿ ಫಾರ್ಮ್‌‌ ನೀಡುವುದು ಖಚಿತವಾಗಿದೆ. ಬಿಜೆಪಿ ಪಕ್ಷದಲ್ಲಿ ಇವು ಎಲ್ಲವನ್ನು ನಿಭಾಯಿಸುವುದು ನಮ್ಮ ರಾಷ್ಟ್ರೀಯ ತಂಡವಾಗಿದ್ದು, ರಾಜ್ಯದ ತಂಡ ಇದರಲ್ಲಿ ತಲೆಹಾಕುವುದಿಲ್ಲ. ಈ ತಂಡದಲ್ಲಿ ಒಂದನೆಯದಾಗಿ ಬಿ.ಎಲ್. ಸಂತೋಷ್, ಎರಡನೆಯದ್ದಾಗಿ ಅಮಿತ್ ಶಾ ಹಾಗೂ ಮೂರನೆಯದ್ದಾಗಿ ಜೆಪಿ ನಡ್ಡಾ” ಎಂದು ಹೇಳುತ್ತಾರೆ.

ಮತ್ತೊಂದು ವಿಡಿಯೊದಲ್ಲಿ ಪ್ರತಿ ಶಾಕರಿಗೆ 50 ಕೋಟಿ ನೀಡುವುದಾಗಿ ಆಪಾದಿತ ಬಿಜೆಪಿ ದಳ್ಳಾಳಿಗಳು ಹೇಳುವುದು ದಾಖಲಾಗಿದ್ದು, ಬಿಎಲ್‌ ಸಂತೋಷ್ ಮತ್ತು ಅಮಿತ್‌ ಶಾ ಅವರೊಂದಿಗೆ ಸಭೆ ನಡೆಸುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ತೆಲಂಗಾಣ: ಬಿಜೆಪಿಯಿಂದ ಆಪರೇಷನ್‌ ಕಮಲಕ್ಕೆ ಯತ್ನ; ಕೇಂದ್ರ ಸಚಿವರ ಆಪ್ತ ಸೇರಿದಂತೆ ಮೂವರ ಬಂಧನ

ಆಪರೇಷನ್‌ ಕಮಲದಲ್ಲಿ ಪ್ರಧಾನ ಮಂತ್ರಿ ಇಲ್ಲವೆ ಎಂಬ ಬಗ್ಗೆ ಕೇಳಿದಾಗ, ಅವರು ಇದರಲ್ಲಿ ಡೈರೆಕ್ಟ್‌ ಆಗಿ ಇರುವುದಿಲ್ಲ. ಎಲ್ಲವನ್ನೂ ಅವರು ಗಮನಿಸುತ್ತಾ ಇರುತ್ತಾರೆ ಮತ್ತು ಅವರಿಗೆ ಕಾಲಕಾಲಕ್ಕೆ ಮಾಹಿತಿಗಳನ್ನು ನೀಡುತ್ತಲೆ ಇರುತ್ತಾರೆ ಎಂದು ಆಪಾದಿತ ಬಿಜೆಪಿಯ ದಳ್ಳಾಳಿಯೊಬ್ಬ ಹೇಳುತ್ತಾರೆ.

ಇಷ್ಟೆ ಅಲ್ಲದೆ, ದಳ್ಳಾಳಿಗಳ ತಂಡದಲ್ಲಿದ್ದ ಸ್ವಾಮಿಜಿಯೊಬ್ಬ ಕರ್ನಾಟಕ ಮತ್ತು ಮಹಾರಾಷ್ಟ್ರದ ಸರ್ಕಾರಗಳನ್ನು ಉರುಳಿಸಿರುವ ಬಗ್ಗೆ ಹೆಮ್ಮೆಯಿಂದ ಮಾತನಾಡುತ್ತಾನೆ.

ಇದನ್ನೂ ಓದಿ: ತೆಲಂಗಾಣ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಮಾಧಿ ಮಾಡಿ ಪ್ರತಿಭಟನೆ!

ಬಿಜೆಪಿಯ ದಳ್ಳಾಳಿಗಳು ಎನ್ನಲಾಗಿರುವ ಮೂವರ ಜೊತೆಗೆ ಟಿಆರ್‌ಎಸ್‌ ಪಕ್ಷದ ಶಾಸಕರು ಸಭೆ ನಡೆಸಿದ ನಂತರ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರಿಗೆ ಸಿಕ್ಕಿಬಿದ್ದ ಮೂವರು ಪ್ರಮುಖ ಆರೋಪಿಗಳು ಬಿಜೆಪಿ ಹಿನ್ನೆಲೆಯವರು ಎಂದು ವರದಿಯಾಗಿದೆ. ಆರೋಪಿಗಳನ್ನು ಹರಿಯಾಣದ ಫರಿದಾಬಾದ್ ಮೂಲದ ಪೂಜಾರಿಯಾಗಿರುವ ಸತೀಶ್ ಶರ್ಮಾ (33), ತಿರುಪತಿಯ ಶ್ರೀಮನಾಥ ರಾಜ ಪೀಠದ ಪೀಠಾಧಿಪತಿ D. ಸಿಂಹಯಾಜಿ(45), ಹಾಗೂ ಸರೂರನಗರದ ಉದ್ಯಮಿ ನಂದಕುಮಾರ್ (48) ಎಂದು ಗುರುತಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...