Homeರಾಜಕೀಯ‘ಅಮಿತ್‌ ಶಾ, ಬಿ.ಎಲ್. ಸಂತೋಷ್ ಮತ್ತು ಜೆ.ಪಿ. ನಡ್ಡಾ’: ಆಪರೇಷನ್‌ ಕಮಲ ಹ್ಯಾಂಡಲ್ ಮಾಡುವ ರಾಷ್ಟ್ರೀಯ...

‘ಅಮಿತ್‌ ಶಾ, ಬಿ.ಎಲ್. ಸಂತೋಷ್ ಮತ್ತು ಜೆ.ಪಿ. ನಡ್ಡಾ’: ಆಪರೇಷನ್‌ ಕಮಲ ಹ್ಯಾಂಡಲ್ ಮಾಡುವ ರಾಷ್ಟ್ರೀಯ ತಂಡ!

ಪ್ರಧಾನಿ ಮೋದಿ ಎಲ್ಲವನ್ನೂ ಗಮನಿಸುತ್ತಾ ಇರುತ್ತಾರೆ ಮತ್ತು ಅವರಿಗೆ ಕಾಲಕಾಲಕ್ಕೆ ಮಾಹಿತಿಗಳನ್ನು ನೀಡುತ್ತಾರೆ

- Advertisement -
- Advertisement -

ತೆಲಂಗಾಣದಲ್ಲಿ ಆಪರೇಷನ್‌ ಕಮಲ ನಡೆಸಲು ಬಿಜೆಪಿ ದಳ್ಳಾಳಿಗಳನ್ನು ಕಳುಹಿಸಿದೆ ಎಂದು ಆರೋಪಿಸಿ ಇತ್ತೀಚೆಗೆ ಮೂವರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದರು. ಆದರೆ ಬಿಜೆಪಿ ಈ ಆರೋಪವನ್ನು ನಿರಾಕರಿಸಿತ್ತು. ಆದರೆ ಆಡಳಿತರೂಢ ಟಿಆರ್‌ಎಸ್‌ ಆಪಾದಿತ ಬಿಜೆಪಿಯ ದಳ್ಳಾಳಿಗಳು ತಮ್ಮ ಪಕ್ಷದ ಶಾಸಕರೊಂದಿಗೆ ನಡೆಸಿದ ವಿಡಿಯೊವನ್ನು ಇದೀಗ ಬಿಡುಗಡೆ ಮಾಡಿದೆ.

ಟಿಆರ್‌‌ಎಸ್‌ ಪಕ್ಷ ಬಿಡುಗಡೆ ಮಾಡಿರುವ ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಟ್ವಿಟರ್‌ನಲ್ಲಿ #LotusLeaks (ಲೋಟಸ್‌ ಲೀಕ್) ಟ್ರೆಂಡ್ ಆಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಡಿಯೊದಲ್ಲಿ, ‘‘ರಾಷ್ಟ್ರಮಟ್ಟದ ತಂಡ ಆಪರೇಷಣ್ ಕಮಲ ಮಾಡುತ್ತದೆ ಮತ್ತು ಈ ತಂಡದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌, ಗೃಹ ಸಚಿವ ಅಮಿತ್‌ ಶಾ ಮತ್ತು ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಇದ್ದಾರೆ” ಎಂದು ಆಪಾದಿತ ದಳ್ಳಾಳಿಗಳು ಹೇಳಿರುವುದು ದಾಖಲಾಗಿದೆ.

ಇದನ್ನೂ ಓದಿ: ತೆಲಂಗಾಣ ಶಾಸಕರ ಖರೀದಿಗೆ ಬಿಜೆಪಿ ಯತ್ನ ಆರೋಪ: ವಿಡಿಯೊ ಪ್ರದರ್ಶಿಸಿದ ಮುಖ್ಯಮಂತ್ರಿ ಕೆಸಿಆರ್‌

ವೈರಲ್ ಆಗಿರುವ ಒಂದು ವಿಡಿಯೊದಲ್ಲಿ ಟಿಆರ್‌ಎಸ್‌ ಶಾಸಕ ಕೇರಳದ ಬಿಜೆಡಿಎಸ್‌ ನಾಯಕ ತುಷಾರ್‌ ವೆಳ್ಳಪ್ಪಳ್ಳಿ ಅವರೊಂದಿಗೆ ಮಾತನಾಡಿದ್ದಾರೆ. ತುಷಾರ್‌ ವೆಳ್ಳಪಳ್ಳಿ ಅವರು ಕೇರಳದಲ್ಲಿ ಬಿಜೆಪಿಯ ಮೈತ್ರಿ ಪಕ್ಷವಾಗಿದ್ದು, ಕಳೆದ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರ ವಿರುದ್ಧ ಸ್ಪರ್ಧಿಸಿದ್ದರು. ಜೊತೆಗೆ ಅವರು ಅಮಿತ್ ಶಾ ಅವರ ಆಪ್ತ ಎಂದು ವರದಿಯಾಗಿದೆ.

ಟಿಆರ್‌ಎಸ್‌ ಶಾಸಕ ತುಷಾರ್‌ ವೆಳ್ಳಪ್ಪಳ್ಳಿ ಅವರೊಂದಿಗೆ ಫೋನ್‌ ಮೂಲಕ ಮಾತನಾಡಿದ್ದು ವಿಡಿಯೊದಲ್ಲಿ ದಾಖಲಾಗಿದ್ದು, ಅವರು ಆಪರೇಷನ್ ಕಮಲ ಬಗ್ಗೆ ಮಾತನಾಡಲು ಬಿ.ಎಲ್. ಸಂತೋಷ್ ಅವರ ಭೇಟಿಯ ಬಗ್ಗೆ ಬಗ್ಗೆ ಹೇಳುತ್ತಾರೆ. ಜೊತೆಗೆ ಜೆ.ಪಿ. ನಡ್ಡಾ ಅವರ ಹೆಸರನ್ನು ಕೂಡಾ ತುಷಾರ್‌ ಅವರು ಹೇಳುತ್ತಾರೆ.

ಇದನ್ನೂ ಓದಿ: ‘ಬಿಜೆಪಿಯಿಂದ ಆಪರೇಷನ್ ಕಮಲಕ್ಕೆ ಯತ್ನ, 30 ಶಾಸಕರಿಗೆ ತಲಾ 100 ಕೋಟಿ ರೂ. ಆಫರ್‌‌’: ತೆಲಂಗಾಣ ಸಿಎಂ ಕೆಸಿಆರ್ 

ಮತ್ತೊಂದು ವಿಡಿಯೊದಲ್ಲಿ ಬಿಜೆಪಿಯ ದಳ್ಳಾಳಿಯೊಬ್ಬ ಮಾತನಾಡುತ್ತಾ, ‘‘ನೀವು ಸೇರಿದ ಕೂಡಲೆ ನಿಮಗೆ ಪಕ್ಷದ ವತಿಯಿಂದ ಬಿ ಫಾರ್ಮ್‌‌ ನೀಡುವುದು ಖಚಿತವಾಗಿದೆ. ಬಿಜೆಪಿ ಪಕ್ಷದಲ್ಲಿ ಇವು ಎಲ್ಲವನ್ನು ನಿಭಾಯಿಸುವುದು ನಮ್ಮ ರಾಷ್ಟ್ರೀಯ ತಂಡವಾಗಿದ್ದು, ರಾಜ್ಯದ ತಂಡ ಇದರಲ್ಲಿ ತಲೆಹಾಕುವುದಿಲ್ಲ. ಈ ತಂಡದಲ್ಲಿ ಒಂದನೆಯದಾಗಿ ಬಿ.ಎಲ್. ಸಂತೋಷ್, ಎರಡನೆಯದ್ದಾಗಿ ಅಮಿತ್ ಶಾ ಹಾಗೂ ಮೂರನೆಯದ್ದಾಗಿ ಜೆಪಿ ನಡ್ಡಾ” ಎಂದು ಹೇಳುತ್ತಾರೆ.

ಮತ್ತೊಂದು ವಿಡಿಯೊದಲ್ಲಿ ಪ್ರತಿ ಶಾಕರಿಗೆ 50 ಕೋಟಿ ನೀಡುವುದಾಗಿ ಆಪಾದಿತ ಬಿಜೆಪಿ ದಳ್ಳಾಳಿಗಳು ಹೇಳುವುದು ದಾಖಲಾಗಿದ್ದು, ಬಿಎಲ್‌ ಸಂತೋಷ್ ಮತ್ತು ಅಮಿತ್‌ ಶಾ ಅವರೊಂದಿಗೆ ಸಭೆ ನಡೆಸುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ತೆಲಂಗಾಣ: ಬಿಜೆಪಿಯಿಂದ ಆಪರೇಷನ್‌ ಕಮಲಕ್ಕೆ ಯತ್ನ; ಕೇಂದ್ರ ಸಚಿವರ ಆಪ್ತ ಸೇರಿದಂತೆ ಮೂವರ ಬಂಧನ

ಆಪರೇಷನ್‌ ಕಮಲದಲ್ಲಿ ಪ್ರಧಾನ ಮಂತ್ರಿ ಇಲ್ಲವೆ ಎಂಬ ಬಗ್ಗೆ ಕೇಳಿದಾಗ, ಅವರು ಇದರಲ್ಲಿ ಡೈರೆಕ್ಟ್‌ ಆಗಿ ಇರುವುದಿಲ್ಲ. ಎಲ್ಲವನ್ನೂ ಅವರು ಗಮನಿಸುತ್ತಾ ಇರುತ್ತಾರೆ ಮತ್ತು ಅವರಿಗೆ ಕಾಲಕಾಲಕ್ಕೆ ಮಾಹಿತಿಗಳನ್ನು ನೀಡುತ್ತಲೆ ಇರುತ್ತಾರೆ ಎಂದು ಆಪಾದಿತ ಬಿಜೆಪಿಯ ದಳ್ಳಾಳಿಯೊಬ್ಬ ಹೇಳುತ್ತಾರೆ.

ಇಷ್ಟೆ ಅಲ್ಲದೆ, ದಳ್ಳಾಳಿಗಳ ತಂಡದಲ್ಲಿದ್ದ ಸ್ವಾಮಿಜಿಯೊಬ್ಬ ಕರ್ನಾಟಕ ಮತ್ತು ಮಹಾರಾಷ್ಟ್ರದ ಸರ್ಕಾರಗಳನ್ನು ಉರುಳಿಸಿರುವ ಬಗ್ಗೆ ಹೆಮ್ಮೆಯಿಂದ ಮಾತನಾಡುತ್ತಾನೆ.

ಇದನ್ನೂ ಓದಿ: ತೆಲಂಗಾಣ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಮಾಧಿ ಮಾಡಿ ಪ್ರತಿಭಟನೆ!

ಬಿಜೆಪಿಯ ದಳ್ಳಾಳಿಗಳು ಎನ್ನಲಾಗಿರುವ ಮೂವರ ಜೊತೆಗೆ ಟಿಆರ್‌ಎಸ್‌ ಪಕ್ಷದ ಶಾಸಕರು ಸಭೆ ನಡೆಸಿದ ನಂತರ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರಿಗೆ ಸಿಕ್ಕಿಬಿದ್ದ ಮೂವರು ಪ್ರಮುಖ ಆರೋಪಿಗಳು ಬಿಜೆಪಿ ಹಿನ್ನೆಲೆಯವರು ಎಂದು ವರದಿಯಾಗಿದೆ. ಆರೋಪಿಗಳನ್ನು ಹರಿಯಾಣದ ಫರಿದಾಬಾದ್ ಮೂಲದ ಪೂಜಾರಿಯಾಗಿರುವ ಸತೀಶ್ ಶರ್ಮಾ (33), ತಿರುಪತಿಯ ಶ್ರೀಮನಾಥ ರಾಜ ಪೀಠದ ಪೀಠಾಧಿಪತಿ D. ಸಿಂಹಯಾಜಿ(45), ಹಾಗೂ ಸರೂರನಗರದ ಉದ್ಯಮಿ ನಂದಕುಮಾರ್ (48) ಎಂದು ಗುರುತಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...