Homeರಾಜಕೀಯ‘ಅಮಿತ್‌ ಶಾ, ಬಿ.ಎಲ್. ಸಂತೋಷ್ ಮತ್ತು ಜೆ.ಪಿ. ನಡ್ಡಾ’: ಆಪರೇಷನ್‌ ಕಮಲ ಹ್ಯಾಂಡಲ್ ಮಾಡುವ ರಾಷ್ಟ್ರೀಯ...

‘ಅಮಿತ್‌ ಶಾ, ಬಿ.ಎಲ್. ಸಂತೋಷ್ ಮತ್ತು ಜೆ.ಪಿ. ನಡ್ಡಾ’: ಆಪರೇಷನ್‌ ಕಮಲ ಹ್ಯಾಂಡಲ್ ಮಾಡುವ ರಾಷ್ಟ್ರೀಯ ತಂಡ!

ಪ್ರಧಾನಿ ಮೋದಿ ಎಲ್ಲವನ್ನೂ ಗಮನಿಸುತ್ತಾ ಇರುತ್ತಾರೆ ಮತ್ತು ಅವರಿಗೆ ಕಾಲಕಾಲಕ್ಕೆ ಮಾಹಿತಿಗಳನ್ನು ನೀಡುತ್ತಾರೆ

- Advertisement -
- Advertisement -

ತೆಲಂಗಾಣದಲ್ಲಿ ಆಪರೇಷನ್‌ ಕಮಲ ನಡೆಸಲು ಬಿಜೆಪಿ ದಳ್ಳಾಳಿಗಳನ್ನು ಕಳುಹಿಸಿದೆ ಎಂದು ಆರೋಪಿಸಿ ಇತ್ತೀಚೆಗೆ ಮೂವರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದರು. ಆದರೆ ಬಿಜೆಪಿ ಈ ಆರೋಪವನ್ನು ನಿರಾಕರಿಸಿತ್ತು. ಆದರೆ ಆಡಳಿತರೂಢ ಟಿಆರ್‌ಎಸ್‌ ಆಪಾದಿತ ಬಿಜೆಪಿಯ ದಳ್ಳಾಳಿಗಳು ತಮ್ಮ ಪಕ್ಷದ ಶಾಸಕರೊಂದಿಗೆ ನಡೆಸಿದ ವಿಡಿಯೊವನ್ನು ಇದೀಗ ಬಿಡುಗಡೆ ಮಾಡಿದೆ.

ಟಿಆರ್‌‌ಎಸ್‌ ಪಕ್ಷ ಬಿಡುಗಡೆ ಮಾಡಿರುವ ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಟ್ವಿಟರ್‌ನಲ್ಲಿ #LotusLeaks (ಲೋಟಸ್‌ ಲೀಕ್) ಟ್ರೆಂಡ್ ಆಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಡಿಯೊದಲ್ಲಿ, ‘‘ರಾಷ್ಟ್ರಮಟ್ಟದ ತಂಡ ಆಪರೇಷಣ್ ಕಮಲ ಮಾಡುತ್ತದೆ ಮತ್ತು ಈ ತಂಡದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌, ಗೃಹ ಸಚಿವ ಅಮಿತ್‌ ಶಾ ಮತ್ತು ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಇದ್ದಾರೆ” ಎಂದು ಆಪಾದಿತ ದಳ್ಳಾಳಿಗಳು ಹೇಳಿರುವುದು ದಾಖಲಾಗಿದೆ.

ಇದನ್ನೂ ಓದಿ: ತೆಲಂಗಾಣ ಶಾಸಕರ ಖರೀದಿಗೆ ಬಿಜೆಪಿ ಯತ್ನ ಆರೋಪ: ವಿಡಿಯೊ ಪ್ರದರ್ಶಿಸಿದ ಮುಖ್ಯಮಂತ್ರಿ ಕೆಸಿಆರ್‌

ವೈರಲ್ ಆಗಿರುವ ಒಂದು ವಿಡಿಯೊದಲ್ಲಿ ಟಿಆರ್‌ಎಸ್‌ ಶಾಸಕ ಕೇರಳದ ಬಿಜೆಡಿಎಸ್‌ ನಾಯಕ ತುಷಾರ್‌ ವೆಳ್ಳಪ್ಪಳ್ಳಿ ಅವರೊಂದಿಗೆ ಮಾತನಾಡಿದ್ದಾರೆ. ತುಷಾರ್‌ ವೆಳ್ಳಪಳ್ಳಿ ಅವರು ಕೇರಳದಲ್ಲಿ ಬಿಜೆಪಿಯ ಮೈತ್ರಿ ಪಕ್ಷವಾಗಿದ್ದು, ಕಳೆದ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರ ವಿರುದ್ಧ ಸ್ಪರ್ಧಿಸಿದ್ದರು. ಜೊತೆಗೆ ಅವರು ಅಮಿತ್ ಶಾ ಅವರ ಆಪ್ತ ಎಂದು ವರದಿಯಾಗಿದೆ.

ಟಿಆರ್‌ಎಸ್‌ ಶಾಸಕ ತುಷಾರ್‌ ವೆಳ್ಳಪ್ಪಳ್ಳಿ ಅವರೊಂದಿಗೆ ಫೋನ್‌ ಮೂಲಕ ಮಾತನಾಡಿದ್ದು ವಿಡಿಯೊದಲ್ಲಿ ದಾಖಲಾಗಿದ್ದು, ಅವರು ಆಪರೇಷನ್ ಕಮಲ ಬಗ್ಗೆ ಮಾತನಾಡಲು ಬಿ.ಎಲ್. ಸಂತೋಷ್ ಅವರ ಭೇಟಿಯ ಬಗ್ಗೆ ಬಗ್ಗೆ ಹೇಳುತ್ತಾರೆ. ಜೊತೆಗೆ ಜೆ.ಪಿ. ನಡ್ಡಾ ಅವರ ಹೆಸರನ್ನು ಕೂಡಾ ತುಷಾರ್‌ ಅವರು ಹೇಳುತ್ತಾರೆ.

ಇದನ್ನೂ ಓದಿ: ‘ಬಿಜೆಪಿಯಿಂದ ಆಪರೇಷನ್ ಕಮಲಕ್ಕೆ ಯತ್ನ, 30 ಶಾಸಕರಿಗೆ ತಲಾ 100 ಕೋಟಿ ರೂ. ಆಫರ್‌‌’: ತೆಲಂಗಾಣ ಸಿಎಂ ಕೆಸಿಆರ್ 

ಮತ್ತೊಂದು ವಿಡಿಯೊದಲ್ಲಿ ಬಿಜೆಪಿಯ ದಳ್ಳಾಳಿಯೊಬ್ಬ ಮಾತನಾಡುತ್ತಾ, ‘‘ನೀವು ಸೇರಿದ ಕೂಡಲೆ ನಿಮಗೆ ಪಕ್ಷದ ವತಿಯಿಂದ ಬಿ ಫಾರ್ಮ್‌‌ ನೀಡುವುದು ಖಚಿತವಾಗಿದೆ. ಬಿಜೆಪಿ ಪಕ್ಷದಲ್ಲಿ ಇವು ಎಲ್ಲವನ್ನು ನಿಭಾಯಿಸುವುದು ನಮ್ಮ ರಾಷ್ಟ್ರೀಯ ತಂಡವಾಗಿದ್ದು, ರಾಜ್ಯದ ತಂಡ ಇದರಲ್ಲಿ ತಲೆಹಾಕುವುದಿಲ್ಲ. ಈ ತಂಡದಲ್ಲಿ ಒಂದನೆಯದಾಗಿ ಬಿ.ಎಲ್. ಸಂತೋಷ್, ಎರಡನೆಯದ್ದಾಗಿ ಅಮಿತ್ ಶಾ ಹಾಗೂ ಮೂರನೆಯದ್ದಾಗಿ ಜೆಪಿ ನಡ್ಡಾ” ಎಂದು ಹೇಳುತ್ತಾರೆ.

ಮತ್ತೊಂದು ವಿಡಿಯೊದಲ್ಲಿ ಪ್ರತಿ ಶಾಕರಿಗೆ 50 ಕೋಟಿ ನೀಡುವುದಾಗಿ ಆಪಾದಿತ ಬಿಜೆಪಿ ದಳ್ಳಾಳಿಗಳು ಹೇಳುವುದು ದಾಖಲಾಗಿದ್ದು, ಬಿಎಲ್‌ ಸಂತೋಷ್ ಮತ್ತು ಅಮಿತ್‌ ಶಾ ಅವರೊಂದಿಗೆ ಸಭೆ ನಡೆಸುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ತೆಲಂಗಾಣ: ಬಿಜೆಪಿಯಿಂದ ಆಪರೇಷನ್‌ ಕಮಲಕ್ಕೆ ಯತ್ನ; ಕೇಂದ್ರ ಸಚಿವರ ಆಪ್ತ ಸೇರಿದಂತೆ ಮೂವರ ಬಂಧನ

ಆಪರೇಷನ್‌ ಕಮಲದಲ್ಲಿ ಪ್ರಧಾನ ಮಂತ್ರಿ ಇಲ್ಲವೆ ಎಂಬ ಬಗ್ಗೆ ಕೇಳಿದಾಗ, ಅವರು ಇದರಲ್ಲಿ ಡೈರೆಕ್ಟ್‌ ಆಗಿ ಇರುವುದಿಲ್ಲ. ಎಲ್ಲವನ್ನೂ ಅವರು ಗಮನಿಸುತ್ತಾ ಇರುತ್ತಾರೆ ಮತ್ತು ಅವರಿಗೆ ಕಾಲಕಾಲಕ್ಕೆ ಮಾಹಿತಿಗಳನ್ನು ನೀಡುತ್ತಲೆ ಇರುತ್ತಾರೆ ಎಂದು ಆಪಾದಿತ ಬಿಜೆಪಿಯ ದಳ್ಳಾಳಿಯೊಬ್ಬ ಹೇಳುತ್ತಾರೆ.

ಇಷ್ಟೆ ಅಲ್ಲದೆ, ದಳ್ಳಾಳಿಗಳ ತಂಡದಲ್ಲಿದ್ದ ಸ್ವಾಮಿಜಿಯೊಬ್ಬ ಕರ್ನಾಟಕ ಮತ್ತು ಮಹಾರಾಷ್ಟ್ರದ ಸರ್ಕಾರಗಳನ್ನು ಉರುಳಿಸಿರುವ ಬಗ್ಗೆ ಹೆಮ್ಮೆಯಿಂದ ಮಾತನಾಡುತ್ತಾನೆ.

ಇದನ್ನೂ ಓದಿ: ತೆಲಂಗಾಣ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಮಾಧಿ ಮಾಡಿ ಪ್ರತಿಭಟನೆ!

ಬಿಜೆಪಿಯ ದಳ್ಳಾಳಿಗಳು ಎನ್ನಲಾಗಿರುವ ಮೂವರ ಜೊತೆಗೆ ಟಿಆರ್‌ಎಸ್‌ ಪಕ್ಷದ ಶಾಸಕರು ಸಭೆ ನಡೆಸಿದ ನಂತರ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರಿಗೆ ಸಿಕ್ಕಿಬಿದ್ದ ಮೂವರು ಪ್ರಮುಖ ಆರೋಪಿಗಳು ಬಿಜೆಪಿ ಹಿನ್ನೆಲೆಯವರು ಎಂದು ವರದಿಯಾಗಿದೆ. ಆರೋಪಿಗಳನ್ನು ಹರಿಯಾಣದ ಫರಿದಾಬಾದ್ ಮೂಲದ ಪೂಜಾರಿಯಾಗಿರುವ ಸತೀಶ್ ಶರ್ಮಾ (33), ತಿರುಪತಿಯ ಶ್ರೀಮನಾಥ ರಾಜ ಪೀಠದ ಪೀಠಾಧಿಪತಿ D. ಸಿಂಹಯಾಜಿ(45), ಹಾಗೂ ಸರೂರನಗರದ ಉದ್ಯಮಿ ನಂದಕುಮಾರ್ (48) ಎಂದು ಗುರುತಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...