Homeರಾಜಕೀಯ‘ಅಮಿತ್‌ ಶಾ, ಬಿ.ಎಲ್. ಸಂತೋಷ್ ಮತ್ತು ಜೆ.ಪಿ. ನಡ್ಡಾ’: ಆಪರೇಷನ್‌ ಕಮಲ ಹ್ಯಾಂಡಲ್ ಮಾಡುವ ರಾಷ್ಟ್ರೀಯ...

‘ಅಮಿತ್‌ ಶಾ, ಬಿ.ಎಲ್. ಸಂತೋಷ್ ಮತ್ತು ಜೆ.ಪಿ. ನಡ್ಡಾ’: ಆಪರೇಷನ್‌ ಕಮಲ ಹ್ಯಾಂಡಲ್ ಮಾಡುವ ರಾಷ್ಟ್ರೀಯ ತಂಡ!

ಪ್ರಧಾನಿ ಮೋದಿ ಎಲ್ಲವನ್ನೂ ಗಮನಿಸುತ್ತಾ ಇರುತ್ತಾರೆ ಮತ್ತು ಅವರಿಗೆ ಕಾಲಕಾಲಕ್ಕೆ ಮಾಹಿತಿಗಳನ್ನು ನೀಡುತ್ತಾರೆ

- Advertisement -
- Advertisement -

ತೆಲಂಗಾಣದಲ್ಲಿ ಆಪರೇಷನ್‌ ಕಮಲ ನಡೆಸಲು ಬಿಜೆಪಿ ದಳ್ಳಾಳಿಗಳನ್ನು ಕಳುಹಿಸಿದೆ ಎಂದು ಆರೋಪಿಸಿ ಇತ್ತೀಚೆಗೆ ಮೂವರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದರು. ಆದರೆ ಬಿಜೆಪಿ ಈ ಆರೋಪವನ್ನು ನಿರಾಕರಿಸಿತ್ತು. ಆದರೆ ಆಡಳಿತರೂಢ ಟಿಆರ್‌ಎಸ್‌ ಆಪಾದಿತ ಬಿಜೆಪಿಯ ದಳ್ಳಾಳಿಗಳು ತಮ್ಮ ಪಕ್ಷದ ಶಾಸಕರೊಂದಿಗೆ ನಡೆಸಿದ ವಿಡಿಯೊವನ್ನು ಇದೀಗ ಬಿಡುಗಡೆ ಮಾಡಿದೆ.

ಟಿಆರ್‌‌ಎಸ್‌ ಪಕ್ಷ ಬಿಡುಗಡೆ ಮಾಡಿರುವ ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಟ್ವಿಟರ್‌ನಲ್ಲಿ #LotusLeaks (ಲೋಟಸ್‌ ಲೀಕ್) ಟ್ರೆಂಡ್ ಆಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಡಿಯೊದಲ್ಲಿ, ‘‘ರಾಷ್ಟ್ರಮಟ್ಟದ ತಂಡ ಆಪರೇಷಣ್ ಕಮಲ ಮಾಡುತ್ತದೆ ಮತ್ತು ಈ ತಂಡದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌, ಗೃಹ ಸಚಿವ ಅಮಿತ್‌ ಶಾ ಮತ್ತು ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಇದ್ದಾರೆ” ಎಂದು ಆಪಾದಿತ ದಳ್ಳಾಳಿಗಳು ಹೇಳಿರುವುದು ದಾಖಲಾಗಿದೆ.

ಇದನ್ನೂ ಓದಿ: ತೆಲಂಗಾಣ ಶಾಸಕರ ಖರೀದಿಗೆ ಬಿಜೆಪಿ ಯತ್ನ ಆರೋಪ: ವಿಡಿಯೊ ಪ್ರದರ್ಶಿಸಿದ ಮುಖ್ಯಮಂತ್ರಿ ಕೆಸಿಆರ್‌

ವೈರಲ್ ಆಗಿರುವ ಒಂದು ವಿಡಿಯೊದಲ್ಲಿ ಟಿಆರ್‌ಎಸ್‌ ಶಾಸಕ ಕೇರಳದ ಬಿಜೆಡಿಎಸ್‌ ನಾಯಕ ತುಷಾರ್‌ ವೆಳ್ಳಪ್ಪಳ್ಳಿ ಅವರೊಂದಿಗೆ ಮಾತನಾಡಿದ್ದಾರೆ. ತುಷಾರ್‌ ವೆಳ್ಳಪಳ್ಳಿ ಅವರು ಕೇರಳದಲ್ಲಿ ಬಿಜೆಪಿಯ ಮೈತ್ರಿ ಪಕ್ಷವಾಗಿದ್ದು, ಕಳೆದ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರ ವಿರುದ್ಧ ಸ್ಪರ್ಧಿಸಿದ್ದರು. ಜೊತೆಗೆ ಅವರು ಅಮಿತ್ ಶಾ ಅವರ ಆಪ್ತ ಎಂದು ವರದಿಯಾಗಿದೆ.

ಟಿಆರ್‌ಎಸ್‌ ಶಾಸಕ ತುಷಾರ್‌ ವೆಳ್ಳಪ್ಪಳ್ಳಿ ಅವರೊಂದಿಗೆ ಫೋನ್‌ ಮೂಲಕ ಮಾತನಾಡಿದ್ದು ವಿಡಿಯೊದಲ್ಲಿ ದಾಖಲಾಗಿದ್ದು, ಅವರು ಆಪರೇಷನ್ ಕಮಲ ಬಗ್ಗೆ ಮಾತನಾಡಲು ಬಿ.ಎಲ್. ಸಂತೋಷ್ ಅವರ ಭೇಟಿಯ ಬಗ್ಗೆ ಬಗ್ಗೆ ಹೇಳುತ್ತಾರೆ. ಜೊತೆಗೆ ಜೆ.ಪಿ. ನಡ್ಡಾ ಅವರ ಹೆಸರನ್ನು ಕೂಡಾ ತುಷಾರ್‌ ಅವರು ಹೇಳುತ್ತಾರೆ.

ಇದನ್ನೂ ಓದಿ: ‘ಬಿಜೆಪಿಯಿಂದ ಆಪರೇಷನ್ ಕಮಲಕ್ಕೆ ಯತ್ನ, 30 ಶಾಸಕರಿಗೆ ತಲಾ 100 ಕೋಟಿ ರೂ. ಆಫರ್‌‌’: ತೆಲಂಗಾಣ ಸಿಎಂ ಕೆಸಿಆರ್ 

ಮತ್ತೊಂದು ವಿಡಿಯೊದಲ್ಲಿ ಬಿಜೆಪಿಯ ದಳ್ಳಾಳಿಯೊಬ್ಬ ಮಾತನಾಡುತ್ತಾ, ‘‘ನೀವು ಸೇರಿದ ಕೂಡಲೆ ನಿಮಗೆ ಪಕ್ಷದ ವತಿಯಿಂದ ಬಿ ಫಾರ್ಮ್‌‌ ನೀಡುವುದು ಖಚಿತವಾಗಿದೆ. ಬಿಜೆಪಿ ಪಕ್ಷದಲ್ಲಿ ಇವು ಎಲ್ಲವನ್ನು ನಿಭಾಯಿಸುವುದು ನಮ್ಮ ರಾಷ್ಟ್ರೀಯ ತಂಡವಾಗಿದ್ದು, ರಾಜ್ಯದ ತಂಡ ಇದರಲ್ಲಿ ತಲೆಹಾಕುವುದಿಲ್ಲ. ಈ ತಂಡದಲ್ಲಿ ಒಂದನೆಯದಾಗಿ ಬಿ.ಎಲ್. ಸಂತೋಷ್, ಎರಡನೆಯದ್ದಾಗಿ ಅಮಿತ್ ಶಾ ಹಾಗೂ ಮೂರನೆಯದ್ದಾಗಿ ಜೆಪಿ ನಡ್ಡಾ” ಎಂದು ಹೇಳುತ್ತಾರೆ.

ಮತ್ತೊಂದು ವಿಡಿಯೊದಲ್ಲಿ ಪ್ರತಿ ಶಾಕರಿಗೆ 50 ಕೋಟಿ ನೀಡುವುದಾಗಿ ಆಪಾದಿತ ಬಿಜೆಪಿ ದಳ್ಳಾಳಿಗಳು ಹೇಳುವುದು ದಾಖಲಾಗಿದ್ದು, ಬಿಎಲ್‌ ಸಂತೋಷ್ ಮತ್ತು ಅಮಿತ್‌ ಶಾ ಅವರೊಂದಿಗೆ ಸಭೆ ನಡೆಸುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ತೆಲಂಗಾಣ: ಬಿಜೆಪಿಯಿಂದ ಆಪರೇಷನ್‌ ಕಮಲಕ್ಕೆ ಯತ್ನ; ಕೇಂದ್ರ ಸಚಿವರ ಆಪ್ತ ಸೇರಿದಂತೆ ಮೂವರ ಬಂಧನ

ಆಪರೇಷನ್‌ ಕಮಲದಲ್ಲಿ ಪ್ರಧಾನ ಮಂತ್ರಿ ಇಲ್ಲವೆ ಎಂಬ ಬಗ್ಗೆ ಕೇಳಿದಾಗ, ಅವರು ಇದರಲ್ಲಿ ಡೈರೆಕ್ಟ್‌ ಆಗಿ ಇರುವುದಿಲ್ಲ. ಎಲ್ಲವನ್ನೂ ಅವರು ಗಮನಿಸುತ್ತಾ ಇರುತ್ತಾರೆ ಮತ್ತು ಅವರಿಗೆ ಕಾಲಕಾಲಕ್ಕೆ ಮಾಹಿತಿಗಳನ್ನು ನೀಡುತ್ತಲೆ ಇರುತ್ತಾರೆ ಎಂದು ಆಪಾದಿತ ಬಿಜೆಪಿಯ ದಳ್ಳಾಳಿಯೊಬ್ಬ ಹೇಳುತ್ತಾರೆ.

ಇಷ್ಟೆ ಅಲ್ಲದೆ, ದಳ್ಳಾಳಿಗಳ ತಂಡದಲ್ಲಿದ್ದ ಸ್ವಾಮಿಜಿಯೊಬ್ಬ ಕರ್ನಾಟಕ ಮತ್ತು ಮಹಾರಾಷ್ಟ್ರದ ಸರ್ಕಾರಗಳನ್ನು ಉರುಳಿಸಿರುವ ಬಗ್ಗೆ ಹೆಮ್ಮೆಯಿಂದ ಮಾತನಾಡುತ್ತಾನೆ.

ಇದನ್ನೂ ಓದಿ: ತೆಲಂಗಾಣ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಮಾಧಿ ಮಾಡಿ ಪ್ರತಿಭಟನೆ!

ಬಿಜೆಪಿಯ ದಳ್ಳಾಳಿಗಳು ಎನ್ನಲಾಗಿರುವ ಮೂವರ ಜೊತೆಗೆ ಟಿಆರ್‌ಎಸ್‌ ಪಕ್ಷದ ಶಾಸಕರು ಸಭೆ ನಡೆಸಿದ ನಂತರ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರಿಗೆ ಸಿಕ್ಕಿಬಿದ್ದ ಮೂವರು ಪ್ರಮುಖ ಆರೋಪಿಗಳು ಬಿಜೆಪಿ ಹಿನ್ನೆಲೆಯವರು ಎಂದು ವರದಿಯಾಗಿದೆ. ಆರೋಪಿಗಳನ್ನು ಹರಿಯಾಣದ ಫರಿದಾಬಾದ್ ಮೂಲದ ಪೂಜಾರಿಯಾಗಿರುವ ಸತೀಶ್ ಶರ್ಮಾ (33), ತಿರುಪತಿಯ ಶ್ರೀಮನಾಥ ರಾಜ ಪೀಠದ ಪೀಠಾಧಿಪತಿ D. ಸಿಂಹಯಾಜಿ(45), ಹಾಗೂ ಸರೂರನಗರದ ಉದ್ಯಮಿ ನಂದಕುಮಾರ್ (48) ಎಂದು ಗುರುತಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...