Homeಚಳವಳಿರೈತ ಮುಖಂಡರಿಗೆ ಕರೆ ಮಾಡಿದ ಅಮಿತ್ ಶಾ: ಇಂದು ಸಂಜೆ ಮಾತುಕತೆಗೆ ಆಹ್ವಾನ

ರೈತ ಮುಖಂಡರಿಗೆ ಕರೆ ಮಾಡಿದ ಅಮಿತ್ ಶಾ: ಇಂದು ಸಂಜೆ ಮಾತುಕತೆಗೆ ಆಹ್ವಾನ

ಕಳೆದ ಹಲವು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಯನ್ನು ಕೊನೆಗೊಳಿಸಲು ನಾಳೆ ಆರನೇ ಸುತ್ತಿನ ಮಾತುಕತೆಗೆ ಬರುವಂತೆ ಕೇಂದ್ರ ಸರ್ಕಾರ ಕರೆ ನೀಡಿತ್ತು. ಇದಕ್ಕೆ ಒಂದು ದಿನದ ಮೊದಲೇ ಅಮಿತ್ ಶಾ ಅವರ ಈ ನಡೆ ಕುತೂಹಲ ಮೂಡಿಸಿದೆ.

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ದೇಶವ್ಯಾಪಿ ಪ್ರತಿಭಟನೆ ನಡೆಸುತ್ತಿದ್ದು, ಇಂದು ಭಾರತ್ ಬಂದ್‌ಗೆ ಕರೆ ನೀಡಿದ್ದರು. ಈ ನಡುವೆ ಇಂದು ಸಂಜೆ ಮಾತುಕತೆಗೆ ಬರುವಂತೆ ಪ್ರತಿಭಟನಾ ನಿರತ ರೈತರಿಗೆ ಗೃಹ ಸಚಿವ ಅಮಿತ್ ಶಾ ಕರೆ ನೀಡಿದ್ದಾರೆ. ಕಳೆದ ಹಲವು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಯನ್ನು ಕೊನೆಗೊಳಿಸಲು ನಾಳೆ ಆರನೇ ಸುತ್ತಿನ ಮಾತುಕತೆಗೆ ಬರುವಂತೆ ಕೇಂದ್ರ ಸರ್ಕಾರ ಕರೆ ನೀಡಿತ್ತು. ಇದಕ್ಕೆ ಒಂದು ದಿನದ ಮೊದಲೇ ಅಮಿತ್ ಶಾ ಅವರ ಈ ನಡೆ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಇನ್ನು ಮುಂದೆ ಜೈಲಿನ ಅಂಕಿಅಂಶಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ಪ್ರತ್ಯೇಕ ವರ್ಗ

ದೇಶದಾದ್ಯಂತ ರೈತರು ರಸ್ತೆ ತಡೆದು, ರೈಲು ಸಂಚಾರವನ್ನು ಸ್ಥಗಿತಗೊಳಿಸಿ, ಹೆದ್ದಾರಿಗಳನ್ನು ನಿರ್ಬಂಧಿಸಿ, ಮಾರುಕಟ್ಟೆಗಳನ್ನು ಮುಚ್ಚಿ ಬಂದ್ ಮಾಡುತ್ತಿದ್ದಾರೆ. ಹಲವಾರು ರಾಜ್ಯಗಳಲ್ಲಿ ಬಂದ್ ಬಹುತೇಕ ಯಶಸ್ವಿಯಾಗಿದೆ.

“ನನಗೆ ಫೋನ್ ಕರೆ ಬಂತು. ಅಮಿತ್ ಶಾ ಅವರು ಸಭೆ ಕರೆದಿದ್ದಾರೆ. ನಮ್ಮನ್ನು 7 ಗಂಟೆಗೆ ಬರಲು ಹೇಳಿದ್ದಾರೆ. ದೆಹಲಿ ಬಳಿಯ ಹೆದ್ದಾರಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ” ಎಂದು ರೈತ ಮುಖಂಡ ರಾಕೇಶ್ ಟಿಕೈಟ್ ಹೇಳಿದ್ದಾರೆ.

ಇದನ್ನೂ ಓದಿ: ಈ ಬಂದ್‌ಗೆ ಯಾರೂ ಸಹಕಾರ ಕೊಡುವುದಿಲ್ಲ, ತಲೆಕೆಡಿಸಿಕೊಳ್ಳಬೇಡಿ: ಯಡಿಯೂರಪ್ಪ

ಇಂದಿನ ಪ್ರತಿಭಟನೆಗೆ ಕಾಂಗ್ರೆಸ್, ಎಎಪಿ, ಡಿಎಂಕೆ, ಟಿಆರ್‌ಎಸ್ ಸೇರಿದಂತೆ ಹಲವು ಪ್ರತಿಪಕ್ಷಗಳು ಬೆಂಬಲ ನೀಡಿವೆ.

ಈ ವಿವಾದಾತ್ಮಕ ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ಇದುವರೆಗೂ ನಡೆದಿರುವ ಸುಮಾರು 5 ಸುತ್ತಿನ ಮಾತುಕತೆಗಳು ವಿಫಲವಾಗಿವೆ. ಕಳೆದ ಶುಕ್ರವಾರ ಸತತ ಏಳು ಗಂಟೆಗಳ ಕಾಲ ನಡೆದ ಮಾತುಕತೆಯೂ ಕೂಡ ಪರಿಸ್ಥಿತಿಯನ್ನು ತಿಳಿಗೊಳಿಸುವಲ್ಲಿ ವಿಫಲವಾಗಿತ್ತು.

ಇದನ್ನೂ ಓದಿ: ರೈತರನ್ನು ಬೆಂಬಲಿಸಿದ್ದಕ್ಕೆ ದೆಹಲಿ ಸಿಎಂ ಕೇಜ್ರಿವಾಲ್‌ರನ್ನೆ ಗೃಹ ಬಂಧನದಲ್ಲಿಟ್ಟ ಪೊಲೀಸರು: ಆಪ್ ಆರೋಪ

ಕಳೆದ ಸೆಪ್ಟಂಬರ್ ತಿಂಗಳಿನಲ್ಲಿ ಕೇಂದ್ರ ಸರ್ಕಾರ ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತಂದಿರುವ ಮೂರು ಹೊಸ ಕಾನೂನುಗಳನ್ನು ಹಿಂಪಡೆಯದ ಹೊರತು ಬೇರೇನೂ ಬೇಕಾಗಿಲ್ಲ ಎಂದು ರೈತ ಸಂಘಟನೆಗಳು ಪಟ್ಟುಹಿಡಿದಿವೆ.

ಮಾತುಕತೆಗಳ ನೇತೃತ್ವ ವಹಿಸಿದ್ದ ಕೇಂದ್ರ ಕೃಷಿ ಸಚಿವ ನರೇಂದ್ರ ತೋಮರ್, “ಸರ್ಕಾರಕ್ಕೆ ಯಾವುದೇ ಅಹಂ ಇಲ್ಲ. ಆದರೆ ಸರ್ಕಾರ ಈ ಕಾನೂನುಗಳನ್ನು ರದ್ದು ಮಾಡುವುದಿಲ್ಲ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ರೈತರ ಹೋರಾಟ ಬೆಂಬಲಿಸಿದ ಭೀಮ್ ಆರ್ಮಿ ಮುಖ್ಯಸ್ಥ ಆಜಾದ್‌ಗೆ ಗೃಹ ಬಂಧನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...