Homeಚಳವಳಿರೈತ ಮುಖಂಡರಿಗೆ ಕರೆ ಮಾಡಿದ ಅಮಿತ್ ಶಾ: ಇಂದು ಸಂಜೆ ಮಾತುಕತೆಗೆ ಆಹ್ವಾನ

ರೈತ ಮುಖಂಡರಿಗೆ ಕರೆ ಮಾಡಿದ ಅಮಿತ್ ಶಾ: ಇಂದು ಸಂಜೆ ಮಾತುಕತೆಗೆ ಆಹ್ವಾನ

ಕಳೆದ ಹಲವು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಯನ್ನು ಕೊನೆಗೊಳಿಸಲು ನಾಳೆ ಆರನೇ ಸುತ್ತಿನ ಮಾತುಕತೆಗೆ ಬರುವಂತೆ ಕೇಂದ್ರ ಸರ್ಕಾರ ಕರೆ ನೀಡಿತ್ತು. ಇದಕ್ಕೆ ಒಂದು ದಿನದ ಮೊದಲೇ ಅಮಿತ್ ಶಾ ಅವರ ಈ ನಡೆ ಕುತೂಹಲ ಮೂಡಿಸಿದೆ.

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ದೇಶವ್ಯಾಪಿ ಪ್ರತಿಭಟನೆ ನಡೆಸುತ್ತಿದ್ದು, ಇಂದು ಭಾರತ್ ಬಂದ್‌ಗೆ ಕರೆ ನೀಡಿದ್ದರು. ಈ ನಡುವೆ ಇಂದು ಸಂಜೆ ಮಾತುಕತೆಗೆ ಬರುವಂತೆ ಪ್ರತಿಭಟನಾ ನಿರತ ರೈತರಿಗೆ ಗೃಹ ಸಚಿವ ಅಮಿತ್ ಶಾ ಕರೆ ನೀಡಿದ್ದಾರೆ. ಕಳೆದ ಹಲವು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಯನ್ನು ಕೊನೆಗೊಳಿಸಲು ನಾಳೆ ಆರನೇ ಸುತ್ತಿನ ಮಾತುಕತೆಗೆ ಬರುವಂತೆ ಕೇಂದ್ರ ಸರ್ಕಾರ ಕರೆ ನೀಡಿತ್ತು. ಇದಕ್ಕೆ ಒಂದು ದಿನದ ಮೊದಲೇ ಅಮಿತ್ ಶಾ ಅವರ ಈ ನಡೆ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಇನ್ನು ಮುಂದೆ ಜೈಲಿನ ಅಂಕಿಅಂಶಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ಪ್ರತ್ಯೇಕ ವರ್ಗ

ದೇಶದಾದ್ಯಂತ ರೈತರು ರಸ್ತೆ ತಡೆದು, ರೈಲು ಸಂಚಾರವನ್ನು ಸ್ಥಗಿತಗೊಳಿಸಿ, ಹೆದ್ದಾರಿಗಳನ್ನು ನಿರ್ಬಂಧಿಸಿ, ಮಾರುಕಟ್ಟೆಗಳನ್ನು ಮುಚ್ಚಿ ಬಂದ್ ಮಾಡುತ್ತಿದ್ದಾರೆ. ಹಲವಾರು ರಾಜ್ಯಗಳಲ್ಲಿ ಬಂದ್ ಬಹುತೇಕ ಯಶಸ್ವಿಯಾಗಿದೆ.

“ನನಗೆ ಫೋನ್ ಕರೆ ಬಂತು. ಅಮಿತ್ ಶಾ ಅವರು ಸಭೆ ಕರೆದಿದ್ದಾರೆ. ನಮ್ಮನ್ನು 7 ಗಂಟೆಗೆ ಬರಲು ಹೇಳಿದ್ದಾರೆ. ದೆಹಲಿ ಬಳಿಯ ಹೆದ್ದಾರಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ” ಎಂದು ರೈತ ಮುಖಂಡ ರಾಕೇಶ್ ಟಿಕೈಟ್ ಹೇಳಿದ್ದಾರೆ.

ಇದನ್ನೂ ಓದಿ: ಈ ಬಂದ್‌ಗೆ ಯಾರೂ ಸಹಕಾರ ಕೊಡುವುದಿಲ್ಲ, ತಲೆಕೆಡಿಸಿಕೊಳ್ಳಬೇಡಿ: ಯಡಿಯೂರಪ್ಪ

ಇಂದಿನ ಪ್ರತಿಭಟನೆಗೆ ಕಾಂಗ್ರೆಸ್, ಎಎಪಿ, ಡಿಎಂಕೆ, ಟಿಆರ್‌ಎಸ್ ಸೇರಿದಂತೆ ಹಲವು ಪ್ರತಿಪಕ್ಷಗಳು ಬೆಂಬಲ ನೀಡಿವೆ.

ಈ ವಿವಾದಾತ್ಮಕ ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ಇದುವರೆಗೂ ನಡೆದಿರುವ ಸುಮಾರು 5 ಸುತ್ತಿನ ಮಾತುಕತೆಗಳು ವಿಫಲವಾಗಿವೆ. ಕಳೆದ ಶುಕ್ರವಾರ ಸತತ ಏಳು ಗಂಟೆಗಳ ಕಾಲ ನಡೆದ ಮಾತುಕತೆಯೂ ಕೂಡ ಪರಿಸ್ಥಿತಿಯನ್ನು ತಿಳಿಗೊಳಿಸುವಲ್ಲಿ ವಿಫಲವಾಗಿತ್ತು.

ಇದನ್ನೂ ಓದಿ: ರೈತರನ್ನು ಬೆಂಬಲಿಸಿದ್ದಕ್ಕೆ ದೆಹಲಿ ಸಿಎಂ ಕೇಜ್ರಿವಾಲ್‌ರನ್ನೆ ಗೃಹ ಬಂಧನದಲ್ಲಿಟ್ಟ ಪೊಲೀಸರು: ಆಪ್ ಆರೋಪ

ಕಳೆದ ಸೆಪ್ಟಂಬರ್ ತಿಂಗಳಿನಲ್ಲಿ ಕೇಂದ್ರ ಸರ್ಕಾರ ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತಂದಿರುವ ಮೂರು ಹೊಸ ಕಾನೂನುಗಳನ್ನು ಹಿಂಪಡೆಯದ ಹೊರತು ಬೇರೇನೂ ಬೇಕಾಗಿಲ್ಲ ಎಂದು ರೈತ ಸಂಘಟನೆಗಳು ಪಟ್ಟುಹಿಡಿದಿವೆ.

ಮಾತುಕತೆಗಳ ನೇತೃತ್ವ ವಹಿಸಿದ್ದ ಕೇಂದ್ರ ಕೃಷಿ ಸಚಿವ ನರೇಂದ್ರ ತೋಮರ್, “ಸರ್ಕಾರಕ್ಕೆ ಯಾವುದೇ ಅಹಂ ಇಲ್ಲ. ಆದರೆ ಸರ್ಕಾರ ಈ ಕಾನೂನುಗಳನ್ನು ರದ್ದು ಮಾಡುವುದಿಲ್ಲ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ರೈತರ ಹೋರಾಟ ಬೆಂಬಲಿಸಿದ ಭೀಮ್ ಆರ್ಮಿ ಮುಖ್ಯಸ್ಥ ಆಜಾದ್‌ಗೆ ಗೃಹ ಬಂಧನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...