Homeಮುಖಪುಟಅಮಿತ್ ಶಾ-ದೇವೇಂದ್ರ ಫಡ್ನವಿಸ್ ಭೇಟಿ: ಮಹಾರಾಷ್ಟ್ರದಲ್ಲಿಯೂ ಆಪರೇಷನ್ ಕಮಲ?

ಅಮಿತ್ ಶಾ-ದೇವೇಂದ್ರ ಫಡ್ನವಿಸ್ ಭೇಟಿ: ಮಹಾರಾಷ್ಟ್ರದಲ್ಲಿಯೂ ಆಪರೇಷನ್ ಕಮಲ?

- Advertisement -
- Advertisement -

ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಪತನದ ಆತಂಕ ಎದುರಿಸುತ್ತಿರುವುದರ ನಡುವೆಯೇ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ರವರು ಗೃಹಸಚಿವ ಅಮಿತ್‌ ಶಾರವರನ್ನು ಭೇಟಿಯಾಗಿರುವುದು ಮಹಾರಾಷ್ಟ್ರದಲ್ಲಿಯೂ ಆಪರೇಷನ್ ಕಮಲ ನಡೆಯಲಿದೆಯೇ ಎಂಬ ಚರ್ಚೆಯನ್ನು ಹುಟ್ಟುಹಾಕಿದೆ.

ಕಳೆದ ವರ್ಷದ ಡಿಸೆಂಬರ್‌ನಲ್ಲಿ ಬಹುಮತವಿಲ್ಲದಿದ್ದರೂ ಸರ್ಕಾರ ರಚಿಸಿ ಮುಖಭಂಗ ಅನುಭವಿಸಿದ್ದ ದೇವೇಂದ್ರ ಫಡ್ನವಿಸ್ ಈ ಬಾರಿಯಾದರೂ ಸರ್ಕಾರ ರಚಿಸುವ ಉಮೇದಿನಲ್ಲಿದ್ದಾರೆ ಎಂಬ ಹೇಳಿಕೆಗಳು ರಾಜಕೀಯ ವಲಯದಲ್ಲಿ ಕೇಳಿಬಂದಿವೆ.

ಆದರೆ ಈ ಊಹಾಪೋಹಗಳನ್ನು ಫಡ್ನವಿಸ್ ಅಲ್ಲಗೆಳೆದಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗಿನ ಸಭೆಯ ನಂತರ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇದೊಂದು “ರಾಜಕೀಯೇತರ” ಭೇಟಿ ಎಂದು ತಿಳಿಸಿದ್ದಾರೆ.

ಇದು ರಾಜ್ಯದ ಸಕ್ಕರೆ ಉದ್ಯಮಕ್ಕೆ ಆರ್ಥಿಕ ನೆರವು ಪಡೆಯುವ ಗುರಿಯನ್ನು ಹೊಂದಿದೆ. ಮತ್ತು ರಾಜ್ಯದ ಕೊರೊನಾ ವೈರಸ್ ಸನ್ನಿವೇಶದ ಬಗ್ಗೆ ಅಮಿತ್‌ ಷಾಗೆ ವಿವರಿಸುವ ಮತ್ತು ಪರಿಸ್ಥಿತಿಯನ್ನು ತಿಳಿಸಲು ಪ್ರಧಾನಿ ನರೇಂದ್ರ ಮೋದಿಯವರ ಭೇಟಿಗೆ ಸಮಯ ಕೋರುವ ಸಭೆಯಾಗಿದೆ ಎಂದು ಫಡ್ನವಿಸ್ ಹೇಳಿದ್ದಾರೆ.

“ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ. ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ನಾವು ಆಸಕ್ತಿ ಹೊಂದಿಲ್ಲ … ಕರೊನಾ ವೈರಸ್ ವಿರುದ್ಧ ಹೋರಾಡುವ ಸಮಯವಿದು” ಎಂದು ಅವರು ಹೇಳಿದ್ದಾರೆ.

“ಮಹಾರಾಷ್ಟ್ರದಲ್ಲಿ ಯಾವುದೇ ‘ಆಪರೇಷನ್ ಕಮಲ’ ನಡೆಯುವುದಿಲ್ಲ. ಸರ್ಕಾರವು ಆಂತರಿಕ ವಿರೋಧಾಭಾಸಗಳಿಂದ ಕೂಡಿದೆ. ಹಾಗಾಗ ಅದು ತಾನಾಗಿಯೇ ಕುಸಿಯುತ್ತದೆ” ಎಂದು ಫಡ್ನವಿಸ್ ತಿಳಿಸಿದ್ದಾರೆ.

ಫಡ್ನವೀಸ್‌ರವರಿಗೆ ರಾಷ್ಟ್ರೀಯ ರಾಜಕಾರಣದಲ್ಲಿ ತೊಡಗಿಸಿಕೊಳ್ಳಲು ಸಲಹೆ ನೀಡಲಾಗಿದೆ ಎಂಬ ಊಹಾಪೋಹಗಳನ್ನು ಸಹ ಅವರು ತಿರಸ್ಕರಿಸಿದ್ದಾರೆ.

ಪಶ್ಚಿಮ ಮಹಾರಾಷ್ಟ್ರದ ಹಲವು ಬಿಜೆಇ ನಾಯಕರು ಸಹ ಅವರೊಂದಿಗೆ ದೆಹಲಿಗೆ ಹೋದ ಬಗ್ಗೆ ಕೇಳಿದಾಗ, ಅವರು ಸಕ್ಕರೆ ಉದ್ಯಮದೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಫಡ್ನವಿಸ್ ಹೇಳಿದ್ದಾರೆ.

ಬಿಜೆಪಿಯ ಮುಖಂಡರಾದ ಹರ್ಷವರ್ಧನ್ ಪಾಟೀಲ್, ಧನಂಜಯ್ ಮಹಾದಿಕ್, ರಂಜಿತ್ ಸಿನ್ಹ್ ಮೋಹೈಟ್, ಶಾಸಕ ಜಯಕುಮಾರ್ ಗೋರ್, ಸಂಸದ ರಂಜಿತ್ ನಿಂಬಲ್ಕರ್, ಮತ್ತು ಬಿಜೆಪಿಯ ಮಿತ್ರರಾದ ಜನ್ಸುರಾಜ್ಯ ಶಕ್ತಿ ಪಕ್ಷದ ವಿನಯ್ ಕೋರೆ ಅವರು ಅಮಿತ್ ಶಾ ಅವರೊಂದಿಗಿನ ಸಭೆಯಲ್ಲಿ ಫಡ್ನವೀಸ್ ಅವರೊಂದಿಗೆ ಭಾಗವಹಿಸಿದ್ದರು ಎನ್ನಲಾಗಿದೆ.


ಇದನ್ನೂ ಓದಿ: ವಾರಣಾಸಿ: ನೇಪಾಳಿ ಯುವಕನ ತಲೆ ಬೋಳಿಸಿ ಜೈಶ್ರೀರಾಮ್ ಹೇಳುವಂತೆ ಒತ್ತಾಯಿಸಿದ ಹಿಂದುತ್ವವಾದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...