Homeಮುಖಪುಟಅಮಿತ್ ಶಾ-ದೇವೇಂದ್ರ ಫಡ್ನವಿಸ್ ಭೇಟಿ: ಮಹಾರಾಷ್ಟ್ರದಲ್ಲಿಯೂ ಆಪರೇಷನ್ ಕಮಲ?

ಅಮಿತ್ ಶಾ-ದೇವೇಂದ್ರ ಫಡ್ನವಿಸ್ ಭೇಟಿ: ಮಹಾರಾಷ್ಟ್ರದಲ್ಲಿಯೂ ಆಪರೇಷನ್ ಕಮಲ?

- Advertisement -
- Advertisement -

ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಪತನದ ಆತಂಕ ಎದುರಿಸುತ್ತಿರುವುದರ ನಡುವೆಯೇ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ರವರು ಗೃಹಸಚಿವ ಅಮಿತ್‌ ಶಾರವರನ್ನು ಭೇಟಿಯಾಗಿರುವುದು ಮಹಾರಾಷ್ಟ್ರದಲ್ಲಿಯೂ ಆಪರೇಷನ್ ಕಮಲ ನಡೆಯಲಿದೆಯೇ ಎಂಬ ಚರ್ಚೆಯನ್ನು ಹುಟ್ಟುಹಾಕಿದೆ.

ಕಳೆದ ವರ್ಷದ ಡಿಸೆಂಬರ್‌ನಲ್ಲಿ ಬಹುಮತವಿಲ್ಲದಿದ್ದರೂ ಸರ್ಕಾರ ರಚಿಸಿ ಮುಖಭಂಗ ಅನುಭವಿಸಿದ್ದ ದೇವೇಂದ್ರ ಫಡ್ನವಿಸ್ ಈ ಬಾರಿಯಾದರೂ ಸರ್ಕಾರ ರಚಿಸುವ ಉಮೇದಿನಲ್ಲಿದ್ದಾರೆ ಎಂಬ ಹೇಳಿಕೆಗಳು ರಾಜಕೀಯ ವಲಯದಲ್ಲಿ ಕೇಳಿಬಂದಿವೆ.

ಆದರೆ ಈ ಊಹಾಪೋಹಗಳನ್ನು ಫಡ್ನವಿಸ್ ಅಲ್ಲಗೆಳೆದಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗಿನ ಸಭೆಯ ನಂತರ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇದೊಂದು “ರಾಜಕೀಯೇತರ” ಭೇಟಿ ಎಂದು ತಿಳಿಸಿದ್ದಾರೆ.

ಇದು ರಾಜ್ಯದ ಸಕ್ಕರೆ ಉದ್ಯಮಕ್ಕೆ ಆರ್ಥಿಕ ನೆರವು ಪಡೆಯುವ ಗುರಿಯನ್ನು ಹೊಂದಿದೆ. ಮತ್ತು ರಾಜ್ಯದ ಕೊರೊನಾ ವೈರಸ್ ಸನ್ನಿವೇಶದ ಬಗ್ಗೆ ಅಮಿತ್‌ ಷಾಗೆ ವಿವರಿಸುವ ಮತ್ತು ಪರಿಸ್ಥಿತಿಯನ್ನು ತಿಳಿಸಲು ಪ್ರಧಾನಿ ನರೇಂದ್ರ ಮೋದಿಯವರ ಭೇಟಿಗೆ ಸಮಯ ಕೋರುವ ಸಭೆಯಾಗಿದೆ ಎಂದು ಫಡ್ನವಿಸ್ ಹೇಳಿದ್ದಾರೆ.

“ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ. ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ನಾವು ಆಸಕ್ತಿ ಹೊಂದಿಲ್ಲ … ಕರೊನಾ ವೈರಸ್ ವಿರುದ್ಧ ಹೋರಾಡುವ ಸಮಯವಿದು” ಎಂದು ಅವರು ಹೇಳಿದ್ದಾರೆ.

“ಮಹಾರಾಷ್ಟ್ರದಲ್ಲಿ ಯಾವುದೇ ‘ಆಪರೇಷನ್ ಕಮಲ’ ನಡೆಯುವುದಿಲ್ಲ. ಸರ್ಕಾರವು ಆಂತರಿಕ ವಿರೋಧಾಭಾಸಗಳಿಂದ ಕೂಡಿದೆ. ಹಾಗಾಗ ಅದು ತಾನಾಗಿಯೇ ಕುಸಿಯುತ್ತದೆ” ಎಂದು ಫಡ್ನವಿಸ್ ತಿಳಿಸಿದ್ದಾರೆ.

ಫಡ್ನವೀಸ್‌ರವರಿಗೆ ರಾಷ್ಟ್ರೀಯ ರಾಜಕಾರಣದಲ್ಲಿ ತೊಡಗಿಸಿಕೊಳ್ಳಲು ಸಲಹೆ ನೀಡಲಾಗಿದೆ ಎಂಬ ಊಹಾಪೋಹಗಳನ್ನು ಸಹ ಅವರು ತಿರಸ್ಕರಿಸಿದ್ದಾರೆ.

ಪಶ್ಚಿಮ ಮಹಾರಾಷ್ಟ್ರದ ಹಲವು ಬಿಜೆಇ ನಾಯಕರು ಸಹ ಅವರೊಂದಿಗೆ ದೆಹಲಿಗೆ ಹೋದ ಬಗ್ಗೆ ಕೇಳಿದಾಗ, ಅವರು ಸಕ್ಕರೆ ಉದ್ಯಮದೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಫಡ್ನವಿಸ್ ಹೇಳಿದ್ದಾರೆ.

ಬಿಜೆಪಿಯ ಮುಖಂಡರಾದ ಹರ್ಷವರ್ಧನ್ ಪಾಟೀಲ್, ಧನಂಜಯ್ ಮಹಾದಿಕ್, ರಂಜಿತ್ ಸಿನ್ಹ್ ಮೋಹೈಟ್, ಶಾಸಕ ಜಯಕುಮಾರ್ ಗೋರ್, ಸಂಸದ ರಂಜಿತ್ ನಿಂಬಲ್ಕರ್, ಮತ್ತು ಬಿಜೆಪಿಯ ಮಿತ್ರರಾದ ಜನ್ಸುರಾಜ್ಯ ಶಕ್ತಿ ಪಕ್ಷದ ವಿನಯ್ ಕೋರೆ ಅವರು ಅಮಿತ್ ಶಾ ಅವರೊಂದಿಗಿನ ಸಭೆಯಲ್ಲಿ ಫಡ್ನವೀಸ್ ಅವರೊಂದಿಗೆ ಭಾಗವಹಿಸಿದ್ದರು ಎನ್ನಲಾಗಿದೆ.


ಇದನ್ನೂ ಓದಿ: ವಾರಣಾಸಿ: ನೇಪಾಳಿ ಯುವಕನ ತಲೆ ಬೋಳಿಸಿ ಜೈಶ್ರೀರಾಮ್ ಹೇಳುವಂತೆ ಒತ್ತಾಯಿಸಿದ ಹಿಂದುತ್ವವಾದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....