Homeಮುಖಪುಟಮಣಿಪುರ ಹಿಂಸಾಚಾರಕ್ಕೆ ಸುಳ್ಳು ಕಾರಣಗಳನ್ನು ನೀಡಿದ ಅಮಿತ್ ಶಾ: ಕುಕಿ ಸಂಘಟನೆಗಳ ಆಕ್ರೋಶ

ಮಣಿಪುರ ಹಿಂಸಾಚಾರಕ್ಕೆ ಸುಳ್ಳು ಕಾರಣಗಳನ್ನು ನೀಡಿದ ಅಮಿತ್ ಶಾ: ಕುಕಿ ಸಂಘಟನೆಗಳ ಆಕ್ರೋಶ

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಮಣಿಪುರದಲ್ಲಿನ ಜನಾಂಗೀಯ ಹಿಂಸಾಚಾರಕ್ಕೆ ಯಾವುದೇ ಪುರಾವೆಗಳಿಲ್ಲದೆಯೇ ಮ್ಯಾನ್ಮಾರ್‌ನಲ್ಲಿನ ಅಶಾಂತಿಯನ್ನು ದೂಷಿಸುವುದು ‘ಅತ್ಯಂತ ದುರದೃಷ್ಟಕರ’ ಎಂದು ಕುಕಿ ಸಂಘಟನೆಗಳು ಹೇಳಿವೆ.

ಆಗಸ್ಟ್ 9ರಂದು ಲೋಕಸಭೆಯಲ್ಲಿ ಮಣಿಪುರ ಹಿಂಸಾಚಾರದ ಚರ್ಚೆಯ ಸಂದರ್ಭದಲ್ಲಿ ಶಾ, ಮ್ಯಾನ್ಮಾರ್‌ನಲ್ಲಿ 2021ರ ಮಿಲಿಟರಿ ದಂಗೆಯ ನಂತರ, ಕುಕಿ ಡೆಮಾಕ್ರಟಿಕ್ ಫ್ರಂಟ್ ಎಂಬ ಸಂಘಟನೆಯು ಮಿಲಿಟರಿ ನಾಯಕತ್ವದ ವಿರುದ್ಧ ಹೋರಾಟವನ್ನು ಪ್ರಾರಂಭಿಸಿದೆ. ಆಗ್ನೇಯ ಏಷ್ಯಾದ ದೇಶದಲ್ಲಿನ ರಾಜಕೀಯ ಅಸ್ಥಿರತೆಯಿಂದಾಗಿ ಅನೇಕ ಕುಕಿಗಳು ತಮ್ಮ ಸುರಕ್ಷತೆಗಾಗಿ ಮಣಿಪುರಕ್ಕೆ ಪಲಾಯನ ಮಾಡಬೇಕಾಯಿತು. ಮ್ಯಾನ್ಮಾರ್‌ನ ವಲಸಿಗರಿಂದಾಗಿ ಬಹುಸಂಖ್ಯಾತ ಮೈತಿ ಸಮುದಾಯದಲ್ಲಿ ಆತಂಕ ಹೆಚ್ಚಾಯಿತು ಎಂದು ಗೃಹ ಸಚಿವರು  ಹೇಳಿದ್ದಾರೆ.

ಮಣಿಪುರದ ಇಂಫಾಲ್ ಕಣಿವೆಯಲ್ಲಿ ಹೆಚ್ಚಾಗಿ ಕೇಂದ್ರೀಕೃತವಾಗಿರುವ ಮೈತೈಗಳು, ಅವರು ಎದುರಿಸುತ್ತಿರುವ ತೊಂದರೆಗಳಿಗೆ ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶಿ ಪ್ರಜೆಗಳ ದೊಡ್ಡ ಪ್ರಮಾಣದ ಅಕ್ರಮ ವಲಸೆಯನ್ನು ದೂಷಿಸುತ್ತಾರೆ.

ಷಾ ಅವರ ಹೇಳಿಕೆಗಳು ‘ಕಲ್ಪನೆಯ ಆಕೃತಿ’

ಮಣಿಪುರದಲ್ಲಿ ಅಶಾಂತಿ ಸೃಷ್ಟಿಯಾಗಲು ಮ್ಯಾನ್ಮಾರ್‌ನಿಂದ ಕುಕಿ ವಲಸಿಗರು ಕಾರಣರಾಗಿದ್ದಾರೆ ಎಂಬ ಷಾ ಅವರ ಹೇಳಿಕೆಗಳು ಹಲವಾರು ಕುಕಿ ಗುಂಪುಗಳು ಮತ್ತು ಶಾಸಕರನ್ನು ಕೆರಳಿಸಿದೆ.

ಸಚಿವರ ಭಾಷಣದ ಒಂದು ದಿನದ ನಂತರ, ರಾಜ್ಯಸಭೆಯಲ್ಲಿ ಮಿಜೋ ನ್ಯಾಷನಲ್ ಫ್ರಂಟ್ ಸಂಸದ ಕೆ ವನ್ಲಾಲ್ವೆನಾ ಅವರಿಗೆ ಮಾತನಾಡಲು ಅವಕಾಶ ನೀಡದೆ ಅವರ ಮೈಕ್ ಅನ್ನು ಸ್ವಿಚ್ ಆಫ್ ಮಾಡಲಾಯಿತು. ಅವರು ಅಮಿತ್ ಶಾ ಅವರ ಹೇಳಿಕೆಗಳು ಕಪೋಕಲ್ಪಿತವಾಗಿವೆ ಎಂದು ಪ್ರತಿಪಾದಿಸಲು ಪ್ರಯತ್ನಿಸಿದರು.

ಕುಕಿ ಬುಡಕಟ್ಟು ಜನಾಂಗದವರ ಅತ್ಯುನ್ನತ ಸಂಸ್ಥೆಯಾದ ಕುಕಿ ಇನ್ಪಿ ಮಣಿಪುರ, ”ಶಾ ಅವರ ಹೇಳಿಕೆಯು ಊಹಾತ್ಮಕವಾಗಿದೆ. ತಮ್ಮ ಹೇಳಿಕೆಗಳು ಸತ್ಯ ಎಂದು ಹೇಳಲು ಅವರ ಬಳಿ ಯಾವುದೇ ಪುರಾವೆಗಳಿಲ್ಲ” ಎಂದು ಹೇಳಿದರು.

”ಮಣಿಪುರದ ಪ್ರಸ್ತುತ ಹತ್ಯಾಕಾಂಡಕ್ಕೆ ಮಿಜೋರಾಂ ಕುಕಿಗಳ ವಲಸೆಗೂ ಯಾವುದೇ ಸಂಬಂಧವಿಲ್ಲ. ಮ್ಯಾನ್ಮಾರ್‌ನಿಂದ ಮಣಿಪುರಕ್ಕೆ ‘ಕುಕಿಗಳ ವಲಸೆ’ ಬರುತ್ತಿದ್ದಾರೆ ಎಂಬ ಮೈತಿಗಳಿಗೆ ಅಭದ್ರತೆ ಉಂಟಾಗಿದೆ ಎಂದು ಅತಿಯಾಗಿ ಪ್ರಚಾರಗೊಂಡಿದೆ” ಎಂದು ಅದು ಭಾನುವಾರ ಹೇಳಿಕೆಯಲ್ಲಿ ತಿಳಿಸಿದೆ.

ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಪೂರ್ವಾಗ್ರಹ ಪೀಡಿತ ಹೇಳಿಕೆಗಳು, ಸುಳ್ಳು ಆರೋಪಗಳು ಮತ್ತು ಕಪೋಲಕಲ್ಪಿತ ನಿರೂಪಣೆಗಳನ್ನು ಅಮಿತ್ ಶಾ ಅವರು ಸಂಸತ್ತಿನಲ್ಲಿ ಪ್ರತಿಧ್ವನಿಸುತ್ತಿದ್ದಾರೆ. ಸಿಂಗ್ ಅವರು ಮೈತಿ “ಬಹುಮತ” ಭಾವನೆಗಳ ಪರವಾಗಿದ್ದಾರೆ ಎಂದು ಸಂಘಟನೆಯವರು ಆರೋಪಿಸಿದ್ದಾರೆ.

ಆಗಸ್ಟ್ 11 ರಂದು ಬಿಜೆಪಿಯ ಎಂಟು ಶಾಸಕರು ಸೇರಿದಂತೆ ಮಣಿಪುರದ ಎಲ್ಲಾ 10 ಕುಕಿ ಶಾಸಕರು ಕೂಡ ಶಾ ಅವರ ಹೇಳಿಕೆಗಳನ್ನು ಟೀಕಿಸಿದ್ದಾರೆ. ಶಾ ಅವರು ತಮ್ಮ ಹೇಳಿಕೆಗಳಿಗೆ ಪುರಾವೆಗಳನ್ನು ಒದಗಿಸಬೇಕು ಎಂದು ಹೇಳಿದರು.

ಮೈತಿ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಸ್ಥಾನಮಾನ ನೀಡುವ ಕುರಿತು ಪರಿಗಣಿಸುವಂತೆ ಏಪ್ರಿಲ್‌ನಲ್ಲಿ ಮಣಿಪುರ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿತ್ತು. ಮೈತಿ ಬೇಡಿಕೆಯನ್ನು ವಿರೋಧಿಸಿ ಮೇ 3 ರಂದು ಕುಕಿ ಬುಡಕಟ್ಟು ಸಮುದಾಯದವರು ರ್ಯಾಲಿ ಆಯೋಜಿಸಿದ್ದರು. ಈ ವೇಳೆ ಹಿಂಸಾಚಾರ ಆರಂಭವಾಯಿತು.  ಅಂದಿನಿಂದ ಈವರೆಗೂ 187 ಜನರು ಸಾವಿಗೀಡಾಗಿದ್ದು, ಸಾವಿರಾರು ಜನ ನಿರಾಶ್ರಿತರಾಗಿದ್ದಾರೆ.

ಇದನ್ನೂ ಓದಿ: ಮಣಿಪುರ ಹೊತ್ತಿ ಉರಿಯುವಾಗ ಸಂಸತ್ತಿನಲ್ಲಿ ಹಾಸ್ಯ ಮಾಡುವುದು ಪ್ರಧಾನಿ ಹುದ್ದೆಗೆ ತಕ್ಕುದಲ್ಲ: ಮೋದಿಗೆ ಚಾಟಿ ಬೀಸಿದ ರಾಹುಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...