Homeಮುಖಪುಟಮಣಿಪುರ ಹಿಂಸಾಚಾರಕ್ಕೆ ಸುಳ್ಳು ಕಾರಣಗಳನ್ನು ನೀಡಿದ ಅಮಿತ್ ಶಾ: ಕುಕಿ ಸಂಘಟನೆಗಳ ಆಕ್ರೋಶ

ಮಣಿಪುರ ಹಿಂಸಾಚಾರಕ್ಕೆ ಸುಳ್ಳು ಕಾರಣಗಳನ್ನು ನೀಡಿದ ಅಮಿತ್ ಶಾ: ಕುಕಿ ಸಂಘಟನೆಗಳ ಆಕ್ರೋಶ

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಮಣಿಪುರದಲ್ಲಿನ ಜನಾಂಗೀಯ ಹಿಂಸಾಚಾರಕ್ಕೆ ಯಾವುದೇ ಪುರಾವೆಗಳಿಲ್ಲದೆಯೇ ಮ್ಯಾನ್ಮಾರ್‌ನಲ್ಲಿನ ಅಶಾಂತಿಯನ್ನು ದೂಷಿಸುವುದು ‘ಅತ್ಯಂತ ದುರದೃಷ್ಟಕರ’ ಎಂದು ಕುಕಿ ಸಂಘಟನೆಗಳು ಹೇಳಿವೆ.

ಆಗಸ್ಟ್ 9ರಂದು ಲೋಕಸಭೆಯಲ್ಲಿ ಮಣಿಪುರ ಹಿಂಸಾಚಾರದ ಚರ್ಚೆಯ ಸಂದರ್ಭದಲ್ಲಿ ಶಾ, ಮ್ಯಾನ್ಮಾರ್‌ನಲ್ಲಿ 2021ರ ಮಿಲಿಟರಿ ದಂಗೆಯ ನಂತರ, ಕುಕಿ ಡೆಮಾಕ್ರಟಿಕ್ ಫ್ರಂಟ್ ಎಂಬ ಸಂಘಟನೆಯು ಮಿಲಿಟರಿ ನಾಯಕತ್ವದ ವಿರುದ್ಧ ಹೋರಾಟವನ್ನು ಪ್ರಾರಂಭಿಸಿದೆ. ಆಗ್ನೇಯ ಏಷ್ಯಾದ ದೇಶದಲ್ಲಿನ ರಾಜಕೀಯ ಅಸ್ಥಿರತೆಯಿಂದಾಗಿ ಅನೇಕ ಕುಕಿಗಳು ತಮ್ಮ ಸುರಕ್ಷತೆಗಾಗಿ ಮಣಿಪುರಕ್ಕೆ ಪಲಾಯನ ಮಾಡಬೇಕಾಯಿತು. ಮ್ಯಾನ್ಮಾರ್‌ನ ವಲಸಿಗರಿಂದಾಗಿ ಬಹುಸಂಖ್ಯಾತ ಮೈತಿ ಸಮುದಾಯದಲ್ಲಿ ಆತಂಕ ಹೆಚ್ಚಾಯಿತು ಎಂದು ಗೃಹ ಸಚಿವರು  ಹೇಳಿದ್ದಾರೆ.

ಮಣಿಪುರದ ಇಂಫಾಲ್ ಕಣಿವೆಯಲ್ಲಿ ಹೆಚ್ಚಾಗಿ ಕೇಂದ್ರೀಕೃತವಾಗಿರುವ ಮೈತೈಗಳು, ಅವರು ಎದುರಿಸುತ್ತಿರುವ ತೊಂದರೆಗಳಿಗೆ ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶಿ ಪ್ರಜೆಗಳ ದೊಡ್ಡ ಪ್ರಮಾಣದ ಅಕ್ರಮ ವಲಸೆಯನ್ನು ದೂಷಿಸುತ್ತಾರೆ.

ಷಾ ಅವರ ಹೇಳಿಕೆಗಳು ‘ಕಲ್ಪನೆಯ ಆಕೃತಿ’

ಮಣಿಪುರದಲ್ಲಿ ಅಶಾಂತಿ ಸೃಷ್ಟಿಯಾಗಲು ಮ್ಯಾನ್ಮಾರ್‌ನಿಂದ ಕುಕಿ ವಲಸಿಗರು ಕಾರಣರಾಗಿದ್ದಾರೆ ಎಂಬ ಷಾ ಅವರ ಹೇಳಿಕೆಗಳು ಹಲವಾರು ಕುಕಿ ಗುಂಪುಗಳು ಮತ್ತು ಶಾಸಕರನ್ನು ಕೆರಳಿಸಿದೆ.

ಸಚಿವರ ಭಾಷಣದ ಒಂದು ದಿನದ ನಂತರ, ರಾಜ್ಯಸಭೆಯಲ್ಲಿ ಮಿಜೋ ನ್ಯಾಷನಲ್ ಫ್ರಂಟ್ ಸಂಸದ ಕೆ ವನ್ಲಾಲ್ವೆನಾ ಅವರಿಗೆ ಮಾತನಾಡಲು ಅವಕಾಶ ನೀಡದೆ ಅವರ ಮೈಕ್ ಅನ್ನು ಸ್ವಿಚ್ ಆಫ್ ಮಾಡಲಾಯಿತು. ಅವರು ಅಮಿತ್ ಶಾ ಅವರ ಹೇಳಿಕೆಗಳು ಕಪೋಕಲ್ಪಿತವಾಗಿವೆ ಎಂದು ಪ್ರತಿಪಾದಿಸಲು ಪ್ರಯತ್ನಿಸಿದರು.

ಕುಕಿ ಬುಡಕಟ್ಟು ಜನಾಂಗದವರ ಅತ್ಯುನ್ನತ ಸಂಸ್ಥೆಯಾದ ಕುಕಿ ಇನ್ಪಿ ಮಣಿಪುರ, ”ಶಾ ಅವರ ಹೇಳಿಕೆಯು ಊಹಾತ್ಮಕವಾಗಿದೆ. ತಮ್ಮ ಹೇಳಿಕೆಗಳು ಸತ್ಯ ಎಂದು ಹೇಳಲು ಅವರ ಬಳಿ ಯಾವುದೇ ಪುರಾವೆಗಳಿಲ್ಲ” ಎಂದು ಹೇಳಿದರು.

”ಮಣಿಪುರದ ಪ್ರಸ್ತುತ ಹತ್ಯಾಕಾಂಡಕ್ಕೆ ಮಿಜೋರಾಂ ಕುಕಿಗಳ ವಲಸೆಗೂ ಯಾವುದೇ ಸಂಬಂಧವಿಲ್ಲ. ಮ್ಯಾನ್ಮಾರ್‌ನಿಂದ ಮಣಿಪುರಕ್ಕೆ ‘ಕುಕಿಗಳ ವಲಸೆ’ ಬರುತ್ತಿದ್ದಾರೆ ಎಂಬ ಮೈತಿಗಳಿಗೆ ಅಭದ್ರತೆ ಉಂಟಾಗಿದೆ ಎಂದು ಅತಿಯಾಗಿ ಪ್ರಚಾರಗೊಂಡಿದೆ” ಎಂದು ಅದು ಭಾನುವಾರ ಹೇಳಿಕೆಯಲ್ಲಿ ತಿಳಿಸಿದೆ.

ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಪೂರ್ವಾಗ್ರಹ ಪೀಡಿತ ಹೇಳಿಕೆಗಳು, ಸುಳ್ಳು ಆರೋಪಗಳು ಮತ್ತು ಕಪೋಲಕಲ್ಪಿತ ನಿರೂಪಣೆಗಳನ್ನು ಅಮಿತ್ ಶಾ ಅವರು ಸಂಸತ್ತಿನಲ್ಲಿ ಪ್ರತಿಧ್ವನಿಸುತ್ತಿದ್ದಾರೆ. ಸಿಂಗ್ ಅವರು ಮೈತಿ “ಬಹುಮತ” ಭಾವನೆಗಳ ಪರವಾಗಿದ್ದಾರೆ ಎಂದು ಸಂಘಟನೆಯವರು ಆರೋಪಿಸಿದ್ದಾರೆ.

ಆಗಸ್ಟ್ 11 ರಂದು ಬಿಜೆಪಿಯ ಎಂಟು ಶಾಸಕರು ಸೇರಿದಂತೆ ಮಣಿಪುರದ ಎಲ್ಲಾ 10 ಕುಕಿ ಶಾಸಕರು ಕೂಡ ಶಾ ಅವರ ಹೇಳಿಕೆಗಳನ್ನು ಟೀಕಿಸಿದ್ದಾರೆ. ಶಾ ಅವರು ತಮ್ಮ ಹೇಳಿಕೆಗಳಿಗೆ ಪುರಾವೆಗಳನ್ನು ಒದಗಿಸಬೇಕು ಎಂದು ಹೇಳಿದರು.

ಮೈತಿ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಸ್ಥಾನಮಾನ ನೀಡುವ ಕುರಿತು ಪರಿಗಣಿಸುವಂತೆ ಏಪ್ರಿಲ್‌ನಲ್ಲಿ ಮಣಿಪುರ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿತ್ತು. ಮೈತಿ ಬೇಡಿಕೆಯನ್ನು ವಿರೋಧಿಸಿ ಮೇ 3 ರಂದು ಕುಕಿ ಬುಡಕಟ್ಟು ಸಮುದಾಯದವರು ರ್ಯಾಲಿ ಆಯೋಜಿಸಿದ್ದರು. ಈ ವೇಳೆ ಹಿಂಸಾಚಾರ ಆರಂಭವಾಯಿತು.  ಅಂದಿನಿಂದ ಈವರೆಗೂ 187 ಜನರು ಸಾವಿಗೀಡಾಗಿದ್ದು, ಸಾವಿರಾರು ಜನ ನಿರಾಶ್ರಿತರಾಗಿದ್ದಾರೆ.

ಇದನ್ನೂ ಓದಿ: ಮಣಿಪುರ ಹೊತ್ತಿ ಉರಿಯುವಾಗ ಸಂಸತ್ತಿನಲ್ಲಿ ಹಾಸ್ಯ ಮಾಡುವುದು ಪ್ರಧಾನಿ ಹುದ್ದೆಗೆ ತಕ್ಕುದಲ್ಲ: ಮೋದಿಗೆ ಚಾಟಿ ಬೀಸಿದ ರಾಹುಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...