Homeಮುಖಪುಟಮಣಿಪುರ ಹಿಂಸಾಚಾರಕ್ಕೆ ಸುಳ್ಳು ಕಾರಣಗಳನ್ನು ನೀಡಿದ ಅಮಿತ್ ಶಾ: ಕುಕಿ ಸಂಘಟನೆಗಳ ಆಕ್ರೋಶ

ಮಣಿಪುರ ಹಿಂಸಾಚಾರಕ್ಕೆ ಸುಳ್ಳು ಕಾರಣಗಳನ್ನು ನೀಡಿದ ಅಮಿತ್ ಶಾ: ಕುಕಿ ಸಂಘಟನೆಗಳ ಆಕ್ರೋಶ

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಮಣಿಪುರದಲ್ಲಿನ ಜನಾಂಗೀಯ ಹಿಂಸಾಚಾರಕ್ಕೆ ಯಾವುದೇ ಪುರಾವೆಗಳಿಲ್ಲದೆಯೇ ಮ್ಯಾನ್ಮಾರ್‌ನಲ್ಲಿನ ಅಶಾಂತಿಯನ್ನು ದೂಷಿಸುವುದು ‘ಅತ್ಯಂತ ದುರದೃಷ್ಟಕರ’ ಎಂದು ಕುಕಿ ಸಂಘಟನೆಗಳು ಹೇಳಿವೆ.

ಆಗಸ್ಟ್ 9ರಂದು ಲೋಕಸಭೆಯಲ್ಲಿ ಮಣಿಪುರ ಹಿಂಸಾಚಾರದ ಚರ್ಚೆಯ ಸಂದರ್ಭದಲ್ಲಿ ಶಾ, ಮ್ಯಾನ್ಮಾರ್‌ನಲ್ಲಿ 2021ರ ಮಿಲಿಟರಿ ದಂಗೆಯ ನಂತರ, ಕುಕಿ ಡೆಮಾಕ್ರಟಿಕ್ ಫ್ರಂಟ್ ಎಂಬ ಸಂಘಟನೆಯು ಮಿಲಿಟರಿ ನಾಯಕತ್ವದ ವಿರುದ್ಧ ಹೋರಾಟವನ್ನು ಪ್ರಾರಂಭಿಸಿದೆ. ಆಗ್ನೇಯ ಏಷ್ಯಾದ ದೇಶದಲ್ಲಿನ ರಾಜಕೀಯ ಅಸ್ಥಿರತೆಯಿಂದಾಗಿ ಅನೇಕ ಕುಕಿಗಳು ತಮ್ಮ ಸುರಕ್ಷತೆಗಾಗಿ ಮಣಿಪುರಕ್ಕೆ ಪಲಾಯನ ಮಾಡಬೇಕಾಯಿತು. ಮ್ಯಾನ್ಮಾರ್‌ನ ವಲಸಿಗರಿಂದಾಗಿ ಬಹುಸಂಖ್ಯಾತ ಮೈತಿ ಸಮುದಾಯದಲ್ಲಿ ಆತಂಕ ಹೆಚ್ಚಾಯಿತು ಎಂದು ಗೃಹ ಸಚಿವರು  ಹೇಳಿದ್ದಾರೆ.

ಮಣಿಪುರದ ಇಂಫಾಲ್ ಕಣಿವೆಯಲ್ಲಿ ಹೆಚ್ಚಾಗಿ ಕೇಂದ್ರೀಕೃತವಾಗಿರುವ ಮೈತೈಗಳು, ಅವರು ಎದುರಿಸುತ್ತಿರುವ ತೊಂದರೆಗಳಿಗೆ ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶಿ ಪ್ರಜೆಗಳ ದೊಡ್ಡ ಪ್ರಮಾಣದ ಅಕ್ರಮ ವಲಸೆಯನ್ನು ದೂಷಿಸುತ್ತಾರೆ.

ಷಾ ಅವರ ಹೇಳಿಕೆಗಳು ‘ಕಲ್ಪನೆಯ ಆಕೃತಿ’

ಮಣಿಪುರದಲ್ಲಿ ಅಶಾಂತಿ ಸೃಷ್ಟಿಯಾಗಲು ಮ್ಯಾನ್ಮಾರ್‌ನಿಂದ ಕುಕಿ ವಲಸಿಗರು ಕಾರಣರಾಗಿದ್ದಾರೆ ಎಂಬ ಷಾ ಅವರ ಹೇಳಿಕೆಗಳು ಹಲವಾರು ಕುಕಿ ಗುಂಪುಗಳು ಮತ್ತು ಶಾಸಕರನ್ನು ಕೆರಳಿಸಿದೆ.

ಸಚಿವರ ಭಾಷಣದ ಒಂದು ದಿನದ ನಂತರ, ರಾಜ್ಯಸಭೆಯಲ್ಲಿ ಮಿಜೋ ನ್ಯಾಷನಲ್ ಫ್ರಂಟ್ ಸಂಸದ ಕೆ ವನ್ಲಾಲ್ವೆನಾ ಅವರಿಗೆ ಮಾತನಾಡಲು ಅವಕಾಶ ನೀಡದೆ ಅವರ ಮೈಕ್ ಅನ್ನು ಸ್ವಿಚ್ ಆಫ್ ಮಾಡಲಾಯಿತು. ಅವರು ಅಮಿತ್ ಶಾ ಅವರ ಹೇಳಿಕೆಗಳು ಕಪೋಕಲ್ಪಿತವಾಗಿವೆ ಎಂದು ಪ್ರತಿಪಾದಿಸಲು ಪ್ರಯತ್ನಿಸಿದರು.

ಕುಕಿ ಬುಡಕಟ್ಟು ಜನಾಂಗದವರ ಅತ್ಯುನ್ನತ ಸಂಸ್ಥೆಯಾದ ಕುಕಿ ಇನ್ಪಿ ಮಣಿಪುರ, ”ಶಾ ಅವರ ಹೇಳಿಕೆಯು ಊಹಾತ್ಮಕವಾಗಿದೆ. ತಮ್ಮ ಹೇಳಿಕೆಗಳು ಸತ್ಯ ಎಂದು ಹೇಳಲು ಅವರ ಬಳಿ ಯಾವುದೇ ಪುರಾವೆಗಳಿಲ್ಲ” ಎಂದು ಹೇಳಿದರು.

”ಮಣಿಪುರದ ಪ್ರಸ್ತುತ ಹತ್ಯಾಕಾಂಡಕ್ಕೆ ಮಿಜೋರಾಂ ಕುಕಿಗಳ ವಲಸೆಗೂ ಯಾವುದೇ ಸಂಬಂಧವಿಲ್ಲ. ಮ್ಯಾನ್ಮಾರ್‌ನಿಂದ ಮಣಿಪುರಕ್ಕೆ ‘ಕುಕಿಗಳ ವಲಸೆ’ ಬರುತ್ತಿದ್ದಾರೆ ಎಂಬ ಮೈತಿಗಳಿಗೆ ಅಭದ್ರತೆ ಉಂಟಾಗಿದೆ ಎಂದು ಅತಿಯಾಗಿ ಪ್ರಚಾರಗೊಂಡಿದೆ” ಎಂದು ಅದು ಭಾನುವಾರ ಹೇಳಿಕೆಯಲ್ಲಿ ತಿಳಿಸಿದೆ.

ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಪೂರ್ವಾಗ್ರಹ ಪೀಡಿತ ಹೇಳಿಕೆಗಳು, ಸುಳ್ಳು ಆರೋಪಗಳು ಮತ್ತು ಕಪೋಲಕಲ್ಪಿತ ನಿರೂಪಣೆಗಳನ್ನು ಅಮಿತ್ ಶಾ ಅವರು ಸಂಸತ್ತಿನಲ್ಲಿ ಪ್ರತಿಧ್ವನಿಸುತ್ತಿದ್ದಾರೆ. ಸಿಂಗ್ ಅವರು ಮೈತಿ “ಬಹುಮತ” ಭಾವನೆಗಳ ಪರವಾಗಿದ್ದಾರೆ ಎಂದು ಸಂಘಟನೆಯವರು ಆರೋಪಿಸಿದ್ದಾರೆ.

ಆಗಸ್ಟ್ 11 ರಂದು ಬಿಜೆಪಿಯ ಎಂಟು ಶಾಸಕರು ಸೇರಿದಂತೆ ಮಣಿಪುರದ ಎಲ್ಲಾ 10 ಕುಕಿ ಶಾಸಕರು ಕೂಡ ಶಾ ಅವರ ಹೇಳಿಕೆಗಳನ್ನು ಟೀಕಿಸಿದ್ದಾರೆ. ಶಾ ಅವರು ತಮ್ಮ ಹೇಳಿಕೆಗಳಿಗೆ ಪುರಾವೆಗಳನ್ನು ಒದಗಿಸಬೇಕು ಎಂದು ಹೇಳಿದರು.

ಮೈತಿ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಸ್ಥಾನಮಾನ ನೀಡುವ ಕುರಿತು ಪರಿಗಣಿಸುವಂತೆ ಏಪ್ರಿಲ್‌ನಲ್ಲಿ ಮಣಿಪುರ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿತ್ತು. ಮೈತಿ ಬೇಡಿಕೆಯನ್ನು ವಿರೋಧಿಸಿ ಮೇ 3 ರಂದು ಕುಕಿ ಬುಡಕಟ್ಟು ಸಮುದಾಯದವರು ರ್ಯಾಲಿ ಆಯೋಜಿಸಿದ್ದರು. ಈ ವೇಳೆ ಹಿಂಸಾಚಾರ ಆರಂಭವಾಯಿತು.  ಅಂದಿನಿಂದ ಈವರೆಗೂ 187 ಜನರು ಸಾವಿಗೀಡಾಗಿದ್ದು, ಸಾವಿರಾರು ಜನ ನಿರಾಶ್ರಿತರಾಗಿದ್ದಾರೆ.

ಇದನ್ನೂ ಓದಿ: ಮಣಿಪುರ ಹೊತ್ತಿ ಉರಿಯುವಾಗ ಸಂಸತ್ತಿನಲ್ಲಿ ಹಾಸ್ಯ ಮಾಡುವುದು ಪ್ರಧಾನಿ ಹುದ್ದೆಗೆ ತಕ್ಕುದಲ್ಲ: ಮೋದಿಗೆ ಚಾಟಿ ಬೀಸಿದ ರಾಹುಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...