Homeಮುಖಪುಟಮಣಿಪುರ ಹಿಂಸಾಚಾರಕ್ಕೆ ಸುಳ್ಳು ಕಾರಣಗಳನ್ನು ನೀಡಿದ ಅಮಿತ್ ಶಾ: ಕುಕಿ ಸಂಘಟನೆಗಳ ಆಕ್ರೋಶ

ಮಣಿಪುರ ಹಿಂಸಾಚಾರಕ್ಕೆ ಸುಳ್ಳು ಕಾರಣಗಳನ್ನು ನೀಡಿದ ಅಮಿತ್ ಶಾ: ಕುಕಿ ಸಂಘಟನೆಗಳ ಆಕ್ರೋಶ

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಮಣಿಪುರದಲ್ಲಿನ ಜನಾಂಗೀಯ ಹಿಂಸಾಚಾರಕ್ಕೆ ಯಾವುದೇ ಪುರಾವೆಗಳಿಲ್ಲದೆಯೇ ಮ್ಯಾನ್ಮಾರ್‌ನಲ್ಲಿನ ಅಶಾಂತಿಯನ್ನು ದೂಷಿಸುವುದು ‘ಅತ್ಯಂತ ದುರದೃಷ್ಟಕರ’ ಎಂದು ಕುಕಿ ಸಂಘಟನೆಗಳು ಹೇಳಿವೆ.

ಆಗಸ್ಟ್ 9ರಂದು ಲೋಕಸಭೆಯಲ್ಲಿ ಮಣಿಪುರ ಹಿಂಸಾಚಾರದ ಚರ್ಚೆಯ ಸಂದರ್ಭದಲ್ಲಿ ಶಾ, ಮ್ಯಾನ್ಮಾರ್‌ನಲ್ಲಿ 2021ರ ಮಿಲಿಟರಿ ದಂಗೆಯ ನಂತರ, ಕುಕಿ ಡೆಮಾಕ್ರಟಿಕ್ ಫ್ರಂಟ್ ಎಂಬ ಸಂಘಟನೆಯು ಮಿಲಿಟರಿ ನಾಯಕತ್ವದ ವಿರುದ್ಧ ಹೋರಾಟವನ್ನು ಪ್ರಾರಂಭಿಸಿದೆ. ಆಗ್ನೇಯ ಏಷ್ಯಾದ ದೇಶದಲ್ಲಿನ ರಾಜಕೀಯ ಅಸ್ಥಿರತೆಯಿಂದಾಗಿ ಅನೇಕ ಕುಕಿಗಳು ತಮ್ಮ ಸುರಕ್ಷತೆಗಾಗಿ ಮಣಿಪುರಕ್ಕೆ ಪಲಾಯನ ಮಾಡಬೇಕಾಯಿತು. ಮ್ಯಾನ್ಮಾರ್‌ನ ವಲಸಿಗರಿಂದಾಗಿ ಬಹುಸಂಖ್ಯಾತ ಮೈತಿ ಸಮುದಾಯದಲ್ಲಿ ಆತಂಕ ಹೆಚ್ಚಾಯಿತು ಎಂದು ಗೃಹ ಸಚಿವರು  ಹೇಳಿದ್ದಾರೆ.

ಮಣಿಪುರದ ಇಂಫಾಲ್ ಕಣಿವೆಯಲ್ಲಿ ಹೆಚ್ಚಾಗಿ ಕೇಂದ್ರೀಕೃತವಾಗಿರುವ ಮೈತೈಗಳು, ಅವರು ಎದುರಿಸುತ್ತಿರುವ ತೊಂದರೆಗಳಿಗೆ ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶಿ ಪ್ರಜೆಗಳ ದೊಡ್ಡ ಪ್ರಮಾಣದ ಅಕ್ರಮ ವಲಸೆಯನ್ನು ದೂಷಿಸುತ್ತಾರೆ.

ಷಾ ಅವರ ಹೇಳಿಕೆಗಳು ‘ಕಲ್ಪನೆಯ ಆಕೃತಿ’

ಮಣಿಪುರದಲ್ಲಿ ಅಶಾಂತಿ ಸೃಷ್ಟಿಯಾಗಲು ಮ್ಯಾನ್ಮಾರ್‌ನಿಂದ ಕುಕಿ ವಲಸಿಗರು ಕಾರಣರಾಗಿದ್ದಾರೆ ಎಂಬ ಷಾ ಅವರ ಹೇಳಿಕೆಗಳು ಹಲವಾರು ಕುಕಿ ಗುಂಪುಗಳು ಮತ್ತು ಶಾಸಕರನ್ನು ಕೆರಳಿಸಿದೆ.

ಸಚಿವರ ಭಾಷಣದ ಒಂದು ದಿನದ ನಂತರ, ರಾಜ್ಯಸಭೆಯಲ್ಲಿ ಮಿಜೋ ನ್ಯಾಷನಲ್ ಫ್ರಂಟ್ ಸಂಸದ ಕೆ ವನ್ಲಾಲ್ವೆನಾ ಅವರಿಗೆ ಮಾತನಾಡಲು ಅವಕಾಶ ನೀಡದೆ ಅವರ ಮೈಕ್ ಅನ್ನು ಸ್ವಿಚ್ ಆಫ್ ಮಾಡಲಾಯಿತು. ಅವರು ಅಮಿತ್ ಶಾ ಅವರ ಹೇಳಿಕೆಗಳು ಕಪೋಕಲ್ಪಿತವಾಗಿವೆ ಎಂದು ಪ್ರತಿಪಾದಿಸಲು ಪ್ರಯತ್ನಿಸಿದರು.

ಕುಕಿ ಬುಡಕಟ್ಟು ಜನಾಂಗದವರ ಅತ್ಯುನ್ನತ ಸಂಸ್ಥೆಯಾದ ಕುಕಿ ಇನ್ಪಿ ಮಣಿಪುರ, ”ಶಾ ಅವರ ಹೇಳಿಕೆಯು ಊಹಾತ್ಮಕವಾಗಿದೆ. ತಮ್ಮ ಹೇಳಿಕೆಗಳು ಸತ್ಯ ಎಂದು ಹೇಳಲು ಅವರ ಬಳಿ ಯಾವುದೇ ಪುರಾವೆಗಳಿಲ್ಲ” ಎಂದು ಹೇಳಿದರು.

”ಮಣಿಪುರದ ಪ್ರಸ್ತುತ ಹತ್ಯಾಕಾಂಡಕ್ಕೆ ಮಿಜೋರಾಂ ಕುಕಿಗಳ ವಲಸೆಗೂ ಯಾವುದೇ ಸಂಬಂಧವಿಲ್ಲ. ಮ್ಯಾನ್ಮಾರ್‌ನಿಂದ ಮಣಿಪುರಕ್ಕೆ ‘ಕುಕಿಗಳ ವಲಸೆ’ ಬರುತ್ತಿದ್ದಾರೆ ಎಂಬ ಮೈತಿಗಳಿಗೆ ಅಭದ್ರತೆ ಉಂಟಾಗಿದೆ ಎಂದು ಅತಿಯಾಗಿ ಪ್ರಚಾರಗೊಂಡಿದೆ” ಎಂದು ಅದು ಭಾನುವಾರ ಹೇಳಿಕೆಯಲ್ಲಿ ತಿಳಿಸಿದೆ.

ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಪೂರ್ವಾಗ್ರಹ ಪೀಡಿತ ಹೇಳಿಕೆಗಳು, ಸುಳ್ಳು ಆರೋಪಗಳು ಮತ್ತು ಕಪೋಲಕಲ್ಪಿತ ನಿರೂಪಣೆಗಳನ್ನು ಅಮಿತ್ ಶಾ ಅವರು ಸಂಸತ್ತಿನಲ್ಲಿ ಪ್ರತಿಧ್ವನಿಸುತ್ತಿದ್ದಾರೆ. ಸಿಂಗ್ ಅವರು ಮೈತಿ “ಬಹುಮತ” ಭಾವನೆಗಳ ಪರವಾಗಿದ್ದಾರೆ ಎಂದು ಸಂಘಟನೆಯವರು ಆರೋಪಿಸಿದ್ದಾರೆ.

ಆಗಸ್ಟ್ 11 ರಂದು ಬಿಜೆಪಿಯ ಎಂಟು ಶಾಸಕರು ಸೇರಿದಂತೆ ಮಣಿಪುರದ ಎಲ್ಲಾ 10 ಕುಕಿ ಶಾಸಕರು ಕೂಡ ಶಾ ಅವರ ಹೇಳಿಕೆಗಳನ್ನು ಟೀಕಿಸಿದ್ದಾರೆ. ಶಾ ಅವರು ತಮ್ಮ ಹೇಳಿಕೆಗಳಿಗೆ ಪುರಾವೆಗಳನ್ನು ಒದಗಿಸಬೇಕು ಎಂದು ಹೇಳಿದರು.

ಮೈತಿ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಸ್ಥಾನಮಾನ ನೀಡುವ ಕುರಿತು ಪರಿಗಣಿಸುವಂತೆ ಏಪ್ರಿಲ್‌ನಲ್ಲಿ ಮಣಿಪುರ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿತ್ತು. ಮೈತಿ ಬೇಡಿಕೆಯನ್ನು ವಿರೋಧಿಸಿ ಮೇ 3 ರಂದು ಕುಕಿ ಬುಡಕಟ್ಟು ಸಮುದಾಯದವರು ರ್ಯಾಲಿ ಆಯೋಜಿಸಿದ್ದರು. ಈ ವೇಳೆ ಹಿಂಸಾಚಾರ ಆರಂಭವಾಯಿತು.  ಅಂದಿನಿಂದ ಈವರೆಗೂ 187 ಜನರು ಸಾವಿಗೀಡಾಗಿದ್ದು, ಸಾವಿರಾರು ಜನ ನಿರಾಶ್ರಿತರಾಗಿದ್ದಾರೆ.

ಇದನ್ನೂ ಓದಿ: ಮಣಿಪುರ ಹೊತ್ತಿ ಉರಿಯುವಾಗ ಸಂಸತ್ತಿನಲ್ಲಿ ಹಾಸ್ಯ ಮಾಡುವುದು ಪ್ರಧಾನಿ ಹುದ್ದೆಗೆ ತಕ್ಕುದಲ್ಲ: ಮೋದಿಗೆ ಚಾಟಿ ಬೀಸಿದ ರಾಹುಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...