Homeಮುಖಪುಟಮಣಿಪುರ ಹಿಂಸಾಚಾರಕ್ಕೆ ಸುಳ್ಳು ಕಾರಣಗಳನ್ನು ನೀಡಿದ ಅಮಿತ್ ಶಾ: ಕುಕಿ ಸಂಘಟನೆಗಳ ಆಕ್ರೋಶ

ಮಣಿಪುರ ಹಿಂಸಾಚಾರಕ್ಕೆ ಸುಳ್ಳು ಕಾರಣಗಳನ್ನು ನೀಡಿದ ಅಮಿತ್ ಶಾ: ಕುಕಿ ಸಂಘಟನೆಗಳ ಆಕ್ರೋಶ

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಮಣಿಪುರದಲ್ಲಿನ ಜನಾಂಗೀಯ ಹಿಂಸಾಚಾರಕ್ಕೆ ಯಾವುದೇ ಪುರಾವೆಗಳಿಲ್ಲದೆಯೇ ಮ್ಯಾನ್ಮಾರ್‌ನಲ್ಲಿನ ಅಶಾಂತಿಯನ್ನು ದೂಷಿಸುವುದು ‘ಅತ್ಯಂತ ದುರದೃಷ್ಟಕರ’ ಎಂದು ಕುಕಿ ಸಂಘಟನೆಗಳು ಹೇಳಿವೆ.

ಆಗಸ್ಟ್ 9ರಂದು ಲೋಕಸಭೆಯಲ್ಲಿ ಮಣಿಪುರ ಹಿಂಸಾಚಾರದ ಚರ್ಚೆಯ ಸಂದರ್ಭದಲ್ಲಿ ಶಾ, ಮ್ಯಾನ್ಮಾರ್‌ನಲ್ಲಿ 2021ರ ಮಿಲಿಟರಿ ದಂಗೆಯ ನಂತರ, ಕುಕಿ ಡೆಮಾಕ್ರಟಿಕ್ ಫ್ರಂಟ್ ಎಂಬ ಸಂಘಟನೆಯು ಮಿಲಿಟರಿ ನಾಯಕತ್ವದ ವಿರುದ್ಧ ಹೋರಾಟವನ್ನು ಪ್ರಾರಂಭಿಸಿದೆ. ಆಗ್ನೇಯ ಏಷ್ಯಾದ ದೇಶದಲ್ಲಿನ ರಾಜಕೀಯ ಅಸ್ಥಿರತೆಯಿಂದಾಗಿ ಅನೇಕ ಕುಕಿಗಳು ತಮ್ಮ ಸುರಕ್ಷತೆಗಾಗಿ ಮಣಿಪುರಕ್ಕೆ ಪಲಾಯನ ಮಾಡಬೇಕಾಯಿತು. ಮ್ಯಾನ್ಮಾರ್‌ನ ವಲಸಿಗರಿಂದಾಗಿ ಬಹುಸಂಖ್ಯಾತ ಮೈತಿ ಸಮುದಾಯದಲ್ಲಿ ಆತಂಕ ಹೆಚ್ಚಾಯಿತು ಎಂದು ಗೃಹ ಸಚಿವರು  ಹೇಳಿದ್ದಾರೆ.

ಮಣಿಪುರದ ಇಂಫಾಲ್ ಕಣಿವೆಯಲ್ಲಿ ಹೆಚ್ಚಾಗಿ ಕೇಂದ್ರೀಕೃತವಾಗಿರುವ ಮೈತೈಗಳು, ಅವರು ಎದುರಿಸುತ್ತಿರುವ ತೊಂದರೆಗಳಿಗೆ ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶಿ ಪ್ರಜೆಗಳ ದೊಡ್ಡ ಪ್ರಮಾಣದ ಅಕ್ರಮ ವಲಸೆಯನ್ನು ದೂಷಿಸುತ್ತಾರೆ.

ಷಾ ಅವರ ಹೇಳಿಕೆಗಳು ‘ಕಲ್ಪನೆಯ ಆಕೃತಿ’

ಮಣಿಪುರದಲ್ಲಿ ಅಶಾಂತಿ ಸೃಷ್ಟಿಯಾಗಲು ಮ್ಯಾನ್ಮಾರ್‌ನಿಂದ ಕುಕಿ ವಲಸಿಗರು ಕಾರಣರಾಗಿದ್ದಾರೆ ಎಂಬ ಷಾ ಅವರ ಹೇಳಿಕೆಗಳು ಹಲವಾರು ಕುಕಿ ಗುಂಪುಗಳು ಮತ್ತು ಶಾಸಕರನ್ನು ಕೆರಳಿಸಿದೆ.

ಸಚಿವರ ಭಾಷಣದ ಒಂದು ದಿನದ ನಂತರ, ರಾಜ್ಯಸಭೆಯಲ್ಲಿ ಮಿಜೋ ನ್ಯಾಷನಲ್ ಫ್ರಂಟ್ ಸಂಸದ ಕೆ ವನ್ಲಾಲ್ವೆನಾ ಅವರಿಗೆ ಮಾತನಾಡಲು ಅವಕಾಶ ನೀಡದೆ ಅವರ ಮೈಕ್ ಅನ್ನು ಸ್ವಿಚ್ ಆಫ್ ಮಾಡಲಾಯಿತು. ಅವರು ಅಮಿತ್ ಶಾ ಅವರ ಹೇಳಿಕೆಗಳು ಕಪೋಕಲ್ಪಿತವಾಗಿವೆ ಎಂದು ಪ್ರತಿಪಾದಿಸಲು ಪ್ರಯತ್ನಿಸಿದರು.

ಕುಕಿ ಬುಡಕಟ್ಟು ಜನಾಂಗದವರ ಅತ್ಯುನ್ನತ ಸಂಸ್ಥೆಯಾದ ಕುಕಿ ಇನ್ಪಿ ಮಣಿಪುರ, ”ಶಾ ಅವರ ಹೇಳಿಕೆಯು ಊಹಾತ್ಮಕವಾಗಿದೆ. ತಮ್ಮ ಹೇಳಿಕೆಗಳು ಸತ್ಯ ಎಂದು ಹೇಳಲು ಅವರ ಬಳಿ ಯಾವುದೇ ಪುರಾವೆಗಳಿಲ್ಲ” ಎಂದು ಹೇಳಿದರು.

”ಮಣಿಪುರದ ಪ್ರಸ್ತುತ ಹತ್ಯಾಕಾಂಡಕ್ಕೆ ಮಿಜೋರಾಂ ಕುಕಿಗಳ ವಲಸೆಗೂ ಯಾವುದೇ ಸಂಬಂಧವಿಲ್ಲ. ಮ್ಯಾನ್ಮಾರ್‌ನಿಂದ ಮಣಿಪುರಕ್ಕೆ ‘ಕುಕಿಗಳ ವಲಸೆ’ ಬರುತ್ತಿದ್ದಾರೆ ಎಂಬ ಮೈತಿಗಳಿಗೆ ಅಭದ್ರತೆ ಉಂಟಾಗಿದೆ ಎಂದು ಅತಿಯಾಗಿ ಪ್ರಚಾರಗೊಂಡಿದೆ” ಎಂದು ಅದು ಭಾನುವಾರ ಹೇಳಿಕೆಯಲ್ಲಿ ತಿಳಿಸಿದೆ.

ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಪೂರ್ವಾಗ್ರಹ ಪೀಡಿತ ಹೇಳಿಕೆಗಳು, ಸುಳ್ಳು ಆರೋಪಗಳು ಮತ್ತು ಕಪೋಲಕಲ್ಪಿತ ನಿರೂಪಣೆಗಳನ್ನು ಅಮಿತ್ ಶಾ ಅವರು ಸಂಸತ್ತಿನಲ್ಲಿ ಪ್ರತಿಧ್ವನಿಸುತ್ತಿದ್ದಾರೆ. ಸಿಂಗ್ ಅವರು ಮೈತಿ “ಬಹುಮತ” ಭಾವನೆಗಳ ಪರವಾಗಿದ್ದಾರೆ ಎಂದು ಸಂಘಟನೆಯವರು ಆರೋಪಿಸಿದ್ದಾರೆ.

ಆಗಸ್ಟ್ 11 ರಂದು ಬಿಜೆಪಿಯ ಎಂಟು ಶಾಸಕರು ಸೇರಿದಂತೆ ಮಣಿಪುರದ ಎಲ್ಲಾ 10 ಕುಕಿ ಶಾಸಕರು ಕೂಡ ಶಾ ಅವರ ಹೇಳಿಕೆಗಳನ್ನು ಟೀಕಿಸಿದ್ದಾರೆ. ಶಾ ಅವರು ತಮ್ಮ ಹೇಳಿಕೆಗಳಿಗೆ ಪುರಾವೆಗಳನ್ನು ಒದಗಿಸಬೇಕು ಎಂದು ಹೇಳಿದರು.

ಮೈತಿ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಸ್ಥಾನಮಾನ ನೀಡುವ ಕುರಿತು ಪರಿಗಣಿಸುವಂತೆ ಏಪ್ರಿಲ್‌ನಲ್ಲಿ ಮಣಿಪುರ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿತ್ತು. ಮೈತಿ ಬೇಡಿಕೆಯನ್ನು ವಿರೋಧಿಸಿ ಮೇ 3 ರಂದು ಕುಕಿ ಬುಡಕಟ್ಟು ಸಮುದಾಯದವರು ರ್ಯಾಲಿ ಆಯೋಜಿಸಿದ್ದರು. ಈ ವೇಳೆ ಹಿಂಸಾಚಾರ ಆರಂಭವಾಯಿತು.  ಅಂದಿನಿಂದ ಈವರೆಗೂ 187 ಜನರು ಸಾವಿಗೀಡಾಗಿದ್ದು, ಸಾವಿರಾರು ಜನ ನಿರಾಶ್ರಿತರಾಗಿದ್ದಾರೆ.

ಇದನ್ನೂ ಓದಿ: ಮಣಿಪುರ ಹೊತ್ತಿ ಉರಿಯುವಾಗ ಸಂಸತ್ತಿನಲ್ಲಿ ಹಾಸ್ಯ ಮಾಡುವುದು ಪ್ರಧಾನಿ ಹುದ್ದೆಗೆ ತಕ್ಕುದಲ್ಲ: ಮೋದಿಗೆ ಚಾಟಿ ಬೀಸಿದ ರಾಹುಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...

ರಾಷ್ಟ್ರೀಯ ಮಹಿಳಾ ಆಯೋಗದ ಕಾರ್ಯಾಗಾರದಲ್ಲಿ ಬರೀ ಹಿಂದಿ ಮಾತು : ಆಕ್ಷೇಪ ವ್ಯಕ್ತಪಡಿಸಿ ಹೊರನಡೆದ ಕೇರಳದ ಶಾಸಕರು

ರಾಷ್ಟ್ರೀಯ ಮಹಿಳಾ ಆಯೋಗ (NCW) ಮಂಗಳವಾರ (ಸೆ.8) ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ, ಬಹುಪಾಲು ಸೆಷನ್‌ಗಳನ್ನು ಹಿಂದಿ ಭಾಷೆಯಲ್ಲೇ ನಡೆಸಲಾಗುತ್ತಿದೆ ಮತ್ತು ಹಿಂದಿ ಮಾತನಾಡದ ರಾಜ್ಯಗಳ ಭಾಗವಹಿಸುವಿಕೆಗೆ ಕರಾರುವಕ್ಕಾಗಿ ನಡವಳಿಕೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಆರೋಪಿಸಿ,...

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...