Homeಮುಖಪುಟಮಣಿಪುರ ಹಿಂಸಾಚಾರಕ್ಕೆ ಸುಳ್ಳು ಕಾರಣಗಳನ್ನು ನೀಡಿದ ಅಮಿತ್ ಶಾ: ಕುಕಿ ಸಂಘಟನೆಗಳ ಆಕ್ರೋಶ

ಮಣಿಪುರ ಹಿಂಸಾಚಾರಕ್ಕೆ ಸುಳ್ಳು ಕಾರಣಗಳನ್ನು ನೀಡಿದ ಅಮಿತ್ ಶಾ: ಕುಕಿ ಸಂಘಟನೆಗಳ ಆಕ್ರೋಶ

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಮಣಿಪುರದಲ್ಲಿನ ಜನಾಂಗೀಯ ಹಿಂಸಾಚಾರಕ್ಕೆ ಯಾವುದೇ ಪುರಾವೆಗಳಿಲ್ಲದೆಯೇ ಮ್ಯಾನ್ಮಾರ್‌ನಲ್ಲಿನ ಅಶಾಂತಿಯನ್ನು ದೂಷಿಸುವುದು ‘ಅತ್ಯಂತ ದುರದೃಷ್ಟಕರ’ ಎಂದು ಕುಕಿ ಸಂಘಟನೆಗಳು ಹೇಳಿವೆ.

ಆಗಸ್ಟ್ 9ರಂದು ಲೋಕಸಭೆಯಲ್ಲಿ ಮಣಿಪುರ ಹಿಂಸಾಚಾರದ ಚರ್ಚೆಯ ಸಂದರ್ಭದಲ್ಲಿ ಶಾ, ಮ್ಯಾನ್ಮಾರ್‌ನಲ್ಲಿ 2021ರ ಮಿಲಿಟರಿ ದಂಗೆಯ ನಂತರ, ಕುಕಿ ಡೆಮಾಕ್ರಟಿಕ್ ಫ್ರಂಟ್ ಎಂಬ ಸಂಘಟನೆಯು ಮಿಲಿಟರಿ ನಾಯಕತ್ವದ ವಿರುದ್ಧ ಹೋರಾಟವನ್ನು ಪ್ರಾರಂಭಿಸಿದೆ. ಆಗ್ನೇಯ ಏಷ್ಯಾದ ದೇಶದಲ್ಲಿನ ರಾಜಕೀಯ ಅಸ್ಥಿರತೆಯಿಂದಾಗಿ ಅನೇಕ ಕುಕಿಗಳು ತಮ್ಮ ಸುರಕ್ಷತೆಗಾಗಿ ಮಣಿಪುರಕ್ಕೆ ಪಲಾಯನ ಮಾಡಬೇಕಾಯಿತು. ಮ್ಯಾನ್ಮಾರ್‌ನ ವಲಸಿಗರಿಂದಾಗಿ ಬಹುಸಂಖ್ಯಾತ ಮೈತಿ ಸಮುದಾಯದಲ್ಲಿ ಆತಂಕ ಹೆಚ್ಚಾಯಿತು ಎಂದು ಗೃಹ ಸಚಿವರು  ಹೇಳಿದ್ದಾರೆ.

ಮಣಿಪುರದ ಇಂಫಾಲ್ ಕಣಿವೆಯಲ್ಲಿ ಹೆಚ್ಚಾಗಿ ಕೇಂದ್ರೀಕೃತವಾಗಿರುವ ಮೈತೈಗಳು, ಅವರು ಎದುರಿಸುತ್ತಿರುವ ತೊಂದರೆಗಳಿಗೆ ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶಿ ಪ್ರಜೆಗಳ ದೊಡ್ಡ ಪ್ರಮಾಣದ ಅಕ್ರಮ ವಲಸೆಯನ್ನು ದೂಷಿಸುತ್ತಾರೆ.

ಷಾ ಅವರ ಹೇಳಿಕೆಗಳು ‘ಕಲ್ಪನೆಯ ಆಕೃತಿ’

ಮಣಿಪುರದಲ್ಲಿ ಅಶಾಂತಿ ಸೃಷ್ಟಿಯಾಗಲು ಮ್ಯಾನ್ಮಾರ್‌ನಿಂದ ಕುಕಿ ವಲಸಿಗರು ಕಾರಣರಾಗಿದ್ದಾರೆ ಎಂಬ ಷಾ ಅವರ ಹೇಳಿಕೆಗಳು ಹಲವಾರು ಕುಕಿ ಗುಂಪುಗಳು ಮತ್ತು ಶಾಸಕರನ್ನು ಕೆರಳಿಸಿದೆ.

ಸಚಿವರ ಭಾಷಣದ ಒಂದು ದಿನದ ನಂತರ, ರಾಜ್ಯಸಭೆಯಲ್ಲಿ ಮಿಜೋ ನ್ಯಾಷನಲ್ ಫ್ರಂಟ್ ಸಂಸದ ಕೆ ವನ್ಲಾಲ್ವೆನಾ ಅವರಿಗೆ ಮಾತನಾಡಲು ಅವಕಾಶ ನೀಡದೆ ಅವರ ಮೈಕ್ ಅನ್ನು ಸ್ವಿಚ್ ಆಫ್ ಮಾಡಲಾಯಿತು. ಅವರು ಅಮಿತ್ ಶಾ ಅವರ ಹೇಳಿಕೆಗಳು ಕಪೋಕಲ್ಪಿತವಾಗಿವೆ ಎಂದು ಪ್ರತಿಪಾದಿಸಲು ಪ್ರಯತ್ನಿಸಿದರು.

ಕುಕಿ ಬುಡಕಟ್ಟು ಜನಾಂಗದವರ ಅತ್ಯುನ್ನತ ಸಂಸ್ಥೆಯಾದ ಕುಕಿ ಇನ್ಪಿ ಮಣಿಪುರ, ”ಶಾ ಅವರ ಹೇಳಿಕೆಯು ಊಹಾತ್ಮಕವಾಗಿದೆ. ತಮ್ಮ ಹೇಳಿಕೆಗಳು ಸತ್ಯ ಎಂದು ಹೇಳಲು ಅವರ ಬಳಿ ಯಾವುದೇ ಪುರಾವೆಗಳಿಲ್ಲ” ಎಂದು ಹೇಳಿದರು.

”ಮಣಿಪುರದ ಪ್ರಸ್ತುತ ಹತ್ಯಾಕಾಂಡಕ್ಕೆ ಮಿಜೋರಾಂ ಕುಕಿಗಳ ವಲಸೆಗೂ ಯಾವುದೇ ಸಂಬಂಧವಿಲ್ಲ. ಮ್ಯಾನ್ಮಾರ್‌ನಿಂದ ಮಣಿಪುರಕ್ಕೆ ‘ಕುಕಿಗಳ ವಲಸೆ’ ಬರುತ್ತಿದ್ದಾರೆ ಎಂಬ ಮೈತಿಗಳಿಗೆ ಅಭದ್ರತೆ ಉಂಟಾಗಿದೆ ಎಂದು ಅತಿಯಾಗಿ ಪ್ರಚಾರಗೊಂಡಿದೆ” ಎಂದು ಅದು ಭಾನುವಾರ ಹೇಳಿಕೆಯಲ್ಲಿ ತಿಳಿಸಿದೆ.

ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಪೂರ್ವಾಗ್ರಹ ಪೀಡಿತ ಹೇಳಿಕೆಗಳು, ಸುಳ್ಳು ಆರೋಪಗಳು ಮತ್ತು ಕಪೋಲಕಲ್ಪಿತ ನಿರೂಪಣೆಗಳನ್ನು ಅಮಿತ್ ಶಾ ಅವರು ಸಂಸತ್ತಿನಲ್ಲಿ ಪ್ರತಿಧ್ವನಿಸುತ್ತಿದ್ದಾರೆ. ಸಿಂಗ್ ಅವರು ಮೈತಿ “ಬಹುಮತ” ಭಾವನೆಗಳ ಪರವಾಗಿದ್ದಾರೆ ಎಂದು ಸಂಘಟನೆಯವರು ಆರೋಪಿಸಿದ್ದಾರೆ.

ಆಗಸ್ಟ್ 11 ರಂದು ಬಿಜೆಪಿಯ ಎಂಟು ಶಾಸಕರು ಸೇರಿದಂತೆ ಮಣಿಪುರದ ಎಲ್ಲಾ 10 ಕುಕಿ ಶಾಸಕರು ಕೂಡ ಶಾ ಅವರ ಹೇಳಿಕೆಗಳನ್ನು ಟೀಕಿಸಿದ್ದಾರೆ. ಶಾ ಅವರು ತಮ್ಮ ಹೇಳಿಕೆಗಳಿಗೆ ಪುರಾವೆಗಳನ್ನು ಒದಗಿಸಬೇಕು ಎಂದು ಹೇಳಿದರು.

ಮೈತಿ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಸ್ಥಾನಮಾನ ನೀಡುವ ಕುರಿತು ಪರಿಗಣಿಸುವಂತೆ ಏಪ್ರಿಲ್‌ನಲ್ಲಿ ಮಣಿಪುರ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿತ್ತು. ಮೈತಿ ಬೇಡಿಕೆಯನ್ನು ವಿರೋಧಿಸಿ ಮೇ 3 ರಂದು ಕುಕಿ ಬುಡಕಟ್ಟು ಸಮುದಾಯದವರು ರ್ಯಾಲಿ ಆಯೋಜಿಸಿದ್ದರು. ಈ ವೇಳೆ ಹಿಂಸಾಚಾರ ಆರಂಭವಾಯಿತು.  ಅಂದಿನಿಂದ ಈವರೆಗೂ 187 ಜನರು ಸಾವಿಗೀಡಾಗಿದ್ದು, ಸಾವಿರಾರು ಜನ ನಿರಾಶ್ರಿತರಾಗಿದ್ದಾರೆ.

ಇದನ್ನೂ ಓದಿ: ಮಣಿಪುರ ಹೊತ್ತಿ ಉರಿಯುವಾಗ ಸಂಸತ್ತಿನಲ್ಲಿ ಹಾಸ್ಯ ಮಾಡುವುದು ಪ್ರಧಾನಿ ಹುದ್ದೆಗೆ ತಕ್ಕುದಲ್ಲ: ಮೋದಿಗೆ ಚಾಟಿ ಬೀಸಿದ ರಾಹುಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...