Homeಮುಖಪುಟಮಣಿಪುರ ಹಿಂಸಾಚಾರಕ್ಕೆ ಸುಳ್ಳು ಕಾರಣಗಳನ್ನು ನೀಡಿದ ಅಮಿತ್ ಶಾ: ಕುಕಿ ಸಂಘಟನೆಗಳ ಆಕ್ರೋಶ

ಮಣಿಪುರ ಹಿಂಸಾಚಾರಕ್ಕೆ ಸುಳ್ಳು ಕಾರಣಗಳನ್ನು ನೀಡಿದ ಅಮಿತ್ ಶಾ: ಕುಕಿ ಸಂಘಟನೆಗಳ ಆಕ್ರೋಶ

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಮಣಿಪುರದಲ್ಲಿನ ಜನಾಂಗೀಯ ಹಿಂಸಾಚಾರಕ್ಕೆ ಯಾವುದೇ ಪುರಾವೆಗಳಿಲ್ಲದೆಯೇ ಮ್ಯಾನ್ಮಾರ್‌ನಲ್ಲಿನ ಅಶಾಂತಿಯನ್ನು ದೂಷಿಸುವುದು ‘ಅತ್ಯಂತ ದುರದೃಷ್ಟಕರ’ ಎಂದು ಕುಕಿ ಸಂಘಟನೆಗಳು ಹೇಳಿವೆ.

ಆಗಸ್ಟ್ 9ರಂದು ಲೋಕಸಭೆಯಲ್ಲಿ ಮಣಿಪುರ ಹಿಂಸಾಚಾರದ ಚರ್ಚೆಯ ಸಂದರ್ಭದಲ್ಲಿ ಶಾ, ಮ್ಯಾನ್ಮಾರ್‌ನಲ್ಲಿ 2021ರ ಮಿಲಿಟರಿ ದಂಗೆಯ ನಂತರ, ಕುಕಿ ಡೆಮಾಕ್ರಟಿಕ್ ಫ್ರಂಟ್ ಎಂಬ ಸಂಘಟನೆಯು ಮಿಲಿಟರಿ ನಾಯಕತ್ವದ ವಿರುದ್ಧ ಹೋರಾಟವನ್ನು ಪ್ರಾರಂಭಿಸಿದೆ. ಆಗ್ನೇಯ ಏಷ್ಯಾದ ದೇಶದಲ್ಲಿನ ರಾಜಕೀಯ ಅಸ್ಥಿರತೆಯಿಂದಾಗಿ ಅನೇಕ ಕುಕಿಗಳು ತಮ್ಮ ಸುರಕ್ಷತೆಗಾಗಿ ಮಣಿಪುರಕ್ಕೆ ಪಲಾಯನ ಮಾಡಬೇಕಾಯಿತು. ಮ್ಯಾನ್ಮಾರ್‌ನ ವಲಸಿಗರಿಂದಾಗಿ ಬಹುಸಂಖ್ಯಾತ ಮೈತಿ ಸಮುದಾಯದಲ್ಲಿ ಆತಂಕ ಹೆಚ್ಚಾಯಿತು ಎಂದು ಗೃಹ ಸಚಿವರು  ಹೇಳಿದ್ದಾರೆ.

ಮಣಿಪುರದ ಇಂಫಾಲ್ ಕಣಿವೆಯಲ್ಲಿ ಹೆಚ್ಚಾಗಿ ಕೇಂದ್ರೀಕೃತವಾಗಿರುವ ಮೈತೈಗಳು, ಅವರು ಎದುರಿಸುತ್ತಿರುವ ತೊಂದರೆಗಳಿಗೆ ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶಿ ಪ್ರಜೆಗಳ ದೊಡ್ಡ ಪ್ರಮಾಣದ ಅಕ್ರಮ ವಲಸೆಯನ್ನು ದೂಷಿಸುತ್ತಾರೆ.

ಷಾ ಅವರ ಹೇಳಿಕೆಗಳು ‘ಕಲ್ಪನೆಯ ಆಕೃತಿ’

ಮಣಿಪುರದಲ್ಲಿ ಅಶಾಂತಿ ಸೃಷ್ಟಿಯಾಗಲು ಮ್ಯಾನ್ಮಾರ್‌ನಿಂದ ಕುಕಿ ವಲಸಿಗರು ಕಾರಣರಾಗಿದ್ದಾರೆ ಎಂಬ ಷಾ ಅವರ ಹೇಳಿಕೆಗಳು ಹಲವಾರು ಕುಕಿ ಗುಂಪುಗಳು ಮತ್ತು ಶಾಸಕರನ್ನು ಕೆರಳಿಸಿದೆ.

ಸಚಿವರ ಭಾಷಣದ ಒಂದು ದಿನದ ನಂತರ, ರಾಜ್ಯಸಭೆಯಲ್ಲಿ ಮಿಜೋ ನ್ಯಾಷನಲ್ ಫ್ರಂಟ್ ಸಂಸದ ಕೆ ವನ್ಲಾಲ್ವೆನಾ ಅವರಿಗೆ ಮಾತನಾಡಲು ಅವಕಾಶ ನೀಡದೆ ಅವರ ಮೈಕ್ ಅನ್ನು ಸ್ವಿಚ್ ಆಫ್ ಮಾಡಲಾಯಿತು. ಅವರು ಅಮಿತ್ ಶಾ ಅವರ ಹೇಳಿಕೆಗಳು ಕಪೋಕಲ್ಪಿತವಾಗಿವೆ ಎಂದು ಪ್ರತಿಪಾದಿಸಲು ಪ್ರಯತ್ನಿಸಿದರು.

ಕುಕಿ ಬುಡಕಟ್ಟು ಜನಾಂಗದವರ ಅತ್ಯುನ್ನತ ಸಂಸ್ಥೆಯಾದ ಕುಕಿ ಇನ್ಪಿ ಮಣಿಪುರ, ”ಶಾ ಅವರ ಹೇಳಿಕೆಯು ಊಹಾತ್ಮಕವಾಗಿದೆ. ತಮ್ಮ ಹೇಳಿಕೆಗಳು ಸತ್ಯ ಎಂದು ಹೇಳಲು ಅವರ ಬಳಿ ಯಾವುದೇ ಪುರಾವೆಗಳಿಲ್ಲ” ಎಂದು ಹೇಳಿದರು.

”ಮಣಿಪುರದ ಪ್ರಸ್ತುತ ಹತ್ಯಾಕಾಂಡಕ್ಕೆ ಮಿಜೋರಾಂ ಕುಕಿಗಳ ವಲಸೆಗೂ ಯಾವುದೇ ಸಂಬಂಧವಿಲ್ಲ. ಮ್ಯಾನ್ಮಾರ್‌ನಿಂದ ಮಣಿಪುರಕ್ಕೆ ‘ಕುಕಿಗಳ ವಲಸೆ’ ಬರುತ್ತಿದ್ದಾರೆ ಎಂಬ ಮೈತಿಗಳಿಗೆ ಅಭದ್ರತೆ ಉಂಟಾಗಿದೆ ಎಂದು ಅತಿಯಾಗಿ ಪ್ರಚಾರಗೊಂಡಿದೆ” ಎಂದು ಅದು ಭಾನುವಾರ ಹೇಳಿಕೆಯಲ್ಲಿ ತಿಳಿಸಿದೆ.

ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಪೂರ್ವಾಗ್ರಹ ಪೀಡಿತ ಹೇಳಿಕೆಗಳು, ಸುಳ್ಳು ಆರೋಪಗಳು ಮತ್ತು ಕಪೋಲಕಲ್ಪಿತ ನಿರೂಪಣೆಗಳನ್ನು ಅಮಿತ್ ಶಾ ಅವರು ಸಂಸತ್ತಿನಲ್ಲಿ ಪ್ರತಿಧ್ವನಿಸುತ್ತಿದ್ದಾರೆ. ಸಿಂಗ್ ಅವರು ಮೈತಿ “ಬಹುಮತ” ಭಾವನೆಗಳ ಪರವಾಗಿದ್ದಾರೆ ಎಂದು ಸಂಘಟನೆಯವರು ಆರೋಪಿಸಿದ್ದಾರೆ.

ಆಗಸ್ಟ್ 11 ರಂದು ಬಿಜೆಪಿಯ ಎಂಟು ಶಾಸಕರು ಸೇರಿದಂತೆ ಮಣಿಪುರದ ಎಲ್ಲಾ 10 ಕುಕಿ ಶಾಸಕರು ಕೂಡ ಶಾ ಅವರ ಹೇಳಿಕೆಗಳನ್ನು ಟೀಕಿಸಿದ್ದಾರೆ. ಶಾ ಅವರು ತಮ್ಮ ಹೇಳಿಕೆಗಳಿಗೆ ಪುರಾವೆಗಳನ್ನು ಒದಗಿಸಬೇಕು ಎಂದು ಹೇಳಿದರು.

ಮೈತಿ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಸ್ಥಾನಮಾನ ನೀಡುವ ಕುರಿತು ಪರಿಗಣಿಸುವಂತೆ ಏಪ್ರಿಲ್‌ನಲ್ಲಿ ಮಣಿಪುರ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿತ್ತು. ಮೈತಿ ಬೇಡಿಕೆಯನ್ನು ವಿರೋಧಿಸಿ ಮೇ 3 ರಂದು ಕುಕಿ ಬುಡಕಟ್ಟು ಸಮುದಾಯದವರು ರ್ಯಾಲಿ ಆಯೋಜಿಸಿದ್ದರು. ಈ ವೇಳೆ ಹಿಂಸಾಚಾರ ಆರಂಭವಾಯಿತು.  ಅಂದಿನಿಂದ ಈವರೆಗೂ 187 ಜನರು ಸಾವಿಗೀಡಾಗಿದ್ದು, ಸಾವಿರಾರು ಜನ ನಿರಾಶ್ರಿತರಾಗಿದ್ದಾರೆ.

ಇದನ್ನೂ ಓದಿ: ಮಣಿಪುರ ಹೊತ್ತಿ ಉರಿಯುವಾಗ ಸಂಸತ್ತಿನಲ್ಲಿ ಹಾಸ್ಯ ಮಾಡುವುದು ಪ್ರಧಾನಿ ಹುದ್ದೆಗೆ ತಕ್ಕುದಲ್ಲ: ಮೋದಿಗೆ ಚಾಟಿ ಬೀಸಿದ ರಾಹುಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...