Homeಮುಖಪುಟಅಂಬೇಡ್ಕರ್‌ಗೆ ಅವಮಾನ| 'ಅಮಿತ್ ಶಾಗೆ ಹುಚ್ಚು ಹಿಡಿದಿದೆ, ಅವರು ರಾಜಕೀಯ ತ್ಯಜಿಸಬೇಕು' ಎಂದ ಲಾಲು ಪ್ರಸಾದ್

ಅಂಬೇಡ್ಕರ್‌ಗೆ ಅವಮಾನ| ‘ಅಮಿತ್ ಶಾಗೆ ಹುಚ್ಚು ಹಿಡಿದಿದೆ, ಅವರು ರಾಜಕೀಯ ತ್ಯಜಿಸಬೇಕು’ ಎಂದ ಲಾಲು ಪ್ರಸಾದ್

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಡಾ.ಬಿ.ಆರ್. ಅಂಬೇಡ್ಕರ್ ಕುರಿತ ಅಪಮಾನಕರ ಹೇಳಿಕೆಗೆ ಸಂಬಂಧಿಸಿದಂತೆ ಭಾರೀ ವಿರೋಧ ವ್ಯಕ್ತವಾಗಿದೆ. ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, “ಅಮಿತ್ ಶಾ ಅವರಿಗೆ ಹುಚ್ಚು ಹಿಡಿದಿದೆ, ಅವರು ರಾಜಕೀಯವನ್ನು ತ್ಯಜಿಸಿ ರಾಜೀನಾಮೆ ನೀಡಬೇಕು” ಎಂದು ಗುರುವಾರ ಹೇಳಿದ್ದಾರೆ.

ಮಂಗಳವಾರ ರಾಜ್ಯಸಭೆಯಲ್ಲಿ ಸಂವಿಧಾನದ ಚರ್ಚೆಗೆ ಉತ್ತರಿಸಿದ ಕೇಂದ್ರ ಗೃಹ ಸಚಿವರು, “ಅಂಬೇಡ್ಕರ್ ಅವರ ಹೆಸರನ್ನು ಹೇಳುವುದು ಕೆಲವರಿಗೆ ಫ್ಯಾಶನ್ ಆಗಿದೆ, ಇಷ್ಟು ಭಾರಿ ದೇವರನ್ನು ಸ್ಮರಿಸಿದ್ದರೆ ಏಳು ಜನ್ಮಕ್ಕೆ ಆಗುವಷ್ಟು ಸ್ವರ್ಗ ಸಿಗುತ್ತಿತ್ತು” ಎಂದು ಹೇಳುವ ಮೂಲಕ ಅಮಿತ್ ಶಾ ಅಂಬೇಡ್ಕರ್‌ಗೆ ಅಪಮಾನಿಸಿದ್ದಾರೆ.

“ಅಮಿತ್ ಶಾ ಅವರಿಗೆ ಹುಚ್ಚು ಹಿಡಿದಿದೆ. ಅವರಿಗೆ ಬಾಬಾಸಾಹೇಬ್ ಅಂಬೇಡ್ಕರ್ ಅವರ ಮೇಲೆ ದ್ವೇಷವಿರಬೇಕು. ಅವರ ಈ ಹುಚ್ಚುತನವನ್ನು ನಾವು ಖಂಡಿಸುತ್ತೇವೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಶ್ರೇಷ್ಠರು. ಅಮಿತ್ ಶಾ ರಾಜಕೀಯವನ್ನು ತ್ಯಜಿಸಿ ಹೊರಹೋಗಬೇಕು” ಎಂದು ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ.

ಇದಕ್ಕೂ ಮೊದಲು, ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು. ಶಾ ಮತ್ತು ಬಿಜೆಪಿ ಸಂವಿಧಾನ ವಿರೋಧಿ, ದ್ವೇಷವನ್ನು ಹರಡುತ್ತಿದ್ದಾರೆ ಎಂದು ಆರೋಪಿಸಿದರು.

“ಬಾಬಾಸಾಹೇಬ್ ಅಂಬೇಡ್ಕರ್ ನಮ್ಮ ಫ್ಯಾಶನ್ ಮತ್ತು ಉತ್ಸಾಹ. ಅವರು ನಮ್ಮ ಪ್ರೇರಣೆ ಮತ್ತು ಸ್ಫೂರ್ತಿ. ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಅವಮಾನಿಸಲು ನಾವು ಯಾರಿಗೂ ಬಿಡುವುದಿಲ್ಲ. ಈ ಜನರು ದ್ವೇಷವನ್ನು ಹರಡುವ ಸಂವಿಧಾನ ವಿರೋಧಿಗಳು ಮತ್ತು ಸಂಸತ್ತಿನಲ್ಲಿ ಬಳಸಿದ ಭಾಷೆ ಖಂಡನೀಯ” ಎಂದು ತೇಜಸ್ವಿ ಯಾದವ್ ತಿಳಿಸಿದರು.

ಕಾಂಗ್ರೆಸ್ ಸಂಸದ ಮಾಣಿಕ್ಕಂ ಠಾಗೋರ್ ಅವರು ಗುರುವಾರ ಲೋಕಸಭೆಯಲ್ಲಿ ಮುಂದೂಡಿಕೆ ನಿರ್ಣಯ ಮಂಡಿಸಿ, “ಅಮಿತ್ ಶಾ ಸಂಸತ್ತಿನೊಳಗೆ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಅವಮಾನಿಸಿದ್ದಾರೆ. ಆದ್ದರಿಂದ, ಇಂದು ನಾವು ಅವರ ಕ್ಷಮೆಯಾಚನೆ ಮತ್ತು ಸಂಪುಟಕ್ಕೆ ರಾಜೀನಾಮೆ ನೀಡುವಂತೆ ಮುಂದೂಡುವ ನಿರ್ಣಯವನ್ನು ಮಂಡಿಸಿದ್ದೇವೆ” ಎಂದು ಅವರು ಹೇಳಿದರು.

ಇದನ್ನೂ ಓದಿ; ‘ಅಂಬೇಡ್ಕರ್ ಪರಂಪರೆಗೆ ಧಕ್ಕೆಯಾಗುವುದನ್ನು ಸಹಿಸುವುದಿಲ್ಲ..’; ಅಮಿತ್ ಶಾ ಹೇಳಿಕೆಗೆ ಕಮಲ್ ಹಾಸನ್ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...