Homeಮುಖಪುಟಮಹಾರಾಷ್ಟ್ರದಲ್ಲಿ ಎನ್‌ಡಿಎ ಬಣದಲ್ಲಿ ಭುಗಿಲೆದ್ದ ಸೀಟು ಹಂಚಿಕೆ ಬಿಕ್ಕಟ್ಟು

ಮಹಾರಾಷ್ಟ್ರದಲ್ಲಿ ಎನ್‌ಡಿಎ ಬಣದಲ್ಲಿ ಭುಗಿಲೆದ್ದ ಸೀಟು ಹಂಚಿಕೆ ಬಿಕ್ಕಟ್ಟು

- Advertisement -
- Advertisement -

ಮಹಾರಾಷ್ಟ್ರದಲ್ಲಿ ಎನ್‌ಡಿಎ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ವಿಚಾರದಲ್ಲಿ ಬಿಕ್ಕಟ್ಟು ಕಾಣಿಸಿಕೊಂಡಿದೆ. ಬಿಜೆಪಿ, ಶಿವಸೇನೆ ಶಿಂಧೆ ಬಣ, ಎನ್‌ಸಿಪಿ ಅಜಿತ್‌ ಪವಾರ್‌ ಬಣದ ನಡುವೆ ಕ್ಷೇತ್ರಗಳ ಹಂಚಿಕೆ ವಿಚಾರದಲ್ಲಿ  ಭಿನ್ನಾಭಿಪ್ರಾಯ ಮೂಡಿದ್ದು, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ನಾಳೆ ಮಹಾರಾಷ್ಟ್ರಕ್ಕೆ ತೆರಳಿ ಡ್ಯಾಮೇಜ್‌ ಕಂಟ್ರೋಲ್‌ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

ಮಹಾರಾಷ್ಟ್ರದಲ್ಲಿ ಒಂದು ಕಡೆ ಬಿಜೆಪಿಯೊಳಗೆ ಆಂತರಿಕ ಭಿನ್ನಾಭಿಪ್ರಾಯಗಳಿದ್ದರೆ, ಇನ್ನೊಂದು ಕಡೆ ಸೀಟು ಹಂಚಿಕೆ ಕುರಿತು ಆಡಳಿತಾರೂಢ ಎನ್‌ಡಿಎ ಪಾಲುದಾರರ ನಡುವೆ ಅಸಮಾಧಾನ ಭುಗಿಲೆದ್ದಿದೆ. ವಿಶೇಷವಾಗಿ ವಿದರ್ಭ, ಮರಾಠವಾಡ ಮತ್ತು ಮಹಾರಾಷ್ಟ್ರ ಉತ್ತರದಲ್ಲಿ ಸೀಟು ಹಂಚಿಕೆ ದೊಡ್ಡ ಸಮಸ್ಯೆಯಾಗಿದೆ ಎನ್ನಲಾಗಿದೆ.

ಲೋಕಸಭೆ ಚುನಾವಣೆಗೆ ಬಿಜೆಪಿ ತನ್ನ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ ಕೆಲವು ದಿನಗಳ ನಂತರ ಶಾ ಮಹಾರಾಷ್ಟ್ರ ಭೇಟಿ ನಿಗದಿಯಾಗಿದೆ. ಅಮಿತ್‌ ಶಾ ವಿದರ್ಭದಲ್ಲಿ ಸಭೆಯನ್ನು ನಡೆಸಲಿದ್ದಾರೆ. ಜಲಗಾಂವ್‌ನಲ್ಲಿ ಯುವ ಸಮಾವೇಶ ಮತ್ತು ಸಂಭಾಜಿನಗರ (ಮರಾಠವಾಡ)ದಲ್ಲಿ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ಪಕ್ಷದ ಮೂಲಗಳು ತಿಳಿಸಿದೆ. ಲೋಕಸಭಾ ಚುನಾವಣಾ ಪ್ರಚಾರಕ್ಕೆ ಶಾ ಅವರ ಭೇಟಿ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಆದರೆ ಆಡಳಿತಾರೂಢ ಎನ್‌ಡಿಎ ಮೈತ್ರಿ ಪಕ್ಷಗಳ ಭಿನ್ನಾಭಿಪ್ರಾಯಗಳನ್ನು ಶಮನ ಮಾಡುವ ಉದ್ದೇಶದಿಂದ ಅಮಿತ್‌ ಶಾ ಭೇಟಿ ನಿಗದಿಯಾಗಿದೆ ಎಂದು ಪಕ್ಷದ ಆಂತರಿಕ ಮೂಲಗಳು ತಿಳಿಸುತ್ತಿದೆ. ಮಹಾರಾಷ್ಟ್ರದಲ್ಲಿ ಎನ್‌ಡಿಎ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಬಗ್ಗೆ ಸಮಸ್ಯೆಗಳಿದ್ದು, ಅಭ್ಯರ್ಥಿಗಳ ಘೋಷಣೆಗೂ ಮುನ್ನ ಇತ್ಯರ್ಥವಾಗಬೇಕಿದೆ ಎಂದು ಪಕ್ಷದ ಆಂತರಿಕ ಮೂಲಗಳು ಹೇಳಿದೆ.

ಪ್ರಸ್ತುತ ಸ್ವತಂತ್ರ ಸಂಸದ ನವನೀತ್ ರಾಣಾ ಪ್ರತಿನಿಧಿಸುವ ಅಮರಾವತಿ ಕ್ಷೇತ್ರವು ಎನ್‌ಡಿಎ ಮೈತ್ರಿ ಪಾಲುದಾರರಾದ ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ) ಮತ್ತು ಎನ್‌ಸಿಪಿ (ಅಜಿತ್ ಪವಾರ್) ನಡುವಿನ ಬಿಕ್ಕಟ್ಟಿಗೆ ಕಾರಣವಾಗಿದೆ. ರಾಣಾ ಅವರು ಬಿಜೆಪಿ ಟಿಕೆಟ್‌ನಲ್ಲಿ ಚುನಾವಣೆಗೆ ಸ್ಪರ್ಧಿಸಲು ಒಪ್ಪಿಕೊಂಡಿದ್ದರೂ, ಅವರು ಪರಿಶಿಷ್ಟ ಜಾತಿ (ಎಸ್‌ಸಿ) ಪ್ರಮಾಣಪತ್ರವನ್ನು ಪಡೆಯಲು “ಮೋಸದ ಮಾರ್ಗಗಳನ್ನು” ಬಳಸಿರುವ ಕುರಿತು  ಪ್ರಕರಣವು ಸುಪ್ರೀಂಕೋರ್ಟ್‌ನಲ್ಲಿ ಬಾಕಿ ಉಳಿದಿದೆ. 

ಚಂದ್ರಾಪುರದಲ್ಲಿ ಬಿಜೆಪಿ ತನ್ನ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಸಮಸ್ಯೆ ಎದುರಿಸುತ್ತಿದೆ. ಒಬಿಸಿ ಸಮುದಾಯಕ್ಕೆ ಸೇರಿದ ರಾಜ್ಯ ಸಚಿವ ಸುಧೀರ್ ಮುಂಗಂತಿವಾರ್ ಅವರನ್ನು ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ, ಆದರೆ ಪ್ರಬಲ ಕುಂಬಿ ಸಮುದಾಯದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಮೈತ್ರಿ ಪಾಲುದಾರ ಇತರ ಪಕ್ಷಗಳು ಮುಂದಾಗಿದೆ. ವಿದರ್ಭ ಸೇರಿ ನಾಗ್‌ಪುರ, ಭಂಡಾರಾ-ಗೊಂಡಿಯಾ, ಗಡ್‌ಚಿರೋಲಿ, ಚಂದ್ರಾಪುರ, ವಾರ್ಧಾ, ರಾಮ್‌ಟೆಕ್, ಬುಲ್ಧಾನ, ಯವತ್ಮಾಲ್-ವಾಶಿಮ್, ವಾರ್ಧಾ ಮತ್ತು ಅಕೋಲಾ ಬಿಜೆಪಿಗೆ ಮುಖ್ಯವಾಗಿದೆ. ರಾಜ್ಯದ 48 ಲೋಕಸಭಾ ಸ್ಥಾನಗಳಲ್ಲಿ 45 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದ್ದೇವೆ ಎಂದು ಬಿಜೆಪಿ ಹೇಳಿಕೊಂಡಿದೆ.

ಕೊಂಕಣ ಪ್ರದೇಶದಲ್ಲಿ ಬಿಜೆಪಿ ಮತ್ತು ಶಿಂಧೆ ಸೇನೆ ಸಿಂಧುದುರ್ಗ ರತ್ನಗಿರಿ ಕ್ಷೇತ್ರಕ್ಕೆ ಪೈಪೋಟಿ ನಡೆಸುತ್ತಿವೆ. ಕೇಂದ್ರ ಸಚಿವ ನಾರಾಯಣ ರಾಣೆ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ರತ್ನಗಿರಿ-ಸಿಂಧುದುರ್ಗ ಲೋಕಸಭಾ ಕ್ಷೇತ್ರವು ಬಿಜೆಪಿಗೆ ಸೇರಿದ್ದು, ನಾವೇ ಈ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಪಶ್ಚಿಮ ಮಹಾರಾಷ್ಟ್ರದ ಶಿರೂರು ಕ್ಷೇತ್ರದಲ್ಲಿ ಬಿಜೆಪಿ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ನಡುವೆ ಸೀಟು ಹಂಚಿಕೆ ಭಿನ್ನಾಭಿಪ್ರಾಯವಿದೆ.

ಕಳೆದ ಬಾರಿ 22 ಸ್ಥಾನಗಳಲ್ಲಿ ಸ್ಪರ್ಧಿಸಿದ್ದೆವು. ನಾವೇಕೆ ಕಡಿಮೆ ಸ್ಥಾನಕ್ಕೆ ಒಪ್ಪಿಕೊಳ್ಳಬೇಕು? ಎಂದು ಶಿಂಧೆ ಸೇನೆಯ ಹಿರಿಯ ಮುಖಂಡ ಗಜಾನನ ಕೀರ್ತಿಕರ್ ಪ್ರಶ್ನಿಸಿದ್ದಾರೆ. ಅಜಿತ್ ಪವಾರ್‌ ನೇತೃತ್ವದ ಎನ್‌ಸಿಪಿ ಕೂಡ ಶಿಂಧೆ ಸೇನೆಗೆ ಸಮಾನವಾದ ಸ್ಥಾನಗಳಿಗೆ ಬೇಡಿಕೆ ಇಡುತ್ತೇವೆ ಎಂದು ಹೇಳಿಕೊಂಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿಯ ಉನ್ನತ ನಾಯಕತ್ವವು, ಪ್ರತಿ ಪಕ್ಷಕ್ಕೂ ತಮ್ಮ ಬೇಡಿಕೆಯನ್ನು ಪ್ರತಿಪಾದಿಸುವ ಹಕ್ಕಿದೆ. ಸೀಟು ಹಂಚಿಕೆ ಕುರಿತು ಮಾತುಕತೆಗಳು ನಡೆದಾಗ ಉನ್ನತ ನಾಯಕರು ಪ್ರಾಯೋಗಿಕ ವಿಧಾನವನ್ನು ತೆಗೆದುಕೊಳ್ಳುತ್ತಾರೆ. ಶಿಂಧೆ ಮತ್ತು ಅಜಿತ್ ಇಬ್ಬರಿಗೂ ಬಿಜೆಪಿಯ ಕಾರ್ಯವೈಖರಿಯ ಅರಿವಿದೆ. ಪ್ರತಿ ಸ್ಥಾನವನ್ನು ನೆಲದ ವಾಸ್ತವದ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಕೋಮು ಸಂಬಂಧಗಳ ಸುಧಾರಣೆ, ಉತ್ತಮ ಉದ್ಯೋಗದ ಭರವಸೆ ಕಳೆದುಕೊಂಡ ಭಾರತೀಯರು: ಸಮೀಕ್ಷಾ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...