Homeಮುಖಪುಟಮಹಾರಾಷ್ಟ್ರದಲ್ಲಿ ಎನ್‌ಡಿಎ ಬಣದಲ್ಲಿ ಭುಗಿಲೆದ್ದ ಸೀಟು ಹಂಚಿಕೆ ಬಿಕ್ಕಟ್ಟು

ಮಹಾರಾಷ್ಟ್ರದಲ್ಲಿ ಎನ್‌ಡಿಎ ಬಣದಲ್ಲಿ ಭುಗಿಲೆದ್ದ ಸೀಟು ಹಂಚಿಕೆ ಬಿಕ್ಕಟ್ಟು

- Advertisement -
- Advertisement -

ಮಹಾರಾಷ್ಟ್ರದಲ್ಲಿ ಎನ್‌ಡಿಎ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ವಿಚಾರದಲ್ಲಿ ಬಿಕ್ಕಟ್ಟು ಕಾಣಿಸಿಕೊಂಡಿದೆ. ಬಿಜೆಪಿ, ಶಿವಸೇನೆ ಶಿಂಧೆ ಬಣ, ಎನ್‌ಸಿಪಿ ಅಜಿತ್‌ ಪವಾರ್‌ ಬಣದ ನಡುವೆ ಕ್ಷೇತ್ರಗಳ ಹಂಚಿಕೆ ವಿಚಾರದಲ್ಲಿ  ಭಿನ್ನಾಭಿಪ್ರಾಯ ಮೂಡಿದ್ದು, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ನಾಳೆ ಮಹಾರಾಷ್ಟ್ರಕ್ಕೆ ತೆರಳಿ ಡ್ಯಾಮೇಜ್‌ ಕಂಟ್ರೋಲ್‌ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

ಮಹಾರಾಷ್ಟ್ರದಲ್ಲಿ ಒಂದು ಕಡೆ ಬಿಜೆಪಿಯೊಳಗೆ ಆಂತರಿಕ ಭಿನ್ನಾಭಿಪ್ರಾಯಗಳಿದ್ದರೆ, ಇನ್ನೊಂದು ಕಡೆ ಸೀಟು ಹಂಚಿಕೆ ಕುರಿತು ಆಡಳಿತಾರೂಢ ಎನ್‌ಡಿಎ ಪಾಲುದಾರರ ನಡುವೆ ಅಸಮಾಧಾನ ಭುಗಿಲೆದ್ದಿದೆ. ವಿಶೇಷವಾಗಿ ವಿದರ್ಭ, ಮರಾಠವಾಡ ಮತ್ತು ಮಹಾರಾಷ್ಟ್ರ ಉತ್ತರದಲ್ಲಿ ಸೀಟು ಹಂಚಿಕೆ ದೊಡ್ಡ ಸಮಸ್ಯೆಯಾಗಿದೆ ಎನ್ನಲಾಗಿದೆ.

ಲೋಕಸಭೆ ಚುನಾವಣೆಗೆ ಬಿಜೆಪಿ ತನ್ನ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ ಕೆಲವು ದಿನಗಳ ನಂತರ ಶಾ ಮಹಾರಾಷ್ಟ್ರ ಭೇಟಿ ನಿಗದಿಯಾಗಿದೆ. ಅಮಿತ್‌ ಶಾ ವಿದರ್ಭದಲ್ಲಿ ಸಭೆಯನ್ನು ನಡೆಸಲಿದ್ದಾರೆ. ಜಲಗಾಂವ್‌ನಲ್ಲಿ ಯುವ ಸಮಾವೇಶ ಮತ್ತು ಸಂಭಾಜಿನಗರ (ಮರಾಠವಾಡ)ದಲ್ಲಿ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ಪಕ್ಷದ ಮೂಲಗಳು ತಿಳಿಸಿದೆ. ಲೋಕಸಭಾ ಚುನಾವಣಾ ಪ್ರಚಾರಕ್ಕೆ ಶಾ ಅವರ ಭೇಟಿ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಆದರೆ ಆಡಳಿತಾರೂಢ ಎನ್‌ಡಿಎ ಮೈತ್ರಿ ಪಕ್ಷಗಳ ಭಿನ್ನಾಭಿಪ್ರಾಯಗಳನ್ನು ಶಮನ ಮಾಡುವ ಉದ್ದೇಶದಿಂದ ಅಮಿತ್‌ ಶಾ ಭೇಟಿ ನಿಗದಿಯಾಗಿದೆ ಎಂದು ಪಕ್ಷದ ಆಂತರಿಕ ಮೂಲಗಳು ತಿಳಿಸುತ್ತಿದೆ. ಮಹಾರಾಷ್ಟ್ರದಲ್ಲಿ ಎನ್‌ಡಿಎ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಬಗ್ಗೆ ಸಮಸ್ಯೆಗಳಿದ್ದು, ಅಭ್ಯರ್ಥಿಗಳ ಘೋಷಣೆಗೂ ಮುನ್ನ ಇತ್ಯರ್ಥವಾಗಬೇಕಿದೆ ಎಂದು ಪಕ್ಷದ ಆಂತರಿಕ ಮೂಲಗಳು ಹೇಳಿದೆ.

ಪ್ರಸ್ತುತ ಸ್ವತಂತ್ರ ಸಂಸದ ನವನೀತ್ ರಾಣಾ ಪ್ರತಿನಿಧಿಸುವ ಅಮರಾವತಿ ಕ್ಷೇತ್ರವು ಎನ್‌ಡಿಎ ಮೈತ್ರಿ ಪಾಲುದಾರರಾದ ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ) ಮತ್ತು ಎನ್‌ಸಿಪಿ (ಅಜಿತ್ ಪವಾರ್) ನಡುವಿನ ಬಿಕ್ಕಟ್ಟಿಗೆ ಕಾರಣವಾಗಿದೆ. ರಾಣಾ ಅವರು ಬಿಜೆಪಿ ಟಿಕೆಟ್‌ನಲ್ಲಿ ಚುನಾವಣೆಗೆ ಸ್ಪರ್ಧಿಸಲು ಒಪ್ಪಿಕೊಂಡಿದ್ದರೂ, ಅವರು ಪರಿಶಿಷ್ಟ ಜಾತಿ (ಎಸ್‌ಸಿ) ಪ್ರಮಾಣಪತ್ರವನ್ನು ಪಡೆಯಲು “ಮೋಸದ ಮಾರ್ಗಗಳನ್ನು” ಬಳಸಿರುವ ಕುರಿತು  ಪ್ರಕರಣವು ಸುಪ್ರೀಂಕೋರ್ಟ್‌ನಲ್ಲಿ ಬಾಕಿ ಉಳಿದಿದೆ. 

ಚಂದ್ರಾಪುರದಲ್ಲಿ ಬಿಜೆಪಿ ತನ್ನ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಸಮಸ್ಯೆ ಎದುರಿಸುತ್ತಿದೆ. ಒಬಿಸಿ ಸಮುದಾಯಕ್ಕೆ ಸೇರಿದ ರಾಜ್ಯ ಸಚಿವ ಸುಧೀರ್ ಮುಂಗಂತಿವಾರ್ ಅವರನ್ನು ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ, ಆದರೆ ಪ್ರಬಲ ಕುಂಬಿ ಸಮುದಾಯದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಮೈತ್ರಿ ಪಾಲುದಾರ ಇತರ ಪಕ್ಷಗಳು ಮುಂದಾಗಿದೆ. ವಿದರ್ಭ ಸೇರಿ ನಾಗ್‌ಪುರ, ಭಂಡಾರಾ-ಗೊಂಡಿಯಾ, ಗಡ್‌ಚಿರೋಲಿ, ಚಂದ್ರಾಪುರ, ವಾರ್ಧಾ, ರಾಮ್‌ಟೆಕ್, ಬುಲ್ಧಾನ, ಯವತ್ಮಾಲ್-ವಾಶಿಮ್, ವಾರ್ಧಾ ಮತ್ತು ಅಕೋಲಾ ಬಿಜೆಪಿಗೆ ಮುಖ್ಯವಾಗಿದೆ. ರಾಜ್ಯದ 48 ಲೋಕಸಭಾ ಸ್ಥಾನಗಳಲ್ಲಿ 45 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದ್ದೇವೆ ಎಂದು ಬಿಜೆಪಿ ಹೇಳಿಕೊಂಡಿದೆ.

ಕೊಂಕಣ ಪ್ರದೇಶದಲ್ಲಿ ಬಿಜೆಪಿ ಮತ್ತು ಶಿಂಧೆ ಸೇನೆ ಸಿಂಧುದುರ್ಗ ರತ್ನಗಿರಿ ಕ್ಷೇತ್ರಕ್ಕೆ ಪೈಪೋಟಿ ನಡೆಸುತ್ತಿವೆ. ಕೇಂದ್ರ ಸಚಿವ ನಾರಾಯಣ ರಾಣೆ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ರತ್ನಗಿರಿ-ಸಿಂಧುದುರ್ಗ ಲೋಕಸಭಾ ಕ್ಷೇತ್ರವು ಬಿಜೆಪಿಗೆ ಸೇರಿದ್ದು, ನಾವೇ ಈ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಪಶ್ಚಿಮ ಮಹಾರಾಷ್ಟ್ರದ ಶಿರೂರು ಕ್ಷೇತ್ರದಲ್ಲಿ ಬಿಜೆಪಿ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ನಡುವೆ ಸೀಟು ಹಂಚಿಕೆ ಭಿನ್ನಾಭಿಪ್ರಾಯವಿದೆ.

ಕಳೆದ ಬಾರಿ 22 ಸ್ಥಾನಗಳಲ್ಲಿ ಸ್ಪರ್ಧಿಸಿದ್ದೆವು. ನಾವೇಕೆ ಕಡಿಮೆ ಸ್ಥಾನಕ್ಕೆ ಒಪ್ಪಿಕೊಳ್ಳಬೇಕು? ಎಂದು ಶಿಂಧೆ ಸೇನೆಯ ಹಿರಿಯ ಮುಖಂಡ ಗಜಾನನ ಕೀರ್ತಿಕರ್ ಪ್ರಶ್ನಿಸಿದ್ದಾರೆ. ಅಜಿತ್ ಪವಾರ್‌ ನೇತೃತ್ವದ ಎನ್‌ಸಿಪಿ ಕೂಡ ಶಿಂಧೆ ಸೇನೆಗೆ ಸಮಾನವಾದ ಸ್ಥಾನಗಳಿಗೆ ಬೇಡಿಕೆ ಇಡುತ್ತೇವೆ ಎಂದು ಹೇಳಿಕೊಂಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿಯ ಉನ್ನತ ನಾಯಕತ್ವವು, ಪ್ರತಿ ಪಕ್ಷಕ್ಕೂ ತಮ್ಮ ಬೇಡಿಕೆಯನ್ನು ಪ್ರತಿಪಾದಿಸುವ ಹಕ್ಕಿದೆ. ಸೀಟು ಹಂಚಿಕೆ ಕುರಿತು ಮಾತುಕತೆಗಳು ನಡೆದಾಗ ಉನ್ನತ ನಾಯಕರು ಪ್ರಾಯೋಗಿಕ ವಿಧಾನವನ್ನು ತೆಗೆದುಕೊಳ್ಳುತ್ತಾರೆ. ಶಿಂಧೆ ಮತ್ತು ಅಜಿತ್ ಇಬ್ಬರಿಗೂ ಬಿಜೆಪಿಯ ಕಾರ್ಯವೈಖರಿಯ ಅರಿವಿದೆ. ಪ್ರತಿ ಸ್ಥಾನವನ್ನು ನೆಲದ ವಾಸ್ತವದ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಕೋಮು ಸಂಬಂಧಗಳ ಸುಧಾರಣೆ, ಉತ್ತಮ ಉದ್ಯೋಗದ ಭರವಸೆ ಕಳೆದುಕೊಂಡ ಭಾರತೀಯರು: ಸಮೀಕ್ಷಾ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...