Homeಮುಖಪುಟಬುಡಕಟ್ಟು ನಾಯಕ ಬಿರ್ಸಾ ಮುಂಡಾಗೆ ಅಮಿತ್ ಶಾ ಅವಮಾನ: ಟಿಎಂಸಿ ಆಕ್ರೋಶ

ಬುಡಕಟ್ಟು ನಾಯಕ ಬಿರ್ಸಾ ಮುಂಡಾಗೆ ಅಮಿತ್ ಶಾ ಅವಮಾನ: ಟಿಎಂಸಿ ಆಕ್ರೋಶ

- Advertisement -
- Advertisement -

ಮುಂದಿನ ವರ್ಷ ನಡೆಯಲಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಬಿಜೆಪಿ ಸಿದ್ಧತೆಗಳನ್ನು ಆರಂಭಿಸಿದ್ದು, 2 ದಿನಗಳ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮೇಲೆ ತೃಣಮೂಲ ಕಾಂಗ್ರೆಸ್ ಹರಿಹಾಯ್ದಿದೆ. ಬುಡಕಟ್ಟು ನಾಯಕನ ವಿಚಾರದಲ್ಲಿ ಅಮಿತ್ ಶಾ ಮಾಡಿದ ಎಡವಟ್ಟು ಇದಕ್ಕೆ ಕಾರಣವಾಗಿದೆ.

ನವೆಂಬರ್ 5 ರ ಗುರುವಾರ ಬಂಕುರಾಕ್ಕೆ ಭೇಟಿ ನೀಡಿದ್ದ, ಬಿಜೆಪಿಯ ಅಮಿತ್ ಶಾ ಬುಡಕಟ್ಟು ಸಮುದಾಯದ ಜೊತೆಗಿನ ಕಾರ್ಯಕ್ರಮದ ಸಂದರ್ಭದಲ್ಲಿ ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದರು. ಅದು ಈಗ ಆಡಳಿತರೂಢ ಟಿಎಂಸಿಯ ಕೆಂಗಣ್ಣಿಗೆ ಗುರಿಯಾಗಿದೆ.

ನಡೆದಿದ್ದು ಏನೆಂದರೆ, ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಅವರ ಪ್ರತಿಮೆ ಎಂದುಕೊಂಡ ಕೇಂದ್ರ ಗೃಹ ಸಚಿವರು ಅನಾಮಧೇಯ ಬುಡಕಟ್ಟು ಬೇಟೆಗಾರನ ಪ್ರತಿಮೆಗೆ ಹೂಮಾಲೆ ಹಾಕಿ ಬಿರ್ಸಾ ಮುಂಡಾ ಎಂದಿದ್ದಾರೆ. ಬಿರ್ಸಾ ಮುಂಡಾ ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ತಮ್ಮ 25 ನೇ ವಯಸ್ಸಿನಲ್ಲಿ ವೀರಮರಣ ಹೊಂದಿದ ಬುಡಕಟ್ಟು ನಾಯಕರಾಗಿದ್ದಾರೆ.

ಬಂಕುರಾದ ಬುಡಕಟ್ಟು ಮುಖಂಡರು ಬಿಜೆಪಿ ನಾಯಕರು ಹಾರ ಹಾಕಿದ ಪ್ರತಿಮೆ ಅವರ ನಾಯಕ ಬಿರ್ಸಾ ಮುಂಡಾದದ್ದಲ್ಲ, ಮತ್ತೊಬ್ಬ ಬುಡಕಟ್ಟು ಬೇಟೆಗಾರರದ್ದು ಎಂದು ಹೇಳಿದ್ದಾರೆ.

ಬಂಕುರಾ ಭೇಟಿಯ ನಂತರ, ಅಮಿತ್ ಶಾ  ತಮ್ಮ ಟ್ವಿಟರ್‌ನಲ್ಲಿ ಕಾರ್ಯಕ್ರಮದ ಬಗ್ಗೆ ಪೋಸ್ಟ್ ಮಾಡಿದ್ದು, “ಪಶ್ಚಿಮ ಬಂಗಾಳದ ಬಂಕುರಾದಲ್ಲಿ ಬುಡಕಟ್ಟು ಮುಖಂಡ ಭಗವಾನ್ ಬಿರ್ಸಾ ಮುಂಡಾ ಜಿ ಅವರಿಗೆ ಇಂದು ಹೂವಿನ ಗೌರವ ಸಲ್ಲಿಸಲಾಗಿದೆ. ನಮ್ಮ ಬುಡಕಟ್ಟು ಸಹೋದರಿ ಮತ್ತು ಸಹೋದರರ ಹಕ್ಕುಗಳು ಮತ್ತು ಉನ್ನತಿಗಾಗಿ ಬಿರ್ಸಾ ಮುಂಡಾ ತಮ್ಮ ಜೀವನವನ್ನು ಸಮರ್ಪಿಸಿದರು. ಅವರ ಧೈರ್ಯ, ಹೋರಾಟಗಳು ಮತ್ತು ತ್ಯಾಗಗಳು ನಮ್ಮೆಲ್ಲರಿಗೂ ಸ್ಫೂರ್ತಿ ನೀಡುತ್ತಿವೆ” ಎಂದಿದ್ದಾರೆ.

ಘಟನೆ ನಡೆದ ಕೂಡಲೇ ಟಿಎಂಸಿ ನಾಯಕರು ಅಮಿತ್ ಶಾ ಮತ್ತ ಅವರ ಬೆಂಬಲಿಗರ ಮೇಲೆ ವಾಗ್ದಾಳಿ ನಡೆಸಿದ್ದಾರೆ.

“ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂಗಾಳದ ಸಂಸ್ಕೃತಿಯನ್ನು ಅರಿಯದ ಕಾರಣ ಭಗವಾನ್ ಬಿರ್ಸಾ ಮುಂಡಾ ಎಂದು ಬೇರೆಯೆ ವಿಗ್ರಹವನ್ನು ಆರಿಸಿ ಅವಮಾನಿಸಿದ್ದಾರೆ. ಅಲ್ಲದೆ  ಅವರ ಫೋಟೋವನ್ನು ಬೇರೊಬ್ಬರ ಪಾದದ ಮೇಲೆ ಇಟ್ಟಿದ್ದಾರೆ. ಅವರು ಎಂದಾದರೂ ಬಂಗಾಳವನ್ನು ಗೌರವಿಸುತ್ತಾರೆಯೇ? ” ಎಂದು ತೃಣಮೂಲ ಕಾಂಗ್ರೆಸ್ ಅಧಿಕೃತ ಖಾತೆ ಟ್ವೀಟ್ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...