Homeಮುಖಪುಟ‘ಬಿಹಾರದಲ್ಲಿ ಅಧಿಕಾರ ಹೋದ ನಂತರ, ಅಮಿತ್‌ ಶಾ ಬಿಲ್ಕುಲ್‌ ಹುಚ್ಚರಾಗಿದ್ದಾರೆ’: ಆರ್‌‌ಜೆಡಿ ಮುಖ್ಯಸ್ಥ ಲಾಲು ಯಾದವ್

‘ಬಿಹಾರದಲ್ಲಿ ಅಧಿಕಾರ ಹೋದ ನಂತರ, ಅಮಿತ್‌ ಶಾ ಬಿಲ್ಕುಲ್‌ ಹುಚ್ಚರಾಗಿದ್ದಾರೆ’: ಆರ್‌‌ಜೆಡಿ ಮುಖ್ಯಸ್ಥ ಲಾಲು ಯಾದವ್

- Advertisement -
- Advertisement -

ಬಿಹಾರದ ಹೊಸ ಸರ್ಕಾರವನ್ನು ‘ಜಂಗಲ್ ರಾಜ್‌’ ಎಂದು ಉಲ್ಲೇಖಿಸಿದ್ದ ಒಕ್ಕೂಟ ಸರ್ಕಾರದ ಗೃಹಸಚಿವ ಅಮಿತ್‌ ಶಾ ಅವರಿಗೆ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ತಿರುಗೇಟು ನೀಡಿದ್ದಾರೆ. “ಬಿಹಾರದಲ್ಲಿ ಬಿಜೆಪಿ ಸರ್ಕಾರವನ್ನು ಕಿತ್ತು ಹಾಕಿದ ನಂತರ, ಅಮಿತ್‌ ಶಾ ಬಿಲ್ಕುಲ್‌ ಹುಚ್ಚರಾಗಿ ಹೋಗಿದ್ದಾರೆ” ಎಂದು ಶನಿವಾರ ವಾಗ್ದಾಳಿ ನಡೆಸಿದ್ದಾರೆ.

ಲಾಲು ಪ್ರಸಾದ್ ಯಾದವ್ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್‌ ಅವರು ಜೊತೆಯಾಗಿ ಭಾನುವಾರ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ. ಅದಕ್ಕೂ ಒಂದು ದಿನ ಮೊದಲು ಪ್ರತಿಪಕ್ಷಗಳ ಒಗ್ಗಟ್ಟಿನ ಅಗತ್ಯವನ್ನು ಲಾಲು ಯಾದವ್‌ ಒತ್ತಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬಿಹಾರದಲ್ಲಿ ಬಿಜೆಪಿ ಸರ್ಕಾರವನ್ನು ಕಿತ್ತುಹಾಕಿದ ನಂತರ ಅಮಿತ್ ಶಾಗೆ ಸಂಪೂರ್ಣವಾಗಿ ಹುಚ್ಚು ಹಿಡಿದಿದೆ. ಬಿಜೆಪಿ 2024 ರಲ್ಲೂ ಸೋಲನ್ನು ಎದುರಿಸಲಿದೆ. ಅದಕ್ಕಾಗಿಯೇ ಅವರು ಅಲ್ಲಿಗೆ ಓಡಿ ಹೋಗಿ, ಜಂಗಲ್ ರಾಜ್ ಸೇರಿದಂತೆ ಎಲ್ಲಾ ವಿಷಯಗಳ ಬಗ್ಗೆ ಮಾತನಾಡುತ್ತಿದ್ದಾರೆ. ಅವರು ಗುಜರಾತ್‌ನಲ್ಲಿ ಇದ್ದಾಗ ಏನು ಮಾಡುತ್ತಿದ್ದರು” ಎಂದು ಲಾಲು ಯಾದವ್‌ ಕೇಳಿದ್ದಾರೆ.

ಇದನ್ನೂ ಓದಿ: ‘ಕಾಂಗ್ರೆಸ್ ಇನ್ನೂ ದೊಡ್ಡ ಪಕ್ಷ’: ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌

“ಜಂಗಲ್ ರಾಜ್‌ ಇದ್ದಿದ್ದು, ಅವರು ಗುಜರಾತ್‌ನಲ್ಲಿ ಇದ್ದಾಗ” ಎಂದು ಬಿಹಾರದ ಮಾಜಿ ಮುಖ್ಯಮಂತ್ರಿ ಆರೋಪಿಸಿದ್ದಾರೆ. “ಅಮಿತ್‌ ಶಾ ಬಿಲ್ಕುಲ್‌ ಹುಚ್ಚರಾಗಿ ಹೋಗಿದ್ದಾರೆ (ಅಮಿತ್‌ ಶಾ ಬಿಲ್ಕುಲ್‌ ಪಗ್ಲಾಯೇ ಹುಯೇ ಹೈಂ)” ಎಂದು ಹೇಳಿದ್ದಾರೆ.

2024ರಲ್ಲಿ ಮತ್ತೊಮ್ಮೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಿ ಮುಂದಿನ ವರ್ಷ ಬಿಹಾರದಲ್ಲಿ ಸರ್ಕಾರ ರಚಿಸಲಿದೆ ಎಂಬ ಅಮಿತ್‌ ಶಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಲಾಲು ಯಾದವ್‌, “ನೋಡೋಣ ಅದನ್ನು” ಎಂದು ಹೇಳಿದ್ದಾರೆ.

ನಿತೀಶ್‌ ಕುಮಾರ್ ಮತ್ತು ಲಾಲು ಯಾದವ್ ಭಾನುವಾರ ಸಂಜೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗುವ ಸಾಧ್ಯತೆಯಿದೆ. “ನಾವು ಪ್ರತಿಪಕ್ಷಗಳ ಏಕತೆಗಾಗಿ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ಇದು ನಮ್ಮ ಸಭೆಯ ಕಾರ್ಯಸೂಚಿಯಾಗಿದೆ” ಎಂದು ಲಾಲು ಯಾದವ್ ಹೇಳಿದ್ದಾರೆ.

ಇದನ್ನೂ ಓದಿ: ದೇಶದ ಎಲ್ಲಾ ಪ್ರಮುಖ ವಿಪಕ್ಷಗಳ ನಾಯಕರ ಭೇಟಿಯಾದ ಬಿಹಾರ ಸಿಎಂ ನಿತೀಶ್ ಕುಮಾರ್‌‌

ತಮ್ಮ ಮಾಜಿ ಮೈತ್ರಿಕೂಟವಾಗಿದ್ದ ನಿತೀಶ್ ಕುಮಾರ್ ಅವರ ವಿರುದ್ಧ ವಾಗ್ದಾಳಿ ನಡೆಸಿದ ಅಮಿತ್‌‌ ಶಾ,“ಅವರು ಬಿಜೆಪಿಯ ಬೆನ್ನಹಿಂದೆ ಚೂರಿ ಹಾಕಿ, ಕಾಂಗ್ರೆಸ್‌ ಮತ್ತು ಆರ್‌ಜೆಡಿ ಮಡಿಲಲ್ಲಿ ಕುಳಿತು ತಮ್ಮ ಪ್ರಧಾನಮಂತ್ರಿ ಆಗುವ ಮಹತ್ವಾಕಾಂಕ್ಷೆಗಳನ್ನು ಈಡೇರಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“2024ರ ಲೋಕಸಭೆ ಚುನಾವಣೆಯಲ್ಲಿ ನಿತೀಶ್‌ ಕುಮಾರ್ ಮತ್ತು ಆರ್‌ಜೆಡಿ ಅಧ್ಯಕ್ಷ ಲಾಲು ಯಾದವ್‌ ಅವರ ಜೋಡಿಯನ್ನು ನಿರ್ನಾಮ ಮಾಡಲಾಗುವುದು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸ್ವಂತ ಬಲದಿಂದ ಬಹುಮತ ಗಳಿಸಲಿದೆ. ಬಿಹಾರವು ಮಹಾಮೈತ್ರಿಕೂಟದ ‘ಜಂಗಲ್ ರಾಜ್’ಅನ್ನು ಬಯಸುವುದಿಲ್ಲ” ಎಂದು ಬಿಹಾರದ ಪೂರ್ಣೆಯಾದಲ್ಲಿ ನಡೆದ ರ್‍ಯಾಲಿಯಲ್ಲಿ ಅಮಿತ್‌ ಶಾ ಪ್ರತಿಪಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ : ಮೂವರು ದೋಷಿಗಳು ಎಂದ ಕೋರ್ಟ್

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಒಂದನೇ ಹೆಚ್ಚುವರಿ...

ರಾಜಸ್ಥಾನದ ಬುಂಡಿಯಲ್ಲಿ ಎರಡು ಬಾಲ್ಯ ವಿವಾಹಗಳು ಸ್ಥಗಿತ; ಬಾಲಕಿಯರ ದೂರಿನ ಮೇರೆಗೆ ಅಧಿಕಾರಿಗಳ ಮಧ್ಯಪ್ರವೇಶ

ಕೋಟಾ: ಫೆಬ್ರವರಿ 10ರಂದು ನಿಗದಿಯಾಗಿದ್ದ ತಮ್ಮ ವಿವಾಹಗಳನ್ನು ನಿಲ್ಲಿಸುವಂತೆ ರಾಜಸ್ಥಾನದ ಬುಂಡಿ ಜಿಲ್ಲೆಯ 12ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಹುಡುಗಿಯರು ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. 17 ವರ್ಷದ ಬಾಲಕಿಯೊಬ್ಬಳು ತನ್ನ...

ಮುಂಬೈ ಮೇಯರ್ ಅಭ್ಯರ್ಥಿಯಾಗಿ ಬಿಜೆಪಿಯ ರಿತು ತಾವ್ಡೆ, ಉಪಮೇಯರ್ ಹುದ್ದೆಗೆ ಶಿವಸೇನೆಯ ಸಂಜಯ್ ಶಂಕರ್ ಘಾಡಿ ಹೆಸರು ಘೋಷಣೆ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಮುಂಬೈ ಮೇಯರ್ ಚುನಾವಣೆಗೆ ಕಾರ್ಪೊರೇಟರ್ ರಿತು ತವಾಡೆ ಅವರನ್ನು ನಾಮನಿರ್ದೇಶನ ಮಾಡಿದ್ದರೆ, ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್...

ಪಾಕಿಸ್ತಾನದ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹೊಣೆ ಹೊತ್ತ ಐಸಿಸ್ 

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಗುಂಪು ಹೊತ್ತುಕೊಂಡಿದೆ, ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು 169...

ಸಮನ್ಸ್ ಚರ್ಚೆ ನಡುವೆ ‘ಸಹಯೋಗ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ವಿಧಾನಪರಿಷತ್ತಿನ ಹಕ್ಕುಚ್ಯುತಿ ಸಮಿತಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ...

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....