Homeಮುಖಪುಟ‘ಅಮಿತ್ ಶಾ ಭಾರತದ ದೊಡ್ಡ ಪಪ್ಪು’: ಟಿ-ಶರ್ಟ್ ಹಂಚಿದ ಟಿಎಂಸಿ

‘ಅಮಿತ್ ಶಾ ಭಾರತದ ದೊಡ್ಡ ಪಪ್ಪು’: ಟಿ-ಶರ್ಟ್ ಹಂಚಿದ ಟಿಎಂಸಿ

ಅಮಿತ್ ಶಾ ಅವರೇ ನೀವು ನಿಮ್ಮ ಮಗನಿಗೆ ಮೊದಲು ರಾಷ್ಟ್ರೀಯತೆ ಕಲಿಸಿ ಎಂದು ಪಕ್ಷವೂ ಹೇಳಿದೆ

- Advertisement -
- Advertisement -

ತೃಣಮೂಲ ಕಾಂಗ್ರೆಸ್‌‌‌‌‌‌ ಪಕ್ಷವು ತನ್ನ ಕಾರ್ಯಕರ್ತರಿಗೆ ಗೃಹ ಸಚಿವ ಅಮಿತ್‌ ಶಾ ಅವರ ಮುಖದ ಚಿತ್ರದ ಜೊತೆಗೆ “ಭಾರತದ ದೊಡ್ಡ ಪಪ್ಪು” ಎಂಬ ಶೀರ್ಷಿಕೆಯಿರುವ ಟೀ-ಶರ್ಟ್‌ಗಳನ್ನು ಹಂಚಿದೆ. ಗೃಹ ಸಚಿವರನ್ನು ಪಕ್ಷವು ಯಾಕೆ ಭಾರತದ ದೊಡ್ಡ ಪಪ್ಪು ಎಂದು ಕರೆದಿದೆ ಎಂಬ ಬಗ್ಗೆ ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರು ವಿವರಿಸಿದ್ದಾರೆ.

ಜಾನುವಾರು ಕಳ್ಳಸಾಗಣೆ ಹಗರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ)ದ ತನಿಖೆಗಳನ್ನು ಅಭಿಷೇಕ್‌ ಬ್ಯಾನರ್ಜಿ ಎದುರಿಸುತ್ತಿದ್ದಾರೆ. ಕಳೆದ ವಾರ ಅವರನ್ನು ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಅವರು ಅಮಿತ್ ಶಾ ಅವರನ್ನು ಭಾರತದ ದೊಡ್ಡ ಪಪ್ಪು ಎಂದು ಉಲ್ಲೇಖಿಸಿದ್ದರು. ಆದರೆ, ಆ ಸಂದರ್ಭದಲ್ಲಿ ಅವರು ಆರೋಪಕ್ಕೆ ಕಾರಣವೇನು ಎಂಬುದನ್ನು ಹೇಳಿರಲಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಂದು ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅಭಿಷೇಕ್ ಬ್ಯಾನರ್ಜಿ ಅವರು ಅಮಿತ್‌ ಶಾ ಅವರನ್ನು ತಾನು ಯಾಕೆ ಹಾಗೆ ಕರೆದಿದ್ದೇನೆ ಎಂದು ತನ್ನ ಹೇಳಿಕೆಯ ಬಗ್ಗೆ ಪಟ್ಟಿ ಮಾಡಿದ್ದಾರೆ.

ಇದನ್ನೂ ಓದಿ: ಕಾಳಿ ದೇವಿ ಕುರಿತ ಹೇಳಿಕೆಗೆ ದೂರು: ಟಿಎಂಸಿ ಸಂಸದೆ ಮಹುವಾ ಮೊಯಿತ್ರ ಹೇಳಿದ್ದೇನು?

“ಅಮಿತ್ ಶಾ ಅವರನ್ನು ನಾನು ದೊಡ್ಡ ಪಪ್ಪು ಎಂದು ಕರೆದಿದ್ದಕ್ಕೆ ಕಾರಣಗಳಿವೆ. ದೆಹಲಿಯ ಅಪರಾಧ ದರವನ್ನು ನೋಡಿ. ಕೋಲ್ಕತ್ತಾದಲ್ಲಿ ಅತಿ ಕಡಿಮೆ ಅಪರಾಧ ಪ್ರಮಾಣವಿದೆ ಎಂದು ನಿಮ್ಮದೇ ಸಂಸ್ಥೆ ಹೇಳಿದೆ. ಆದರೆ ದೆಹಲಿ ಪೊಲೀಸರು ಒಕ್ಕೂಟ ಸರ್ಕಾರದ ಗೃಹ ಸಚಿವಾಲಯದ ಅಡಿಯಲ್ಲಿದೆ” ಎಂದು ಅಭಿಷೇಕ್ ಬ್ಯಾನರ್ಜಿ ಹೇಳಿದ್ದಾರೆ.

“ಅಮಿತ್ ಶಾ ಅವರೇ ನೀವು ಎಲ್ಲರಿಗೂ ರಾಷ್ಟ್ರೀಯತೆಯನ್ನು ಕಲಿಸುತ್ತೀರಿ. ಆದರೆ ನಿಮ್ಮ ಮಗನಿಗೆ ರಾಷ್ಟ್ರಧ್ವಜ ಹಿಡಿಯುವಲ್ಲಿ ಸಮಸ್ಯೆ ಇದೆ. ರಾಷ್ಟ್ರೀಯತೆಯನ್ನು ಮೊದಲು ಅವನಿಗೆ ಕಲಿಸಿ” ಎಂದು ಅಭಿಷೇಕ್‌ ಬ್ಯಾನರ್ಜಿ ಹೇಳಿದ್ದಾರೆ. ದುಬೈನಲ್ಲಿ ನಡೆದ ಕ್ರಿಕೆಟ್ ಪಂದ್ಯದ ವೇಳೆ ಅಮಿತ್ ಶಾ ಅವರ ಪುತ್ರ ಜಯ್ ಶಾ ಭಾರತದ ಧ್ವಜವನ್ನು ನೀಡಿದಾಗ ಅದನ್ನು ನಿರಾಕರಿಸಿದ್ದರು.

ರಾಜಕೀಯ ವಿರೋಧಿಗಳ ಮೇಲೆ ಕೇಂದ್ರೀಯ ಸಂಸ್ಥೆಗಳನ್ನು ಬಳಸುವುದರ ಬಗ್ಗೆ ಅಭಿಷೇಕ್‌‌ ಬ್ಯಾನರ್ಜಿ ಅವರು ಅಮಿತ್‌‌ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದು, ಹಣಕಾಸಿನ ಅಕ್ರಮಗಳಲ್ಲಿ ಭಾಗಿಯಾಗಿರುವ ಬಿಜೆಪಿ ನಾಯಕರ ವಿರುದ್ಧ ಇವುಗಳನ್ನು ಬಳಸುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊಲೆಗಾರನೊಂದಿಗೆ ಕುಳಿತುಕೊಳ್ಳಲಾರೆ: ಬಿಜೆಪಿ ಸಂಸದನ ಉಪಸ್ಥಿತಿ ವಿರೋಧಿಸಿ ವೇದಿಕೆ ತ್ಯಜಿಸಿದ ಟಿಎಂಸಿ ಸಚಿವ

“ಇಡಿ ಮತ್ತು ಸಿಬಿಐ ಲಂಚ ಪಡೆಯುವವರಿಗೆ ಆಶ್ರಯ ನೀಡುತ್ತವೆ. ಕ್ಯಾಮರಾ ಮುಂಚೆಯೆ ಲಂಚ ಪಡೆದವರನ್ನು ಏಜೆನ್ಸಿಗಳು ಪ್ರಶ್ನಿಸುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಬಿಜೆಪಿ ಅಧಿಕಾರದಲ್ಲಿಲ್ಲದ ರಾಜ್ಯಗಳಲ್ಲಿ ರಾಜಕೀಯ ಪ್ರತಿಸ್ಪರ್ಧಿಗಳ ವಿರುದ್ಧ ಆಡಳಿತಾರೂಢ ಬಿಜೆಪಿ ಕೇಂದ್ರೀಯ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ತೃಣಮೂಲ ಕಾಂಗ್ರೆಸ್ ದೀರ್ಘಕಾಲದಿಂದ ಆರೋಪಿಸುತ್ತಿದೆ. ಇತ್ತೀಚೆಗೆ ಭ್ರಷ್ಟಾಚಾರದ ಆರೋಪದ ಮೇಲೆ ಹಲವಾರು ತೃಣಮೂಲ ನಾಯಕರನ್ನು ಬಂಧಿಸಲಾಗಿದ್ದು, ಅದರಲ್ಲೂ ಅನೇಕರನ್ನು ಕೇಂದ್ರೀಯ ಏಜೆನ್ಸಿಗಳು ಬಂಧಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...