Homeಮುಖಪುಟ‘ಅಮಿತ್ ಶಾ ಭಾರತದ ದೊಡ್ಡ ಪಪ್ಪು’: ಟಿ-ಶರ್ಟ್ ಹಂಚಿದ ಟಿಎಂಸಿ

‘ಅಮಿತ್ ಶಾ ಭಾರತದ ದೊಡ್ಡ ಪಪ್ಪು’: ಟಿ-ಶರ್ಟ್ ಹಂಚಿದ ಟಿಎಂಸಿ

ಅಮಿತ್ ಶಾ ಅವರೇ ನೀವು ನಿಮ್ಮ ಮಗನಿಗೆ ಮೊದಲು ರಾಷ್ಟ್ರೀಯತೆ ಕಲಿಸಿ ಎಂದು ಪಕ್ಷವೂ ಹೇಳಿದೆ

- Advertisement -
- Advertisement -

ತೃಣಮೂಲ ಕಾಂಗ್ರೆಸ್‌‌‌‌‌‌ ಪಕ್ಷವು ತನ್ನ ಕಾರ್ಯಕರ್ತರಿಗೆ ಗೃಹ ಸಚಿವ ಅಮಿತ್‌ ಶಾ ಅವರ ಮುಖದ ಚಿತ್ರದ ಜೊತೆಗೆ “ಭಾರತದ ದೊಡ್ಡ ಪಪ್ಪು” ಎಂಬ ಶೀರ್ಷಿಕೆಯಿರುವ ಟೀ-ಶರ್ಟ್‌ಗಳನ್ನು ಹಂಚಿದೆ. ಗೃಹ ಸಚಿವರನ್ನು ಪಕ್ಷವು ಯಾಕೆ ಭಾರತದ ದೊಡ್ಡ ಪಪ್ಪು ಎಂದು ಕರೆದಿದೆ ಎಂಬ ಬಗ್ಗೆ ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರು ವಿವರಿಸಿದ್ದಾರೆ.

ಜಾನುವಾರು ಕಳ್ಳಸಾಗಣೆ ಹಗರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ)ದ ತನಿಖೆಗಳನ್ನು ಅಭಿಷೇಕ್‌ ಬ್ಯಾನರ್ಜಿ ಎದುರಿಸುತ್ತಿದ್ದಾರೆ. ಕಳೆದ ವಾರ ಅವರನ್ನು ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಅವರು ಅಮಿತ್ ಶಾ ಅವರನ್ನು ಭಾರತದ ದೊಡ್ಡ ಪಪ್ಪು ಎಂದು ಉಲ್ಲೇಖಿಸಿದ್ದರು. ಆದರೆ, ಆ ಸಂದರ್ಭದಲ್ಲಿ ಅವರು ಆರೋಪಕ್ಕೆ ಕಾರಣವೇನು ಎಂಬುದನ್ನು ಹೇಳಿರಲಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಂದು ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅಭಿಷೇಕ್ ಬ್ಯಾನರ್ಜಿ ಅವರು ಅಮಿತ್‌ ಶಾ ಅವರನ್ನು ತಾನು ಯಾಕೆ ಹಾಗೆ ಕರೆದಿದ್ದೇನೆ ಎಂದು ತನ್ನ ಹೇಳಿಕೆಯ ಬಗ್ಗೆ ಪಟ್ಟಿ ಮಾಡಿದ್ದಾರೆ.

ಇದನ್ನೂ ಓದಿ: ಕಾಳಿ ದೇವಿ ಕುರಿತ ಹೇಳಿಕೆಗೆ ದೂರು: ಟಿಎಂಸಿ ಸಂಸದೆ ಮಹುವಾ ಮೊಯಿತ್ರ ಹೇಳಿದ್ದೇನು?

“ಅಮಿತ್ ಶಾ ಅವರನ್ನು ನಾನು ದೊಡ್ಡ ಪಪ್ಪು ಎಂದು ಕರೆದಿದ್ದಕ್ಕೆ ಕಾರಣಗಳಿವೆ. ದೆಹಲಿಯ ಅಪರಾಧ ದರವನ್ನು ನೋಡಿ. ಕೋಲ್ಕತ್ತಾದಲ್ಲಿ ಅತಿ ಕಡಿಮೆ ಅಪರಾಧ ಪ್ರಮಾಣವಿದೆ ಎಂದು ನಿಮ್ಮದೇ ಸಂಸ್ಥೆ ಹೇಳಿದೆ. ಆದರೆ ದೆಹಲಿ ಪೊಲೀಸರು ಒಕ್ಕೂಟ ಸರ್ಕಾರದ ಗೃಹ ಸಚಿವಾಲಯದ ಅಡಿಯಲ್ಲಿದೆ” ಎಂದು ಅಭಿಷೇಕ್ ಬ್ಯಾನರ್ಜಿ ಹೇಳಿದ್ದಾರೆ.

“ಅಮಿತ್ ಶಾ ಅವರೇ ನೀವು ಎಲ್ಲರಿಗೂ ರಾಷ್ಟ್ರೀಯತೆಯನ್ನು ಕಲಿಸುತ್ತೀರಿ. ಆದರೆ ನಿಮ್ಮ ಮಗನಿಗೆ ರಾಷ್ಟ್ರಧ್ವಜ ಹಿಡಿಯುವಲ್ಲಿ ಸಮಸ್ಯೆ ಇದೆ. ರಾಷ್ಟ್ರೀಯತೆಯನ್ನು ಮೊದಲು ಅವನಿಗೆ ಕಲಿಸಿ” ಎಂದು ಅಭಿಷೇಕ್‌ ಬ್ಯಾನರ್ಜಿ ಹೇಳಿದ್ದಾರೆ. ದುಬೈನಲ್ಲಿ ನಡೆದ ಕ್ರಿಕೆಟ್ ಪಂದ್ಯದ ವೇಳೆ ಅಮಿತ್ ಶಾ ಅವರ ಪುತ್ರ ಜಯ್ ಶಾ ಭಾರತದ ಧ್ವಜವನ್ನು ನೀಡಿದಾಗ ಅದನ್ನು ನಿರಾಕರಿಸಿದ್ದರು.

ರಾಜಕೀಯ ವಿರೋಧಿಗಳ ಮೇಲೆ ಕೇಂದ್ರೀಯ ಸಂಸ್ಥೆಗಳನ್ನು ಬಳಸುವುದರ ಬಗ್ಗೆ ಅಭಿಷೇಕ್‌‌ ಬ್ಯಾನರ್ಜಿ ಅವರು ಅಮಿತ್‌‌ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದು, ಹಣಕಾಸಿನ ಅಕ್ರಮಗಳಲ್ಲಿ ಭಾಗಿಯಾಗಿರುವ ಬಿಜೆಪಿ ನಾಯಕರ ವಿರುದ್ಧ ಇವುಗಳನ್ನು ಬಳಸುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊಲೆಗಾರನೊಂದಿಗೆ ಕುಳಿತುಕೊಳ್ಳಲಾರೆ: ಬಿಜೆಪಿ ಸಂಸದನ ಉಪಸ್ಥಿತಿ ವಿರೋಧಿಸಿ ವೇದಿಕೆ ತ್ಯಜಿಸಿದ ಟಿಎಂಸಿ ಸಚಿವ

“ಇಡಿ ಮತ್ತು ಸಿಬಿಐ ಲಂಚ ಪಡೆಯುವವರಿಗೆ ಆಶ್ರಯ ನೀಡುತ್ತವೆ. ಕ್ಯಾಮರಾ ಮುಂಚೆಯೆ ಲಂಚ ಪಡೆದವರನ್ನು ಏಜೆನ್ಸಿಗಳು ಪ್ರಶ್ನಿಸುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಬಿಜೆಪಿ ಅಧಿಕಾರದಲ್ಲಿಲ್ಲದ ರಾಜ್ಯಗಳಲ್ಲಿ ರಾಜಕೀಯ ಪ್ರತಿಸ್ಪರ್ಧಿಗಳ ವಿರುದ್ಧ ಆಡಳಿತಾರೂಢ ಬಿಜೆಪಿ ಕೇಂದ್ರೀಯ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ತೃಣಮೂಲ ಕಾಂಗ್ರೆಸ್ ದೀರ್ಘಕಾಲದಿಂದ ಆರೋಪಿಸುತ್ತಿದೆ. ಇತ್ತೀಚೆಗೆ ಭ್ರಷ್ಟಾಚಾರದ ಆರೋಪದ ಮೇಲೆ ಹಲವಾರು ತೃಣಮೂಲ ನಾಯಕರನ್ನು ಬಂಧಿಸಲಾಗಿದ್ದು, ಅದರಲ್ಲೂ ಅನೇಕರನ್ನು ಕೇಂದ್ರೀಯ ಏಜೆನ್ಸಿಗಳು ಬಂಧಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...