Homeಮುಖಪುಟ‘ಅಮಿತ್ ಶಾ ಭಾರತದ ದೊಡ್ಡ ಪಪ್ಪು’: ಟಿ-ಶರ್ಟ್ ಹಂಚಿದ ಟಿಎಂಸಿ

‘ಅಮಿತ್ ಶಾ ಭಾರತದ ದೊಡ್ಡ ಪಪ್ಪು’: ಟಿ-ಶರ್ಟ್ ಹಂಚಿದ ಟಿಎಂಸಿ

ಅಮಿತ್ ಶಾ ಅವರೇ ನೀವು ನಿಮ್ಮ ಮಗನಿಗೆ ಮೊದಲು ರಾಷ್ಟ್ರೀಯತೆ ಕಲಿಸಿ ಎಂದು ಪಕ್ಷವೂ ಹೇಳಿದೆ

- Advertisement -
- Advertisement -

ತೃಣಮೂಲ ಕಾಂಗ್ರೆಸ್‌‌‌‌‌‌ ಪಕ್ಷವು ತನ್ನ ಕಾರ್ಯಕರ್ತರಿಗೆ ಗೃಹ ಸಚಿವ ಅಮಿತ್‌ ಶಾ ಅವರ ಮುಖದ ಚಿತ್ರದ ಜೊತೆಗೆ “ಭಾರತದ ದೊಡ್ಡ ಪಪ್ಪು” ಎಂಬ ಶೀರ್ಷಿಕೆಯಿರುವ ಟೀ-ಶರ್ಟ್‌ಗಳನ್ನು ಹಂಚಿದೆ. ಗೃಹ ಸಚಿವರನ್ನು ಪಕ್ಷವು ಯಾಕೆ ಭಾರತದ ದೊಡ್ಡ ಪಪ್ಪು ಎಂದು ಕರೆದಿದೆ ಎಂಬ ಬಗ್ಗೆ ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರು ವಿವರಿಸಿದ್ದಾರೆ.

ಜಾನುವಾರು ಕಳ್ಳಸಾಗಣೆ ಹಗರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ)ದ ತನಿಖೆಗಳನ್ನು ಅಭಿಷೇಕ್‌ ಬ್ಯಾನರ್ಜಿ ಎದುರಿಸುತ್ತಿದ್ದಾರೆ. ಕಳೆದ ವಾರ ಅವರನ್ನು ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಅವರು ಅಮಿತ್ ಶಾ ಅವರನ್ನು ಭಾರತದ ದೊಡ್ಡ ಪಪ್ಪು ಎಂದು ಉಲ್ಲೇಖಿಸಿದ್ದರು. ಆದರೆ, ಆ ಸಂದರ್ಭದಲ್ಲಿ ಅವರು ಆರೋಪಕ್ಕೆ ಕಾರಣವೇನು ಎಂಬುದನ್ನು ಹೇಳಿರಲಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಂದು ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅಭಿಷೇಕ್ ಬ್ಯಾನರ್ಜಿ ಅವರು ಅಮಿತ್‌ ಶಾ ಅವರನ್ನು ತಾನು ಯಾಕೆ ಹಾಗೆ ಕರೆದಿದ್ದೇನೆ ಎಂದು ತನ್ನ ಹೇಳಿಕೆಯ ಬಗ್ಗೆ ಪಟ್ಟಿ ಮಾಡಿದ್ದಾರೆ.

ಇದನ್ನೂ ಓದಿ: ಕಾಳಿ ದೇವಿ ಕುರಿತ ಹೇಳಿಕೆಗೆ ದೂರು: ಟಿಎಂಸಿ ಸಂಸದೆ ಮಹುವಾ ಮೊಯಿತ್ರ ಹೇಳಿದ್ದೇನು?

“ಅಮಿತ್ ಶಾ ಅವರನ್ನು ನಾನು ದೊಡ್ಡ ಪಪ್ಪು ಎಂದು ಕರೆದಿದ್ದಕ್ಕೆ ಕಾರಣಗಳಿವೆ. ದೆಹಲಿಯ ಅಪರಾಧ ದರವನ್ನು ನೋಡಿ. ಕೋಲ್ಕತ್ತಾದಲ್ಲಿ ಅತಿ ಕಡಿಮೆ ಅಪರಾಧ ಪ್ರಮಾಣವಿದೆ ಎಂದು ನಿಮ್ಮದೇ ಸಂಸ್ಥೆ ಹೇಳಿದೆ. ಆದರೆ ದೆಹಲಿ ಪೊಲೀಸರು ಒಕ್ಕೂಟ ಸರ್ಕಾರದ ಗೃಹ ಸಚಿವಾಲಯದ ಅಡಿಯಲ್ಲಿದೆ” ಎಂದು ಅಭಿಷೇಕ್ ಬ್ಯಾನರ್ಜಿ ಹೇಳಿದ್ದಾರೆ.

“ಅಮಿತ್ ಶಾ ಅವರೇ ನೀವು ಎಲ್ಲರಿಗೂ ರಾಷ್ಟ್ರೀಯತೆಯನ್ನು ಕಲಿಸುತ್ತೀರಿ. ಆದರೆ ನಿಮ್ಮ ಮಗನಿಗೆ ರಾಷ್ಟ್ರಧ್ವಜ ಹಿಡಿಯುವಲ್ಲಿ ಸಮಸ್ಯೆ ಇದೆ. ರಾಷ್ಟ್ರೀಯತೆಯನ್ನು ಮೊದಲು ಅವನಿಗೆ ಕಲಿಸಿ” ಎಂದು ಅಭಿಷೇಕ್‌ ಬ್ಯಾನರ್ಜಿ ಹೇಳಿದ್ದಾರೆ. ದುಬೈನಲ್ಲಿ ನಡೆದ ಕ್ರಿಕೆಟ್ ಪಂದ್ಯದ ವೇಳೆ ಅಮಿತ್ ಶಾ ಅವರ ಪುತ್ರ ಜಯ್ ಶಾ ಭಾರತದ ಧ್ವಜವನ್ನು ನೀಡಿದಾಗ ಅದನ್ನು ನಿರಾಕರಿಸಿದ್ದರು.

ರಾಜಕೀಯ ವಿರೋಧಿಗಳ ಮೇಲೆ ಕೇಂದ್ರೀಯ ಸಂಸ್ಥೆಗಳನ್ನು ಬಳಸುವುದರ ಬಗ್ಗೆ ಅಭಿಷೇಕ್‌‌ ಬ್ಯಾನರ್ಜಿ ಅವರು ಅಮಿತ್‌‌ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದು, ಹಣಕಾಸಿನ ಅಕ್ರಮಗಳಲ್ಲಿ ಭಾಗಿಯಾಗಿರುವ ಬಿಜೆಪಿ ನಾಯಕರ ವಿರುದ್ಧ ಇವುಗಳನ್ನು ಬಳಸುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊಲೆಗಾರನೊಂದಿಗೆ ಕುಳಿತುಕೊಳ್ಳಲಾರೆ: ಬಿಜೆಪಿ ಸಂಸದನ ಉಪಸ್ಥಿತಿ ವಿರೋಧಿಸಿ ವೇದಿಕೆ ತ್ಯಜಿಸಿದ ಟಿಎಂಸಿ ಸಚಿವ

“ಇಡಿ ಮತ್ತು ಸಿಬಿಐ ಲಂಚ ಪಡೆಯುವವರಿಗೆ ಆಶ್ರಯ ನೀಡುತ್ತವೆ. ಕ್ಯಾಮರಾ ಮುಂಚೆಯೆ ಲಂಚ ಪಡೆದವರನ್ನು ಏಜೆನ್ಸಿಗಳು ಪ್ರಶ್ನಿಸುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಬಿಜೆಪಿ ಅಧಿಕಾರದಲ್ಲಿಲ್ಲದ ರಾಜ್ಯಗಳಲ್ಲಿ ರಾಜಕೀಯ ಪ್ರತಿಸ್ಪರ್ಧಿಗಳ ವಿರುದ್ಧ ಆಡಳಿತಾರೂಢ ಬಿಜೆಪಿ ಕೇಂದ್ರೀಯ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ತೃಣಮೂಲ ಕಾಂಗ್ರೆಸ್ ದೀರ್ಘಕಾಲದಿಂದ ಆರೋಪಿಸುತ್ತಿದೆ. ಇತ್ತೀಚೆಗೆ ಭ್ರಷ್ಟಾಚಾರದ ಆರೋಪದ ಮೇಲೆ ಹಲವಾರು ತೃಣಮೂಲ ನಾಯಕರನ್ನು ಬಂಧಿಸಲಾಗಿದ್ದು, ಅದರಲ್ಲೂ ಅನೇಕರನ್ನು ಕೇಂದ್ರೀಯ ಏಜೆನ್ಸಿಗಳು ಬಂಧಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...