Homeಮುಖಪುಟಬರ ಪರಿಹಾರ ನೀಡದಿರುವ ಬಗ್ಗೆ ಸುಳ್ಳು ಹೇಳಿದ ಅಮಿತ್ ಶಾ; ದಾಖಲೆ ಮುಂದಿಟ್ಟ ಸಚಿವ ಕೃಷ್ಣ...

ಬರ ಪರಿಹಾರ ನೀಡದಿರುವ ಬಗ್ಗೆ ಸುಳ್ಳು ಹೇಳಿದ ಅಮಿತ್ ಶಾ; ದಾಖಲೆ ಮುಂದಿಟ್ಟ ಸಚಿವ ಕೃಷ್ಣ ಬೈರೇಗೌಡ

- Advertisement -
- Advertisement -

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಕೊಡಬೇಕಾರ ಬರ ಪರಿಹಾರ ವಿಚಾರವಾಗಿ ಕಳೆದ ಆರು ತಿಂಗಳಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮನವಿ ಮಾಡುತ್ತಲೇ ಇದ್ದಾರೆ. ಆದರೂ, ಕೇಂದ್ರ ಸರ್ಕಾರದಿಂದ ಈವರೆಗೆ ಯಾವುದೇ ವಿಶೇಷ ಪರಿಹಾರ ಬಿಡುಗಡೆಯಾಗಿಲ್ಲ. ರಾಜ್ಯದ ಪಾಲಿನ ತೆರಿಗೆ ಹಾಗೂ ಬರ ಪರಿಹಾರ ವಿಚಾರದಲ್ಲಿ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಮತ್ತು ಅಮಿತ್ ಶಾ ಸಾರ್ವಜನಿಕವಾಗಿ ಸುಳ್ಳು ಹೇಳಿದ್ದಾರೆ.

ಬರ ಪರಿಹಾರ ವಿತರಣೆಯಲ್ಲಿನ ವಿಳಂಬದ ಕುರಿತು ಕೇಂದ್ರ ಮತ್ತು ಕರ್ನಾಟಕ ಸರ್ಕಾರದ ನಡುವೆ ನಡೆಯುತ್ತಿರುವ ಜಗಳ ಮತ್ತೊಂದು ತಿರುವು ಪಡೆದುಕೊಂಡಿದ್ದು, ರಾಜ್ಯ ಸರ್ಕಾರವು ಮೂರು ತಿಂಗಳ ತಡವಾಗಿ ಪ್ರಸ್ತಾವನೆಯನ್ನು ಸಲ್ಲಿಸಿದ್ದರಿಂದ ಕೇಂದ್ರವು ಅದನ್ನು ಸಕಾಲದಲ್ಲಿ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದಿನ ತಮ್ಮ ಬೆಂಗಳೂರು ಪ್ರವಾಸದಲ್ಲಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಶಾ, “ಕರ್ನಾಟಕದಲ್ಲಿ ಬರಗಾಲವಿದೆ. ಮೂರು ತಿಂಗಳು ತಡವಾಗಿ ಕೇಂದ್ರಕ್ಕೆ ಪ್ರಸ್ತಾವನೆ (ರಾಜ್ಯ ಸರ್ಕಾರದಿಂದ) ಸಲ್ಲಿಸಲಾಗಿದೆ. ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರದ ಮನವಿ ಇಂದು ಚುನಾವಣಾ ಆಯೋಗಕ್ಕೆ ಸಿಕ್ಕಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರ ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ” ಎಂದು ಆರೋಪಿಸಿದರು.

ಆದರೆ, ಕೇಂದ್ರ ಗೃಹ ಸಚಿವರ ಹೇಳಿಕೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸಾಕ್ಷಿ ಸಹಿತ ತಿರುಗೇಟು ನೀಡಿದ್ದಾರೆ. ಈ ಕುರಿತು ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಚುನಾವಣಾ ಪ್ರಚಾರಕ್ಕಾಗಿ ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಬರ ಪರಿಹಾರ ನೀಡದಿರುವ ಬಗ್ಗೆ ಜನರಿಗೆ ಸುಳ್ಳು ಮಾಹಿತಿ ನೀಡಿರುವುದು ನನ್ನ ಗಮನಕ್ಕೆ ಬಂದಿದೆ” ಎಂದು ಹೇಳಿದ್ದಾರೆ.

“ಚುನಾವಣಾ ಭಾಷಣದ ವೇಳೆ, ಕರ್ನಾಟಕ ಸರ್ಕಾರ ಬರ ಪರಿಹಾರಕ್ಕೆ ಮನವಿ ಸಲ್ಲಿಸಲು ಮೂರು ತಿಂಗಳು ತಡ ಮಾಡಿದ ಕಾರಣದಿಂದಾಗಿ ಕೇಂದ್ರ ಸರ್ಕಾರ ನಿಗದಿತ ಸಮಯಕ್ಕೆ ಪರಿಹಾರ ಬಿಡುಗಡೆ ಮಾಡಲಾಗಿಲ್ಲ ಎಂದು ಅಮಿತ್ ಶಾ ಸುಳ್ಳು ಹೇಳಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಹಾಗೂ ಕಂದಾಯ ಇಲಾಖೆಯ ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಈ ರಾಜಕೀಯ ಪ್ರೇರಿತ ಸುಳ್ಳು ಹೇಳಿಕೆಗೆ ಸ್ಪಷ್ಟೀಕರಣ ನೀಡಲೇಬೇಕಾದ ಜವಾಬ್ದಾರಿ ನನ್ನ ಮೇಲಿದೆ. ಹೀಗಾಗಿ ಈ ಬಗ್ಗೆ ಸ್ಪಷ್ಟೀಕರಣ ನೀಡುತ್ತಿದ್ದೇನೆ” ಎಂದಿದ್ದಾರೆ.

“ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಎದುರಾಗಿದ್ದು, ಅಂದಾಜಿನ ಪ್ರಕಾರ 40 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಹಾಗೂ 2 ಲಕ್ಷ ಹೆಕ್ಟೇರ್ ನಷ್ಟು ತೋಟಗಾರಿಕೆ ಬೆಳೆ ಹಾನಿಯಾಗಿದೆ. ಹೀಗಾಗಿ ಕಳೆದ ವರ್ಷ ಆಗಸ್ಟ್ ಎರಡನೇ ವಾರದಲ್ಲೇ ಸಮೀಕ್ಷೆ ನಡೆಸಿ ಕೇಂದ್ರದ ಮಾನದಂಡದ ಪ್ರಕಾರ ಸೆ.13ರಂದು ಬರ ಘೋಷಿಸಲಾಗಿತ್ತು. ಮೊದಲ ಹಂತದಲ್ಲಿ 195 ತಾಲೂಕುಗಳು ಹಾಗೂ ಎರಡನೇ ಹಂತದಲ್ಲಿ 28 ತಾಲೂಕುಗಳೂ ಸೇರಿ ಒಟ್ಟು 223 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿತ್ತು” ಎಂದು ವಿವರಿಸಿದ್ದಾರೆ.

‘ಕಳೆದ ವರ್ಷ ಸೆ.22ಕ್ಕೆ ₹18,200 ಕೋಟಿ ಪರಿಹಾರ ಕೋರಿ ಕೇಂದ್ರಕ್ಕೆ ಮೊದಲ ಮನವಿ (ಮೆಮೊರಾಂಡಂ) ಸಲ್ಲಿಸಲಾಯಿತು. ಒಂದು ವಾರದ ಅವಧಿಯಲ್ಲಿ ಬರ ಪರಿಹಾರ ಕೋರಿ ಮತ್ತೊಂದು ಮನವಿಯನ್ನೂ ಸಲ್ಲಿಸಲಾಗಿದೆ. ಕಳೆದ ವರ್ಷ ದೇಶದ ಹಲವು ರಾಜ್ಯಗಳು ಬರಕ್ಕೆ ತುತ್ತಾಗಿದ್ದವು. ಕೇರಳ, ಬಿಹಾರ, ಜಾರ್ಖಂಡ್, ಮಣಿಪುರ, ಮಿಜೋರಾಂ, ತಮಿಳುನಾಡು ಸೇರಿದಂತೆ 12 ರಾಜ್ಯಗಳಲ್ಲಿ ಮುಂಗಾರು ಅವಧಿಯ ಹಾಗೂ 18 ರಾಜ್ಯಗಳಲ್ಲಿ ಹಿಂಗಾರಿನ ಬರ ಇತ್ತು. ಆದರೆ, ಈ ಯಾವ ರಾಜ್ಯಗಳೂ ಬರ ಘೋಷಣೆ ಮಾಡುವ ಮುನ್ನವೇ ದೇಶದಲ್ಲೇ ಮೊದಲ ರಾಜ್ಯವಾಗಿ ಕರ್ನಾಟಕ ಮಾತ್ರ ಮುಂಜಾಗ್ರತಾ ಕ್ರಮವಾಗಿ ಬರ ಘೋಷಿಸಿತ್ತು ಎಂಬ ವಿಚಾರವನ್ನು ನಾನು ಇಲ್ಲಿ ಉಲ್ಲೇಖಿಸಲು ಇಚ್ಛಿಸುತ್ತೇನೆ” ಎಂದಿದ್ದಾರೆ.

“ಕರ್ನಾಟಕದ ಬರ ಪರಿಹಾರ ಮನವಿಯ ಮೇರೆಗೆ ಕೇಂದ್ರದ ಬರ ಅಧ್ಯಯನ ತಂಡ ಕಳೆದ ವರ್ಷ ಅಕ್ಟೋಬರ್ 06 ರಂದು ರಾಜ್ಯಕ್ಕೆ ಆಗಮಿಸಿತ್ತು. ಮೂರು ತಂಡಗಳಾಗಿ ರಾಜ್ಯಾದ್ಯಂತ ಮೂರು ದಿನಗಳ ಪ್ರವಾಸ ಕೈಗೊಂಡ ತಂಡ ಬರ ಅಧ್ಯಯನ ನಡೆಸಿತ್ತು. ಅಲ್ಲದೆ, ಬರ ಅಧ್ಯಯನದ ನಂತರ ರಾಜ್ಯ ಸರ್ಕಾರದ ಜೊತೆಗೂ ಅಕ್ಟೋಬರ್ 09 ರಂದು ಸಭೆ ನಡೆಸಿದ್ದ ಕೇಂದ್ರದ ತಂಡ ನಾವು ಮಾಡಿದ ಮನವಿ ವಸ್ತುಸ್ಥಿತಿಯಿಂದ ಕೂಡಿದೆ ಎಂದು ತಿಳಿಸಿತ್ತು. ಈ ಬಗ್ಗೆ ಅದೇ ದಿನ ಪತ್ರಿಕಾಗೋಷ್ಠಿ ನಡೆಸಿ ಮಾಧ್ಯಮ ಮಿತ್ರರಿಗೂ ಮಾಹಿತಿ ನೀಡಲಾಗಿತ್ತು” ಎಂದು ಸಚಿವರು ಮಾಹಿತಿ ನೀಡಿದ್ದಾರೆ.

“ಅಧ್ಯಯನದ ಬೆನ್ನಿಗೆ ದೆಹಲಿಗೆ ಹಿಂತಿರುಗಿದ ಬರ ಅಧ್ಯಯನ ತಂಡ, ಕೇಂದ್ರ ಸರ್ಕಾರಕ್ಕೆ ಒಂದು ವಾರದಲ್ಲೇ ವರದಿಯನ್ನೂ ಸಲ್ಲಿಸಿದೆ. ಎನ್‌ಡಿಆರ್‌ಎಫ್‌ ನಿಯಮದ ಅನ್ವಯ ಕೇಂದ್ರ ಬರ ಅಧ್ಯಯನ ತಂಡ ವರದಿ ನೀಡಿದ ತಕ್ಷಣ ಕೇಂದ್ರ ಗೃಹ ಸಚಿವರು, ಹಣಕಾಸು ಸಚಿವರು ಹಾಗೂ ಕೃಷಿ ಸಚಿವರು ಸಭೆ ನಡೆಸಿ ಬರ ಪರಿಹಾರ ಬಿಡುಗಡೆ ಮಾಡುವ ಸಂಬಂಧ ನಿರ್ಧಾರ ತೆಗೆದುಕೊಳ್ಳಬೇಕು. ಆದರೆ, ಆ ಸಭೆ ಈವರೆಗೂ ನಡೆದಿಲ್ಲ ಎಂಬುದೇ ವಾಸ್ತವ ಸಂಗತಿ” ಎಂದು ಸತ್ಯ ಸಂಗತಿಯನ್ನು ಬಿಟ್ಟಿಟ್ಟಿದ್ದಾರೆ.

“ರಾಜ್ಯದ ರೈತರು ಬರದಿಂದ ತತ್ತರಿಸುತ್ತಿದ್ದಾರೆ ಹೀಗಾಗಿ ಶೀಘ್ರ ಬರ ಪರಿಹಾರ ವಿತರಿಸಿ ಎಂದು ಮನವಿ ಮಾಡುವ ಸಂಬಂಧ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ಭೇಟಿಗೆ ಮನವಿ ಮಾಡಲಾಗಿತ್ತು. ಆದರೆ, ಅವರು ಭೇಟಿಗೆ ಅವಕಾಶ ನೀಡದ ಕಾರಣ ಕಳೆದ ವರ್ಷ ಅಕ್ಟೋಬರ್ 25ರಂದು, ಕರ್ನಾಟಕದ ಕೃಷಿ ಸಚಿವ ಎನ್.ಚಲುವರಾಯ ಸ್ವಾಮಿ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನೊಳಗೊಂಡ ನಿಯೋಗದೊಂದಿಗೆ ಕೇಂದ್ರ ಕೃಷಿ ಕಾರ್ಯದರ್ಶಿ ಮನೋಜ್ ಕುಮಾರ್ ಅಹುಜಾ ಮತ್ತು ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರೊಂದಿಗೆ ಪ್ರತ್ಯೇಕ ಸಭೆ ನಡೆಸಿ ಶೀಘ್ರ ಬರ ಪರಿಹಾರಕ್ಕೆ ಮನವಿ ಮಾಡಲಾಗಿತ್ತು. ಈ ನಡುವೆ ಇದೇ ಅವಧಿಯಲ್ಲಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಧಾನಿ ಮೋದಿ ಅವರ ಭೇಟಿಗೆ ಅವಕಾಶ ಕೋರಿ ಎರಡು ಪತ್ರ ಬರೆದಿದ್ದರು. ಆದರೆ, ಅವರ ಭೇಟಿಗೆ ಅವಕಾಶ ನೀಡಲಾಗಿರಲಿಲ್ಲ” ಎಂದು ಹೇಳಿದ್ದಾರೆ.

‘ಕಳೆದ ವರ್ಷ ನವೆಂಬರ್ 24 ರಂದು ಕರ್ನಾಟಕದ ಕೃಷಿ ಸಚಿವ ಚಲುವರಾಯ ಸ್ವಾಮಿ ಅವರೊಂದಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ರಾಜ್ಯದ ಬರ ಪರಿಸ್ಥಿತಿ ಕುರಿತು ಚರ್ಚಿಸಲಾಗಿತ್ತು. ಅಲ್ಲದೆ, ಶೀಘ್ರ ಬರ ಪರಿಹಾರ ಬಿಡುಗಡೆಗೆ ಮನವಿ ಮಾಡಲಾಗಿತ್ತು. ಸಚಿವರು ಚರ್ಚೆ ವೇಳೆ ಸಕಾರಾತ್ಮಕವಾಗಿ ಸ್ಪಂದಿಸಿದ್ದರಾದರೂ ಇದರಿಂದ ರಾಜ್ಯಕ್ಕೆ ಯಾವುದೇ ಉಪಯೋಗವಾಗಿರಲಿಲ್ಲ. ಕಳೆದ ವರ್ಷ ಡಿಸೆಂಬರ್ 19 ರಂದು ಕೊನೆಗೂ ಸ್ವತಃ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿತ್ತು. ಈ ವೇಳೆ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಜೊತೆಗೆ ನಾನೂ ಸಹ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದೆ. ಸಭೆಯಲ್ಲಿ ಕರ್ನಾಟಕದ ಬರ ಪರಿಸ್ಥಿತಿಯ ಕುರಿತು ಪ್ರಧಾನಿಗೆ ವಿವರಿಸಲಾಗಿತ್ತು. ಶೀಘ್ರವೇ ₹18,177.44 ಕೋಟಿ ಪರಿಹಾರ ಬಿಡುಗಡೆಗೂ ಮನವಿ ಮಾಡಲಾಗಿತ್ತು. ಆದರೆ, ಕೇಂದ್ರ ಸರ್ಕಾರ ಈವರೆಗೆ ಹಣ ಬಿಡುಗಡೆ ಮಾಡಿಲ್ಲ” ಎಂದು ಮಾಹಿತಿ ನೀಡಿದ್ದಾರೆ.

“ಕರ್ನಾಟಕ ಸರ್ಕಾರ ಬೇರೆ ದಾರಿ ಕಾಣದೆ ಬರ ಪರಿಹಾರ ಹಣ ಬಿಡುಗಡೆ ಮಾಡುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಕೇಂದ್ರದಿಂದ ಬರ ಪರಿಹಾರವನ್ನು ಪಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಳೆದ ವರ್ಷ ಸೆಪ್ಟೆಂಬರ್ ತಿಂಗಳಿನಿಂದ ಈ ಕ್ಷಣದ ವರೆಗೆ ಸಾಂವಿಧಾನಿಕ ಮಾದರಿಯಲ್ಲಿ ಹೋರಾಟ ನಡೆಸುತ್ತಿದೆಯೇ ವಿನಃ, ಈ ವಿಚಾರದಲ್ಲಿ ರಾಜಕೀಯ ಮಾಡಿರಲಿಲ್ಲ. ಇಂತಹ ಸೂಕ್ಷ್ಮ ವಿಚಾರದಲ್ಲಿ ರಾಜಕೀಯ ಮೇಲಾಟ ಸರಿಯಲ್ಲ ಎಂಬುದು ನಮ್ಮ ಅಭಿಪ್ರಾಯ. ರೈತರಿಗೆ ನೆರವು ನೀಡುವ ವಿಚಾರದಲ್ಲಿ ರಾಜಕೀಯ ಸರಿಯಲ್ಲ” ಎಂದು ಕೇಂದ್ರ ಗೃಹ ಸಿಚವರಿಗೆ ತಿರುಗೇಟು ಕೊಟ್ಟಿದ್ದಾರೆ.

“ತೆರಿಗೆ ಹಂಚಿಕೆ, ವಿಶೇಷ ಅನುದಾನ ಬಿಡುಗಡೆ ಸೇರಿದಂತೆ ಹಲವು ವಿಚಾರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕರ್ನಾಟಕದ ವಿರುದ್ಧ ಮಲತಾಯಿ ಧೋರಣೆ ಅನುಸರಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರವೇ. ಆದರೆ, ರೈತರಿಗೆ ಬರ ಪರಿಹಾರ ನೀಡುವ ವಿಚಾರವನ್ನೂ ಕೇಂದ್ರ ಸರ್ಕಾರ ರಾಜಕೀಯಗೊಳಿಸಿ ಕರ್ನಾಟಕವನ್ನು ಶೋಷಣೆಗೆ ಮಾಡುತ್ತದೆ ಎಂದು ನಾವು ಭಾವಿಸಿರಲಿಲ್ಲ. ಇನ್ನೂ ಜನರ ಮತಗಳನ್ನು ಗಳಿಸುವ ನಿಟ್ಟಿನಲ್ಲಿ ಇದೇ ವಿಚಾರವನ್ನು ಮುಂದಿಟ್ಟು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಹಸಿ ಹಸಿ ಸುಳ್ಳು ಹೇಳುತ್ತಾರೆ ಎಂದು ನಾವು ಖಂಡಿತ ಭಾಸಿರಲಿಲ್ಲ. ಅವರ ಈ ವರ್ತನೆಗೆ ನಾನು ವಿಷಾದಿಸುತ್ತೇವೆ” ಎಂದು ಸಚಿವ ಕೃಷ್ಣ ಬೈರೇಗೌಡ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ‘ಭಾರತದ ಭೂಮಿಯನ್ನು ಬಾಂಗ್ಲಾಕ್ಕೆ ಕೊಟ್ಟ ಮೋದಿ..’; ಬಿಜೆಪಿ ವಿರುದ್ಧ ಫಾರೂಕ್ ಅಬ್ದುಲ್ಲಾ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...