Homeಮುಖಪುಟಬರ ಪರಿಹಾರ ನೀಡದಿರುವ ಬಗ್ಗೆ ಸುಳ್ಳು ಹೇಳಿದ ಅಮಿತ್ ಶಾ; ದಾಖಲೆ ಮುಂದಿಟ್ಟ ಸಚಿವ ಕೃಷ್ಣ...

ಬರ ಪರಿಹಾರ ನೀಡದಿರುವ ಬಗ್ಗೆ ಸುಳ್ಳು ಹೇಳಿದ ಅಮಿತ್ ಶಾ; ದಾಖಲೆ ಮುಂದಿಟ್ಟ ಸಚಿವ ಕೃಷ್ಣ ಬೈರೇಗೌಡ

- Advertisement -
- Advertisement -

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಕೊಡಬೇಕಾರ ಬರ ಪರಿಹಾರ ವಿಚಾರವಾಗಿ ಕಳೆದ ಆರು ತಿಂಗಳಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮನವಿ ಮಾಡುತ್ತಲೇ ಇದ್ದಾರೆ. ಆದರೂ, ಕೇಂದ್ರ ಸರ್ಕಾರದಿಂದ ಈವರೆಗೆ ಯಾವುದೇ ವಿಶೇಷ ಪರಿಹಾರ ಬಿಡುಗಡೆಯಾಗಿಲ್ಲ. ರಾಜ್ಯದ ಪಾಲಿನ ತೆರಿಗೆ ಹಾಗೂ ಬರ ಪರಿಹಾರ ವಿಚಾರದಲ್ಲಿ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಮತ್ತು ಅಮಿತ್ ಶಾ ಸಾರ್ವಜನಿಕವಾಗಿ ಸುಳ್ಳು ಹೇಳಿದ್ದಾರೆ.

ಬರ ಪರಿಹಾರ ವಿತರಣೆಯಲ್ಲಿನ ವಿಳಂಬದ ಕುರಿತು ಕೇಂದ್ರ ಮತ್ತು ಕರ್ನಾಟಕ ಸರ್ಕಾರದ ನಡುವೆ ನಡೆಯುತ್ತಿರುವ ಜಗಳ ಮತ್ತೊಂದು ತಿರುವು ಪಡೆದುಕೊಂಡಿದ್ದು, ರಾಜ್ಯ ಸರ್ಕಾರವು ಮೂರು ತಿಂಗಳ ತಡವಾಗಿ ಪ್ರಸ್ತಾವನೆಯನ್ನು ಸಲ್ಲಿಸಿದ್ದರಿಂದ ಕೇಂದ್ರವು ಅದನ್ನು ಸಕಾಲದಲ್ಲಿ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದಿನ ತಮ್ಮ ಬೆಂಗಳೂರು ಪ್ರವಾಸದಲ್ಲಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಶಾ, “ಕರ್ನಾಟಕದಲ್ಲಿ ಬರಗಾಲವಿದೆ. ಮೂರು ತಿಂಗಳು ತಡವಾಗಿ ಕೇಂದ್ರಕ್ಕೆ ಪ್ರಸ್ತಾವನೆ (ರಾಜ್ಯ ಸರ್ಕಾರದಿಂದ) ಸಲ್ಲಿಸಲಾಗಿದೆ. ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರದ ಮನವಿ ಇಂದು ಚುನಾವಣಾ ಆಯೋಗಕ್ಕೆ ಸಿಕ್ಕಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರ ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ” ಎಂದು ಆರೋಪಿಸಿದರು.

ಆದರೆ, ಕೇಂದ್ರ ಗೃಹ ಸಚಿವರ ಹೇಳಿಕೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸಾಕ್ಷಿ ಸಹಿತ ತಿರುಗೇಟು ನೀಡಿದ್ದಾರೆ. ಈ ಕುರಿತು ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಚುನಾವಣಾ ಪ್ರಚಾರಕ್ಕಾಗಿ ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಬರ ಪರಿಹಾರ ನೀಡದಿರುವ ಬಗ್ಗೆ ಜನರಿಗೆ ಸುಳ್ಳು ಮಾಹಿತಿ ನೀಡಿರುವುದು ನನ್ನ ಗಮನಕ್ಕೆ ಬಂದಿದೆ” ಎಂದು ಹೇಳಿದ್ದಾರೆ.

“ಚುನಾವಣಾ ಭಾಷಣದ ವೇಳೆ, ಕರ್ನಾಟಕ ಸರ್ಕಾರ ಬರ ಪರಿಹಾರಕ್ಕೆ ಮನವಿ ಸಲ್ಲಿಸಲು ಮೂರು ತಿಂಗಳು ತಡ ಮಾಡಿದ ಕಾರಣದಿಂದಾಗಿ ಕೇಂದ್ರ ಸರ್ಕಾರ ನಿಗದಿತ ಸಮಯಕ್ಕೆ ಪರಿಹಾರ ಬಿಡುಗಡೆ ಮಾಡಲಾಗಿಲ್ಲ ಎಂದು ಅಮಿತ್ ಶಾ ಸುಳ್ಳು ಹೇಳಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಹಾಗೂ ಕಂದಾಯ ಇಲಾಖೆಯ ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಈ ರಾಜಕೀಯ ಪ್ರೇರಿತ ಸುಳ್ಳು ಹೇಳಿಕೆಗೆ ಸ್ಪಷ್ಟೀಕರಣ ನೀಡಲೇಬೇಕಾದ ಜವಾಬ್ದಾರಿ ನನ್ನ ಮೇಲಿದೆ. ಹೀಗಾಗಿ ಈ ಬಗ್ಗೆ ಸ್ಪಷ್ಟೀಕರಣ ನೀಡುತ್ತಿದ್ದೇನೆ” ಎಂದಿದ್ದಾರೆ.

“ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಎದುರಾಗಿದ್ದು, ಅಂದಾಜಿನ ಪ್ರಕಾರ 40 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಹಾಗೂ 2 ಲಕ್ಷ ಹೆಕ್ಟೇರ್ ನಷ್ಟು ತೋಟಗಾರಿಕೆ ಬೆಳೆ ಹಾನಿಯಾಗಿದೆ. ಹೀಗಾಗಿ ಕಳೆದ ವರ್ಷ ಆಗಸ್ಟ್ ಎರಡನೇ ವಾರದಲ್ಲೇ ಸಮೀಕ್ಷೆ ನಡೆಸಿ ಕೇಂದ್ರದ ಮಾನದಂಡದ ಪ್ರಕಾರ ಸೆ.13ರಂದು ಬರ ಘೋಷಿಸಲಾಗಿತ್ತು. ಮೊದಲ ಹಂತದಲ್ಲಿ 195 ತಾಲೂಕುಗಳು ಹಾಗೂ ಎರಡನೇ ಹಂತದಲ್ಲಿ 28 ತಾಲೂಕುಗಳೂ ಸೇರಿ ಒಟ್ಟು 223 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿತ್ತು” ಎಂದು ವಿವರಿಸಿದ್ದಾರೆ.

‘ಕಳೆದ ವರ್ಷ ಸೆ.22ಕ್ಕೆ ₹18,200 ಕೋಟಿ ಪರಿಹಾರ ಕೋರಿ ಕೇಂದ್ರಕ್ಕೆ ಮೊದಲ ಮನವಿ (ಮೆಮೊರಾಂಡಂ) ಸಲ್ಲಿಸಲಾಯಿತು. ಒಂದು ವಾರದ ಅವಧಿಯಲ್ಲಿ ಬರ ಪರಿಹಾರ ಕೋರಿ ಮತ್ತೊಂದು ಮನವಿಯನ್ನೂ ಸಲ್ಲಿಸಲಾಗಿದೆ. ಕಳೆದ ವರ್ಷ ದೇಶದ ಹಲವು ರಾಜ್ಯಗಳು ಬರಕ್ಕೆ ತುತ್ತಾಗಿದ್ದವು. ಕೇರಳ, ಬಿಹಾರ, ಜಾರ್ಖಂಡ್, ಮಣಿಪುರ, ಮಿಜೋರಾಂ, ತಮಿಳುನಾಡು ಸೇರಿದಂತೆ 12 ರಾಜ್ಯಗಳಲ್ಲಿ ಮುಂಗಾರು ಅವಧಿಯ ಹಾಗೂ 18 ರಾಜ್ಯಗಳಲ್ಲಿ ಹಿಂಗಾರಿನ ಬರ ಇತ್ತು. ಆದರೆ, ಈ ಯಾವ ರಾಜ್ಯಗಳೂ ಬರ ಘೋಷಣೆ ಮಾಡುವ ಮುನ್ನವೇ ದೇಶದಲ್ಲೇ ಮೊದಲ ರಾಜ್ಯವಾಗಿ ಕರ್ನಾಟಕ ಮಾತ್ರ ಮುಂಜಾಗ್ರತಾ ಕ್ರಮವಾಗಿ ಬರ ಘೋಷಿಸಿತ್ತು ಎಂಬ ವಿಚಾರವನ್ನು ನಾನು ಇಲ್ಲಿ ಉಲ್ಲೇಖಿಸಲು ಇಚ್ಛಿಸುತ್ತೇನೆ” ಎಂದಿದ್ದಾರೆ.

“ಕರ್ನಾಟಕದ ಬರ ಪರಿಹಾರ ಮನವಿಯ ಮೇರೆಗೆ ಕೇಂದ್ರದ ಬರ ಅಧ್ಯಯನ ತಂಡ ಕಳೆದ ವರ್ಷ ಅಕ್ಟೋಬರ್ 06 ರಂದು ರಾಜ್ಯಕ್ಕೆ ಆಗಮಿಸಿತ್ತು. ಮೂರು ತಂಡಗಳಾಗಿ ರಾಜ್ಯಾದ್ಯಂತ ಮೂರು ದಿನಗಳ ಪ್ರವಾಸ ಕೈಗೊಂಡ ತಂಡ ಬರ ಅಧ್ಯಯನ ನಡೆಸಿತ್ತು. ಅಲ್ಲದೆ, ಬರ ಅಧ್ಯಯನದ ನಂತರ ರಾಜ್ಯ ಸರ್ಕಾರದ ಜೊತೆಗೂ ಅಕ್ಟೋಬರ್ 09 ರಂದು ಸಭೆ ನಡೆಸಿದ್ದ ಕೇಂದ್ರದ ತಂಡ ನಾವು ಮಾಡಿದ ಮನವಿ ವಸ್ತುಸ್ಥಿತಿಯಿಂದ ಕೂಡಿದೆ ಎಂದು ತಿಳಿಸಿತ್ತು. ಈ ಬಗ್ಗೆ ಅದೇ ದಿನ ಪತ್ರಿಕಾಗೋಷ್ಠಿ ನಡೆಸಿ ಮಾಧ್ಯಮ ಮಿತ್ರರಿಗೂ ಮಾಹಿತಿ ನೀಡಲಾಗಿತ್ತು” ಎಂದು ಸಚಿವರು ಮಾಹಿತಿ ನೀಡಿದ್ದಾರೆ.

“ಅಧ್ಯಯನದ ಬೆನ್ನಿಗೆ ದೆಹಲಿಗೆ ಹಿಂತಿರುಗಿದ ಬರ ಅಧ್ಯಯನ ತಂಡ, ಕೇಂದ್ರ ಸರ್ಕಾರಕ್ಕೆ ಒಂದು ವಾರದಲ್ಲೇ ವರದಿಯನ್ನೂ ಸಲ್ಲಿಸಿದೆ. ಎನ್‌ಡಿಆರ್‌ಎಫ್‌ ನಿಯಮದ ಅನ್ವಯ ಕೇಂದ್ರ ಬರ ಅಧ್ಯಯನ ತಂಡ ವರದಿ ನೀಡಿದ ತಕ್ಷಣ ಕೇಂದ್ರ ಗೃಹ ಸಚಿವರು, ಹಣಕಾಸು ಸಚಿವರು ಹಾಗೂ ಕೃಷಿ ಸಚಿವರು ಸಭೆ ನಡೆಸಿ ಬರ ಪರಿಹಾರ ಬಿಡುಗಡೆ ಮಾಡುವ ಸಂಬಂಧ ನಿರ್ಧಾರ ತೆಗೆದುಕೊಳ್ಳಬೇಕು. ಆದರೆ, ಆ ಸಭೆ ಈವರೆಗೂ ನಡೆದಿಲ್ಲ ಎಂಬುದೇ ವಾಸ್ತವ ಸಂಗತಿ” ಎಂದು ಸತ್ಯ ಸಂಗತಿಯನ್ನು ಬಿಟ್ಟಿಟ್ಟಿದ್ದಾರೆ.

“ರಾಜ್ಯದ ರೈತರು ಬರದಿಂದ ತತ್ತರಿಸುತ್ತಿದ್ದಾರೆ ಹೀಗಾಗಿ ಶೀಘ್ರ ಬರ ಪರಿಹಾರ ವಿತರಿಸಿ ಎಂದು ಮನವಿ ಮಾಡುವ ಸಂಬಂಧ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ಭೇಟಿಗೆ ಮನವಿ ಮಾಡಲಾಗಿತ್ತು. ಆದರೆ, ಅವರು ಭೇಟಿಗೆ ಅವಕಾಶ ನೀಡದ ಕಾರಣ ಕಳೆದ ವರ್ಷ ಅಕ್ಟೋಬರ್ 25ರಂದು, ಕರ್ನಾಟಕದ ಕೃಷಿ ಸಚಿವ ಎನ್.ಚಲುವರಾಯ ಸ್ವಾಮಿ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನೊಳಗೊಂಡ ನಿಯೋಗದೊಂದಿಗೆ ಕೇಂದ್ರ ಕೃಷಿ ಕಾರ್ಯದರ್ಶಿ ಮನೋಜ್ ಕುಮಾರ್ ಅಹುಜಾ ಮತ್ತು ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರೊಂದಿಗೆ ಪ್ರತ್ಯೇಕ ಸಭೆ ನಡೆಸಿ ಶೀಘ್ರ ಬರ ಪರಿಹಾರಕ್ಕೆ ಮನವಿ ಮಾಡಲಾಗಿತ್ತು. ಈ ನಡುವೆ ಇದೇ ಅವಧಿಯಲ್ಲಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಧಾನಿ ಮೋದಿ ಅವರ ಭೇಟಿಗೆ ಅವಕಾಶ ಕೋರಿ ಎರಡು ಪತ್ರ ಬರೆದಿದ್ದರು. ಆದರೆ, ಅವರ ಭೇಟಿಗೆ ಅವಕಾಶ ನೀಡಲಾಗಿರಲಿಲ್ಲ” ಎಂದು ಹೇಳಿದ್ದಾರೆ.

‘ಕಳೆದ ವರ್ಷ ನವೆಂಬರ್ 24 ರಂದು ಕರ್ನಾಟಕದ ಕೃಷಿ ಸಚಿವ ಚಲುವರಾಯ ಸ್ವಾಮಿ ಅವರೊಂದಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ರಾಜ್ಯದ ಬರ ಪರಿಸ್ಥಿತಿ ಕುರಿತು ಚರ್ಚಿಸಲಾಗಿತ್ತು. ಅಲ್ಲದೆ, ಶೀಘ್ರ ಬರ ಪರಿಹಾರ ಬಿಡುಗಡೆಗೆ ಮನವಿ ಮಾಡಲಾಗಿತ್ತು. ಸಚಿವರು ಚರ್ಚೆ ವೇಳೆ ಸಕಾರಾತ್ಮಕವಾಗಿ ಸ್ಪಂದಿಸಿದ್ದರಾದರೂ ಇದರಿಂದ ರಾಜ್ಯಕ್ಕೆ ಯಾವುದೇ ಉಪಯೋಗವಾಗಿರಲಿಲ್ಲ. ಕಳೆದ ವರ್ಷ ಡಿಸೆಂಬರ್ 19 ರಂದು ಕೊನೆಗೂ ಸ್ವತಃ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿತ್ತು. ಈ ವೇಳೆ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಜೊತೆಗೆ ನಾನೂ ಸಹ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದೆ. ಸಭೆಯಲ್ಲಿ ಕರ್ನಾಟಕದ ಬರ ಪರಿಸ್ಥಿತಿಯ ಕುರಿತು ಪ್ರಧಾನಿಗೆ ವಿವರಿಸಲಾಗಿತ್ತು. ಶೀಘ್ರವೇ ₹18,177.44 ಕೋಟಿ ಪರಿಹಾರ ಬಿಡುಗಡೆಗೂ ಮನವಿ ಮಾಡಲಾಗಿತ್ತು. ಆದರೆ, ಕೇಂದ್ರ ಸರ್ಕಾರ ಈವರೆಗೆ ಹಣ ಬಿಡುಗಡೆ ಮಾಡಿಲ್ಲ” ಎಂದು ಮಾಹಿತಿ ನೀಡಿದ್ದಾರೆ.

“ಕರ್ನಾಟಕ ಸರ್ಕಾರ ಬೇರೆ ದಾರಿ ಕಾಣದೆ ಬರ ಪರಿಹಾರ ಹಣ ಬಿಡುಗಡೆ ಮಾಡುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಕೇಂದ್ರದಿಂದ ಬರ ಪರಿಹಾರವನ್ನು ಪಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಳೆದ ವರ್ಷ ಸೆಪ್ಟೆಂಬರ್ ತಿಂಗಳಿನಿಂದ ಈ ಕ್ಷಣದ ವರೆಗೆ ಸಾಂವಿಧಾನಿಕ ಮಾದರಿಯಲ್ಲಿ ಹೋರಾಟ ನಡೆಸುತ್ತಿದೆಯೇ ವಿನಃ, ಈ ವಿಚಾರದಲ್ಲಿ ರಾಜಕೀಯ ಮಾಡಿರಲಿಲ್ಲ. ಇಂತಹ ಸೂಕ್ಷ್ಮ ವಿಚಾರದಲ್ಲಿ ರಾಜಕೀಯ ಮೇಲಾಟ ಸರಿಯಲ್ಲ ಎಂಬುದು ನಮ್ಮ ಅಭಿಪ್ರಾಯ. ರೈತರಿಗೆ ನೆರವು ನೀಡುವ ವಿಚಾರದಲ್ಲಿ ರಾಜಕೀಯ ಸರಿಯಲ್ಲ” ಎಂದು ಕೇಂದ್ರ ಗೃಹ ಸಿಚವರಿಗೆ ತಿರುಗೇಟು ಕೊಟ್ಟಿದ್ದಾರೆ.

“ತೆರಿಗೆ ಹಂಚಿಕೆ, ವಿಶೇಷ ಅನುದಾನ ಬಿಡುಗಡೆ ಸೇರಿದಂತೆ ಹಲವು ವಿಚಾರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕರ್ನಾಟಕದ ವಿರುದ್ಧ ಮಲತಾಯಿ ಧೋರಣೆ ಅನುಸರಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರವೇ. ಆದರೆ, ರೈತರಿಗೆ ಬರ ಪರಿಹಾರ ನೀಡುವ ವಿಚಾರವನ್ನೂ ಕೇಂದ್ರ ಸರ್ಕಾರ ರಾಜಕೀಯಗೊಳಿಸಿ ಕರ್ನಾಟಕವನ್ನು ಶೋಷಣೆಗೆ ಮಾಡುತ್ತದೆ ಎಂದು ನಾವು ಭಾವಿಸಿರಲಿಲ್ಲ. ಇನ್ನೂ ಜನರ ಮತಗಳನ್ನು ಗಳಿಸುವ ನಿಟ್ಟಿನಲ್ಲಿ ಇದೇ ವಿಚಾರವನ್ನು ಮುಂದಿಟ್ಟು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಹಸಿ ಹಸಿ ಸುಳ್ಳು ಹೇಳುತ್ತಾರೆ ಎಂದು ನಾವು ಖಂಡಿತ ಭಾಸಿರಲಿಲ್ಲ. ಅವರ ಈ ವರ್ತನೆಗೆ ನಾನು ವಿಷಾದಿಸುತ್ತೇವೆ” ಎಂದು ಸಚಿವ ಕೃಷ್ಣ ಬೈರೇಗೌಡ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ‘ಭಾರತದ ಭೂಮಿಯನ್ನು ಬಾಂಗ್ಲಾಕ್ಕೆ ಕೊಟ್ಟ ಮೋದಿ..’; ಬಿಜೆಪಿ ವಿರುದ್ಧ ಫಾರೂಕ್ ಅಬ್ದುಲ್ಲಾ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...