Homeಮುಖಪುಟಮಣಿಪುರ ಹಿಂಸಾಚಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಿದ ಅಮಿತ್ ಶಾ

ಮಣಿಪುರ ಹಿಂಸಾಚಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಿದ ಅಮಿತ್ ಶಾ

- Advertisement -
- Advertisement -

ಮಣಿಪುರದಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದ ಸಮಿತಿ ತನಿಖೆ ನಡೆಸಲಿದೆ ಮತ್ತು ಶಾಂತಿ ಸಮಿತಿಯನ್ನು ರಚಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅಮಿತ್​ ಶಾ, ”ಮಣಿಪುರದಲ್ಲಿ ಆದಷ್ಟು ಬೇಗ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ನಿರಾಶ್ರಿತರನ್ನು ಅವರ ಮನೆಗಳಿಗೆ ಹಿಂದಿರುಗಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಮಣಿಪುರ ಶಾಂತವಾಗಿದೆ . ನಾವು ಜನರಿಗೆ ಅಭಿವೃದ್ಧಿ ಮತ್ತು ಕಲ್ಯಾಣವನ್ನು ತಲುಪಿಸುತ್ತಿದ್ದೇವೆ” ಎಂದು ಹೇಳಿದರು.

ಮಣಿಪುರದಲ್ಲಿ ಕುಕಿ ಮತ್ತು ಮೈತಿ ಸಮುದಾಯದ ನಡುವಿನ ಸಂಘರ್ಷಕ್ಕೆ ಕಾರಣವಾದ ಆತುರದ ನಿರ್ಧಾರದಿಂದ ಮೈತಿ ಸಮುದಾಯಕ್ಕೆ ಪರಿಶಿಷ್ಟ ಪಂಗಡ (ಎಸ್‌ಟಿ) ಸ್ಥಾನಮಾನವನ್ನು ನೀಡಲು ರಾಜ್ಯ ಸರ್ಕಾರವನ್ನು ಶಿಫಾರಸು ಮಾಡುವಂತೆ ಕೇಳಿದೆ. ಕುಕಿಗಳು ಮತ್ತು ಮೈತಿಗಳೆರಡೂ ನೆಲೆಸಿರುವ ಪರಿಹಾರ ಶಿಬಿರಗಳಿಗೆ ಭೇಟಿ ನೀಡಿದ ಅವರು ಈ ಹೇಳಿಕೆಯನ್ನು ನೀಡಿದ್ದಾರೆ. ಕುಕಿಗಳು ಮತ್ತು ಮೈತಿ ಸುರಕ್ಷಿತವಾಗಿ ಮನೆಗೆ ಮರುಳುವಂತೆ ಮಾಡುವುದು ನಮ್ಮ ಕರ್ತವ್ಯ, ಆ ಕೆಲಸವನ್ನು ಮಾಡುತ್ತೇವೆ ಎಂದು ಭರವಸೆ ನೀಡಿದರು.

ತುರ್ತು ಪರಿಸ್ಥಿತಿಗಳಿಗೆ ಹೆಲಿಕಾಪ್ಟರ್ ಸೇವೆಗಳು ಸೇರಿದಂತೆ ಅಗತ್ಯ ವಸ್ತುಗಳ ಸುರಕ್ಷತೆ ಮತ್ತು ಪೂರೈಕೆಯ ಭರವಸೆ ಕೂಡ ನೀಡಿದರು. ಮೇ 3ರಿಂದ ಪ್ರಕ್ಷುಬ್ಧ ಸ್ಥಿತಿಯಲ್ಲಿರುವ ಮಣಿಪುರಕ್ಕೆ ಅಮಿತ್ ಶಾ ಭೇಟಿ ನೀಡಿದ್ದು, ಪ್ರಬಲ ಮೈತಿ ಸಮುದಾಯ ಮತ್ತು ಬುಡಕಟ್ಟು ಕುಕಿ ಸಮುದಾಯದ ನಡುವೆ ಘರ್ಷಣೆಗಳು ಭುಗಿಲೆದ್ದಿವೆ. ಹಿಂಸಾಚಾರದಲ್ಲಿ 80 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮಣಿಪುರ ಪೊಲೀಸ್ ಮುಖ್ಯಸ್ಥ (ಡಿಜಿಪಿ) ಪಿ ಡೌಂಗೆಲ್ ಅವರನ್ನು ಪೊಲೀಸ್ ಪಡೆ ಮುಖ್ಯಸ್ಥರನ್ನಾಗಿ ವರ್ಗಾವಣೆ ಮಾಡಲಾಗಿದೆ, ಇದೀಗ ಅವರ ಸ್ಥಾನಕ್ಕೆ ಅಂದರೆ ಮಣಿಪುರ ನೂತನ ಪೊಲೀಸ್ ಮುಖ್ಯಸ್ಥರಾಗಿ ರಾಜೀವ್ ಸಿಂಗ್ ನೇಮಕ ಮಾಡಲಾಗಿದೆ.

ಶಿಕ್ಷಣಾಧಿಕಾರಿಗಳು ರಾಜ್ಯಕ್ಕೆ ಆಗಮಿಸಲಿದ್ದು, ವಿದ್ಯಾರ್ಥಿಗಳಿಗೆ ನಿರಂತರ ಶಿಕ್ಷಣ ಸೌಲಭ್ಯ ಕಲ್ಪಿಸಲು ಚರ್ಚೆ ನಡೆಸಲಾಗುವುದು. ಆನ್‌ಲೈನ್ ಶಿಕ್ಷಣ ಮತ್ತು ಪರೀಕ್ಷೆಯು ಯೋಜನೆಯಂತೆ ನಡೆಯಲಿದೆ ಎಂದು ಅಮಿತ್ ಶಾ ತಿಳಿಸಿದ್ದಾರೆ.

ರಾಜ್ಯದಲ್ಲಿನ ಹಿಂಸಾಚಾರದ ಸಂತ್ರಸ್ತರಿಗೆ ನೆರವು ನೀಡಲು ಮಣಿಪುರಕ್ಕೆ 20 ವೈದ್ಯರು ಸೇರಿದಂತೆ 8 ವೈದ್ಯಕೀಯ ತಜ್ಞರ ತಂಡಗಳನ್ನು ಕೇಂದ್ರ ಸರ್ಕಾರ ಒದಗಿಸಿದೆ. ಈಗಾಗಲೇ 5 ತಂಡಗಳು ಇಲ್ಲಿಗೆ ತಲುಪಿದ್ದು, ಇನ್ನೂ 3 ತಂಡಗಳು ಇಲ್ಲಿಗೆ ಬಂದಿವೆ ಎಂದರು.

ಗೃಹ ಸಚಿವಾಲಯ ಮತ್ತು ಇತರ ಸಚಿವಾಲಯಗಳ ಜಂಟಿ ಕಾರ್ಯದರ್ಶಿ ಮತ್ತು ಜಂಟಿ ನಿರ್ದೇಶಕ ಮಟ್ಟದ ಅಧಿಕಾರಿಗಳು ಜನರಿಗೆ ಸಹಾಯ ಮಾಡಲು ಮತ್ತು ರಾಜ್ಯದ ಪರಿಸ್ಥಿತಿಯನ್ನು ಅವಲೋಕಿಸಲು ಮಣಿಪುರದಲ್ಲಿ ಉಪಸ್ಥಿತರಿರುತ್ತಾರೆ ಎಂದು ಅಮಿತ್ ಶಾ ಹೇಳಿದ್ದಾರೆ.

ಇದನ್ನೂ ಓದಿ: ಮಣಿಪುರ ಹಿಂಸಾಚಾರ: ತಗ್ಗದ ಸಾವು ನೋವು, ಅಮಿತ್ ಷಾ ಭೇಟಿ

ಹಿಂಸಾತ್ಮಕ ಘಟನೆಗಳ ತನಿಖೆಗಾಗಿ ಮಣಿಪುರದಲ್ಲಿ ಹಲವಾರು ಏಜೆನ್ಸಿಗಳು ಕಾರ್ಯನಿರ್ವಹಿಸುತ್ತಿವೆ. ಪಿತೂರಿಯ ಸುಳಿವು ನೀಡುವ 6 ಹಿಂಸಾಚಾರದ ಘಟನೆಗಳಲ್ಲಿ ಉನ್ನತ ಮಟ್ಟದ ಸಿಬಿಐ ತನಿಖೆ. ತನಿಖೆ ನ್ಯಾಯಯುತವಾಗಿರುವಂತೆ ನೋಡಿಕೊಳ್ಳುತ್ತೇವೆ ಎಂದು ಹೇಳಿದರು.

ಅಕ್ರಮ ಶಸ್ತ್ರಾಸ್ತ್ರಗಳನ್ನು ಒಪ್ಪಿಸಿ ಎಂದು ಗಲಭೆಕೋರರಿಗೆ ಅಮಿತ್ ಶಾ ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ನಾಳೆಯಿಂದ ಕೂಂಬಿಂಗ್ ಕಾರ್ಯಾಚರಣೆ ಆರಂಭವಾಗಲಿದೆ ಎಂದು ಅವರು ಹೇಳಿದರು.

ಶಾಂತಿ ಒಪ್ಪಂದ ಉಲ್ಲಂಘಿಸುವ ಭಯೋತ್ಪಾದಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ರಾಜ್ಯದಲ್ಲಿ ಆಂತರಿಕ ಸಾರಿಗೆಗೆ ಚಾಪರ್‌ಗಳನ್ನು ಬಳಸಲಾಗುತ್ತಿದೆ. ಎಂದು ತಿಳಿಸಿದರು.

ಈ ಘಟನೆಗಳ ಕುರಿತು ತನಿಖೆ ನಡೆಸಲು ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಸಮಿತಿಯನ್ನು ರಚಿಸಿದೆ. ಮಣಿಪುರದ ರಾಜ್ಯಪಾಲರು ನಾಗರಿಕ ಸಮಾಜದ ಸದಸ್ಯರೊಂದಿಗೆ ಶಾಂತಿ ಸಮಿತಿಯ ಮುಖ್ಯಸ್ಥರಾಗಿರುತ್ತಾರೆ ಎಂದು ಅಮಿತ್ ಶಾ ಅವರು ಮಾಹಿತಿ ನೀಡಿದರು.

ಪರಿಹಾರ ಕ್ರಮಗಳು:

ಮಣಿಪುರ ಸರ್ಕಾರವು ಮೃತ ಸಂತ್ರಸ್ತರ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಪರಿಹಾರವನ್ನು ನೀಡುತ್ತದೆ. ಕೇಂದ್ರ ಸರ್ಕಾರ 5 ಲಕ್ಷ ರೂಪಾಯಿ ಪರಿಹಾರವನ್ನು ಕೇಂದ್ರ ಸರ್ಕಾರ ನೀಡಲಿದೆ. ಮಣಿಪುರದಲ್ಲಿ ಹಿಂಸಾಚಾರದ ಸಂತ್ರಸ್ತರಿಗೆ ಪರಿಹಾರ ಕ್ರಮಗಳು ನಡೆಯಲಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದರು.

ಕಳೆದ 1 ತಿಂಗಳಲ್ಲಿ ಮಣಿಪುರದಲ್ಲಿ ಕೆಲವು ಹಿಂಸಾತ್ಮಕ ಘಟನೆಗಳು ವರದಿಯಾಗಿವೆ. ಹಿಂಸಾಚಾರದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲಾ ಕುಟುಂಬಗಳಿಗೆ ನಾನು ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ನಾನು ಕಳೆದ 3 ದಿನಗಳಲ್ಲಿ ಮಣಿಪುರದ ಇಂಫಾಲ್, ಮೋರೆ ಮತ್ತು ಚುರಾಚಂದಪುರ ಸೇರಿದಂತೆ ಹಲವು ಸ್ಥಳಗಳಿಗೆ ಭೇಟಿ ನೀಡಿದ್ದೇನೆ ಮತ್ತು ರಾಜ್ಯದಲ್ಲಿ ಶಾಂತಿ ಸ್ಥಾಪಿಸಲು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇನೆ. ನಾನು ಮೈತಿ ಮತ್ತು ಕುಕಿ ಸಮುದಾಯಗಳ ಸಿಎಸ್‌ಒಗಳನ್ನು ಭೇಟಿ ಮಾಡಿದ್ದೇನೆ ಎಂದು ಹೇಳಿದರು.

ಮಣಿಪುರದಲ್ಲಿ ಹಿಂಸಾಚಾರದಿಂದ ಸಂತ್ರಸ್ತರಾದವರಿಗೆ ಅಗತ್ಯ ವಸ್ತುಗಳನ್ನು ಒದಗಿಸಲಾಗುತ್ತಿದೆ. ರಾಜ್ಯದಲ್ಲಿ ಹಿಂಸಾಚಾರದ ತನಿಖೆಗೆ ವಿಶೇಷ ಸಿಬಿಐ ತಂಡ ರಚಿಸಲಾಗಿದೆ. ಅಪರಾಧಿಗಳನ್ನು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...