Homeಮುಖಪುಟಮಣಿಪುರ ಹಿಂಸಾಚಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಿದ ಅಮಿತ್ ಶಾ

ಮಣಿಪುರ ಹಿಂಸಾಚಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಿದ ಅಮಿತ್ ಶಾ

- Advertisement -
- Advertisement -

ಮಣಿಪುರದಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದ ಸಮಿತಿ ತನಿಖೆ ನಡೆಸಲಿದೆ ಮತ್ತು ಶಾಂತಿ ಸಮಿತಿಯನ್ನು ರಚಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅಮಿತ್​ ಶಾ, ”ಮಣಿಪುರದಲ್ಲಿ ಆದಷ್ಟು ಬೇಗ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ನಿರಾಶ್ರಿತರನ್ನು ಅವರ ಮನೆಗಳಿಗೆ ಹಿಂದಿರುಗಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಮಣಿಪುರ ಶಾಂತವಾಗಿದೆ . ನಾವು ಜನರಿಗೆ ಅಭಿವೃದ್ಧಿ ಮತ್ತು ಕಲ್ಯಾಣವನ್ನು ತಲುಪಿಸುತ್ತಿದ್ದೇವೆ” ಎಂದು ಹೇಳಿದರು.

ಮಣಿಪುರದಲ್ಲಿ ಕುಕಿ ಮತ್ತು ಮೈತಿ ಸಮುದಾಯದ ನಡುವಿನ ಸಂಘರ್ಷಕ್ಕೆ ಕಾರಣವಾದ ಆತುರದ ನಿರ್ಧಾರದಿಂದ ಮೈತಿ ಸಮುದಾಯಕ್ಕೆ ಪರಿಶಿಷ್ಟ ಪಂಗಡ (ಎಸ್‌ಟಿ) ಸ್ಥಾನಮಾನವನ್ನು ನೀಡಲು ರಾಜ್ಯ ಸರ್ಕಾರವನ್ನು ಶಿಫಾರಸು ಮಾಡುವಂತೆ ಕೇಳಿದೆ. ಕುಕಿಗಳು ಮತ್ತು ಮೈತಿಗಳೆರಡೂ ನೆಲೆಸಿರುವ ಪರಿಹಾರ ಶಿಬಿರಗಳಿಗೆ ಭೇಟಿ ನೀಡಿದ ಅವರು ಈ ಹೇಳಿಕೆಯನ್ನು ನೀಡಿದ್ದಾರೆ. ಕುಕಿಗಳು ಮತ್ತು ಮೈತಿ ಸುರಕ್ಷಿತವಾಗಿ ಮನೆಗೆ ಮರುಳುವಂತೆ ಮಾಡುವುದು ನಮ್ಮ ಕರ್ತವ್ಯ, ಆ ಕೆಲಸವನ್ನು ಮಾಡುತ್ತೇವೆ ಎಂದು ಭರವಸೆ ನೀಡಿದರು.

ತುರ್ತು ಪರಿಸ್ಥಿತಿಗಳಿಗೆ ಹೆಲಿಕಾಪ್ಟರ್ ಸೇವೆಗಳು ಸೇರಿದಂತೆ ಅಗತ್ಯ ವಸ್ತುಗಳ ಸುರಕ್ಷತೆ ಮತ್ತು ಪೂರೈಕೆಯ ಭರವಸೆ ಕೂಡ ನೀಡಿದರು. ಮೇ 3ರಿಂದ ಪ್ರಕ್ಷುಬ್ಧ ಸ್ಥಿತಿಯಲ್ಲಿರುವ ಮಣಿಪುರಕ್ಕೆ ಅಮಿತ್ ಶಾ ಭೇಟಿ ನೀಡಿದ್ದು, ಪ್ರಬಲ ಮೈತಿ ಸಮುದಾಯ ಮತ್ತು ಬುಡಕಟ್ಟು ಕುಕಿ ಸಮುದಾಯದ ನಡುವೆ ಘರ್ಷಣೆಗಳು ಭುಗಿಲೆದ್ದಿವೆ. ಹಿಂಸಾಚಾರದಲ್ಲಿ 80 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮಣಿಪುರ ಪೊಲೀಸ್ ಮುಖ್ಯಸ್ಥ (ಡಿಜಿಪಿ) ಪಿ ಡೌಂಗೆಲ್ ಅವರನ್ನು ಪೊಲೀಸ್ ಪಡೆ ಮುಖ್ಯಸ್ಥರನ್ನಾಗಿ ವರ್ಗಾವಣೆ ಮಾಡಲಾಗಿದೆ, ಇದೀಗ ಅವರ ಸ್ಥಾನಕ್ಕೆ ಅಂದರೆ ಮಣಿಪುರ ನೂತನ ಪೊಲೀಸ್ ಮುಖ್ಯಸ್ಥರಾಗಿ ರಾಜೀವ್ ಸಿಂಗ್ ನೇಮಕ ಮಾಡಲಾಗಿದೆ.

ಶಿಕ್ಷಣಾಧಿಕಾರಿಗಳು ರಾಜ್ಯಕ್ಕೆ ಆಗಮಿಸಲಿದ್ದು, ವಿದ್ಯಾರ್ಥಿಗಳಿಗೆ ನಿರಂತರ ಶಿಕ್ಷಣ ಸೌಲಭ್ಯ ಕಲ್ಪಿಸಲು ಚರ್ಚೆ ನಡೆಸಲಾಗುವುದು. ಆನ್‌ಲೈನ್ ಶಿಕ್ಷಣ ಮತ್ತು ಪರೀಕ್ಷೆಯು ಯೋಜನೆಯಂತೆ ನಡೆಯಲಿದೆ ಎಂದು ಅಮಿತ್ ಶಾ ತಿಳಿಸಿದ್ದಾರೆ.

ರಾಜ್ಯದಲ್ಲಿನ ಹಿಂಸಾಚಾರದ ಸಂತ್ರಸ್ತರಿಗೆ ನೆರವು ನೀಡಲು ಮಣಿಪುರಕ್ಕೆ 20 ವೈದ್ಯರು ಸೇರಿದಂತೆ 8 ವೈದ್ಯಕೀಯ ತಜ್ಞರ ತಂಡಗಳನ್ನು ಕೇಂದ್ರ ಸರ್ಕಾರ ಒದಗಿಸಿದೆ. ಈಗಾಗಲೇ 5 ತಂಡಗಳು ಇಲ್ಲಿಗೆ ತಲುಪಿದ್ದು, ಇನ್ನೂ 3 ತಂಡಗಳು ಇಲ್ಲಿಗೆ ಬಂದಿವೆ ಎಂದರು.

ಗೃಹ ಸಚಿವಾಲಯ ಮತ್ತು ಇತರ ಸಚಿವಾಲಯಗಳ ಜಂಟಿ ಕಾರ್ಯದರ್ಶಿ ಮತ್ತು ಜಂಟಿ ನಿರ್ದೇಶಕ ಮಟ್ಟದ ಅಧಿಕಾರಿಗಳು ಜನರಿಗೆ ಸಹಾಯ ಮಾಡಲು ಮತ್ತು ರಾಜ್ಯದ ಪರಿಸ್ಥಿತಿಯನ್ನು ಅವಲೋಕಿಸಲು ಮಣಿಪುರದಲ್ಲಿ ಉಪಸ್ಥಿತರಿರುತ್ತಾರೆ ಎಂದು ಅಮಿತ್ ಶಾ ಹೇಳಿದ್ದಾರೆ.

ಇದನ್ನೂ ಓದಿ: ಮಣಿಪುರ ಹಿಂಸಾಚಾರ: ತಗ್ಗದ ಸಾವು ನೋವು, ಅಮಿತ್ ಷಾ ಭೇಟಿ

ಹಿಂಸಾತ್ಮಕ ಘಟನೆಗಳ ತನಿಖೆಗಾಗಿ ಮಣಿಪುರದಲ್ಲಿ ಹಲವಾರು ಏಜೆನ್ಸಿಗಳು ಕಾರ್ಯನಿರ್ವಹಿಸುತ್ತಿವೆ. ಪಿತೂರಿಯ ಸುಳಿವು ನೀಡುವ 6 ಹಿಂಸಾಚಾರದ ಘಟನೆಗಳಲ್ಲಿ ಉನ್ನತ ಮಟ್ಟದ ಸಿಬಿಐ ತನಿಖೆ. ತನಿಖೆ ನ್ಯಾಯಯುತವಾಗಿರುವಂತೆ ನೋಡಿಕೊಳ್ಳುತ್ತೇವೆ ಎಂದು ಹೇಳಿದರು.

ಅಕ್ರಮ ಶಸ್ತ್ರಾಸ್ತ್ರಗಳನ್ನು ಒಪ್ಪಿಸಿ ಎಂದು ಗಲಭೆಕೋರರಿಗೆ ಅಮಿತ್ ಶಾ ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ನಾಳೆಯಿಂದ ಕೂಂಬಿಂಗ್ ಕಾರ್ಯಾಚರಣೆ ಆರಂಭವಾಗಲಿದೆ ಎಂದು ಅವರು ಹೇಳಿದರು.

ಶಾಂತಿ ಒಪ್ಪಂದ ಉಲ್ಲಂಘಿಸುವ ಭಯೋತ್ಪಾದಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ರಾಜ್ಯದಲ್ಲಿ ಆಂತರಿಕ ಸಾರಿಗೆಗೆ ಚಾಪರ್‌ಗಳನ್ನು ಬಳಸಲಾಗುತ್ತಿದೆ. ಎಂದು ತಿಳಿಸಿದರು.

ಈ ಘಟನೆಗಳ ಕುರಿತು ತನಿಖೆ ನಡೆಸಲು ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಸಮಿತಿಯನ್ನು ರಚಿಸಿದೆ. ಮಣಿಪುರದ ರಾಜ್ಯಪಾಲರು ನಾಗರಿಕ ಸಮಾಜದ ಸದಸ್ಯರೊಂದಿಗೆ ಶಾಂತಿ ಸಮಿತಿಯ ಮುಖ್ಯಸ್ಥರಾಗಿರುತ್ತಾರೆ ಎಂದು ಅಮಿತ್ ಶಾ ಅವರು ಮಾಹಿತಿ ನೀಡಿದರು.

ಪರಿಹಾರ ಕ್ರಮಗಳು:

ಮಣಿಪುರ ಸರ್ಕಾರವು ಮೃತ ಸಂತ್ರಸ್ತರ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಪರಿಹಾರವನ್ನು ನೀಡುತ್ತದೆ. ಕೇಂದ್ರ ಸರ್ಕಾರ 5 ಲಕ್ಷ ರೂಪಾಯಿ ಪರಿಹಾರವನ್ನು ಕೇಂದ್ರ ಸರ್ಕಾರ ನೀಡಲಿದೆ. ಮಣಿಪುರದಲ್ಲಿ ಹಿಂಸಾಚಾರದ ಸಂತ್ರಸ್ತರಿಗೆ ಪರಿಹಾರ ಕ್ರಮಗಳು ನಡೆಯಲಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದರು.

ಕಳೆದ 1 ತಿಂಗಳಲ್ಲಿ ಮಣಿಪುರದಲ್ಲಿ ಕೆಲವು ಹಿಂಸಾತ್ಮಕ ಘಟನೆಗಳು ವರದಿಯಾಗಿವೆ. ಹಿಂಸಾಚಾರದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲಾ ಕುಟುಂಬಗಳಿಗೆ ನಾನು ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ನಾನು ಕಳೆದ 3 ದಿನಗಳಲ್ಲಿ ಮಣಿಪುರದ ಇಂಫಾಲ್, ಮೋರೆ ಮತ್ತು ಚುರಾಚಂದಪುರ ಸೇರಿದಂತೆ ಹಲವು ಸ್ಥಳಗಳಿಗೆ ಭೇಟಿ ನೀಡಿದ್ದೇನೆ ಮತ್ತು ರಾಜ್ಯದಲ್ಲಿ ಶಾಂತಿ ಸ್ಥಾಪಿಸಲು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇನೆ. ನಾನು ಮೈತಿ ಮತ್ತು ಕುಕಿ ಸಮುದಾಯಗಳ ಸಿಎಸ್‌ಒಗಳನ್ನು ಭೇಟಿ ಮಾಡಿದ್ದೇನೆ ಎಂದು ಹೇಳಿದರು.

ಮಣಿಪುರದಲ್ಲಿ ಹಿಂಸಾಚಾರದಿಂದ ಸಂತ್ರಸ್ತರಾದವರಿಗೆ ಅಗತ್ಯ ವಸ್ತುಗಳನ್ನು ಒದಗಿಸಲಾಗುತ್ತಿದೆ. ರಾಜ್ಯದಲ್ಲಿ ಹಿಂಸಾಚಾರದ ತನಿಖೆಗೆ ವಿಶೇಷ ಸಿಬಿಐ ತಂಡ ರಚಿಸಲಾಗಿದೆ. ಅಪರಾಧಿಗಳನ್ನು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...