Homeರಾಷ್ಟ್ರೀಯ10ನೇ ತರಗತಿವರೆಗೆ ಹಿಂದಿ ಕಡ್ಡಾಯಕ್ಕೆ ಅಮಿತ್ ಶಾ ಪ್ರಸ್ತಾಪ: ಪ್ರತಿಭಟನೆ ಎಚ್ಚರಿಕೆ ನೀಡಿದ ಅಸ್ಸಾಂ ವಿದ್ಯಾರ್ಥಿಗಳು

10ನೇ ತರಗತಿವರೆಗೆ ಹಿಂದಿ ಕಡ್ಡಾಯಕ್ಕೆ ಅಮಿತ್ ಶಾ ಪ್ರಸ್ತಾಪ: ಪ್ರತಿಭಟನೆ ಎಚ್ಚರಿಕೆ ನೀಡಿದ ಅಸ್ಸಾಂ ವಿದ್ಯಾರ್ಥಿಗಳು

- Advertisement -
- Advertisement -

ಅಸ್ಸಾಂನಲ್ಲಿ 10 ನೇ ತರಗತಿಯವರೆಗೆ ಹಿಂದಿಯನ್ನು ಕಡ್ಡಾಯಗೊಳಿಸುವ ಪ್ರಸ್ತಾವನೆಯನ್ನು ಒಕ್ಕೂಟ ಸರ್ರಕಾವು ಮುಂದಿಟ್ಟರೆ ಹಿಂದಿ ಹೇರಿಕೆಯ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ‘ಆಲ್‌ ಅಸ್ಸಾಂ ಸ್ಟೂಡಂಟ್‌ ಯುನಿಯನ್‌’ನ ಅಧ್ಯಕ್ಷ ದೀಪಂಕ ಕುಮಾರ್ ನಾಥ್ ಎಚ್ಚರಿಸಿದ್ದಾರೆ.

ಏಪ್ರಿಲ್ 7 ರಂದು ಸಂಸತ್ತಿನ ಅಧಿಕೃತ ಭಾಷಾ ಸಮಿತಿಯ ಅಧ್ಯಕ್ಷತೆ ವಹಿಸಿದ್ದ ಗೃಹ ಸಚಿವ ಅಮಿತ್ ಶಾ, ವಿವಿಧ ಭಾಷಾ ಸಮುದಾಯಗಳ ನಡುವೆ ಕೊಂಡಿಯಾಗಿ ಹಿಂದಿ ಭಾಷೆ ಇರಬೇಕು, ಇಂಗ್ಲಿಷ್ ಅಲ್ಲ ಎಂದು ಹೇಳಿದ್ದರು. ಈಶಾನ್ಯ ರಾಜ್ಯಗಳಲ್ಲಿ 10 ನೇ ತರಗತಿಯವರೆಗೆ ಹಿಂದಿಯನ್ನು ಕಡ್ಡಾಯಗೊಳಿಸಬೇಕು ಮತ್ತು ಈ ರಾಜ್ಯಗಳ ಒಂಬತ್ತು ಬುಡಕಟ್ಟು ಸಮುದಾಯಗಳು ಈಗಾಗಲೇ ದೇವನಾಗರಿ ಲಿಪಿಗೆ ಬದಲಾಗಿವೆ ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗೃಹ ಸಚಿವರ ಈ ಹೇಳಿಕೆಗೆ ಅಸ್ಸಾಂ ಹಲವು ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. “10 ನೇ ತರಗತಿಯವರೆಗೆ ಹಿಂದಿಯನ್ನು ಕಡ್ಡಾಯಗೊಳಿಸುವ ಪ್ರಸ್ತಾವನೆಯು ಈ ಪ್ರದೇಶದಲ್ಲಿನ ‘ಸ್ಥಳೀಯ ಭಾಷೆಗಳ’ ಭವಿಷ್ಯಕ್ಕೆ ಬೆದರಿಕೆಯನ್ನುಂಟು ಮಾಡುತ್ತದೆ” ಎಂದು ‘ಆಲ್‌ ಅಸ್ಸಾಂ ಸ್ಟೂಡಂಟ್‌ ಯುನಿಯನ್‌’ನ ಸಲಹೆಗಾರ ಸಮುಜ್ಜಲ್ ಭಟ್ಟಾಚಾರ್ಯ ಅವರು ಟ್ವೀಟ್ ಮಾಡಿದ್ದಾರೆ.

ಆಡಳಿತಾರೂಢ ಬಿಜೆಪಿಯ ‘ರಾಜಕೀಯ ಹಿತಾಸಕ್ತಿ’ ಯಿಂದ ಈ ಪ್ರಸ್ತಾಪವನ್ನು ನಡೆಸಲಾಗಿದೆ. ಪಕ್ಷವು ಉತ್ತರದ ರಾಜ್ಯಗಳ ಹಿಂದಿ ಬೆಲ್ಟ್ ಅನ್ನು ಪ್ರಭಾವಿಸಲು ಪ್ರಯತ್ನಿಸುತ್ತಿದೆ ಎಂದು ದೀಪಂಕ ಕುಮಾರ್ ನಾಥ್ ಹೇಳಿದ್ದಾರೆ.

ಇದನ್ನೂ ಓದಿ: ‘ಹಿಂದಿ ಹೇರಿಕೆಗೆ ಅವಕಾಶ ನೀಡುವುದಿಲ್ಲ’: ಅಮಿತ್‌ ಶಾ ಹೇಳಿಕೆ ವಿರುದ್ದ ತಮಿಳುನಾಡು BJP ಅಧ್ಯಕ್ಷ ಅಣ್ಣಾಮಲೈ

ಈ ಎಲ್ಲಾ ಹಿನ್ನಲೆಯಲ್ಲಿ, ಅಸ್ಸಾಮಿ ಉಪರಾಷ್ಟ್ರೀಯತೆಯ ಘೋಷಣೆಯನ್ನು ಪಠಿಸುತ್ತಾ ಅಧಿಕಾರಕ್ಕೆ ಬಂದ ಅಸ್ಸಾಂನ ಬಿಜೆಪಿ ಸರ್ಕಾರವು ಈಗ ಸಂಕಷ್ಟದಲ್ಲಿದೆ.

ಆದರೆ ಬಿಜೆಪಿಯ ಕೇಂದ್ರ ನಾಯಕತ್ವದ ಜೊತೆಗೆ ಆತ್ಮೀಯ ಸಂಬಂಧ ಹೊಂದಿದ್ದಾರೆ ಎಂದು ನಂಬಲಾಗಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಈ ಅಸಮತೋಲನವನ್ನು ಸರಿಪಡಿಸಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ. 10ನೇ ತರಗತಿವರೆಗೆ ಹಿಂದಿಯನ್ನು ಕಡ್ಡಾಯಗೊಳಿಸಲು ಒಕ್ಕೂಟ ಸರ್ಕಾರದ ಆದೇಶ ಇನ್ನೂ ಬಂದಿಲ್ಲ ಎಂದು ಅವರು ಹೇಳಿದ್ದಾರೆ.

“ಅಮಿತ್ ಶಾ ಅವರು ಮಕ್ಕಳಿಗೆ ಹಿಂದಿ ತಿಳಿದಿರಬೇಕು ಎಂದು ಹೇಳಿದ್ದಾರೆ. ಜೊತೆಗೆ ಮಕ್ಕಳು ಹಿಂದಿ ಮತ್ತು ಇಂಗ್ಲಿಷ್ ತಿಳಿಯಬೇಕೆಂದು ನಾವು ಬಯಸುತ್ತೇವೆ. ಆದರೆ ಹಿಂದಿ ಕಲಿಯಲು ಬೇಕಾಗಿ ಅಸ್ಸಾಮಿ ಕಲಿಯುವುದನ್ನು ಬಿಡಬೇಕು ಎಂದು ಅವರು ಹೇಳಿಲ್ಲ” ಎಂದು ಹಿಮಾಂತ ಅವರು ತರ್ಕಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಪ್ರತಿಪಾದಿಸಲಾದ ಮೂರು ಭಾಷೆಯ ಸೂತ್ರದ ಬದಲಿಗೆ ನಾಲ್ಕು ಭಾಷೆಗಳನ್ನು ಪರಿಚಯಿಸುವುದು ಸಮಸ್ಯೆಗೆ ಪರಿಹಾರವಾಗಿದೆ ಎಂದು ಹಿಮಾಂತ ಅವರ ಅಭಿಪ್ರಾಯವಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯ ಅಡಿಯಲ್ಲಿ, ರಾಜ್ಯಗಳು, ಪ್ರದೇಶಗಳು ಮತ್ತು ವೈಯಕ್ತಿಕವಾಗಿ ವಿದ್ಯಾರ್ಥಿಗಳು ತಾವು ಯಾವುದಾದರೂ ಮೂರು ಭಾಷೆಗಳನ್ನು ಕಲಿಯಲು ನಿರ್ಧರಿಸಬಹುದು. ಆದರೆ ಇವುಗಳಲ್ಲಿ ಕನಿಷ್ಠ ಎರಡು ಭಾಷೆಗಳು ‘ಭಾರತದ ಸ್ಥಳೀಯ ಭಾಷೆ’ ಆಗಿರಬೇಕು.

ಇದನ್ನೂ ಓದಿ: ಮಣಿಪುರ: ಹಿಂದಿ ಹೇರಿಕೆ ಖಂಡಿಸಿ ಶಾರನ್ನು ಟೀಕಿಸಿದ್ದಕ್ಕೆ ಕಾಂಗ್ರೆಸ್‌ ವಕ್ತಾರನ ಮೇಲೆ ದೇಶದ್ರೋಹ ಪ್ರಕರಣ ದಾಖಲು

ಈ ನಡುವೆ ಅಸ್ಸಾಂ ಮಾತ್ರವಲ್ಲದೆ, ಇತರ ರಾಜ್ಯಗಳು ಕೂಡಾ 10 ನೇ ತರಗತಿಯವರೆಗೆ ಹಿಂದಿಯನ್ನು ಕಡ್ಡಾಯಗೊಳಿಸುವ ಕ್ರಮದ ವಿರುದ್ಧ ಪ್ರತಿಭಟನೆ ನಡೆಸಿವೆ. ಮಿಜೋರಾಂ ಸರ್ಕಾರವು ಪ್ರಸ್ತಾವನೆಗೆ ಇನ್ನೂ ಒಪ್ಪಿಗೆ ನೀಡಿಲ್ಲ ಎಂದು ಹೇಳಿದೆ. ನಾಗಲ್ಯಾಂಡ್‌‌ ಸರ್ಕಾರವು ಈ ನೀತಿಯನ್ನು ಜಾರಿಗೆ ತರಲು ಒಕ್ಕೂಟ ಸರ್ಕಾರ ಇನ್ನೂ ಔಪಚಾರಿಕ ಸೂಚನೆಗಳನ್ನು ನೀಡಿಲ್ಲ ಎಂದು ಬೆಟ್ಟು ಮಾಡಿದೆ.

ಈಶಾನ್ಯ ಪ್ರದೇಶದ ಏಳು ರಾಜ್ಯಗಳನ್ನು ಪ್ರತಿನಿಧಿಸುವ ಎಂಟು ಪ್ರಮುಖ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟವಾದ ‘ಈಶಾನ್ಯ ವಿದ್ಯಾರ್ಥಿಗಳ ಸಂಘಟನೆ’ಯು ಶಾ ಅವರನ್ನು ಉದ್ದೇಶಿಸಿ ಬರೆದ ಪತ್ರದಲ್ಲಿ, “ಈಶಾನ್ಯ ಪ್ರದೇಶದಲ್ಲಿ ಹಿಂದಿಯನ್ನು ಕಡ್ಡಾಯ ವಿಷಯವಾಗಿ ಹೇರುವುದು ಸ್ಥಳೀಯ ಭಾಷೆಗಳ ಪ್ರಚಾರ ಮತ್ತು ಪ್ರಸರಣಕ್ಕೆ ಹಾನಿಕಾರಕವಾಗಿದೆ. ಮಾತ್ರವಲ್ಲದೆ ತಮ್ಮ ಈಗಾಗಲೇ ವಿಶಾಲವಾದ ಪಠ್ಯಕ್ರಮಕ್ಕೆ ಮತ್ತೊಂದು ಕಡ್ಡಾಯ ವಿಷಯವನ್ನು ಸೇರಿಸಲು ಒತ್ತಾಯಿಸಲ್ಪಡುವುದು ವಿದ್ಯಾರ್ಥಿಗಳಿಗೂ ತೊಂದರೆ ಮಾಡುತ್ತದೆ” ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...