Homeರಾಷ್ಟ್ರೀಯ10ನೇ ತರಗತಿವರೆಗೆ ಹಿಂದಿ ಕಡ್ಡಾಯಕ್ಕೆ ಅಮಿತ್ ಶಾ ಪ್ರಸ್ತಾಪ: ಪ್ರತಿಭಟನೆ ಎಚ್ಚರಿಕೆ ನೀಡಿದ ಅಸ್ಸಾಂ ವಿದ್ಯಾರ್ಥಿಗಳು

10ನೇ ತರಗತಿವರೆಗೆ ಹಿಂದಿ ಕಡ್ಡಾಯಕ್ಕೆ ಅಮಿತ್ ಶಾ ಪ್ರಸ್ತಾಪ: ಪ್ರತಿಭಟನೆ ಎಚ್ಚರಿಕೆ ನೀಡಿದ ಅಸ್ಸಾಂ ವಿದ್ಯಾರ್ಥಿಗಳು

- Advertisement -
- Advertisement -

ಅಸ್ಸಾಂನಲ್ಲಿ 10 ನೇ ತರಗತಿಯವರೆಗೆ ಹಿಂದಿಯನ್ನು ಕಡ್ಡಾಯಗೊಳಿಸುವ ಪ್ರಸ್ತಾವನೆಯನ್ನು ಒಕ್ಕೂಟ ಸರ್ರಕಾವು ಮುಂದಿಟ್ಟರೆ ಹಿಂದಿ ಹೇರಿಕೆಯ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ‘ಆಲ್‌ ಅಸ್ಸಾಂ ಸ್ಟೂಡಂಟ್‌ ಯುನಿಯನ್‌’ನ ಅಧ್ಯಕ್ಷ ದೀಪಂಕ ಕುಮಾರ್ ನಾಥ್ ಎಚ್ಚರಿಸಿದ್ದಾರೆ.

ಏಪ್ರಿಲ್ 7 ರಂದು ಸಂಸತ್ತಿನ ಅಧಿಕೃತ ಭಾಷಾ ಸಮಿತಿಯ ಅಧ್ಯಕ್ಷತೆ ವಹಿಸಿದ್ದ ಗೃಹ ಸಚಿವ ಅಮಿತ್ ಶಾ, ವಿವಿಧ ಭಾಷಾ ಸಮುದಾಯಗಳ ನಡುವೆ ಕೊಂಡಿಯಾಗಿ ಹಿಂದಿ ಭಾಷೆ ಇರಬೇಕು, ಇಂಗ್ಲಿಷ್ ಅಲ್ಲ ಎಂದು ಹೇಳಿದ್ದರು. ಈಶಾನ್ಯ ರಾಜ್ಯಗಳಲ್ಲಿ 10 ನೇ ತರಗತಿಯವರೆಗೆ ಹಿಂದಿಯನ್ನು ಕಡ್ಡಾಯಗೊಳಿಸಬೇಕು ಮತ್ತು ಈ ರಾಜ್ಯಗಳ ಒಂಬತ್ತು ಬುಡಕಟ್ಟು ಸಮುದಾಯಗಳು ಈಗಾಗಲೇ ದೇವನಾಗರಿ ಲಿಪಿಗೆ ಬದಲಾಗಿವೆ ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗೃಹ ಸಚಿವರ ಈ ಹೇಳಿಕೆಗೆ ಅಸ್ಸಾಂ ಹಲವು ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. “10 ನೇ ತರಗತಿಯವರೆಗೆ ಹಿಂದಿಯನ್ನು ಕಡ್ಡಾಯಗೊಳಿಸುವ ಪ್ರಸ್ತಾವನೆಯು ಈ ಪ್ರದೇಶದಲ್ಲಿನ ‘ಸ್ಥಳೀಯ ಭಾಷೆಗಳ’ ಭವಿಷ್ಯಕ್ಕೆ ಬೆದರಿಕೆಯನ್ನುಂಟು ಮಾಡುತ್ತದೆ” ಎಂದು ‘ಆಲ್‌ ಅಸ್ಸಾಂ ಸ್ಟೂಡಂಟ್‌ ಯುನಿಯನ್‌’ನ ಸಲಹೆಗಾರ ಸಮುಜ್ಜಲ್ ಭಟ್ಟಾಚಾರ್ಯ ಅವರು ಟ್ವೀಟ್ ಮಾಡಿದ್ದಾರೆ.

ಆಡಳಿತಾರೂಢ ಬಿಜೆಪಿಯ ‘ರಾಜಕೀಯ ಹಿತಾಸಕ್ತಿ’ ಯಿಂದ ಈ ಪ್ರಸ್ತಾಪವನ್ನು ನಡೆಸಲಾಗಿದೆ. ಪಕ್ಷವು ಉತ್ತರದ ರಾಜ್ಯಗಳ ಹಿಂದಿ ಬೆಲ್ಟ್ ಅನ್ನು ಪ್ರಭಾವಿಸಲು ಪ್ರಯತ್ನಿಸುತ್ತಿದೆ ಎಂದು ದೀಪಂಕ ಕುಮಾರ್ ನಾಥ್ ಹೇಳಿದ್ದಾರೆ.

ಇದನ್ನೂ ಓದಿ: ‘ಹಿಂದಿ ಹೇರಿಕೆಗೆ ಅವಕಾಶ ನೀಡುವುದಿಲ್ಲ’: ಅಮಿತ್‌ ಶಾ ಹೇಳಿಕೆ ವಿರುದ್ದ ತಮಿಳುನಾಡು BJP ಅಧ್ಯಕ್ಷ ಅಣ್ಣಾಮಲೈ

ಈ ಎಲ್ಲಾ ಹಿನ್ನಲೆಯಲ್ಲಿ, ಅಸ್ಸಾಮಿ ಉಪರಾಷ್ಟ್ರೀಯತೆಯ ಘೋಷಣೆಯನ್ನು ಪಠಿಸುತ್ತಾ ಅಧಿಕಾರಕ್ಕೆ ಬಂದ ಅಸ್ಸಾಂನ ಬಿಜೆಪಿ ಸರ್ಕಾರವು ಈಗ ಸಂಕಷ್ಟದಲ್ಲಿದೆ.

ಆದರೆ ಬಿಜೆಪಿಯ ಕೇಂದ್ರ ನಾಯಕತ್ವದ ಜೊತೆಗೆ ಆತ್ಮೀಯ ಸಂಬಂಧ ಹೊಂದಿದ್ದಾರೆ ಎಂದು ನಂಬಲಾಗಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಈ ಅಸಮತೋಲನವನ್ನು ಸರಿಪಡಿಸಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ. 10ನೇ ತರಗತಿವರೆಗೆ ಹಿಂದಿಯನ್ನು ಕಡ್ಡಾಯಗೊಳಿಸಲು ಒಕ್ಕೂಟ ಸರ್ಕಾರದ ಆದೇಶ ಇನ್ನೂ ಬಂದಿಲ್ಲ ಎಂದು ಅವರು ಹೇಳಿದ್ದಾರೆ.

“ಅಮಿತ್ ಶಾ ಅವರು ಮಕ್ಕಳಿಗೆ ಹಿಂದಿ ತಿಳಿದಿರಬೇಕು ಎಂದು ಹೇಳಿದ್ದಾರೆ. ಜೊತೆಗೆ ಮಕ್ಕಳು ಹಿಂದಿ ಮತ್ತು ಇಂಗ್ಲಿಷ್ ತಿಳಿಯಬೇಕೆಂದು ನಾವು ಬಯಸುತ್ತೇವೆ. ಆದರೆ ಹಿಂದಿ ಕಲಿಯಲು ಬೇಕಾಗಿ ಅಸ್ಸಾಮಿ ಕಲಿಯುವುದನ್ನು ಬಿಡಬೇಕು ಎಂದು ಅವರು ಹೇಳಿಲ್ಲ” ಎಂದು ಹಿಮಾಂತ ಅವರು ತರ್ಕಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಪ್ರತಿಪಾದಿಸಲಾದ ಮೂರು ಭಾಷೆಯ ಸೂತ್ರದ ಬದಲಿಗೆ ನಾಲ್ಕು ಭಾಷೆಗಳನ್ನು ಪರಿಚಯಿಸುವುದು ಸಮಸ್ಯೆಗೆ ಪರಿಹಾರವಾಗಿದೆ ಎಂದು ಹಿಮಾಂತ ಅವರ ಅಭಿಪ್ರಾಯವಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯ ಅಡಿಯಲ್ಲಿ, ರಾಜ್ಯಗಳು, ಪ್ರದೇಶಗಳು ಮತ್ತು ವೈಯಕ್ತಿಕವಾಗಿ ವಿದ್ಯಾರ್ಥಿಗಳು ತಾವು ಯಾವುದಾದರೂ ಮೂರು ಭಾಷೆಗಳನ್ನು ಕಲಿಯಲು ನಿರ್ಧರಿಸಬಹುದು. ಆದರೆ ಇವುಗಳಲ್ಲಿ ಕನಿಷ್ಠ ಎರಡು ಭಾಷೆಗಳು ‘ಭಾರತದ ಸ್ಥಳೀಯ ಭಾಷೆ’ ಆಗಿರಬೇಕು.

ಇದನ್ನೂ ಓದಿ: ಮಣಿಪುರ: ಹಿಂದಿ ಹೇರಿಕೆ ಖಂಡಿಸಿ ಶಾರನ್ನು ಟೀಕಿಸಿದ್ದಕ್ಕೆ ಕಾಂಗ್ರೆಸ್‌ ವಕ್ತಾರನ ಮೇಲೆ ದೇಶದ್ರೋಹ ಪ್ರಕರಣ ದಾಖಲು

ಈ ನಡುವೆ ಅಸ್ಸಾಂ ಮಾತ್ರವಲ್ಲದೆ, ಇತರ ರಾಜ್ಯಗಳು ಕೂಡಾ 10 ನೇ ತರಗತಿಯವರೆಗೆ ಹಿಂದಿಯನ್ನು ಕಡ್ಡಾಯಗೊಳಿಸುವ ಕ್ರಮದ ವಿರುದ್ಧ ಪ್ರತಿಭಟನೆ ನಡೆಸಿವೆ. ಮಿಜೋರಾಂ ಸರ್ಕಾರವು ಪ್ರಸ್ತಾವನೆಗೆ ಇನ್ನೂ ಒಪ್ಪಿಗೆ ನೀಡಿಲ್ಲ ಎಂದು ಹೇಳಿದೆ. ನಾಗಲ್ಯಾಂಡ್‌‌ ಸರ್ಕಾರವು ಈ ನೀತಿಯನ್ನು ಜಾರಿಗೆ ತರಲು ಒಕ್ಕೂಟ ಸರ್ಕಾರ ಇನ್ನೂ ಔಪಚಾರಿಕ ಸೂಚನೆಗಳನ್ನು ನೀಡಿಲ್ಲ ಎಂದು ಬೆಟ್ಟು ಮಾಡಿದೆ.

ಈಶಾನ್ಯ ಪ್ರದೇಶದ ಏಳು ರಾಜ್ಯಗಳನ್ನು ಪ್ರತಿನಿಧಿಸುವ ಎಂಟು ಪ್ರಮುಖ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟವಾದ ‘ಈಶಾನ್ಯ ವಿದ್ಯಾರ್ಥಿಗಳ ಸಂಘಟನೆ’ಯು ಶಾ ಅವರನ್ನು ಉದ್ದೇಶಿಸಿ ಬರೆದ ಪತ್ರದಲ್ಲಿ, “ಈಶಾನ್ಯ ಪ್ರದೇಶದಲ್ಲಿ ಹಿಂದಿಯನ್ನು ಕಡ್ಡಾಯ ವಿಷಯವಾಗಿ ಹೇರುವುದು ಸ್ಥಳೀಯ ಭಾಷೆಗಳ ಪ್ರಚಾರ ಮತ್ತು ಪ್ರಸರಣಕ್ಕೆ ಹಾನಿಕಾರಕವಾಗಿದೆ. ಮಾತ್ರವಲ್ಲದೆ ತಮ್ಮ ಈಗಾಗಲೇ ವಿಶಾಲವಾದ ಪಠ್ಯಕ್ರಮಕ್ಕೆ ಮತ್ತೊಂದು ಕಡ್ಡಾಯ ವಿಷಯವನ್ನು ಸೇರಿಸಲು ಒತ್ತಾಯಿಸಲ್ಪಡುವುದು ವಿದ್ಯಾರ್ಥಿಗಳಿಗೂ ತೊಂದರೆ ಮಾಡುತ್ತದೆ” ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...