Homeರಾಷ್ಟ್ರೀಯ10ನೇ ತರಗತಿವರೆಗೆ ಹಿಂದಿ ಕಡ್ಡಾಯಕ್ಕೆ ಅಮಿತ್ ಶಾ ಪ್ರಸ್ತಾಪ: ಪ್ರತಿಭಟನೆ ಎಚ್ಚರಿಕೆ ನೀಡಿದ ಅಸ್ಸಾಂ ವಿದ್ಯಾರ್ಥಿಗಳು

10ನೇ ತರಗತಿವರೆಗೆ ಹಿಂದಿ ಕಡ್ಡಾಯಕ್ಕೆ ಅಮಿತ್ ಶಾ ಪ್ರಸ್ತಾಪ: ಪ್ರತಿಭಟನೆ ಎಚ್ಚರಿಕೆ ನೀಡಿದ ಅಸ್ಸಾಂ ವಿದ್ಯಾರ್ಥಿಗಳು

- Advertisement -
- Advertisement -

ಅಸ್ಸಾಂನಲ್ಲಿ 10 ನೇ ತರಗತಿಯವರೆಗೆ ಹಿಂದಿಯನ್ನು ಕಡ್ಡಾಯಗೊಳಿಸುವ ಪ್ರಸ್ತಾವನೆಯನ್ನು ಒಕ್ಕೂಟ ಸರ್ರಕಾವು ಮುಂದಿಟ್ಟರೆ ಹಿಂದಿ ಹೇರಿಕೆಯ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ‘ಆಲ್‌ ಅಸ್ಸಾಂ ಸ್ಟೂಡಂಟ್‌ ಯುನಿಯನ್‌’ನ ಅಧ್ಯಕ್ಷ ದೀಪಂಕ ಕುಮಾರ್ ನಾಥ್ ಎಚ್ಚರಿಸಿದ್ದಾರೆ.

ಏಪ್ರಿಲ್ 7 ರಂದು ಸಂಸತ್ತಿನ ಅಧಿಕೃತ ಭಾಷಾ ಸಮಿತಿಯ ಅಧ್ಯಕ್ಷತೆ ವಹಿಸಿದ್ದ ಗೃಹ ಸಚಿವ ಅಮಿತ್ ಶಾ, ವಿವಿಧ ಭಾಷಾ ಸಮುದಾಯಗಳ ನಡುವೆ ಕೊಂಡಿಯಾಗಿ ಹಿಂದಿ ಭಾಷೆ ಇರಬೇಕು, ಇಂಗ್ಲಿಷ್ ಅಲ್ಲ ಎಂದು ಹೇಳಿದ್ದರು. ಈಶಾನ್ಯ ರಾಜ್ಯಗಳಲ್ಲಿ 10 ನೇ ತರಗತಿಯವರೆಗೆ ಹಿಂದಿಯನ್ನು ಕಡ್ಡಾಯಗೊಳಿಸಬೇಕು ಮತ್ತು ಈ ರಾಜ್ಯಗಳ ಒಂಬತ್ತು ಬುಡಕಟ್ಟು ಸಮುದಾಯಗಳು ಈಗಾಗಲೇ ದೇವನಾಗರಿ ಲಿಪಿಗೆ ಬದಲಾಗಿವೆ ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗೃಹ ಸಚಿವರ ಈ ಹೇಳಿಕೆಗೆ ಅಸ್ಸಾಂ ಹಲವು ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. “10 ನೇ ತರಗತಿಯವರೆಗೆ ಹಿಂದಿಯನ್ನು ಕಡ್ಡಾಯಗೊಳಿಸುವ ಪ್ರಸ್ತಾವನೆಯು ಈ ಪ್ರದೇಶದಲ್ಲಿನ ‘ಸ್ಥಳೀಯ ಭಾಷೆಗಳ’ ಭವಿಷ್ಯಕ್ಕೆ ಬೆದರಿಕೆಯನ್ನುಂಟು ಮಾಡುತ್ತದೆ” ಎಂದು ‘ಆಲ್‌ ಅಸ್ಸಾಂ ಸ್ಟೂಡಂಟ್‌ ಯುನಿಯನ್‌’ನ ಸಲಹೆಗಾರ ಸಮುಜ್ಜಲ್ ಭಟ್ಟಾಚಾರ್ಯ ಅವರು ಟ್ವೀಟ್ ಮಾಡಿದ್ದಾರೆ.

ಆಡಳಿತಾರೂಢ ಬಿಜೆಪಿಯ ‘ರಾಜಕೀಯ ಹಿತಾಸಕ್ತಿ’ ಯಿಂದ ಈ ಪ್ರಸ್ತಾಪವನ್ನು ನಡೆಸಲಾಗಿದೆ. ಪಕ್ಷವು ಉತ್ತರದ ರಾಜ್ಯಗಳ ಹಿಂದಿ ಬೆಲ್ಟ್ ಅನ್ನು ಪ್ರಭಾವಿಸಲು ಪ್ರಯತ್ನಿಸುತ್ತಿದೆ ಎಂದು ದೀಪಂಕ ಕುಮಾರ್ ನಾಥ್ ಹೇಳಿದ್ದಾರೆ.

ಇದನ್ನೂ ಓದಿ: ‘ಹಿಂದಿ ಹೇರಿಕೆಗೆ ಅವಕಾಶ ನೀಡುವುದಿಲ್ಲ’: ಅಮಿತ್‌ ಶಾ ಹೇಳಿಕೆ ವಿರುದ್ದ ತಮಿಳುನಾಡು BJP ಅಧ್ಯಕ್ಷ ಅಣ್ಣಾಮಲೈ

ಈ ಎಲ್ಲಾ ಹಿನ್ನಲೆಯಲ್ಲಿ, ಅಸ್ಸಾಮಿ ಉಪರಾಷ್ಟ್ರೀಯತೆಯ ಘೋಷಣೆಯನ್ನು ಪಠಿಸುತ್ತಾ ಅಧಿಕಾರಕ್ಕೆ ಬಂದ ಅಸ್ಸಾಂನ ಬಿಜೆಪಿ ಸರ್ಕಾರವು ಈಗ ಸಂಕಷ್ಟದಲ್ಲಿದೆ.

ಆದರೆ ಬಿಜೆಪಿಯ ಕೇಂದ್ರ ನಾಯಕತ್ವದ ಜೊತೆಗೆ ಆತ್ಮೀಯ ಸಂಬಂಧ ಹೊಂದಿದ್ದಾರೆ ಎಂದು ನಂಬಲಾಗಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಈ ಅಸಮತೋಲನವನ್ನು ಸರಿಪಡಿಸಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ. 10ನೇ ತರಗತಿವರೆಗೆ ಹಿಂದಿಯನ್ನು ಕಡ್ಡಾಯಗೊಳಿಸಲು ಒಕ್ಕೂಟ ಸರ್ಕಾರದ ಆದೇಶ ಇನ್ನೂ ಬಂದಿಲ್ಲ ಎಂದು ಅವರು ಹೇಳಿದ್ದಾರೆ.

“ಅಮಿತ್ ಶಾ ಅವರು ಮಕ್ಕಳಿಗೆ ಹಿಂದಿ ತಿಳಿದಿರಬೇಕು ಎಂದು ಹೇಳಿದ್ದಾರೆ. ಜೊತೆಗೆ ಮಕ್ಕಳು ಹಿಂದಿ ಮತ್ತು ಇಂಗ್ಲಿಷ್ ತಿಳಿಯಬೇಕೆಂದು ನಾವು ಬಯಸುತ್ತೇವೆ. ಆದರೆ ಹಿಂದಿ ಕಲಿಯಲು ಬೇಕಾಗಿ ಅಸ್ಸಾಮಿ ಕಲಿಯುವುದನ್ನು ಬಿಡಬೇಕು ಎಂದು ಅವರು ಹೇಳಿಲ್ಲ” ಎಂದು ಹಿಮಾಂತ ಅವರು ತರ್ಕಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಪ್ರತಿಪಾದಿಸಲಾದ ಮೂರು ಭಾಷೆಯ ಸೂತ್ರದ ಬದಲಿಗೆ ನಾಲ್ಕು ಭಾಷೆಗಳನ್ನು ಪರಿಚಯಿಸುವುದು ಸಮಸ್ಯೆಗೆ ಪರಿಹಾರವಾಗಿದೆ ಎಂದು ಹಿಮಾಂತ ಅವರ ಅಭಿಪ್ರಾಯವಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯ ಅಡಿಯಲ್ಲಿ, ರಾಜ್ಯಗಳು, ಪ್ರದೇಶಗಳು ಮತ್ತು ವೈಯಕ್ತಿಕವಾಗಿ ವಿದ್ಯಾರ್ಥಿಗಳು ತಾವು ಯಾವುದಾದರೂ ಮೂರು ಭಾಷೆಗಳನ್ನು ಕಲಿಯಲು ನಿರ್ಧರಿಸಬಹುದು. ಆದರೆ ಇವುಗಳಲ್ಲಿ ಕನಿಷ್ಠ ಎರಡು ಭಾಷೆಗಳು ‘ಭಾರತದ ಸ್ಥಳೀಯ ಭಾಷೆ’ ಆಗಿರಬೇಕು.

ಇದನ್ನೂ ಓದಿ: ಮಣಿಪುರ: ಹಿಂದಿ ಹೇರಿಕೆ ಖಂಡಿಸಿ ಶಾರನ್ನು ಟೀಕಿಸಿದ್ದಕ್ಕೆ ಕಾಂಗ್ರೆಸ್‌ ವಕ್ತಾರನ ಮೇಲೆ ದೇಶದ್ರೋಹ ಪ್ರಕರಣ ದಾಖಲು

ಈ ನಡುವೆ ಅಸ್ಸಾಂ ಮಾತ್ರವಲ್ಲದೆ, ಇತರ ರಾಜ್ಯಗಳು ಕೂಡಾ 10 ನೇ ತರಗತಿಯವರೆಗೆ ಹಿಂದಿಯನ್ನು ಕಡ್ಡಾಯಗೊಳಿಸುವ ಕ್ರಮದ ವಿರುದ್ಧ ಪ್ರತಿಭಟನೆ ನಡೆಸಿವೆ. ಮಿಜೋರಾಂ ಸರ್ಕಾರವು ಪ್ರಸ್ತಾವನೆಗೆ ಇನ್ನೂ ಒಪ್ಪಿಗೆ ನೀಡಿಲ್ಲ ಎಂದು ಹೇಳಿದೆ. ನಾಗಲ್ಯಾಂಡ್‌‌ ಸರ್ಕಾರವು ಈ ನೀತಿಯನ್ನು ಜಾರಿಗೆ ತರಲು ಒಕ್ಕೂಟ ಸರ್ಕಾರ ಇನ್ನೂ ಔಪಚಾರಿಕ ಸೂಚನೆಗಳನ್ನು ನೀಡಿಲ್ಲ ಎಂದು ಬೆಟ್ಟು ಮಾಡಿದೆ.

ಈಶಾನ್ಯ ಪ್ರದೇಶದ ಏಳು ರಾಜ್ಯಗಳನ್ನು ಪ್ರತಿನಿಧಿಸುವ ಎಂಟು ಪ್ರಮುಖ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟವಾದ ‘ಈಶಾನ್ಯ ವಿದ್ಯಾರ್ಥಿಗಳ ಸಂಘಟನೆ’ಯು ಶಾ ಅವರನ್ನು ಉದ್ದೇಶಿಸಿ ಬರೆದ ಪತ್ರದಲ್ಲಿ, “ಈಶಾನ್ಯ ಪ್ರದೇಶದಲ್ಲಿ ಹಿಂದಿಯನ್ನು ಕಡ್ಡಾಯ ವಿಷಯವಾಗಿ ಹೇರುವುದು ಸ್ಥಳೀಯ ಭಾಷೆಗಳ ಪ್ರಚಾರ ಮತ್ತು ಪ್ರಸರಣಕ್ಕೆ ಹಾನಿಕಾರಕವಾಗಿದೆ. ಮಾತ್ರವಲ್ಲದೆ ತಮ್ಮ ಈಗಾಗಲೇ ವಿಶಾಲವಾದ ಪಠ್ಯಕ್ರಮಕ್ಕೆ ಮತ್ತೊಂದು ಕಡ್ಡಾಯ ವಿಷಯವನ್ನು ಸೇರಿಸಲು ಒತ್ತಾಯಿಸಲ್ಪಡುವುದು ವಿದ್ಯಾರ್ಥಿಗಳಿಗೂ ತೊಂದರೆ ಮಾಡುತ್ತದೆ” ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...