Homeರಾಷ್ಟ್ರೀಯ10ನೇ ತರಗತಿವರೆಗೆ ಹಿಂದಿ ಕಡ್ಡಾಯಕ್ಕೆ ಅಮಿತ್ ಶಾ ಪ್ರಸ್ತಾಪ: ಪ್ರತಿಭಟನೆ ಎಚ್ಚರಿಕೆ ನೀಡಿದ ಅಸ್ಸಾಂ ವಿದ್ಯಾರ್ಥಿಗಳು

10ನೇ ತರಗತಿವರೆಗೆ ಹಿಂದಿ ಕಡ್ಡಾಯಕ್ಕೆ ಅಮಿತ್ ಶಾ ಪ್ರಸ್ತಾಪ: ಪ್ರತಿಭಟನೆ ಎಚ್ಚರಿಕೆ ನೀಡಿದ ಅಸ್ಸಾಂ ವಿದ್ಯಾರ್ಥಿಗಳು

- Advertisement -
- Advertisement -

ಅಸ್ಸಾಂನಲ್ಲಿ 10 ನೇ ತರಗತಿಯವರೆಗೆ ಹಿಂದಿಯನ್ನು ಕಡ್ಡಾಯಗೊಳಿಸುವ ಪ್ರಸ್ತಾವನೆಯನ್ನು ಒಕ್ಕೂಟ ಸರ್ರಕಾವು ಮುಂದಿಟ್ಟರೆ ಹಿಂದಿ ಹೇರಿಕೆಯ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ‘ಆಲ್‌ ಅಸ್ಸಾಂ ಸ್ಟೂಡಂಟ್‌ ಯುನಿಯನ್‌’ನ ಅಧ್ಯಕ್ಷ ದೀಪಂಕ ಕುಮಾರ್ ನಾಥ್ ಎಚ್ಚರಿಸಿದ್ದಾರೆ.

ಏಪ್ರಿಲ್ 7 ರಂದು ಸಂಸತ್ತಿನ ಅಧಿಕೃತ ಭಾಷಾ ಸಮಿತಿಯ ಅಧ್ಯಕ್ಷತೆ ವಹಿಸಿದ್ದ ಗೃಹ ಸಚಿವ ಅಮಿತ್ ಶಾ, ವಿವಿಧ ಭಾಷಾ ಸಮುದಾಯಗಳ ನಡುವೆ ಕೊಂಡಿಯಾಗಿ ಹಿಂದಿ ಭಾಷೆ ಇರಬೇಕು, ಇಂಗ್ಲಿಷ್ ಅಲ್ಲ ಎಂದು ಹೇಳಿದ್ದರು. ಈಶಾನ್ಯ ರಾಜ್ಯಗಳಲ್ಲಿ 10 ನೇ ತರಗತಿಯವರೆಗೆ ಹಿಂದಿಯನ್ನು ಕಡ್ಡಾಯಗೊಳಿಸಬೇಕು ಮತ್ತು ಈ ರಾಜ್ಯಗಳ ಒಂಬತ್ತು ಬುಡಕಟ್ಟು ಸಮುದಾಯಗಳು ಈಗಾಗಲೇ ದೇವನಾಗರಿ ಲಿಪಿಗೆ ಬದಲಾಗಿವೆ ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗೃಹ ಸಚಿವರ ಈ ಹೇಳಿಕೆಗೆ ಅಸ್ಸಾಂ ಹಲವು ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. “10 ನೇ ತರಗತಿಯವರೆಗೆ ಹಿಂದಿಯನ್ನು ಕಡ್ಡಾಯಗೊಳಿಸುವ ಪ್ರಸ್ತಾವನೆಯು ಈ ಪ್ರದೇಶದಲ್ಲಿನ ‘ಸ್ಥಳೀಯ ಭಾಷೆಗಳ’ ಭವಿಷ್ಯಕ್ಕೆ ಬೆದರಿಕೆಯನ್ನುಂಟು ಮಾಡುತ್ತದೆ” ಎಂದು ‘ಆಲ್‌ ಅಸ್ಸಾಂ ಸ್ಟೂಡಂಟ್‌ ಯುನಿಯನ್‌’ನ ಸಲಹೆಗಾರ ಸಮುಜ್ಜಲ್ ಭಟ್ಟಾಚಾರ್ಯ ಅವರು ಟ್ವೀಟ್ ಮಾಡಿದ್ದಾರೆ.

ಆಡಳಿತಾರೂಢ ಬಿಜೆಪಿಯ ‘ರಾಜಕೀಯ ಹಿತಾಸಕ್ತಿ’ ಯಿಂದ ಈ ಪ್ರಸ್ತಾಪವನ್ನು ನಡೆಸಲಾಗಿದೆ. ಪಕ್ಷವು ಉತ್ತರದ ರಾಜ್ಯಗಳ ಹಿಂದಿ ಬೆಲ್ಟ್ ಅನ್ನು ಪ್ರಭಾವಿಸಲು ಪ್ರಯತ್ನಿಸುತ್ತಿದೆ ಎಂದು ದೀಪಂಕ ಕುಮಾರ್ ನಾಥ್ ಹೇಳಿದ್ದಾರೆ.

ಇದನ್ನೂ ಓದಿ: ‘ಹಿಂದಿ ಹೇರಿಕೆಗೆ ಅವಕಾಶ ನೀಡುವುದಿಲ್ಲ’: ಅಮಿತ್‌ ಶಾ ಹೇಳಿಕೆ ವಿರುದ್ದ ತಮಿಳುನಾಡು BJP ಅಧ್ಯಕ್ಷ ಅಣ್ಣಾಮಲೈ

ಈ ಎಲ್ಲಾ ಹಿನ್ನಲೆಯಲ್ಲಿ, ಅಸ್ಸಾಮಿ ಉಪರಾಷ್ಟ್ರೀಯತೆಯ ಘೋಷಣೆಯನ್ನು ಪಠಿಸುತ್ತಾ ಅಧಿಕಾರಕ್ಕೆ ಬಂದ ಅಸ್ಸಾಂನ ಬಿಜೆಪಿ ಸರ್ಕಾರವು ಈಗ ಸಂಕಷ್ಟದಲ್ಲಿದೆ.

ಆದರೆ ಬಿಜೆಪಿಯ ಕೇಂದ್ರ ನಾಯಕತ್ವದ ಜೊತೆಗೆ ಆತ್ಮೀಯ ಸಂಬಂಧ ಹೊಂದಿದ್ದಾರೆ ಎಂದು ನಂಬಲಾಗಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಈ ಅಸಮತೋಲನವನ್ನು ಸರಿಪಡಿಸಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ. 10ನೇ ತರಗತಿವರೆಗೆ ಹಿಂದಿಯನ್ನು ಕಡ್ಡಾಯಗೊಳಿಸಲು ಒಕ್ಕೂಟ ಸರ್ಕಾರದ ಆದೇಶ ಇನ್ನೂ ಬಂದಿಲ್ಲ ಎಂದು ಅವರು ಹೇಳಿದ್ದಾರೆ.

“ಅಮಿತ್ ಶಾ ಅವರು ಮಕ್ಕಳಿಗೆ ಹಿಂದಿ ತಿಳಿದಿರಬೇಕು ಎಂದು ಹೇಳಿದ್ದಾರೆ. ಜೊತೆಗೆ ಮಕ್ಕಳು ಹಿಂದಿ ಮತ್ತು ಇಂಗ್ಲಿಷ್ ತಿಳಿಯಬೇಕೆಂದು ನಾವು ಬಯಸುತ್ತೇವೆ. ಆದರೆ ಹಿಂದಿ ಕಲಿಯಲು ಬೇಕಾಗಿ ಅಸ್ಸಾಮಿ ಕಲಿಯುವುದನ್ನು ಬಿಡಬೇಕು ಎಂದು ಅವರು ಹೇಳಿಲ್ಲ” ಎಂದು ಹಿಮಾಂತ ಅವರು ತರ್ಕಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಪ್ರತಿಪಾದಿಸಲಾದ ಮೂರು ಭಾಷೆಯ ಸೂತ್ರದ ಬದಲಿಗೆ ನಾಲ್ಕು ಭಾಷೆಗಳನ್ನು ಪರಿಚಯಿಸುವುದು ಸಮಸ್ಯೆಗೆ ಪರಿಹಾರವಾಗಿದೆ ಎಂದು ಹಿಮಾಂತ ಅವರ ಅಭಿಪ್ರಾಯವಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯ ಅಡಿಯಲ್ಲಿ, ರಾಜ್ಯಗಳು, ಪ್ರದೇಶಗಳು ಮತ್ತು ವೈಯಕ್ತಿಕವಾಗಿ ವಿದ್ಯಾರ್ಥಿಗಳು ತಾವು ಯಾವುದಾದರೂ ಮೂರು ಭಾಷೆಗಳನ್ನು ಕಲಿಯಲು ನಿರ್ಧರಿಸಬಹುದು. ಆದರೆ ಇವುಗಳಲ್ಲಿ ಕನಿಷ್ಠ ಎರಡು ಭಾಷೆಗಳು ‘ಭಾರತದ ಸ್ಥಳೀಯ ಭಾಷೆ’ ಆಗಿರಬೇಕು.

ಇದನ್ನೂ ಓದಿ: ಮಣಿಪುರ: ಹಿಂದಿ ಹೇರಿಕೆ ಖಂಡಿಸಿ ಶಾರನ್ನು ಟೀಕಿಸಿದ್ದಕ್ಕೆ ಕಾಂಗ್ರೆಸ್‌ ವಕ್ತಾರನ ಮೇಲೆ ದೇಶದ್ರೋಹ ಪ್ರಕರಣ ದಾಖಲು

ಈ ನಡುವೆ ಅಸ್ಸಾಂ ಮಾತ್ರವಲ್ಲದೆ, ಇತರ ರಾಜ್ಯಗಳು ಕೂಡಾ 10 ನೇ ತರಗತಿಯವರೆಗೆ ಹಿಂದಿಯನ್ನು ಕಡ್ಡಾಯಗೊಳಿಸುವ ಕ್ರಮದ ವಿರುದ್ಧ ಪ್ರತಿಭಟನೆ ನಡೆಸಿವೆ. ಮಿಜೋರಾಂ ಸರ್ಕಾರವು ಪ್ರಸ್ತಾವನೆಗೆ ಇನ್ನೂ ಒಪ್ಪಿಗೆ ನೀಡಿಲ್ಲ ಎಂದು ಹೇಳಿದೆ. ನಾಗಲ್ಯಾಂಡ್‌‌ ಸರ್ಕಾರವು ಈ ನೀತಿಯನ್ನು ಜಾರಿಗೆ ತರಲು ಒಕ್ಕೂಟ ಸರ್ಕಾರ ಇನ್ನೂ ಔಪಚಾರಿಕ ಸೂಚನೆಗಳನ್ನು ನೀಡಿಲ್ಲ ಎಂದು ಬೆಟ್ಟು ಮಾಡಿದೆ.

ಈಶಾನ್ಯ ಪ್ರದೇಶದ ಏಳು ರಾಜ್ಯಗಳನ್ನು ಪ್ರತಿನಿಧಿಸುವ ಎಂಟು ಪ್ರಮುಖ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟವಾದ ‘ಈಶಾನ್ಯ ವಿದ್ಯಾರ್ಥಿಗಳ ಸಂಘಟನೆ’ಯು ಶಾ ಅವರನ್ನು ಉದ್ದೇಶಿಸಿ ಬರೆದ ಪತ್ರದಲ್ಲಿ, “ಈಶಾನ್ಯ ಪ್ರದೇಶದಲ್ಲಿ ಹಿಂದಿಯನ್ನು ಕಡ್ಡಾಯ ವಿಷಯವಾಗಿ ಹೇರುವುದು ಸ್ಥಳೀಯ ಭಾಷೆಗಳ ಪ್ರಚಾರ ಮತ್ತು ಪ್ರಸರಣಕ್ಕೆ ಹಾನಿಕಾರಕವಾಗಿದೆ. ಮಾತ್ರವಲ್ಲದೆ ತಮ್ಮ ಈಗಾಗಲೇ ವಿಶಾಲವಾದ ಪಠ್ಯಕ್ರಮಕ್ಕೆ ಮತ್ತೊಂದು ಕಡ್ಡಾಯ ವಿಷಯವನ್ನು ಸೇರಿಸಲು ಒತ್ತಾಯಿಸಲ್ಪಡುವುದು ವಿದ್ಯಾರ್ಥಿಗಳಿಗೂ ತೊಂದರೆ ಮಾಡುತ್ತದೆ” ಎಂದು ಹೇಳಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...