Homeರಾಷ್ಟ್ರೀಯ10ನೇ ತರಗತಿವರೆಗೆ ಹಿಂದಿ ಕಡ್ಡಾಯಕ್ಕೆ ಅಮಿತ್ ಶಾ ಪ್ರಸ್ತಾಪ: ಪ್ರತಿಭಟನೆ ಎಚ್ಚರಿಕೆ ನೀಡಿದ ಅಸ್ಸಾಂ ವಿದ್ಯಾರ್ಥಿಗಳು

10ನೇ ತರಗತಿವರೆಗೆ ಹಿಂದಿ ಕಡ್ಡಾಯಕ್ಕೆ ಅಮಿತ್ ಶಾ ಪ್ರಸ್ತಾಪ: ಪ್ರತಿಭಟನೆ ಎಚ್ಚರಿಕೆ ನೀಡಿದ ಅಸ್ಸಾಂ ವಿದ್ಯಾರ್ಥಿಗಳು

- Advertisement -
- Advertisement -

ಅಸ್ಸಾಂನಲ್ಲಿ 10 ನೇ ತರಗತಿಯವರೆಗೆ ಹಿಂದಿಯನ್ನು ಕಡ್ಡಾಯಗೊಳಿಸುವ ಪ್ರಸ್ತಾವನೆಯನ್ನು ಒಕ್ಕೂಟ ಸರ್ರಕಾವು ಮುಂದಿಟ್ಟರೆ ಹಿಂದಿ ಹೇರಿಕೆಯ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ‘ಆಲ್‌ ಅಸ್ಸಾಂ ಸ್ಟೂಡಂಟ್‌ ಯುನಿಯನ್‌’ನ ಅಧ್ಯಕ್ಷ ದೀಪಂಕ ಕುಮಾರ್ ನಾಥ್ ಎಚ್ಚರಿಸಿದ್ದಾರೆ.

ಏಪ್ರಿಲ್ 7 ರಂದು ಸಂಸತ್ತಿನ ಅಧಿಕೃತ ಭಾಷಾ ಸಮಿತಿಯ ಅಧ್ಯಕ್ಷತೆ ವಹಿಸಿದ್ದ ಗೃಹ ಸಚಿವ ಅಮಿತ್ ಶಾ, ವಿವಿಧ ಭಾಷಾ ಸಮುದಾಯಗಳ ನಡುವೆ ಕೊಂಡಿಯಾಗಿ ಹಿಂದಿ ಭಾಷೆ ಇರಬೇಕು, ಇಂಗ್ಲಿಷ್ ಅಲ್ಲ ಎಂದು ಹೇಳಿದ್ದರು. ಈಶಾನ್ಯ ರಾಜ್ಯಗಳಲ್ಲಿ 10 ನೇ ತರಗತಿಯವರೆಗೆ ಹಿಂದಿಯನ್ನು ಕಡ್ಡಾಯಗೊಳಿಸಬೇಕು ಮತ್ತು ಈ ರಾಜ್ಯಗಳ ಒಂಬತ್ತು ಬುಡಕಟ್ಟು ಸಮುದಾಯಗಳು ಈಗಾಗಲೇ ದೇವನಾಗರಿ ಲಿಪಿಗೆ ಬದಲಾಗಿವೆ ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗೃಹ ಸಚಿವರ ಈ ಹೇಳಿಕೆಗೆ ಅಸ್ಸಾಂ ಹಲವು ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. “10 ನೇ ತರಗತಿಯವರೆಗೆ ಹಿಂದಿಯನ್ನು ಕಡ್ಡಾಯಗೊಳಿಸುವ ಪ್ರಸ್ತಾವನೆಯು ಈ ಪ್ರದೇಶದಲ್ಲಿನ ‘ಸ್ಥಳೀಯ ಭಾಷೆಗಳ’ ಭವಿಷ್ಯಕ್ಕೆ ಬೆದರಿಕೆಯನ್ನುಂಟು ಮಾಡುತ್ತದೆ” ಎಂದು ‘ಆಲ್‌ ಅಸ್ಸಾಂ ಸ್ಟೂಡಂಟ್‌ ಯುನಿಯನ್‌’ನ ಸಲಹೆಗಾರ ಸಮುಜ್ಜಲ್ ಭಟ್ಟಾಚಾರ್ಯ ಅವರು ಟ್ವೀಟ್ ಮಾಡಿದ್ದಾರೆ.

ಆಡಳಿತಾರೂಢ ಬಿಜೆಪಿಯ ‘ರಾಜಕೀಯ ಹಿತಾಸಕ್ತಿ’ ಯಿಂದ ಈ ಪ್ರಸ್ತಾಪವನ್ನು ನಡೆಸಲಾಗಿದೆ. ಪಕ್ಷವು ಉತ್ತರದ ರಾಜ್ಯಗಳ ಹಿಂದಿ ಬೆಲ್ಟ್ ಅನ್ನು ಪ್ರಭಾವಿಸಲು ಪ್ರಯತ್ನಿಸುತ್ತಿದೆ ಎಂದು ದೀಪಂಕ ಕುಮಾರ್ ನಾಥ್ ಹೇಳಿದ್ದಾರೆ.

ಇದನ್ನೂ ಓದಿ: ‘ಹಿಂದಿ ಹೇರಿಕೆಗೆ ಅವಕಾಶ ನೀಡುವುದಿಲ್ಲ’: ಅಮಿತ್‌ ಶಾ ಹೇಳಿಕೆ ವಿರುದ್ದ ತಮಿಳುನಾಡು BJP ಅಧ್ಯಕ್ಷ ಅಣ್ಣಾಮಲೈ

ಈ ಎಲ್ಲಾ ಹಿನ್ನಲೆಯಲ್ಲಿ, ಅಸ್ಸಾಮಿ ಉಪರಾಷ್ಟ್ರೀಯತೆಯ ಘೋಷಣೆಯನ್ನು ಪಠಿಸುತ್ತಾ ಅಧಿಕಾರಕ್ಕೆ ಬಂದ ಅಸ್ಸಾಂನ ಬಿಜೆಪಿ ಸರ್ಕಾರವು ಈಗ ಸಂಕಷ್ಟದಲ್ಲಿದೆ.

ಆದರೆ ಬಿಜೆಪಿಯ ಕೇಂದ್ರ ನಾಯಕತ್ವದ ಜೊತೆಗೆ ಆತ್ಮೀಯ ಸಂಬಂಧ ಹೊಂದಿದ್ದಾರೆ ಎಂದು ನಂಬಲಾಗಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಈ ಅಸಮತೋಲನವನ್ನು ಸರಿಪಡಿಸಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ. 10ನೇ ತರಗತಿವರೆಗೆ ಹಿಂದಿಯನ್ನು ಕಡ್ಡಾಯಗೊಳಿಸಲು ಒಕ್ಕೂಟ ಸರ್ಕಾರದ ಆದೇಶ ಇನ್ನೂ ಬಂದಿಲ್ಲ ಎಂದು ಅವರು ಹೇಳಿದ್ದಾರೆ.

“ಅಮಿತ್ ಶಾ ಅವರು ಮಕ್ಕಳಿಗೆ ಹಿಂದಿ ತಿಳಿದಿರಬೇಕು ಎಂದು ಹೇಳಿದ್ದಾರೆ. ಜೊತೆಗೆ ಮಕ್ಕಳು ಹಿಂದಿ ಮತ್ತು ಇಂಗ್ಲಿಷ್ ತಿಳಿಯಬೇಕೆಂದು ನಾವು ಬಯಸುತ್ತೇವೆ. ಆದರೆ ಹಿಂದಿ ಕಲಿಯಲು ಬೇಕಾಗಿ ಅಸ್ಸಾಮಿ ಕಲಿಯುವುದನ್ನು ಬಿಡಬೇಕು ಎಂದು ಅವರು ಹೇಳಿಲ್ಲ” ಎಂದು ಹಿಮಾಂತ ಅವರು ತರ್ಕಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಪ್ರತಿಪಾದಿಸಲಾದ ಮೂರು ಭಾಷೆಯ ಸೂತ್ರದ ಬದಲಿಗೆ ನಾಲ್ಕು ಭಾಷೆಗಳನ್ನು ಪರಿಚಯಿಸುವುದು ಸಮಸ್ಯೆಗೆ ಪರಿಹಾರವಾಗಿದೆ ಎಂದು ಹಿಮಾಂತ ಅವರ ಅಭಿಪ್ರಾಯವಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯ ಅಡಿಯಲ್ಲಿ, ರಾಜ್ಯಗಳು, ಪ್ರದೇಶಗಳು ಮತ್ತು ವೈಯಕ್ತಿಕವಾಗಿ ವಿದ್ಯಾರ್ಥಿಗಳು ತಾವು ಯಾವುದಾದರೂ ಮೂರು ಭಾಷೆಗಳನ್ನು ಕಲಿಯಲು ನಿರ್ಧರಿಸಬಹುದು. ಆದರೆ ಇವುಗಳಲ್ಲಿ ಕನಿಷ್ಠ ಎರಡು ಭಾಷೆಗಳು ‘ಭಾರತದ ಸ್ಥಳೀಯ ಭಾಷೆ’ ಆಗಿರಬೇಕು.

ಇದನ್ನೂ ಓದಿ: ಮಣಿಪುರ: ಹಿಂದಿ ಹೇರಿಕೆ ಖಂಡಿಸಿ ಶಾರನ್ನು ಟೀಕಿಸಿದ್ದಕ್ಕೆ ಕಾಂಗ್ರೆಸ್‌ ವಕ್ತಾರನ ಮೇಲೆ ದೇಶದ್ರೋಹ ಪ್ರಕರಣ ದಾಖಲು

ಈ ನಡುವೆ ಅಸ್ಸಾಂ ಮಾತ್ರವಲ್ಲದೆ, ಇತರ ರಾಜ್ಯಗಳು ಕೂಡಾ 10 ನೇ ತರಗತಿಯವರೆಗೆ ಹಿಂದಿಯನ್ನು ಕಡ್ಡಾಯಗೊಳಿಸುವ ಕ್ರಮದ ವಿರುದ್ಧ ಪ್ರತಿಭಟನೆ ನಡೆಸಿವೆ. ಮಿಜೋರಾಂ ಸರ್ಕಾರವು ಪ್ರಸ್ತಾವನೆಗೆ ಇನ್ನೂ ಒಪ್ಪಿಗೆ ನೀಡಿಲ್ಲ ಎಂದು ಹೇಳಿದೆ. ನಾಗಲ್ಯಾಂಡ್‌‌ ಸರ್ಕಾರವು ಈ ನೀತಿಯನ್ನು ಜಾರಿಗೆ ತರಲು ಒಕ್ಕೂಟ ಸರ್ಕಾರ ಇನ್ನೂ ಔಪಚಾರಿಕ ಸೂಚನೆಗಳನ್ನು ನೀಡಿಲ್ಲ ಎಂದು ಬೆಟ್ಟು ಮಾಡಿದೆ.

ಈಶಾನ್ಯ ಪ್ರದೇಶದ ಏಳು ರಾಜ್ಯಗಳನ್ನು ಪ್ರತಿನಿಧಿಸುವ ಎಂಟು ಪ್ರಮುಖ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟವಾದ ‘ಈಶಾನ್ಯ ವಿದ್ಯಾರ್ಥಿಗಳ ಸಂಘಟನೆ’ಯು ಶಾ ಅವರನ್ನು ಉದ್ದೇಶಿಸಿ ಬರೆದ ಪತ್ರದಲ್ಲಿ, “ಈಶಾನ್ಯ ಪ್ರದೇಶದಲ್ಲಿ ಹಿಂದಿಯನ್ನು ಕಡ್ಡಾಯ ವಿಷಯವಾಗಿ ಹೇರುವುದು ಸ್ಥಳೀಯ ಭಾಷೆಗಳ ಪ್ರಚಾರ ಮತ್ತು ಪ್ರಸರಣಕ್ಕೆ ಹಾನಿಕಾರಕವಾಗಿದೆ. ಮಾತ್ರವಲ್ಲದೆ ತಮ್ಮ ಈಗಾಗಲೇ ವಿಶಾಲವಾದ ಪಠ್ಯಕ್ರಮಕ್ಕೆ ಮತ್ತೊಂದು ಕಡ್ಡಾಯ ವಿಷಯವನ್ನು ಸೇರಿಸಲು ಒತ್ತಾಯಿಸಲ್ಪಡುವುದು ವಿದ್ಯಾರ್ಥಿಗಳಿಗೂ ತೊಂದರೆ ಮಾಡುತ್ತದೆ” ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...