Homeಕರ್ನಾಟಕ'ಲಿಂಗಾಯತ ಸಿಎಂ' ಪ್ರಸ್ತಾಪ ತಿರಸ್ಕರಿಸಿದ ಅಮಿತ್ ಶಾ

‘ಲಿಂಗಾಯತ ಸಿಎಂ’ ಪ್ರಸ್ತಾಪ ತಿರಸ್ಕರಿಸಿದ ಅಮಿತ್ ಶಾ

- Advertisement -
- Advertisement -

ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ಕಡೆಗಣನೆ ಮಾಡಲಾಗುತ್ತಿದೆ ಎನ್ನುವ ಆರೋಪಗಳು ಕೇಳಿಬಂದ ಹಿನ್ನೆಲೆ ಲಿಂಗಾಯತ ಸಮುದಾಯದ ನಾಯಕನೇ ಮುಂದಿನ ಸಿಎಂ ಆಗುವುದು ಎನ್ನುವ ಪ್ರಸ್ತಾಪವನ್ನು ರಾಜ್ಯ ನಾಯಕರು ಅಮಿತ್ ಶಾ ಮುಂದಿಟ್ಟಿದ್ದರು. ಆದರೆ ಅವರು ಈ ಲಿಂಗಾಯತ ಸಿಎಂ ಪ್ರಸ್ತಾಪವನ್ನೇ ತಿರಸ್ಕರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯಲ್ಲಿ ಪ್ರಭಾವಿ ಲಿಂಗಾಯತ ನಾಯಕರಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಸೇರಿದಂತೆ ಅನೇಕ ಲಿಂಗಾಯತ ನಾಯಕರು ಬಿಜೆಪಿ ತೊರೆದಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷ ಬಿಜೆಪಿಯನ್ನು ಲಿಂಗಾಯತ ವಿರೋಧಿ ಎಂದು ಬಿಂಬಿಸುವ ಪ್ರಯತ್ನಕ್ಕೆ ಕೈ ಹಾಕಿತು. ಆದರೆ ಇದಕ್ಕೆ ತಡೆಯೊಡ್ಡುವ ನಿಟ್ಟಿನಲ್ಲಿ ಮೇ 10ರಂದು ನಡೆಯುವ ಚುನಾವಣೆಯಲ್ಲಿ ಬಿಜೆಪಿ ಸಿಎಂ ಅಭ್ಯರ್ಥಿಯಾಗಿ ಲಿಂಗಾಯತ ಮುಖಂಡರೊಬ್ಬರನ್ನು ಬಿಂಬಿಸುವ ಪ್ರಸ್ತಾವವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರೋಧಿಸಿದ್ದಾರೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ.

ಬಿಜೆಪಿಯ ಪ್ರಮುಖ ಲಿಂಗಾಯಿತ ಮುಖಂಡರಾಗಿದ್ದ ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಅವರು ಪಕ್ಷ ತೊರೆದಿರುವುದರಿಂದ, 224 ಸದಸ್ಯಬಲದ ವಿಧಾನಸಭೆಯಲ್ಲಿ ಅಗತ್ಯ ಬಹುಮತ (113 ಸ್ಥಾನ)ಕ್ಕಿಂತ 15-20 ಹೆಚ್ಚು ಸ್ಥಾನಗಳನ್ನು ಗೆಲ್ಲುವುದಕ್ಕೆ ಯಾವುದೇ ಧಕ್ಕೆಯಾಗುವುದಿಲ್ಲ ಎಂದು ಶಾ ಶನಿವಾರ ಸ್ಪಷ್ಟಪಡಿಸಿದ್ದಾರೆ.

”ಶೆಟ್ಟರ್ ಹಾಗೂ ಸವದಿಯಂತಹ ಲಿಂಗಾಯತ ಮುಖಂಡರು ಪಕ್ಷ ಬಿಟ್ಟು ಹೋಗಿರುವುದರಿಂದ ಪಕ್ಷಕ್ಕೆ ಆಗಬಹುದಾದ ಹಾನಿಯನ್ನು ತಡೆಯಲು ಲಿಂಗಾಯತ ಮುಖಂಡರೊಬ್ಬರನ್ನು ಸಿಎಂ ಅಭ್ಯರ್ಥಿಯಾಗಿ ಬಿಂಬಿಸುವಂತೆ ಪ್ರಸ್ತಾವ ಮುಂದಿಟ್ಟೆವು. ಆದರೆ ಇದು ಲಿಂಗಾಯತರನ್ನು ಹೊರತುಪಡಿಸಿ ಇತರ ಮತದಾರರ ಧ್ರುವೀಕರಣಕ್ಕೆ ಕಾರಣವಾಗುತ್ತದೆ ಎಂಬ ಕಾರಣ ನೀಡಿದ ಶಾ ನಮ್ಮ ಪ್ರಸ್ತಾಪವನ್ನು ತಿರಸ್ಕರಿಸಿದರು” ಎಂದು ಶಾ ಆಯೋಜಿಸಿದ್ದ ಸಭೆಯಲ್ಲಿ ಭಾಗವಹಿಸಿದ್ದ ಮುಖಂಡರೊಬ್ಬರು ಬಹಿರಂಗಪಡಿಸಿದ್ದಾರೆ.

ಡಬಲ್ ಎಂಜಿನ್ ಪ್ರಗತಿ ಮತ್ತು ಮೀಸಲಾತಿ ವಿಷಯವನ್ನು ಚುನಾವಣೆಯಲ್ಲಿ ಬಿಂಬಿಸುವಂತೆ ಶಾ ರಾಜ್ಯ ನಾಯಕರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಎಪ್ರಿಲ್ 30ರ ಬಳಿಕ  ನರೇಂದ್ರ ಮೋದಿ ನಡೆಸುವ 20ಕ್ಕೂ ಹೆಚ್ಚು ರ‍್ಯಾಲಿಗಳನ್ನು ಎಲ್ಲ ಕ್ಷೇತ್ರಗಳಲ್ಲಿ ಸಮರ್ಥವಾಗಿ ಬಳಸಿಕೊಳ್ಳುವಂತೆಯೂ ಸಲಹೆ ನೀಡಿದರು.

ಬಿಜೆಪಿ ಲಿಂಗಾಯತ ವಿರೋಧಿ: ಕಾಂಗ್ರೆಸ್ ಆರೋಪ

ಬಿಜೆಪಿ ಲಿಂಗಾಯತ ಸಮುದಾಯದ ವಿರೋಧಿ ಎನ್ನುವ ಆರೋಪ ಮಾಡಿರುವ ಕಾಂಗ್ರೆಸ್, ಆ ಬಗ್ಗೆ ಹಲವು ಟ್ವೀಟ್ ಮಾಡಿದೆ. ”ಬಿಜೆಪಿಯ ಲಿಂಗಾಯತ ವಿರೋಧಿ ನೀತಿ ಕೇವಲ ರಾಜಕೀಯ ಕಾರಣಕ್ಕಾಗಿ ಮಾತ್ರವಲ್ಲ, ಅದು ಮನುವಾದ vs ಬಸವ ತತ್ವದ ಸೈದ್ದಂತಿಕ ಸಂಘರ್ಷದ ದ್ವೇಷ. ಚುನಾವಣೆಗಾಗಿ ವಾರಕ್ಕೊಮ್ಮೆ ಕರ್ನಾಟಕಕ್ಕೆ ಬರುವ ಪ್ರಧಾನಿ ನರೇಂದ್ರ ಮೋದಿ  ಅವರಿಗೆ ಸಿದ್ದಗಂಗಾ ಶ್ರೀಗಳ ಅಂತ್ಯಸಂಸ್ಕಾರಕ್ಕೆ ಬರಲು ಸಮಯವಿರಲಿಲ್ಲವೇ?” ಎಂದು #ಲಿಂಗಾಯತವಿರೋಧಿಬಿಜೆಪಿ ಎಂದು ಹ್ಯಾಶ್‌ಟ್ಯಾಗ್ ಬಳಸಿದ್ದಾರೆ.

”ಲಿಂಗಾಯತ ನಾಯಕರನ್ನು ತುಳಿಯುತ್ತಿರುವ ಬಿಜೆಪಿ ವಿರುದ್ಧ ತಿರುಗಿಬಿದ್ದ ಲಿಂಗಾಯತರ ಕಿವಿ ಮೇಲೆ ಹೂವಿಡಲು ಲಿಂಗಾಯತರನ್ನೇ ಸಿಎಂ ಮಾಡುತ್ತೇವೆ ಎನ್ನುತ್ತಿದ್ದಾರೆ ಬಿಜೆಪಿಗರು. ಆದರೆ ಮುಂದೆಯೂ ಬಸವರಾಜ ಬೊಮ್ಮಾಯಿ ಅವರೇ ಸಿಎಂ ಅಭ್ಯರ್ಥಿ ಎಂದು ಹೇಳುತ್ತಿಲ್ಲವೇಕೆ? ಇದರರ್ಥ ಬೊಮ್ಮಾಯಿಯವರನ್ನೂ ಮೂಲೆಗೆ ತಳ್ಳುವುದು ನಿಶ್ಚಿತ.” ಎಂದು #ಲಿಂಗಾಯತವಿರೋಧಿಬಿಜೆಪಿ ಹ್ಯಾಶ್‌ಟ್ಯಾಗ್ ಹಾಕಿ ಕಾಂಗ್ರೆಸ್ ಟ್ವೀಟ್ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...