Homeಕರ್ನಾಟಕ'ಲಿಂಗಾಯತ ಸಿಎಂ' ಪ್ರಸ್ತಾಪ ತಿರಸ್ಕರಿಸಿದ ಅಮಿತ್ ಶಾ

‘ಲಿಂಗಾಯತ ಸಿಎಂ’ ಪ್ರಸ್ತಾಪ ತಿರಸ್ಕರಿಸಿದ ಅಮಿತ್ ಶಾ

- Advertisement -
- Advertisement -

ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ಕಡೆಗಣನೆ ಮಾಡಲಾಗುತ್ತಿದೆ ಎನ್ನುವ ಆರೋಪಗಳು ಕೇಳಿಬಂದ ಹಿನ್ನೆಲೆ ಲಿಂಗಾಯತ ಸಮುದಾಯದ ನಾಯಕನೇ ಮುಂದಿನ ಸಿಎಂ ಆಗುವುದು ಎನ್ನುವ ಪ್ರಸ್ತಾಪವನ್ನು ರಾಜ್ಯ ನಾಯಕರು ಅಮಿತ್ ಶಾ ಮುಂದಿಟ್ಟಿದ್ದರು. ಆದರೆ ಅವರು ಈ ಲಿಂಗಾಯತ ಸಿಎಂ ಪ್ರಸ್ತಾಪವನ್ನೇ ತಿರಸ್ಕರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯಲ್ಲಿ ಪ್ರಭಾವಿ ಲಿಂಗಾಯತ ನಾಯಕರಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಸೇರಿದಂತೆ ಅನೇಕ ಲಿಂಗಾಯತ ನಾಯಕರು ಬಿಜೆಪಿ ತೊರೆದಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷ ಬಿಜೆಪಿಯನ್ನು ಲಿಂಗಾಯತ ವಿರೋಧಿ ಎಂದು ಬಿಂಬಿಸುವ ಪ್ರಯತ್ನಕ್ಕೆ ಕೈ ಹಾಕಿತು. ಆದರೆ ಇದಕ್ಕೆ ತಡೆಯೊಡ್ಡುವ ನಿಟ್ಟಿನಲ್ಲಿ ಮೇ 10ರಂದು ನಡೆಯುವ ಚುನಾವಣೆಯಲ್ಲಿ ಬಿಜೆಪಿ ಸಿಎಂ ಅಭ್ಯರ್ಥಿಯಾಗಿ ಲಿಂಗಾಯತ ಮುಖಂಡರೊಬ್ಬರನ್ನು ಬಿಂಬಿಸುವ ಪ್ರಸ್ತಾವವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರೋಧಿಸಿದ್ದಾರೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ.

ಬಿಜೆಪಿಯ ಪ್ರಮುಖ ಲಿಂಗಾಯಿತ ಮುಖಂಡರಾಗಿದ್ದ ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಅವರು ಪಕ್ಷ ತೊರೆದಿರುವುದರಿಂದ, 224 ಸದಸ್ಯಬಲದ ವಿಧಾನಸಭೆಯಲ್ಲಿ ಅಗತ್ಯ ಬಹುಮತ (113 ಸ್ಥಾನ)ಕ್ಕಿಂತ 15-20 ಹೆಚ್ಚು ಸ್ಥಾನಗಳನ್ನು ಗೆಲ್ಲುವುದಕ್ಕೆ ಯಾವುದೇ ಧಕ್ಕೆಯಾಗುವುದಿಲ್ಲ ಎಂದು ಶಾ ಶನಿವಾರ ಸ್ಪಷ್ಟಪಡಿಸಿದ್ದಾರೆ.

”ಶೆಟ್ಟರ್ ಹಾಗೂ ಸವದಿಯಂತಹ ಲಿಂಗಾಯತ ಮುಖಂಡರು ಪಕ್ಷ ಬಿಟ್ಟು ಹೋಗಿರುವುದರಿಂದ ಪಕ್ಷಕ್ಕೆ ಆಗಬಹುದಾದ ಹಾನಿಯನ್ನು ತಡೆಯಲು ಲಿಂಗಾಯತ ಮುಖಂಡರೊಬ್ಬರನ್ನು ಸಿಎಂ ಅಭ್ಯರ್ಥಿಯಾಗಿ ಬಿಂಬಿಸುವಂತೆ ಪ್ರಸ್ತಾವ ಮುಂದಿಟ್ಟೆವು. ಆದರೆ ಇದು ಲಿಂಗಾಯತರನ್ನು ಹೊರತುಪಡಿಸಿ ಇತರ ಮತದಾರರ ಧ್ರುವೀಕರಣಕ್ಕೆ ಕಾರಣವಾಗುತ್ತದೆ ಎಂಬ ಕಾರಣ ನೀಡಿದ ಶಾ ನಮ್ಮ ಪ್ರಸ್ತಾಪವನ್ನು ತಿರಸ್ಕರಿಸಿದರು” ಎಂದು ಶಾ ಆಯೋಜಿಸಿದ್ದ ಸಭೆಯಲ್ಲಿ ಭಾಗವಹಿಸಿದ್ದ ಮುಖಂಡರೊಬ್ಬರು ಬಹಿರಂಗಪಡಿಸಿದ್ದಾರೆ.

ಡಬಲ್ ಎಂಜಿನ್ ಪ್ರಗತಿ ಮತ್ತು ಮೀಸಲಾತಿ ವಿಷಯವನ್ನು ಚುನಾವಣೆಯಲ್ಲಿ ಬಿಂಬಿಸುವಂತೆ ಶಾ ರಾಜ್ಯ ನಾಯಕರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಎಪ್ರಿಲ್ 30ರ ಬಳಿಕ  ನರೇಂದ್ರ ಮೋದಿ ನಡೆಸುವ 20ಕ್ಕೂ ಹೆಚ್ಚು ರ‍್ಯಾಲಿಗಳನ್ನು ಎಲ್ಲ ಕ್ಷೇತ್ರಗಳಲ್ಲಿ ಸಮರ್ಥವಾಗಿ ಬಳಸಿಕೊಳ್ಳುವಂತೆಯೂ ಸಲಹೆ ನೀಡಿದರು.

ಬಿಜೆಪಿ ಲಿಂಗಾಯತ ವಿರೋಧಿ: ಕಾಂಗ್ರೆಸ್ ಆರೋಪ

ಬಿಜೆಪಿ ಲಿಂಗಾಯತ ಸಮುದಾಯದ ವಿರೋಧಿ ಎನ್ನುವ ಆರೋಪ ಮಾಡಿರುವ ಕಾಂಗ್ರೆಸ್, ಆ ಬಗ್ಗೆ ಹಲವು ಟ್ವೀಟ್ ಮಾಡಿದೆ. ”ಬಿಜೆಪಿಯ ಲಿಂಗಾಯತ ವಿರೋಧಿ ನೀತಿ ಕೇವಲ ರಾಜಕೀಯ ಕಾರಣಕ್ಕಾಗಿ ಮಾತ್ರವಲ್ಲ, ಅದು ಮನುವಾದ vs ಬಸವ ತತ್ವದ ಸೈದ್ದಂತಿಕ ಸಂಘರ್ಷದ ದ್ವೇಷ. ಚುನಾವಣೆಗಾಗಿ ವಾರಕ್ಕೊಮ್ಮೆ ಕರ್ನಾಟಕಕ್ಕೆ ಬರುವ ಪ್ರಧಾನಿ ನರೇಂದ್ರ ಮೋದಿ  ಅವರಿಗೆ ಸಿದ್ದಗಂಗಾ ಶ್ರೀಗಳ ಅಂತ್ಯಸಂಸ್ಕಾರಕ್ಕೆ ಬರಲು ಸಮಯವಿರಲಿಲ್ಲವೇ?” ಎಂದು #ಲಿಂಗಾಯತವಿರೋಧಿಬಿಜೆಪಿ ಎಂದು ಹ್ಯಾಶ್‌ಟ್ಯಾಗ್ ಬಳಸಿದ್ದಾರೆ.

”ಲಿಂಗಾಯತ ನಾಯಕರನ್ನು ತುಳಿಯುತ್ತಿರುವ ಬಿಜೆಪಿ ವಿರುದ್ಧ ತಿರುಗಿಬಿದ್ದ ಲಿಂಗಾಯತರ ಕಿವಿ ಮೇಲೆ ಹೂವಿಡಲು ಲಿಂಗಾಯತರನ್ನೇ ಸಿಎಂ ಮಾಡುತ್ತೇವೆ ಎನ್ನುತ್ತಿದ್ದಾರೆ ಬಿಜೆಪಿಗರು. ಆದರೆ ಮುಂದೆಯೂ ಬಸವರಾಜ ಬೊಮ್ಮಾಯಿ ಅವರೇ ಸಿಎಂ ಅಭ್ಯರ್ಥಿ ಎಂದು ಹೇಳುತ್ತಿಲ್ಲವೇಕೆ? ಇದರರ್ಥ ಬೊಮ್ಮಾಯಿಯವರನ್ನೂ ಮೂಲೆಗೆ ತಳ್ಳುವುದು ನಿಶ್ಚಿತ.” ಎಂದು #ಲಿಂಗಾಯತವಿರೋಧಿಬಿಜೆಪಿ ಹ್ಯಾಶ್‌ಟ್ಯಾಗ್ ಹಾಕಿ ಕಾಂಗ್ರೆಸ್ ಟ್ವೀಟ್ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...