Homeಕರ್ನಾಟಕಸುಳ್ಳನ್ನೆ ದೇವರು ಎಂದು ನಂಬಿರುವ ಅಮಿತ್ ಶಾ ಸುಳ್ಳುಗಳ ಮೂಟೆ ಉರುಳಿಸಿದ್ದಾರೆ: ಸಿದ್ದರಾಮಯ್ಯ

ಸುಳ್ಳನ್ನೆ ದೇವರು ಎಂದು ನಂಬಿರುವ ಅಮಿತ್ ಶಾ ಸುಳ್ಳುಗಳ ಮೂಟೆ ಉರುಳಿಸಿದ್ದಾರೆ: ಸಿದ್ದರಾಮಯ್ಯ

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕರ್ನಾಟಕದ ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಾಪ್ರಹಾರ ಮಾಡಿದ್ದಾರೆ. ಇತ್ತೀಚೆಗೆ ಕರ್ನಾಟಕಕ್ಕೆ ಬಂದಿದ್ದ ಅಮಿತ್‌ ಶಾ ರವರು ಕಾಂಗ್ರೆಸ್ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದರು. ಅದಕ್ಕೆ ತಿರುಗೇಟು ನೀಡಿರುವ ಸಿದ್ದರಾಮಯ್ಯ ಅಂಕಿ-ಸಂಖ್ಯೆಗಳ ಸಮೇತ ಅಮಿತ್ ಶಾ ಸುಳ್ಳು ಹೇಳಿದ್ದಾರೆ ಎಂದು ಆರೋಪಿಸಿದ್ದಾರೆ.

ಸುಳ್ಳನ್ನೆ ದೇವರು ಎಂದು ನಂಬಿರುವ ಕೇಂದ್ರ ಗೃಹಸಚಿವ ಅಮಿತ್‌ ಶಾ ರಾಜ್ಯಕ್ಕೆ ಬಂದು ಮತ್ತೊಮ್ಮೆ ಸುಳ್ಳುಗಳ ಮೂಟೆ ಉರುಳಿಸಿ ಕಾಂಗ್ರೆಸ್‌ನಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿದ್ದಾರೆ. ಈಗ ನಾನು ಹೇಳುವ ಲೆಕ್ಕವನ್ನು ಅವರು ಗಮನವಿಟ್ಟು ಓದಿ, ತಾಳ್ಮೆಯಿಂದ ಉತ್ತರ ಕೊಡಬೇಕು ಎಂದು ಸಿದ್ದರಾಮಯ್ಯ ಸರಣಿ ಟ್ವೀಟ್‌ಗಳ ಮೂಲಕ ಆಗ್ರಹಿಸಿದ್ದಾರೆ.

ಯುಪಿಎ ಆಡಳಿತದ ಕಾಲದಲ್ಲಿ (2010/11- 2013/14) ಹಣಕಾಸು ಆಯೋಗ ಕರ್ನಾಟಕಕ್ಕೆ‌‌ ನಿಗದಿಪಡಿಸಿದ್ದ ಕೇಂದ್ರ ತೆರಿಗೆಗಳ ಪಾಲ ರೂ.45,713 ಕೋಟಿ. ನಾವು ಪಡೆದದ್ದು ರೂ.47,036 ಕೋಟಿ. ಇದು ನಿಗದಿಪಡಿಸಿದ್ದಕ್ಕಿಂತ ರೂ.1.323 ಕೋಟಿ (ಶೇಕಡಾ 2.9ರಷ್ಟು) ಹೆಚ್ಚು. ಆದರೆ ಬಿಜೆಪಿ ಆಡಳಿತದ ಕಾಲದಲ್ಲಿ (2014/15 -2019/20) 13 ಮತ್ತು 14ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ನಿಗದಿಪಡಿಸಿದ್ದ ತೆರಿಗೆ ಪಾಲು ರೂ.2,03,039 ಕೋಟಿ, ಸಿಕ್ಕಿದ್ದು ಕೇವಲ ರೂ.1,65 963 ಕೋಟಿ ರೂಪಾಯಿ ಮಾತ್ರ, ಅಂದರೆ ರೂ.48,768 ಕೋಟಿ (ಶೇಕಡಾ 18.2ರಷ್ಟು) ಕಡಿಮೆಯಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

2019-20ರ ವರ್ಷಕ್ಕೆ ಹಣಕಾಸು ಆಯೋಗ ಕರ್ನಾಟಕಕ್ಕೆ ನಿಗದಿಪಡಿಸಿದ್ದ ತೆರಿಗೆ ಪಾಲು ರೂ.48, 768 ಕೋಟಿ. ಆದರೆ ನಮಗೆ ಸಿಕ್ಕಿರುವುದು ರೂ.30.919 ಕೋಟಿ ಮಾತ್ರ. ಇದರ ಜೊತೆಗೆ ಪ್ರತಿ ವರ್ಷ ಹೆಚ್ಚಾಗುವ ಕೇಂದ್ರ ಸರ್ಕಾರದ ಬಜೆಟ್ ಗಾತ್ರವನ್ನು ಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ. ರಾಜ್ಯ ಬಜೆಟ್ ಪ್ರಕಾರ 2020-21ನೇ ವರ್ಷದಲ್ಲಿ ನಿರೀಕ್ಷಿತ ತೆರಿಗೆ ಪಾಲು ರೂ.28,591 ಕೋಟಿ. ನನ್ನ ಪ್ರಕಾರ ಪ್ರಸಕ್ತ ವರ್ಷದ ಪಾಲು ರೂ.15,017 ಕೋಟಿಗೆ ಇಳಿದರೂ ಅಚ್ಚರಿ ಇಲ್ಲ. ಹೀಗಾದರೆ ಇದು 2019-20ರ‌ ಅಂದಾಜಿಗಿಂತ ನಮ್ಮ ಪಾಲು ರೂ.33,751 ಕೋಟಿ ಕಡಿಮೆ ಯಾಗುತ್ತದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಜಿಎಸ್‌ಟಿ ಪರಿಹಾರದಲ್ಲಿ ನಮಗೆ ದೊಡ್ಡ ಅನ್ಯಾಯವಾಗಿದೆ. ಇತ್ತೀಚಿನ ಅಂದಾಜಿನಂತೆ ಜಿಎಸ್‌ಟಿ ಪರಿಹಾರದಲ್ಲಿ 25 ರಿಂದ 27 ಸಾವಿರ ಕೋಟಿ ರೂಪಾಯಿ ಖೋತಾ ಆಗಬಹುದು. ಕೇಂದ್ರ ಸರ್ಕಾರ ಇತ್ತೀಚೆಗೆ 18-19,000 ಕೋಟಿಯಷ್ಟೇ ಪರಿಹಾರ ನೀಡುವುದಾಗಿ ಹೇಳಿದೆ. ಈ ನಷ್ಟಕ್ಕೆ ಯಾರು ಹೊಣೆ ಎಂದು ಅವರು ಪ್ರಶ್ನಿಸಿದ್ದಾರೆ.

ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಲಿರುವ ಅನುದಾನ ರೂ.31,570 ಕೋಟಿಗಳಷ್ಟಾಗಬಹುದೆಂದು ನಿರೀಕ್ಷಿಸಲಾಗಿತ್ತು. ಈಗಿನ ಲೆಕ್ಕಾಚಾರದ ಪ್ರಕಾರ ಇದು ರೂ.17,372 ಕೋಟಿ ಮೀರಲಾರದು. ಇದರಿಂದ ರೂ.14,198 ಕೋಟಿ ಖೋತಾ ಆಗಲಿದೆ. ರಾಜ್ಯದ ಹಣಕಾಸು ಪರಿಸ್ಥಿತಿಗೆ ಇದು ಮಾರಕ ಹೊಡೆತ. ಒಟ್ಟಾರೆಯಾಗಿ ಕರ್ನಾಟಕ ರಾಜ್ಯ ಕಳೆದ ವರ್ಷಕ್ಕಿಂತ ಸುಮಾರು 50,000 ಕೋಟಿಯಷ್ಟು ಕಡಿಮೆ ಅನುದಾನ ಪಡೆಯಬಹುದು. ಇದರಿಂದಾಗಿ ಪ್ರಸಕ್ತ ಹಣಕಾಸು ವರ್ಷದ ಆದಾಯ ರೂ.1,80,217 ಕೋಟಿಯಿಂದ ರೂ.1,14,758 ಕೋಟಿಗೆ ಇಳಿಯುವ ನಿರೀಕ್ಷೆ ಇದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ದಶಕಗಳ ನಮ್ಮ ಒಟ್ಟು ಸಾಲ ಅಂದಾಜು ರೂ.3.2ಲಕ್ಷ ಕೋಟಿ. ಆದರೆ ಈಗಿನ ಒಂದೇ ವರ್ಷದಲ್ಲಿ ಬಿ.ಎಸ್ ಯಡಿಯೂರಪ್ಪ ಸುಮಾರು ರೂ.90,000 ಕೋಟಿ ಸಾಲ ಪಡೆಯಲು ನಿರ್ಧರಿಸಿದ್ದಾರೆ. ಈ ಮೂಲಕ ಬಿಜೆಪಿ
ಸರ್ಕಾರ ಕರ್ನಾಟಕವನ್ನು ಶಾಶ್ವತ ಸಾಲಗಾರ ರಾಜ್ಯವನ್ನಾಗಿ ಮಾಡಲು ಹೊರಟಿದೆ. ಕರ್ನಾಟಕಕ್ಕೆ ವಿಶೇಷ ಅನುದಾನ ರೂ.5,495 ಕೋಟಿ ನೀಡಬೇಕೆಂದು ಹಣಕಾಸು ಆಯೋಗ ಶಿಫಾರಸು ಮಾಡಿತ್ತು. ಈ ಅನುದಾನಕ್ಕೆ ಕರ್ನಾಟಕದಿಂದ ಆಯ್ಕೆಯಾಗಿ ಹೋಗಿರುವ ಈಗಿನ ಹಣಕಾಸು ಸಚಿವೆ ‌ನಿರ್ಮಲಾ ಸೀತಾರಾಮನ್
ಅಡ್ಡಗಾಲು ಹಾಕಿದ್ದಾರೆ. ಇದು ಅಮಿತ್‌ ಶಾರವರ ಗಮನಕ್ಕೆ ಬಂದಿಲ್ಲವೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಕರ್ನಾಟಕ ಪ್ರತಿವರ್ಷ ತೆರಿಗೆ-ಸುಂಕ ಮೂಲಕ ಕೇಂದ್ರಕ್ಕೆ ಪಾವತಿಸುವ ಅಂದಾಜು ಮೊತ್ತ ರೂ.2,20,000 ಕೋಟಿ‌. ಹಣಕಾಸು ಆಯೋಗದ ಶಿಫಾರಸಿನಂತೆ ಅದರಲ್ಲಿ 42% ಹಣವನ್ನು ರಾಜ್ಯಕ್ಕೆ ಕೇಂದ್ರ ಹಿಂದಿರುಗಿಸಬೇಕು. ಬಿಜೆಪಿ ಆಡಳಿತದ ಕಾಲದಲ್ಲಿ ನಮಗೆಂದೂ ಅಷ್ಟು ಪಾಲು ಸಿಕ್ಕಿಲ್ಲ ಎಂದು ಸಿದ್ದರಾಮಯ್ಯ ದೂರಿದ್ದಾರೆ.


ಇದನ್ನೂ ಓದಿ: ಲಯ ತಪ್ಪಿದ ಸಾರ್ವಜನಿಕ ಗ್ರಂಥಾಲಯ ಇಲಾಖೆ?: ವಿಶೇಷ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...