Homeಕರ್ನಾಟಕಸುಳ್ಳನ್ನೆ ದೇವರು ಎಂದು ನಂಬಿರುವ ಅಮಿತ್ ಶಾ ಸುಳ್ಳುಗಳ ಮೂಟೆ ಉರುಳಿಸಿದ್ದಾರೆ: ಸಿದ್ದರಾಮಯ್ಯ

ಸುಳ್ಳನ್ನೆ ದೇವರು ಎಂದು ನಂಬಿರುವ ಅಮಿತ್ ಶಾ ಸುಳ್ಳುಗಳ ಮೂಟೆ ಉರುಳಿಸಿದ್ದಾರೆ: ಸಿದ್ದರಾಮಯ್ಯ

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕರ್ನಾಟಕದ ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಾಪ್ರಹಾರ ಮಾಡಿದ್ದಾರೆ. ಇತ್ತೀಚೆಗೆ ಕರ್ನಾಟಕಕ್ಕೆ ಬಂದಿದ್ದ ಅಮಿತ್‌ ಶಾ ರವರು ಕಾಂಗ್ರೆಸ್ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದರು. ಅದಕ್ಕೆ ತಿರುಗೇಟು ನೀಡಿರುವ ಸಿದ್ದರಾಮಯ್ಯ ಅಂಕಿ-ಸಂಖ್ಯೆಗಳ ಸಮೇತ ಅಮಿತ್ ಶಾ ಸುಳ್ಳು ಹೇಳಿದ್ದಾರೆ ಎಂದು ಆರೋಪಿಸಿದ್ದಾರೆ.

ಸುಳ್ಳನ್ನೆ ದೇವರು ಎಂದು ನಂಬಿರುವ ಕೇಂದ್ರ ಗೃಹಸಚಿವ ಅಮಿತ್‌ ಶಾ ರಾಜ್ಯಕ್ಕೆ ಬಂದು ಮತ್ತೊಮ್ಮೆ ಸುಳ್ಳುಗಳ ಮೂಟೆ ಉರುಳಿಸಿ ಕಾಂಗ್ರೆಸ್‌ನಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿದ್ದಾರೆ. ಈಗ ನಾನು ಹೇಳುವ ಲೆಕ್ಕವನ್ನು ಅವರು ಗಮನವಿಟ್ಟು ಓದಿ, ತಾಳ್ಮೆಯಿಂದ ಉತ್ತರ ಕೊಡಬೇಕು ಎಂದು ಸಿದ್ದರಾಮಯ್ಯ ಸರಣಿ ಟ್ವೀಟ್‌ಗಳ ಮೂಲಕ ಆಗ್ರಹಿಸಿದ್ದಾರೆ.

ಯುಪಿಎ ಆಡಳಿತದ ಕಾಲದಲ್ಲಿ (2010/11- 2013/14) ಹಣಕಾಸು ಆಯೋಗ ಕರ್ನಾಟಕಕ್ಕೆ‌‌ ನಿಗದಿಪಡಿಸಿದ್ದ ಕೇಂದ್ರ ತೆರಿಗೆಗಳ ಪಾಲ ರೂ.45,713 ಕೋಟಿ. ನಾವು ಪಡೆದದ್ದು ರೂ.47,036 ಕೋಟಿ. ಇದು ನಿಗದಿಪಡಿಸಿದ್ದಕ್ಕಿಂತ ರೂ.1.323 ಕೋಟಿ (ಶೇಕಡಾ 2.9ರಷ್ಟು) ಹೆಚ್ಚು. ಆದರೆ ಬಿಜೆಪಿ ಆಡಳಿತದ ಕಾಲದಲ್ಲಿ (2014/15 -2019/20) 13 ಮತ್ತು 14ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ನಿಗದಿಪಡಿಸಿದ್ದ ತೆರಿಗೆ ಪಾಲು ರೂ.2,03,039 ಕೋಟಿ, ಸಿಕ್ಕಿದ್ದು ಕೇವಲ ರೂ.1,65 963 ಕೋಟಿ ರೂಪಾಯಿ ಮಾತ್ರ, ಅಂದರೆ ರೂ.48,768 ಕೋಟಿ (ಶೇಕಡಾ 18.2ರಷ್ಟು) ಕಡಿಮೆಯಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

2019-20ರ ವರ್ಷಕ್ಕೆ ಹಣಕಾಸು ಆಯೋಗ ಕರ್ನಾಟಕಕ್ಕೆ ನಿಗದಿಪಡಿಸಿದ್ದ ತೆರಿಗೆ ಪಾಲು ರೂ.48, 768 ಕೋಟಿ. ಆದರೆ ನಮಗೆ ಸಿಕ್ಕಿರುವುದು ರೂ.30.919 ಕೋಟಿ ಮಾತ್ರ. ಇದರ ಜೊತೆಗೆ ಪ್ರತಿ ವರ್ಷ ಹೆಚ್ಚಾಗುವ ಕೇಂದ್ರ ಸರ್ಕಾರದ ಬಜೆಟ್ ಗಾತ್ರವನ್ನು ಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ. ರಾಜ್ಯ ಬಜೆಟ್ ಪ್ರಕಾರ 2020-21ನೇ ವರ್ಷದಲ್ಲಿ ನಿರೀಕ್ಷಿತ ತೆರಿಗೆ ಪಾಲು ರೂ.28,591 ಕೋಟಿ. ನನ್ನ ಪ್ರಕಾರ ಪ್ರಸಕ್ತ ವರ್ಷದ ಪಾಲು ರೂ.15,017 ಕೋಟಿಗೆ ಇಳಿದರೂ ಅಚ್ಚರಿ ಇಲ್ಲ. ಹೀಗಾದರೆ ಇದು 2019-20ರ‌ ಅಂದಾಜಿಗಿಂತ ನಮ್ಮ ಪಾಲು ರೂ.33,751 ಕೋಟಿ ಕಡಿಮೆ ಯಾಗುತ್ತದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಜಿಎಸ್‌ಟಿ ಪರಿಹಾರದಲ್ಲಿ ನಮಗೆ ದೊಡ್ಡ ಅನ್ಯಾಯವಾಗಿದೆ. ಇತ್ತೀಚಿನ ಅಂದಾಜಿನಂತೆ ಜಿಎಸ್‌ಟಿ ಪರಿಹಾರದಲ್ಲಿ 25 ರಿಂದ 27 ಸಾವಿರ ಕೋಟಿ ರೂಪಾಯಿ ಖೋತಾ ಆಗಬಹುದು. ಕೇಂದ್ರ ಸರ್ಕಾರ ಇತ್ತೀಚೆಗೆ 18-19,000 ಕೋಟಿಯಷ್ಟೇ ಪರಿಹಾರ ನೀಡುವುದಾಗಿ ಹೇಳಿದೆ. ಈ ನಷ್ಟಕ್ಕೆ ಯಾರು ಹೊಣೆ ಎಂದು ಅವರು ಪ್ರಶ್ನಿಸಿದ್ದಾರೆ.

ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಲಿರುವ ಅನುದಾನ ರೂ.31,570 ಕೋಟಿಗಳಷ್ಟಾಗಬಹುದೆಂದು ನಿರೀಕ್ಷಿಸಲಾಗಿತ್ತು. ಈಗಿನ ಲೆಕ್ಕಾಚಾರದ ಪ್ರಕಾರ ಇದು ರೂ.17,372 ಕೋಟಿ ಮೀರಲಾರದು. ಇದರಿಂದ ರೂ.14,198 ಕೋಟಿ ಖೋತಾ ಆಗಲಿದೆ. ರಾಜ್ಯದ ಹಣಕಾಸು ಪರಿಸ್ಥಿತಿಗೆ ಇದು ಮಾರಕ ಹೊಡೆತ. ಒಟ್ಟಾರೆಯಾಗಿ ಕರ್ನಾಟಕ ರಾಜ್ಯ ಕಳೆದ ವರ್ಷಕ್ಕಿಂತ ಸುಮಾರು 50,000 ಕೋಟಿಯಷ್ಟು ಕಡಿಮೆ ಅನುದಾನ ಪಡೆಯಬಹುದು. ಇದರಿಂದಾಗಿ ಪ್ರಸಕ್ತ ಹಣಕಾಸು ವರ್ಷದ ಆದಾಯ ರೂ.1,80,217 ಕೋಟಿಯಿಂದ ರೂ.1,14,758 ಕೋಟಿಗೆ ಇಳಿಯುವ ನಿರೀಕ್ಷೆ ಇದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ದಶಕಗಳ ನಮ್ಮ ಒಟ್ಟು ಸಾಲ ಅಂದಾಜು ರೂ.3.2ಲಕ್ಷ ಕೋಟಿ. ಆದರೆ ಈಗಿನ ಒಂದೇ ವರ್ಷದಲ್ಲಿ ಬಿ.ಎಸ್ ಯಡಿಯೂರಪ್ಪ ಸುಮಾರು ರೂ.90,000 ಕೋಟಿ ಸಾಲ ಪಡೆಯಲು ನಿರ್ಧರಿಸಿದ್ದಾರೆ. ಈ ಮೂಲಕ ಬಿಜೆಪಿ
ಸರ್ಕಾರ ಕರ್ನಾಟಕವನ್ನು ಶಾಶ್ವತ ಸಾಲಗಾರ ರಾಜ್ಯವನ್ನಾಗಿ ಮಾಡಲು ಹೊರಟಿದೆ. ಕರ್ನಾಟಕಕ್ಕೆ ವಿಶೇಷ ಅನುದಾನ ರೂ.5,495 ಕೋಟಿ ನೀಡಬೇಕೆಂದು ಹಣಕಾಸು ಆಯೋಗ ಶಿಫಾರಸು ಮಾಡಿತ್ತು. ಈ ಅನುದಾನಕ್ಕೆ ಕರ್ನಾಟಕದಿಂದ ಆಯ್ಕೆಯಾಗಿ ಹೋಗಿರುವ ಈಗಿನ ಹಣಕಾಸು ಸಚಿವೆ ‌ನಿರ್ಮಲಾ ಸೀತಾರಾಮನ್
ಅಡ್ಡಗಾಲು ಹಾಕಿದ್ದಾರೆ. ಇದು ಅಮಿತ್‌ ಶಾರವರ ಗಮನಕ್ಕೆ ಬಂದಿಲ್ಲವೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಕರ್ನಾಟಕ ಪ್ರತಿವರ್ಷ ತೆರಿಗೆ-ಸುಂಕ ಮೂಲಕ ಕೇಂದ್ರಕ್ಕೆ ಪಾವತಿಸುವ ಅಂದಾಜು ಮೊತ್ತ ರೂ.2,20,000 ಕೋಟಿ‌. ಹಣಕಾಸು ಆಯೋಗದ ಶಿಫಾರಸಿನಂತೆ ಅದರಲ್ಲಿ 42% ಹಣವನ್ನು ರಾಜ್ಯಕ್ಕೆ ಕೇಂದ್ರ ಹಿಂದಿರುಗಿಸಬೇಕು. ಬಿಜೆಪಿ ಆಡಳಿತದ ಕಾಲದಲ್ಲಿ ನಮಗೆಂದೂ ಅಷ್ಟು ಪಾಲು ಸಿಕ್ಕಿಲ್ಲ ಎಂದು ಸಿದ್ದರಾಮಯ್ಯ ದೂರಿದ್ದಾರೆ.


ಇದನ್ನೂ ಓದಿ: ಲಯ ತಪ್ಪಿದ ಸಾರ್ವಜನಿಕ ಗ್ರಂಥಾಲಯ ಇಲಾಖೆ?: ವಿಶೇಷ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...