Homeಕರ್ನಾಟಕಸುಳ್ಳನ್ನೆ ದೇವರು ಎಂದು ನಂಬಿರುವ ಅಮಿತ್ ಶಾ ಸುಳ್ಳುಗಳ ಮೂಟೆ ಉರುಳಿಸಿದ್ದಾರೆ: ಸಿದ್ದರಾಮಯ್ಯ

ಸುಳ್ಳನ್ನೆ ದೇವರು ಎಂದು ನಂಬಿರುವ ಅಮಿತ್ ಶಾ ಸುಳ್ಳುಗಳ ಮೂಟೆ ಉರುಳಿಸಿದ್ದಾರೆ: ಸಿದ್ದರಾಮಯ್ಯ

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕರ್ನಾಟಕದ ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಾಪ್ರಹಾರ ಮಾಡಿದ್ದಾರೆ. ಇತ್ತೀಚೆಗೆ ಕರ್ನಾಟಕಕ್ಕೆ ಬಂದಿದ್ದ ಅಮಿತ್‌ ಶಾ ರವರು ಕಾಂಗ್ರೆಸ್ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದರು. ಅದಕ್ಕೆ ತಿರುಗೇಟು ನೀಡಿರುವ ಸಿದ್ದರಾಮಯ್ಯ ಅಂಕಿ-ಸಂಖ್ಯೆಗಳ ಸಮೇತ ಅಮಿತ್ ಶಾ ಸುಳ್ಳು ಹೇಳಿದ್ದಾರೆ ಎಂದು ಆರೋಪಿಸಿದ್ದಾರೆ.

ಸುಳ್ಳನ್ನೆ ದೇವರು ಎಂದು ನಂಬಿರುವ ಕೇಂದ್ರ ಗೃಹಸಚಿವ ಅಮಿತ್‌ ಶಾ ರಾಜ್ಯಕ್ಕೆ ಬಂದು ಮತ್ತೊಮ್ಮೆ ಸುಳ್ಳುಗಳ ಮೂಟೆ ಉರುಳಿಸಿ ಕಾಂಗ್ರೆಸ್‌ನಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿದ್ದಾರೆ. ಈಗ ನಾನು ಹೇಳುವ ಲೆಕ್ಕವನ್ನು ಅವರು ಗಮನವಿಟ್ಟು ಓದಿ, ತಾಳ್ಮೆಯಿಂದ ಉತ್ತರ ಕೊಡಬೇಕು ಎಂದು ಸಿದ್ದರಾಮಯ್ಯ ಸರಣಿ ಟ್ವೀಟ್‌ಗಳ ಮೂಲಕ ಆಗ್ರಹಿಸಿದ್ದಾರೆ.

ಯುಪಿಎ ಆಡಳಿತದ ಕಾಲದಲ್ಲಿ (2010/11- 2013/14) ಹಣಕಾಸು ಆಯೋಗ ಕರ್ನಾಟಕಕ್ಕೆ‌‌ ನಿಗದಿಪಡಿಸಿದ್ದ ಕೇಂದ್ರ ತೆರಿಗೆಗಳ ಪಾಲ ರೂ.45,713 ಕೋಟಿ. ನಾವು ಪಡೆದದ್ದು ರೂ.47,036 ಕೋಟಿ. ಇದು ನಿಗದಿಪಡಿಸಿದ್ದಕ್ಕಿಂತ ರೂ.1.323 ಕೋಟಿ (ಶೇಕಡಾ 2.9ರಷ್ಟು) ಹೆಚ್ಚು. ಆದರೆ ಬಿಜೆಪಿ ಆಡಳಿತದ ಕಾಲದಲ್ಲಿ (2014/15 -2019/20) 13 ಮತ್ತು 14ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ನಿಗದಿಪಡಿಸಿದ್ದ ತೆರಿಗೆ ಪಾಲು ರೂ.2,03,039 ಕೋಟಿ, ಸಿಕ್ಕಿದ್ದು ಕೇವಲ ರೂ.1,65 963 ಕೋಟಿ ರೂಪಾಯಿ ಮಾತ್ರ, ಅಂದರೆ ರೂ.48,768 ಕೋಟಿ (ಶೇಕಡಾ 18.2ರಷ್ಟು) ಕಡಿಮೆಯಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

2019-20ರ ವರ್ಷಕ್ಕೆ ಹಣಕಾಸು ಆಯೋಗ ಕರ್ನಾಟಕಕ್ಕೆ ನಿಗದಿಪಡಿಸಿದ್ದ ತೆರಿಗೆ ಪಾಲು ರೂ.48, 768 ಕೋಟಿ. ಆದರೆ ನಮಗೆ ಸಿಕ್ಕಿರುವುದು ರೂ.30.919 ಕೋಟಿ ಮಾತ್ರ. ಇದರ ಜೊತೆಗೆ ಪ್ರತಿ ವರ್ಷ ಹೆಚ್ಚಾಗುವ ಕೇಂದ್ರ ಸರ್ಕಾರದ ಬಜೆಟ್ ಗಾತ್ರವನ್ನು ಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ. ರಾಜ್ಯ ಬಜೆಟ್ ಪ್ರಕಾರ 2020-21ನೇ ವರ್ಷದಲ್ಲಿ ನಿರೀಕ್ಷಿತ ತೆರಿಗೆ ಪಾಲು ರೂ.28,591 ಕೋಟಿ. ನನ್ನ ಪ್ರಕಾರ ಪ್ರಸಕ್ತ ವರ್ಷದ ಪಾಲು ರೂ.15,017 ಕೋಟಿಗೆ ಇಳಿದರೂ ಅಚ್ಚರಿ ಇಲ್ಲ. ಹೀಗಾದರೆ ಇದು 2019-20ರ‌ ಅಂದಾಜಿಗಿಂತ ನಮ್ಮ ಪಾಲು ರೂ.33,751 ಕೋಟಿ ಕಡಿಮೆ ಯಾಗುತ್ತದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಜಿಎಸ್‌ಟಿ ಪರಿಹಾರದಲ್ಲಿ ನಮಗೆ ದೊಡ್ಡ ಅನ್ಯಾಯವಾಗಿದೆ. ಇತ್ತೀಚಿನ ಅಂದಾಜಿನಂತೆ ಜಿಎಸ್‌ಟಿ ಪರಿಹಾರದಲ್ಲಿ 25 ರಿಂದ 27 ಸಾವಿರ ಕೋಟಿ ರೂಪಾಯಿ ಖೋತಾ ಆಗಬಹುದು. ಕೇಂದ್ರ ಸರ್ಕಾರ ಇತ್ತೀಚೆಗೆ 18-19,000 ಕೋಟಿಯಷ್ಟೇ ಪರಿಹಾರ ನೀಡುವುದಾಗಿ ಹೇಳಿದೆ. ಈ ನಷ್ಟಕ್ಕೆ ಯಾರು ಹೊಣೆ ಎಂದು ಅವರು ಪ್ರಶ್ನಿಸಿದ್ದಾರೆ.

ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಲಿರುವ ಅನುದಾನ ರೂ.31,570 ಕೋಟಿಗಳಷ್ಟಾಗಬಹುದೆಂದು ನಿರೀಕ್ಷಿಸಲಾಗಿತ್ತು. ಈಗಿನ ಲೆಕ್ಕಾಚಾರದ ಪ್ರಕಾರ ಇದು ರೂ.17,372 ಕೋಟಿ ಮೀರಲಾರದು. ಇದರಿಂದ ರೂ.14,198 ಕೋಟಿ ಖೋತಾ ಆಗಲಿದೆ. ರಾಜ್ಯದ ಹಣಕಾಸು ಪರಿಸ್ಥಿತಿಗೆ ಇದು ಮಾರಕ ಹೊಡೆತ. ಒಟ್ಟಾರೆಯಾಗಿ ಕರ್ನಾಟಕ ರಾಜ್ಯ ಕಳೆದ ವರ್ಷಕ್ಕಿಂತ ಸುಮಾರು 50,000 ಕೋಟಿಯಷ್ಟು ಕಡಿಮೆ ಅನುದಾನ ಪಡೆಯಬಹುದು. ಇದರಿಂದಾಗಿ ಪ್ರಸಕ್ತ ಹಣಕಾಸು ವರ್ಷದ ಆದಾಯ ರೂ.1,80,217 ಕೋಟಿಯಿಂದ ರೂ.1,14,758 ಕೋಟಿಗೆ ಇಳಿಯುವ ನಿರೀಕ್ಷೆ ಇದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ದಶಕಗಳ ನಮ್ಮ ಒಟ್ಟು ಸಾಲ ಅಂದಾಜು ರೂ.3.2ಲಕ್ಷ ಕೋಟಿ. ಆದರೆ ಈಗಿನ ಒಂದೇ ವರ್ಷದಲ್ಲಿ ಬಿ.ಎಸ್ ಯಡಿಯೂರಪ್ಪ ಸುಮಾರು ರೂ.90,000 ಕೋಟಿ ಸಾಲ ಪಡೆಯಲು ನಿರ್ಧರಿಸಿದ್ದಾರೆ. ಈ ಮೂಲಕ ಬಿಜೆಪಿ
ಸರ್ಕಾರ ಕರ್ನಾಟಕವನ್ನು ಶಾಶ್ವತ ಸಾಲಗಾರ ರಾಜ್ಯವನ್ನಾಗಿ ಮಾಡಲು ಹೊರಟಿದೆ. ಕರ್ನಾಟಕಕ್ಕೆ ವಿಶೇಷ ಅನುದಾನ ರೂ.5,495 ಕೋಟಿ ನೀಡಬೇಕೆಂದು ಹಣಕಾಸು ಆಯೋಗ ಶಿಫಾರಸು ಮಾಡಿತ್ತು. ಈ ಅನುದಾನಕ್ಕೆ ಕರ್ನಾಟಕದಿಂದ ಆಯ್ಕೆಯಾಗಿ ಹೋಗಿರುವ ಈಗಿನ ಹಣಕಾಸು ಸಚಿವೆ ‌ನಿರ್ಮಲಾ ಸೀತಾರಾಮನ್
ಅಡ್ಡಗಾಲು ಹಾಕಿದ್ದಾರೆ. ಇದು ಅಮಿತ್‌ ಶಾರವರ ಗಮನಕ್ಕೆ ಬಂದಿಲ್ಲವೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಕರ್ನಾಟಕ ಪ್ರತಿವರ್ಷ ತೆರಿಗೆ-ಸುಂಕ ಮೂಲಕ ಕೇಂದ್ರಕ್ಕೆ ಪಾವತಿಸುವ ಅಂದಾಜು ಮೊತ್ತ ರೂ.2,20,000 ಕೋಟಿ‌. ಹಣಕಾಸು ಆಯೋಗದ ಶಿಫಾರಸಿನಂತೆ ಅದರಲ್ಲಿ 42% ಹಣವನ್ನು ರಾಜ್ಯಕ್ಕೆ ಕೇಂದ್ರ ಹಿಂದಿರುಗಿಸಬೇಕು. ಬಿಜೆಪಿ ಆಡಳಿತದ ಕಾಲದಲ್ಲಿ ನಮಗೆಂದೂ ಅಷ್ಟು ಪಾಲು ಸಿಕ್ಕಿಲ್ಲ ಎಂದು ಸಿದ್ದರಾಮಯ್ಯ ದೂರಿದ್ದಾರೆ.


ಇದನ್ನೂ ಓದಿ: ಲಯ ತಪ್ಪಿದ ಸಾರ್ವಜನಿಕ ಗ್ರಂಥಾಲಯ ಇಲಾಖೆ?: ವಿಶೇಷ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...