Homeಮುಖಪುಟಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಲು ಅಮಿತ್ ಶಾ ಯಾರು? ಮಮತಾ ಬ್ಯಾನರ್ಜಿ ಪ್ರಶ್ನೆ

ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಲು ಅಮಿತ್ ಶಾ ಯಾರು? ಮಮತಾ ಬ್ಯಾನರ್ಜಿ ಪ್ರಶ್ನೆ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಆಯೋಗ ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸುವ ಬಿಜೆಪಿ ಮುಖಂಡರ ನಡುವಿನ ಫೋನ್ ಮಾತುಕತೆ ಆಡಿಯೋವನ್ನು ಟಿಎಂಸಿ ಬಿಡುಗಡೆ ಮಾಡಿದ್ದು ದೊಡ್ಡ ಕೋಲಾಹಲಕ್ಕೆ ಕಾರಣವಾಗಿದೆ. ಈ ಆಡಿಯೋ ಚುನಾವಣಾ ಆಯೋಗಕ್ಕೆ ಮುಖಭಂಗವಾಗುವಂತಿದ್ದು ಆದರೆ ಈವರೆಗೆ ಈ ಕುರಿತು ಆಯೋಗ ಪ್ರತಿಕ್ರಿಯೆ ನೀಡಿಲ್ಲ. ಆದರೆ ಈ ಫೋನ್ ಕದ್ದಾಲಿಸಿದ್ದು ಯಾರು ಮತ್ತು ಏಕೆ ಎಂದು ಗೃಹ ಸಚಿವ ಅಮಿತ್ ಶಾ ಪ್ರಶ್ನಿಸಿದ್ದಾರೆ.

ಬಿಜೆಪಿ ಮುಖಂಡರಾದ ಶಿಶಿರ್ ಬಜೋರಿಯಾ ಮತ್ತು ಮುಕುಲ್ ರಾಯ್ ಅವರ ನಡುವಿನ ದೂರವಾಣಿ ಸಂಭಾಷಣೆಯನ್ನು ಕದ್ದಾಲಿಸಿದ್ದು ಯಾರು? ಇದು ಹೇಗೆ ಸಂಭವಿಸಿತು? ಏಕೆ ಕದ್ದಾಲಿಸಲಾಗಿದೆ. ಈ ಕುರಿತು ನಮಗೆ ಲಿಖಿತ ಉತ್ತರ ಬೇಕೆಂದು ಅಮಿತ್ ಶಾ ಆಗ್ರಹಿಸಿದ್ದಾರೆ.

ಬಿಜೆಪಿ ಮುಖಂಡ ಮುಕುಲ್ ರಾಯ್ ಅವರು ಶಿಶಿರ್ ಬಜೋರಿಯಾ ಜೊತೆ ಫೋನಿನಲ್ಲಿ ಮಾತನಾಡುತ್ತಾ, ತಮ್ಮ ಪಕ್ಷವು ಚುನಾವಣಾ ಆಯೋಗದೊಂದಿಗೆ ಚರ್ಚಿಸಬೇಕಾದ ವಿಷಯಗಳ ಪಟ್ಟಿಯಲ್ಲಿ ಮತಗಟ್ಟೆ ಏಜೆಂಟ್ ಅಥವಾ ಬೂತ್ ಏಜೆಂಟರ ಬಗ್ಗೆ ಒಂದು ನಿರ್ದಿಷ್ಟ ಆದೇಶ ನೀಡಬೇಕೆಂದು ಒತ್ತಾಯಿಸುತ್ತಾರೆ.

ಬೂತ್ ಏಜೆಂಟರು ಯಾವಾಗಲು ಅದೇ ಕ್ಷೇತ್ರದ ಮತದಾರನಾಗಿರಬೇಕು ಎಂಬ ನಿಯಮವಿದೆ. ಚುನಾವಣಾ ಆಯೋಗದೊಂದಿಗೆ ಮಾತನಾಡಿ ಅದನ್ನು ಬದಲಿಸಬೇಕು. ರಾಜ್ಯದ ಯಾವುದೇ ವ್ಯಕ್ತಿ, ಯಾವುದೇ ಬೂತ್‌ನಲ್ಲಿ ಬೇಕಾದರೂ ಏಜೆಂಟ್ ಆಗಬಹುದು ಎಂದು ಆಯೋಗ ಹೇಳುವಂತೆ ಮಾಡಬೇಕು. ಇಲ್ಲದಿದ್ದಲ್ಲಿ ಹಲವಾರು ಬೂತ್‌ಗಳಲ್ಲಿ ಬಿಜೆಪಿಗೆ ಬೂತ್‌ ಏಜೆಂಟರೆ ಇಲ್ಲದಂತಾಗುತ್ತದೆ ಎಂದು ಮುಕುಲ್ ರಾಯ್‌ ಹೇಳಿದ್ದು ಆಡಿಯೋದಲ್ಲಿ ಬಹಿರಂಗಗೊಂಡಿದೆ.

ಸಾಮಾನ್ಯವಾಗಿ ಯಾವುದೇ ಪಕ್ಷದ ಬೂತ್ ಏಜೆಂಟ್‌ ಆಗುವವರು ಸ್ಥಳೀಯರು ಮತ್ತು ಪರಿಚಿತರೇ ಆಗಿರುತ್ತಾರೆ. ಆದರೆ ಆಶ್ಚರ್ಯಕರ ರೀತಿಯಲ್ಲಿ ಇತ್ತೀಚೆಗೆ ಚುನಾವಣಾ ಆಯೋಗವು ರಾಜ್ಯದ ಯಾವುದೇ ವ್ಯಕ್ತಿ, ಯಾವುದೇ ಬೂತ್‌ನಲ್ಲಿ ಬೇಕಾದರೂ ಏಜೆಂಟ್ ಆಗಬಹುದು ಎಂಬ ಆದೇಶ ಜಾರಿಗೊಳಿಸಿದೆ. ಹಾಗಾಗಿ ಚುನಾವಣಾ ಆಯೋಗ ಬಿಜೆಪಿಯೊಂದಿಗೆ ಶಾಮೀಲಾಗಿದೆ ಎಂದು ಟಿಎಂಸಿ ದೂರಿದೆ.

ಬಿಜೆಪಿಗೆ ಪಶ್ಚಿಮ ಬಂಗಾಳದಲ್ಲಿ ಅಭ್ಯರ್ಥಿಗಳೆ ಇಲ್ಲ. ಹಾಗಾಗಿ 5 ಲೋಕಸಭಾ ಸದಸ್ಯರನ್ನು ಮತ್ತು ಕೇಂದ್ರ ಸಚಿವರನ್ನು ವಿಧಾನಸಭಾ ಚುನಾವಣೆಯಲ್ಲಿ ಅದು ಕಣಕ್ಕಿಳಿಸಿದೆ. ಅಲ್ಲದೇ ಅವರಿಗೆ ಬೂತ್ ಏಜೆಂಟ್‌ ಆಗಲು ಸಹ ಕಾರ್ಯಕರ್ತರಿಲ್ಲ. ಹಾಗಾಗಿ ರಾಜ್ಯದ ಯಾವುದೇ ವ್ಯಕ್ತಿ ಯಾವುದೇ ಕ್ಷೇತ್ರದಲ್ಲಿ ಬೂತ್ ಏಜೆಂಟ್ ಆಗಬಹುದೆಂದು ಚುನಾವಣಾ ಆಯೋದಿಂದ ಆದೇಶ ಹೊರಡಿಸಿದೆ. ಇದು ಚುನಾವಣಾ ಆಯೋಗ ಮತ್ತು ಬಿಜೆಪಿ ನಡುವಿನ ಅಪವಿತ್ರ ಮೈತ್ರಿಯಾಗಿದೆ ಎಂದು ಟಿಎಂಸಿ ದೂರಿದೆ.

ನಾನು ಚುನಾವಣಾ ಆಯೋಗದ ಸ್ವಾಯುತ್ತದೆ ಮತ್ತು ನಿಷ್ಪಕ್ಷಪಾತಕ್ಕೆ ಸಂಬಂಧಿಸಿದಂತೆ ಕೇಳುತ್ತಿದ್ದೇನೆ. ಚುನಾವಣಾ ಆಯೋಗವನ್ನು ಯಾರು ನಡೆಸುತ್ತಿದ್ದಾರೆ? ಅಮಿತ್ ಶಾ, ನೀವು ಅದನ್ನು ನಡೆಸುತ್ತಿದ್ದೀರಾ? ನಮಗೆ ಮುಕ್ತ ಮತ್ತು ನ್ಯಾಯಯುತ ಚುನಾವಣೆ ಬೇಕು ಆದರೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಲು ಅಮಿತ್ ಶಾ ಯಾರು? ಅವರು ಚುನಾವಣಾ ಆಯೋಗದ ಕೆಲಸದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲಿ. ಚುನಾವಣಾ ಆಯೋಗವು ನಮ್ಮ ವಿರುದ್ಧ ಕೆಲಸ ಮಾಡುತ್ತಿದೆ” ಎಂದು ಮಮತಾ ಬ್ಯಾನರ್ಜಿ ಬಂಕುರಾದಲ್ಲಿ ನಡೆದ ರ್ಯಾಲಿಯಲ್ಲಿ ಹೇಳಿದ್ದಾರೆ.


ಇದನ್ನೂ ಓದಿ: ಚುನಾವಣಾ ಆಯೋಗ ಬಿಜೆಪಿಯೊಂದಿಗೆ ಶಾಮೀಲಾಗಿದೆ: ಆಡಿಯೋ ಬಿಡುಗಡೆ ಮಾಡಿದ ಟಿಎಂಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...