Homeಮುಖಪುಟಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಲು ಅಮಿತ್ ಶಾ ಯಾರು? ಮಮತಾ ಬ್ಯಾನರ್ಜಿ ಪ್ರಶ್ನೆ

ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಲು ಅಮಿತ್ ಶಾ ಯಾರು? ಮಮತಾ ಬ್ಯಾನರ್ಜಿ ಪ್ರಶ್ನೆ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಆಯೋಗ ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸುವ ಬಿಜೆಪಿ ಮುಖಂಡರ ನಡುವಿನ ಫೋನ್ ಮಾತುಕತೆ ಆಡಿಯೋವನ್ನು ಟಿಎಂಸಿ ಬಿಡುಗಡೆ ಮಾಡಿದ್ದು ದೊಡ್ಡ ಕೋಲಾಹಲಕ್ಕೆ ಕಾರಣವಾಗಿದೆ. ಈ ಆಡಿಯೋ ಚುನಾವಣಾ ಆಯೋಗಕ್ಕೆ ಮುಖಭಂಗವಾಗುವಂತಿದ್ದು ಆದರೆ ಈವರೆಗೆ ಈ ಕುರಿತು ಆಯೋಗ ಪ್ರತಿಕ್ರಿಯೆ ನೀಡಿಲ್ಲ. ಆದರೆ ಈ ಫೋನ್ ಕದ್ದಾಲಿಸಿದ್ದು ಯಾರು ಮತ್ತು ಏಕೆ ಎಂದು ಗೃಹ ಸಚಿವ ಅಮಿತ್ ಶಾ ಪ್ರಶ್ನಿಸಿದ್ದಾರೆ.

ಬಿಜೆಪಿ ಮುಖಂಡರಾದ ಶಿಶಿರ್ ಬಜೋರಿಯಾ ಮತ್ತು ಮುಕುಲ್ ರಾಯ್ ಅವರ ನಡುವಿನ ದೂರವಾಣಿ ಸಂಭಾಷಣೆಯನ್ನು ಕದ್ದಾಲಿಸಿದ್ದು ಯಾರು? ಇದು ಹೇಗೆ ಸಂಭವಿಸಿತು? ಏಕೆ ಕದ್ದಾಲಿಸಲಾಗಿದೆ. ಈ ಕುರಿತು ನಮಗೆ ಲಿಖಿತ ಉತ್ತರ ಬೇಕೆಂದು ಅಮಿತ್ ಶಾ ಆಗ್ರಹಿಸಿದ್ದಾರೆ.

ಬಿಜೆಪಿ ಮುಖಂಡ ಮುಕುಲ್ ರಾಯ್ ಅವರು ಶಿಶಿರ್ ಬಜೋರಿಯಾ ಜೊತೆ ಫೋನಿನಲ್ಲಿ ಮಾತನಾಡುತ್ತಾ, ತಮ್ಮ ಪಕ್ಷವು ಚುನಾವಣಾ ಆಯೋಗದೊಂದಿಗೆ ಚರ್ಚಿಸಬೇಕಾದ ವಿಷಯಗಳ ಪಟ್ಟಿಯಲ್ಲಿ ಮತಗಟ್ಟೆ ಏಜೆಂಟ್ ಅಥವಾ ಬೂತ್ ಏಜೆಂಟರ ಬಗ್ಗೆ ಒಂದು ನಿರ್ದಿಷ್ಟ ಆದೇಶ ನೀಡಬೇಕೆಂದು ಒತ್ತಾಯಿಸುತ್ತಾರೆ.

ಬೂತ್ ಏಜೆಂಟರು ಯಾವಾಗಲು ಅದೇ ಕ್ಷೇತ್ರದ ಮತದಾರನಾಗಿರಬೇಕು ಎಂಬ ನಿಯಮವಿದೆ. ಚುನಾವಣಾ ಆಯೋಗದೊಂದಿಗೆ ಮಾತನಾಡಿ ಅದನ್ನು ಬದಲಿಸಬೇಕು. ರಾಜ್ಯದ ಯಾವುದೇ ವ್ಯಕ್ತಿ, ಯಾವುದೇ ಬೂತ್‌ನಲ್ಲಿ ಬೇಕಾದರೂ ಏಜೆಂಟ್ ಆಗಬಹುದು ಎಂದು ಆಯೋಗ ಹೇಳುವಂತೆ ಮಾಡಬೇಕು. ಇಲ್ಲದಿದ್ದಲ್ಲಿ ಹಲವಾರು ಬೂತ್‌ಗಳಲ್ಲಿ ಬಿಜೆಪಿಗೆ ಬೂತ್‌ ಏಜೆಂಟರೆ ಇಲ್ಲದಂತಾಗುತ್ತದೆ ಎಂದು ಮುಕುಲ್ ರಾಯ್‌ ಹೇಳಿದ್ದು ಆಡಿಯೋದಲ್ಲಿ ಬಹಿರಂಗಗೊಂಡಿದೆ.

ಸಾಮಾನ್ಯವಾಗಿ ಯಾವುದೇ ಪಕ್ಷದ ಬೂತ್ ಏಜೆಂಟ್‌ ಆಗುವವರು ಸ್ಥಳೀಯರು ಮತ್ತು ಪರಿಚಿತರೇ ಆಗಿರುತ್ತಾರೆ. ಆದರೆ ಆಶ್ಚರ್ಯಕರ ರೀತಿಯಲ್ಲಿ ಇತ್ತೀಚೆಗೆ ಚುನಾವಣಾ ಆಯೋಗವು ರಾಜ್ಯದ ಯಾವುದೇ ವ್ಯಕ್ತಿ, ಯಾವುದೇ ಬೂತ್‌ನಲ್ಲಿ ಬೇಕಾದರೂ ಏಜೆಂಟ್ ಆಗಬಹುದು ಎಂಬ ಆದೇಶ ಜಾರಿಗೊಳಿಸಿದೆ. ಹಾಗಾಗಿ ಚುನಾವಣಾ ಆಯೋಗ ಬಿಜೆಪಿಯೊಂದಿಗೆ ಶಾಮೀಲಾಗಿದೆ ಎಂದು ಟಿಎಂಸಿ ದೂರಿದೆ.

ಬಿಜೆಪಿಗೆ ಪಶ್ಚಿಮ ಬಂಗಾಳದಲ್ಲಿ ಅಭ್ಯರ್ಥಿಗಳೆ ಇಲ್ಲ. ಹಾಗಾಗಿ 5 ಲೋಕಸಭಾ ಸದಸ್ಯರನ್ನು ಮತ್ತು ಕೇಂದ್ರ ಸಚಿವರನ್ನು ವಿಧಾನಸಭಾ ಚುನಾವಣೆಯಲ್ಲಿ ಅದು ಕಣಕ್ಕಿಳಿಸಿದೆ. ಅಲ್ಲದೇ ಅವರಿಗೆ ಬೂತ್ ಏಜೆಂಟ್‌ ಆಗಲು ಸಹ ಕಾರ್ಯಕರ್ತರಿಲ್ಲ. ಹಾಗಾಗಿ ರಾಜ್ಯದ ಯಾವುದೇ ವ್ಯಕ್ತಿ ಯಾವುದೇ ಕ್ಷೇತ್ರದಲ್ಲಿ ಬೂತ್ ಏಜೆಂಟ್ ಆಗಬಹುದೆಂದು ಚುನಾವಣಾ ಆಯೋದಿಂದ ಆದೇಶ ಹೊರಡಿಸಿದೆ. ಇದು ಚುನಾವಣಾ ಆಯೋಗ ಮತ್ತು ಬಿಜೆಪಿ ನಡುವಿನ ಅಪವಿತ್ರ ಮೈತ್ರಿಯಾಗಿದೆ ಎಂದು ಟಿಎಂಸಿ ದೂರಿದೆ.

ನಾನು ಚುನಾವಣಾ ಆಯೋಗದ ಸ್ವಾಯುತ್ತದೆ ಮತ್ತು ನಿಷ್ಪಕ್ಷಪಾತಕ್ಕೆ ಸಂಬಂಧಿಸಿದಂತೆ ಕೇಳುತ್ತಿದ್ದೇನೆ. ಚುನಾವಣಾ ಆಯೋಗವನ್ನು ಯಾರು ನಡೆಸುತ್ತಿದ್ದಾರೆ? ಅಮಿತ್ ಶಾ, ನೀವು ಅದನ್ನು ನಡೆಸುತ್ತಿದ್ದೀರಾ? ನಮಗೆ ಮುಕ್ತ ಮತ್ತು ನ್ಯಾಯಯುತ ಚುನಾವಣೆ ಬೇಕು ಆದರೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಲು ಅಮಿತ್ ಶಾ ಯಾರು? ಅವರು ಚುನಾವಣಾ ಆಯೋಗದ ಕೆಲಸದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲಿ. ಚುನಾವಣಾ ಆಯೋಗವು ನಮ್ಮ ವಿರುದ್ಧ ಕೆಲಸ ಮಾಡುತ್ತಿದೆ” ಎಂದು ಮಮತಾ ಬ್ಯಾನರ್ಜಿ ಬಂಕುರಾದಲ್ಲಿ ನಡೆದ ರ್ಯಾಲಿಯಲ್ಲಿ ಹೇಳಿದ್ದಾರೆ.


ಇದನ್ನೂ ಓದಿ: ಚುನಾವಣಾ ಆಯೋಗ ಬಿಜೆಪಿಯೊಂದಿಗೆ ಶಾಮೀಲಾಗಿದೆ: ಆಡಿಯೋ ಬಿಡುಗಡೆ ಮಾಡಿದ ಟಿಎಂಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...