Homeರಾಜಕೀಯ2002 ಗುಜರಾತ್‌ ಗಲಭೆಕೋರರಿಗೆ ಪಾಠ ಕಲಿಸಿದ್ದೇವೆ ಎಂದ ಅಮಿತ್‌ ಶಾ; ಓವೈಸಿ ತಿರುಗೇಟು

2002 ಗುಜರಾತ್‌ ಗಲಭೆಕೋರರಿಗೆ ಪಾಠ ಕಲಿಸಿದ್ದೇವೆ ಎಂದ ಅಮಿತ್‌ ಶಾ; ಓವೈಸಿ ತಿರುಗೇಟು

- Advertisement -
- Advertisement -

ಗುಜರಾತ್‌ನಲ್ಲಿ ನಡೆದ ಕೋಮುಗಲಭೆಗೆ ಕಾರಣರಾದವರಿಗೆ “ಕಠಿಣ ಪಾಠ ಕಲಿಸಲಾಗಿದೆ”, ಹೀಗಾಗಿ 22 ವರ್ಷಗಳಿಂದ ರಾಜ್ಯವು ಶಾಂತಿಯುತವಾಗಿದೆ ಎಂದು ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ ಗುರುವಾರ ನಡೆದ ಚುನಾವಣಾ ರ್‍ಯಾಲಿಯಲ್ಲಿ ಹೇಳಿದ್ದರು. ಇದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ, “ಅಪರಾಧಿಗಳನ್ನು ಮುಕ್ತವಾಗಿ ನಡೆಯಲು ಅವಕಾಶ ನೀಡಿದ್ದೇ ಅಮಿತ್‌ ಶಾ ಕಲಿಸಿದ ‘ಪಾಠ’ಗಳಾಗಿವೆ” ಎಂದು ಹೇಳಿದ್ದಾರೆ.

ಗುಜರಾತ್‌ನ ಅತಿದೊಡ್ಡ ಮುಸ್ಲಿಂ ಬಾಹುಳ್ಯದ ಪ್ರದೇಶವಾದ ಜುಹಾಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಓವೈಸಿ, “ಅಮಿತ್ ಶಾ ಸಾರ್ವಜನಿಕ ರ್‍ಯಾಲಿಯಲ್ಲಿ ಮಾತನಾಡುತ್ತಾ, ‘2002 ರಲ್ಲಿ ಗುಜರಾತ್‌ನ ಗಲಭೆಕೋರರಿಗೆ ಕಠಿಣ ಪಾಠ ಕಲಿಸಿದ್ದು, ಈ ಮೂಲಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಶಾಶ್ವತ ಶಾಂತಿ ನೆಲೆಸುವಂತೆ ಮಾಡಿದೆ’ ಎಂದು ಹೇಳಿದ್ದಾರೆ. ಈ ಅಹಮದಾಬಾದ್‌ ಕ್ಷೇತ್ರದ ಸಂಸದ ಅಮಿತ್ ಶಾ ಅವರಿಗೆ ನಾನು ಹೇಳಲು ಬಯಸುವುದೇನೆಂದರೆ, 2002 ರಲ್ಲಿ ನೀವು ಕಲಿಸಿದ ಪಾಠದಿಂದಾಗಿ ಬಿಲ್ಕಿಸ್ ಅತ್ಯಾಚಾರಿಗಳಿಗೆ ಮುಕ್ತಿ ಸಿಗುತ್ತದೆ, ನೀವು ಕಲಿಸಿದ ಪಾಠದಿಂದಾಗಿ ಬಿಲ್ಕಿಸ್‌ನ ಮೂರು ವರ್ಷದ ಮಗಳ ಕೊಲೆಗಾರರಿಗೆ ಬಿಡುಗಡೆ ಸಿಗುತ್ತದೆ, ಅಹ್ಸಾನ್ ಜಾಫ್ರಿಯನ್ನು ಕೊಲ್ಲಬಹುದೆಂದು ಎಂಬ ಪಾಠ ಕಲಿಸಿದ್ದೀರಿ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉದ್ವೇಗಗೊಂಡು ಮಾಡನಾಡಿದ ಓವೈಸಿ, 2002 ರ ಕೋಮು ಗಲಭೆಯಲ್ಲಿ ಸಾವಿರಕ್ಕೂ ಹೆಚ್ಚು ಜನರ ಬಲಿ ಪಡೆದ ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ ಮತ್ತು ಬೆಸ್ಟ್‌ ಬೇಕರಿ ಸುಟ್ಟ ಘಟನೆ ಬಗ್ಗೆ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಇತಿಹಾಸದ ವಿರೂಪ ಸರಿಪಡಿಸುವಾಗ ನಮ್ಮನ್ನು ಈಗ ಯಾರು ತಡೆಯುತ್ತಾರೆ?: ಅಮಿತ್ ಶಾ ಪ್ರಶ್ನೆ

“ಮಿಸ್ಟರ್ ಅಮಿತ್ ಶಾ ಅವರೇ ನಾವು ಎಷ್ಟು ಪಾಠಗಳನ್ನು ನೆನಪಿಸಿಕೊಳ್ಳಬೇಕು? ಆದರೆ ನೆನಪಿಡಿ, ಪಾಠ ಕಲಿಸುವುದರಿಂದ ಏನೂ ಆಗುವುದಿಲ್ಲ, ಅನ್ಯಾಯಕ್ಕೊಳಗಾದವರಿಗೆ ನ್ಯಾಯ ನೀಡಿದಾಗ ಶಾಂತಿ ಬಲಗೊಳ್ಳುತ್ತದೆ” ಎಂದು ಅವರು ಹೇಳಿದ್ದಾರೆ.

ಅಮಿತ್‌ ಶಾ ಅವರನ್ನು ಗುರಿಯಾಗಿಸಿಕೊಂಡು ಮಾತನಾಡಿದ ಓವೈಸಿ, “ಅಧಿಕಾರ ಯಾವತ್ತೂ ಒಬ್ಬ ವ್ಯಕ್ತಿಯ ಬಳಿ ಇರುವುದಿಲ್ಲ. ಮುಂದೊಂದು ದಿನ ಅಧಿಕಾರವನ್ನು ಎಲ್ಲರಿಂದಲೂ ಕಿತ್ತುಕೊಳ್ಳುತ್ತಾರೆ. ಅಧಿಕಾರದ ಅಮಲಿನಲ್ಲಿ ಇಂದು ಗೃಹ ಸಚಿವರು ನಾವು ಪಾಠ ಕಲಿಸಿದ್ದೇವೆ ಎಂದು ಹೇಳುತ್ತಿದ್ದಾರೆ. ಆದರೆ ನೀವು ಏನು ಪಾಠ ಕಲಿಸಿದ್ದೀರಿ? ನೀವು ಇಡೀ ದೇಶಕ್ಕೆ ಕುಖ್ಯಾತಿ ಪಡೆದಿದ್ದೀರಿ. ದೆಹಲಿಯಲ್ಲಿ ಕೋಮುಗಲಭೆಗಳು ನಡೆಯುತ್ತಿವೆ, ಆದರೆ ನೀವು ಯಾವ ಪಾಠ ಕಲಿಸಿದ್ದೀರಿ?” ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಅಮಿತ್ ಶಾರನ್ನು ಬಂಧಿಸಿ: ದೆಹಲಿ ಉಪಮುಖ್ಯಮಂತ್ರಿ ಸಿಸೋಡಿಯಾ ಆಗ್ರಹ

ಮುಂಬರುವ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಎಐಎಂಐಎಂ 14 ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಚುನಾವಣೆಯು ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ನಡೆಯಲಿದೆ. ಮೊದಲ ಹಂತದಲ್ಲಿ 89 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಉಳಿದ 93 ವಿಧಾನಸಭಾ ಸ್ಥಾನಗಳಿಗೆ ಎರಡನೇ ಹಂತದ ಮತದಾನ ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...