Homeಮುಖಪುಟಅಸ್ಸಾಂ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಬಹುಮತ ಗಳಿಸಲಿದೆ ಎಂದ ಅಮಿತ್ ಶಾ

ಅಸ್ಸಾಂ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಬಹುಮತ ಗಳಿಸಲಿದೆ ಎಂದ ಅಮಿತ್ ಶಾ

- Advertisement -
- Advertisement -

ಮಾರ್ಚ್ 27 ರಂದು ಮೊದಲ ಹಂತದ ಮತದಾನ ಮುಗಿಸಿರುವ ಅಸ್ಸಾಂ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಬಿಜೆಪಿ ಬಹುಮತದ ಸ್ಥಾನಗಳನ್ನು ಪಡೆಯಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರೆ.

ಅಸ್ಸಾಂನ 47 ಮತ್ತು ಪಶ್ಚಿಮ ಬಂಗಾಳದ 30 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಗೆ ಶನಿವಾರ ಮೊದಲ ಹಂತದ ಮತದಾನ ನಡೆದಿದೆ. ಎರಡು ರಾಜ್ಯಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಬಹುಮತದ ಸ್ಥಾನಗಳನ್ನು ಪಡೆಯಲಿದೆ. ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಬಿಜೆಪಿ 200 ಕ್ಕೂ ಹೆಚ್ಚು ಸ್ಥಾನಗಳನ್ನು ಸುಲಭವಾಗಿ ಗೆಲ್ಲುತ್ತದೆ ಎಂಬುದನ್ನು ಅಲ್ಲಿಂದ ಪಡೆದ ಪ್ರತಿಕ್ರಿಯೆಗಳ ಆಧಾರದ ಮೇಲೆ ಹೇಳುತ್ತೇನೆ ಎಂದು ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ಮೊದಲ ಹಂತದಲ್ಲಿ, ಬಂಗಾಳದ 30 ಸ್ಥಾನಗಳಲ್ಲಿ 26 ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ. ಸ್ಥಾನಗಳು ಇನ್ನು ಹೆಚ್ಚಾಗಬಹುದು. ಅಸ್ಸಾಂನ 47 ಸ್ಥಾನಗಳಲ್ಲಿ 37 ಕ್ಕೂ ಹೆಚ್ಚು ಸ್ಥಾನಗಳನ್ನು ಪಕ್ಷವು ಗೆಲ್ಲುತ್ತದೆ ಎಂಬ ಸ್ಪಷ್ಟ ಸೂಚನೆಗಳನ್ನು ನಾವು ಪಡೆದುಕೊಂಡಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚುನಾವಣಾ ಆಯೋಗ ಬಿಜೆಪಿಯೊಂದಿಗೆ ಶಾಮೀಲಾಗಿದೆ: ಆಡಿಯೋ ಬಿಡುಗಡೆ ಮಾಡಿದ ಟಿಎಂಸಿ

“ಬಂಗಾಳದಲ್ಲಿ ಮೊದಲ ಹಂತದ ಮತದಾನದಲ್ಲಿ 26 ಸ್ಥಾನಗಳನ್ನು ಗೆದ್ದ ನಂತರ, ವಿಧಾನಸಭೆಯಲ್ಲಿ 200 ಸ್ಥಾನಗಳನ್ನು ಗೆಲ್ಲುವುದು ನಮಗೆ ತುಂಬಾ ಸುಲಭ ಎಂದು ನಾನು ನಂಬುತ್ತೇನೆ. ಪಕ್ಷದ ಕಾರ್ಯಕರ್ತರಲ್ಲಿ ಮತ್ತು ನನಗೆ ಈ ಬಗ್ಗೆ ಸಂಪೂರ್ಣ ನಂಬಿಕೆ ಇದೆ” ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಶೇಕಡಾ 84 ಕ್ಕಿಂತ ಹೆಚ್ಚು ಮತ್ತು ಅಸ್ಸಾಂನಲ್ಲಿ ಶೇಕಡಾ 79 ಕ್ಕಿಂತ ಹೆಚ್ಚು ಮತದಾನ ಆಗಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಅಮಿತ್ ಶಾ, ಹೆಚ್ಚಿನ ಸಂಖ್ಯೆಯಲ್ಲಿ ಮತದಾನದಲ್ಲಿ ಭಾಗವಹಿಸಿದ್ದಕ್ಕಾಗಿ ಎರಡೂ ರಾಜ್ಯಗಳ ಜನರಿಗೆ ಧನ್ಯವಾದ ತಿಳಿಸಿದ್ದಾರೆ.

ಇತ್ತ, ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಆಯೋಗ ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸುವ ಬಿಜೆಪಿ ಮುಖಂಡರ ನಡುವಿನ ಫೋನ್ ಮಾತುಕತೆ ಆಡಿಯೋವನ್ನು ಟಿಎಂಸಿ ಬಿಡುಗಡೆ ಮಾಡಿದ್ದು ದೊಡ್ಡ ಕೋಲಾಹಲಕ್ಕೆ ಕಾರಣವಾಗಿದೆ.


ಇದನ್ನೂ ಓದಿ: ಕೇಂದ್ರದ ಸರ್ವಾಧಿಕಾರಿ ಧೋರಣೆ ಹೇಳಿಕೆ: ಮಾಧುಸ್ವಾಮಿ ಅಭಿನಂದಿಸಿದ ಕಾಂಗ್ರೆಸ್ – ತೇಜಸ್ವಿ ಸೂರ್ಯ ಆಕ್ಷೇಪ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಅಸಂವಿಧಾನಿಕ’ ಚುನಾವಣಾ ಬಾಂಡ್ ಯೋಜನೆಯನ್ನು ಸಮರ್ಥಿಸಿಕೊಂಡ ಪ್ರಧಾನಿ ಮೋದಿ

0
"ಚುನಾವಣಾ ಬಾಂಡ್ ಯೋಜನೆಯ ರದ್ದತಿ ಕುರಿತು ಪ್ರಾಮಾಣಿಕವಾಗಿ ಚಿಂತಿಸಿದಾಗ ಪ್ರತಿಯೊಬ್ಬರು ವಿಷಾದಿಸಲಿದ್ದಾರೆ. ಚುನಾವಣಾ ಬಾಂಡ್ ಯೋಜನೆಯ ರದ್ದತಿ ದೇಶವನ್ನು ಸಂಪೂರ್ಣವಾಗಿ ಕಪ್ಪು ಹಣದೆಡೆಗೆ ತಳ್ಳಲಿದೆ" ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸುದ್ದಿ ಸಂಸ್ಥೆ...