Homeಮುಖಪುಟವಿವಾದಾತ್ಮಕ AFPSA ಅಡಿಯಲ್ಲಿರುವ ಪ್ರದೇಶಗಳನ್ನು ಕಡಿಮೆಗೊಳಿಸಲಾಗುವುದು ಎಂದ ಅಮಿತ್ ಶಾ!

ವಿವಾದಾತ್ಮಕ AFPSA ಅಡಿಯಲ್ಲಿರುವ ಪ್ರದೇಶಗಳನ್ನು ಕಡಿಮೆಗೊಳಿಸಲಾಗುವುದು ಎಂದ ಅಮಿತ್ ಶಾ!

- Advertisement -
- Advertisement -

ನಾಗಾಲ್ಯಾಂಡ್, ಅಸ್ಸಾಂ ಮತ್ತು ಮಣಿಪುರದಲ್ಲಿ ಜಾರಿಯಲ್ಲಿರುವ ವಿವಾದಾತ್ಮಕ ಕಾನೂನಾಗಿರುವ, ‘ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆ’ಯಡಿಯಲ್ಲಿ ಒಳಗೊಂಡಿರುವ ಪ್ರದೇಶಗಳನ್ನು ಕಡಿಮೆಗೊಳಿಸಲಾಗುವುದು ಎಂದು ಗೃಹ ಸಚಿವ ಅಮಿತ್ ಶಾ ಅವರು ಪ್ರಮುಖವಾಗಿ ಈಶಾನ್ಯ ರಾಜ್ಯಗಳಿಗೆ ಗುರುವಾರ ತಿಳಿಸಿದ್ದಾರೆ.

ಈ ಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಶ್ಲಾಘಿಸಿದ ಅವರು, “ನಿರಂತರ ಪ್ರಯತ್ನಗಳು ಮತ್ತು ದಂಗೆಯನ್ನು ಕೊನೆಗೊಳಿಸಲು ಹಾಗೂ ಈಶಾನ್ಯದಲ್ಲಿ ಶಾಶ್ವತ ಶಾಂತಿಯನ್ನು ತರಲು ನಡೆದ ಹಲವಾರು ಒಪ್ಪಂದಗಳಿಂದಾಗಿ ಸುಧಾರಿತ ಭದ್ರತಾ ಪರಿಸ್ಥಿತಿ ಮತ್ತು ವೇಗದ ಅಭಿವೃದ್ಧಿ ಸಾಧ್ಯವಾಗಿದೆ” ಎಂದು ಹೇಳಿದ್ದಾರೆ.

ಈಶಾನ್ಯ ಭಾಗದ ಜನರನ್ನು ಅಭಿನಂದಿಸುತ್ತಾ, ಹಿಂದೆ ಬಂದ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ಈ ಪ್ರದೇಶವು ದಶಕಗಳಿಂದ ನಿರ್ಲಕ್ಷಿಸಲ್ಪಟ್ಟಿದೆ ಮತ್ತು ಈಗ ಶಾಂತಿ, ಸಮೃದ್ಧಿ ಮತ್ತು ಅಭೂತಪೂರ್ವ ಅಭಿವೃದ್ಧಿಯ ಹೊಸ ಯುಗಕ್ಕೆ ಸಾಕ್ಷಿಯಾಗಿದೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಮೂರು ಬಂಡಾಯ ಪೀಡಿತ ರಾಜ್ಯಗಳಿಂದ AFSPAಯನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳಲಾಗಿದೆ ಎಂಬುವುದು ಈ ನಿರ್ಧಾರವು ಸೂಚಿಸುವುದಿಲ್ಲ. ಕಾಯಿದೆಯು ಇನ್ನೂ ಕೆಲವು ಪ್ರದೇಶಗಳಲ್ಲಿ ಜಾರಿಯಲ್ಲಿರುತ್ತದೆ ಎಂದು ಗೃಹ ಸಚಿವಾಲಯದ ವಕ್ತಾರರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ಹೇಳಿದೆ.

AFSPA ಕಾಯಿದೆಯು ಭದ್ರತಾ ಪಡೆಗಳಿಗೆ ಎಲ್ಲಿ ಬೇಕಾದರೂ ಕಾರ್ಯಾಚರಣೆ ನಡೆಸಲು ಮತ್ತು ಯಾವುದೇ ಪೂರ್ವ ವಾರಂಟ್ ಇಲ್ಲದೆ ಯಾರನ್ನಾದರೂ ಬಂಧಿಸಲು ಅಧಿಕಾರ ನೀಡುತ್ತದೆ. ಒಂದು ವೇಳೆ ಕಾರ್ಯಾಚರಣೆಯು ತಪ್ಪಾದ ಸಂದರ್ಭದಲ್ಲಿ ಭದ್ರತಾ ಪಡೆಗಳಿಗೆ ಇದು ಒಂದು ನಿರ್ದಿಷ್ಟ ಮಟ್ಟದ ವಿನಾಯಿತಿ ನೀಡುತ್ತದೆ. ಇದು ವ್ಯಾಪಕ ಅಧಿಕಾರವನ್ನು ನೀಡುವುದರ ಜೊತೆಗೆ, ಇದು ನಾಗರಿಕ ವಿಚಾರಣೆಯ ವಿರುದ್ಧ ಪಡೆಗಳಿಗೆ ಕಾನೂನು ವಿನಾಯಿತಿ ನೀಡುತ್ತದೆ.

ಇದನ್ನೂ ಓದಿ: ಧಾರ್ಮಿಕ ವಿಭಜನೆಯು ಭಾರತದ ಐಟಿ ನಾಯಕತ್ವವನ್ನು ನಾಶಪಡಿಸುತ್ತದೆ: ಮಜುಂದಾರ್ ಶಾ

ಆದಾಗ್ಯೂ, ಕಾಯ್ದೆಯ ಅಡಿಯಲ್ಲಿ ಸೇನೆಯು ಮಾನವ ಹಕ್ಕುಗಳ ಉಲ್ಲಂಘನೆ ಮಾಡುತ್ತಿದೆ ಎಂದು ಆರೋಪಿಸಿ ಹೋರಾಟಗಾರದು ಅದನ್ನು ವಾಪಾಸು ಪಡೆಯುವಂತೆ ದಶಕಗಳಿಂದಲೂ ಕರೆ ನೀಡುತ್ತಿದ್ದಾರೆ. ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಕ್ರಿಮಿನಲ್ ಕೃತ್ಯಗಳಲ್ಲಿ ತೊಡಗಿರುವ ಅಧಿಕಾರಿಗಳಿಗೆ AFSPA ರಕ್ಷಣೆ ನೀಡುತ್ತದೆ ಎಂದು ಕಾಯಿದೆಯ ವಿಮರ್ಶಕರು ಹೇಳುತ್ತಿದ್ದಾರೆ. ಯಾಕೆಂದರೆ ಈ ಅಧಿಕಾರಿಗಳನ್ನು ನಾಗರಿಕ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಿಸಲಾಗುವುದಿಲ್ಲ ಮತ್ತು ಮಿಲಿಟರಿಯ ಆಂತರಿಕ ಪ್ರಕ್ರಿಯೆಗಳು ಅಪಾರದರ್ಶಕವಾಗಿವೆ ಎಂದು ಆರೋಪಿಸಲಾಗಿದೆ.

ಕಾಯಿದೆಯಡಿಯಲ್ಲಿ, ನಾಗರಿಕ ನ್ಯಾಯಾಲಯಗಳಲ್ಲಿ ಸೇನೆ ಅಥವಾ ಅರೆಸೇನಾ ಪಡೆಗಳನ್ನು ವಿಚಾರಣೆಗೆ ಒಳಪಡಿಸಲು ಸ್ಥಳೀಯ ಪೊಲೀಸರಿಗೆ ಕೇಂದ್ರ ಸರ್ಕಾರದ ಪೂರ್ವಾನುಮತಿ ಅಗತ್ಯವಿದೆ.

ಕಳೆದ ವರ್ಷ ಡಿಸೆಂಬರ್ 4 ರಂದು ನಾಗಾಲ್ಯಾಂಡ್‌ನ ಸೋಮ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಗುಂಡಿನ ದಾಳಿಯಲ್ಲಿ 14 ನಾಗರಿಕರು ಸಾವನ್ನಪ್ಪಿದ ನಂತರ ಕಾಯಿದೆಯನ್ನು ರದ್ದುಪಡಿಸುವ ನಿರಂತರ ಬೇಡಿಕೆಗೆ ಮತ್ತಷ್ಟು ಬಲ ಬಂದಿದೆ. ಹೀಗಾಗಿ ಅಮಿತ್‌ ಷಾ ಅವರ ಇಂದಿನ ಘೋಷಣೆಯು ಮಹತ್ವದ್ದೆನಿಸಿದೆ.

ಮಣಿಪುರದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ, ವಿವಾದಾತ್ಮಕ ಕಾಯ್ದೆಯನ್ನು ರಾಜ್ಯದಿಂದ ತೆಗೆದುಹಾಕುವ ಬೇಡಿಕೆಯನ್ನು ಪರಿಹರಿಸುವುದಾಗಿ ಎಲ್ಲಾ ಪಕ್ಷಗಳು ಭರವಸೆ ನೀಡಿದ್ದವು. ಎರಡನೇ ಅವಧಿಗೆ ಮಣಿಪುರ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಏರಿದ ಬಿರೇನ್ ಸಿಂಗ್, ಎಎಫ್‌ಎಸ್‌ಪಿಎ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿ ರಾಜ್ಯ ಚುನಾವಣೆಗಳನ್ನು ಎದುರಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಗೂಂಡಾಗಿರಿಯಿಂದ ದೇಶ ಅಭಿವೃದ್ದಿಯಾಗುವುದಿಲ್ಲ: ಬಿಜೆಪಿ ವಿರುದ್ಧ ಕಿಡಿಕಾರಿದ ಅರವಿಂದ್ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...