Homeಮುಖಪುಟವಿವಾದಾತ್ಮಕ AFPSA ಅಡಿಯಲ್ಲಿರುವ ಪ್ರದೇಶಗಳನ್ನು ಕಡಿಮೆಗೊಳಿಸಲಾಗುವುದು ಎಂದ ಅಮಿತ್ ಶಾ!

ವಿವಾದಾತ್ಮಕ AFPSA ಅಡಿಯಲ್ಲಿರುವ ಪ್ರದೇಶಗಳನ್ನು ಕಡಿಮೆಗೊಳಿಸಲಾಗುವುದು ಎಂದ ಅಮಿತ್ ಶಾ!

- Advertisement -
- Advertisement -

ನಾಗಾಲ್ಯಾಂಡ್, ಅಸ್ಸಾಂ ಮತ್ತು ಮಣಿಪುರದಲ್ಲಿ ಜಾರಿಯಲ್ಲಿರುವ ವಿವಾದಾತ್ಮಕ ಕಾನೂನಾಗಿರುವ, ‘ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆ’ಯಡಿಯಲ್ಲಿ ಒಳಗೊಂಡಿರುವ ಪ್ರದೇಶಗಳನ್ನು ಕಡಿಮೆಗೊಳಿಸಲಾಗುವುದು ಎಂದು ಗೃಹ ಸಚಿವ ಅಮಿತ್ ಶಾ ಅವರು ಪ್ರಮುಖವಾಗಿ ಈಶಾನ್ಯ ರಾಜ್ಯಗಳಿಗೆ ಗುರುವಾರ ತಿಳಿಸಿದ್ದಾರೆ.

ಈ ಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಶ್ಲಾಘಿಸಿದ ಅವರು, “ನಿರಂತರ ಪ್ರಯತ್ನಗಳು ಮತ್ತು ದಂಗೆಯನ್ನು ಕೊನೆಗೊಳಿಸಲು ಹಾಗೂ ಈಶಾನ್ಯದಲ್ಲಿ ಶಾಶ್ವತ ಶಾಂತಿಯನ್ನು ತರಲು ನಡೆದ ಹಲವಾರು ಒಪ್ಪಂದಗಳಿಂದಾಗಿ ಸುಧಾರಿತ ಭದ್ರತಾ ಪರಿಸ್ಥಿತಿ ಮತ್ತು ವೇಗದ ಅಭಿವೃದ್ಧಿ ಸಾಧ್ಯವಾಗಿದೆ” ಎಂದು ಹೇಳಿದ್ದಾರೆ.

ಈಶಾನ್ಯ ಭಾಗದ ಜನರನ್ನು ಅಭಿನಂದಿಸುತ್ತಾ, ಹಿಂದೆ ಬಂದ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ಈ ಪ್ರದೇಶವು ದಶಕಗಳಿಂದ ನಿರ್ಲಕ್ಷಿಸಲ್ಪಟ್ಟಿದೆ ಮತ್ತು ಈಗ ಶಾಂತಿ, ಸಮೃದ್ಧಿ ಮತ್ತು ಅಭೂತಪೂರ್ವ ಅಭಿವೃದ್ಧಿಯ ಹೊಸ ಯುಗಕ್ಕೆ ಸಾಕ್ಷಿಯಾಗಿದೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಮೂರು ಬಂಡಾಯ ಪೀಡಿತ ರಾಜ್ಯಗಳಿಂದ AFSPAಯನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳಲಾಗಿದೆ ಎಂಬುವುದು ಈ ನಿರ್ಧಾರವು ಸೂಚಿಸುವುದಿಲ್ಲ. ಕಾಯಿದೆಯು ಇನ್ನೂ ಕೆಲವು ಪ್ರದೇಶಗಳಲ್ಲಿ ಜಾರಿಯಲ್ಲಿರುತ್ತದೆ ಎಂದು ಗೃಹ ಸಚಿವಾಲಯದ ವಕ್ತಾರರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ಹೇಳಿದೆ.

AFSPA ಕಾಯಿದೆಯು ಭದ್ರತಾ ಪಡೆಗಳಿಗೆ ಎಲ್ಲಿ ಬೇಕಾದರೂ ಕಾರ್ಯಾಚರಣೆ ನಡೆಸಲು ಮತ್ತು ಯಾವುದೇ ಪೂರ್ವ ವಾರಂಟ್ ಇಲ್ಲದೆ ಯಾರನ್ನಾದರೂ ಬಂಧಿಸಲು ಅಧಿಕಾರ ನೀಡುತ್ತದೆ. ಒಂದು ವೇಳೆ ಕಾರ್ಯಾಚರಣೆಯು ತಪ್ಪಾದ ಸಂದರ್ಭದಲ್ಲಿ ಭದ್ರತಾ ಪಡೆಗಳಿಗೆ ಇದು ಒಂದು ನಿರ್ದಿಷ್ಟ ಮಟ್ಟದ ವಿನಾಯಿತಿ ನೀಡುತ್ತದೆ. ಇದು ವ್ಯಾಪಕ ಅಧಿಕಾರವನ್ನು ನೀಡುವುದರ ಜೊತೆಗೆ, ಇದು ನಾಗರಿಕ ವಿಚಾರಣೆಯ ವಿರುದ್ಧ ಪಡೆಗಳಿಗೆ ಕಾನೂನು ವಿನಾಯಿತಿ ನೀಡುತ್ತದೆ.

ಇದನ್ನೂ ಓದಿ: ಧಾರ್ಮಿಕ ವಿಭಜನೆಯು ಭಾರತದ ಐಟಿ ನಾಯಕತ್ವವನ್ನು ನಾಶಪಡಿಸುತ್ತದೆ: ಮಜುಂದಾರ್ ಶಾ

ಆದಾಗ್ಯೂ, ಕಾಯ್ದೆಯ ಅಡಿಯಲ್ಲಿ ಸೇನೆಯು ಮಾನವ ಹಕ್ಕುಗಳ ಉಲ್ಲಂಘನೆ ಮಾಡುತ್ತಿದೆ ಎಂದು ಆರೋಪಿಸಿ ಹೋರಾಟಗಾರದು ಅದನ್ನು ವಾಪಾಸು ಪಡೆಯುವಂತೆ ದಶಕಗಳಿಂದಲೂ ಕರೆ ನೀಡುತ್ತಿದ್ದಾರೆ. ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಕ್ರಿಮಿನಲ್ ಕೃತ್ಯಗಳಲ್ಲಿ ತೊಡಗಿರುವ ಅಧಿಕಾರಿಗಳಿಗೆ AFSPA ರಕ್ಷಣೆ ನೀಡುತ್ತದೆ ಎಂದು ಕಾಯಿದೆಯ ವಿಮರ್ಶಕರು ಹೇಳುತ್ತಿದ್ದಾರೆ. ಯಾಕೆಂದರೆ ಈ ಅಧಿಕಾರಿಗಳನ್ನು ನಾಗರಿಕ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಿಸಲಾಗುವುದಿಲ್ಲ ಮತ್ತು ಮಿಲಿಟರಿಯ ಆಂತರಿಕ ಪ್ರಕ್ರಿಯೆಗಳು ಅಪಾರದರ್ಶಕವಾಗಿವೆ ಎಂದು ಆರೋಪಿಸಲಾಗಿದೆ.

ಕಾಯಿದೆಯಡಿಯಲ್ಲಿ, ನಾಗರಿಕ ನ್ಯಾಯಾಲಯಗಳಲ್ಲಿ ಸೇನೆ ಅಥವಾ ಅರೆಸೇನಾ ಪಡೆಗಳನ್ನು ವಿಚಾರಣೆಗೆ ಒಳಪಡಿಸಲು ಸ್ಥಳೀಯ ಪೊಲೀಸರಿಗೆ ಕೇಂದ್ರ ಸರ್ಕಾರದ ಪೂರ್ವಾನುಮತಿ ಅಗತ್ಯವಿದೆ.

ಕಳೆದ ವರ್ಷ ಡಿಸೆಂಬರ್ 4 ರಂದು ನಾಗಾಲ್ಯಾಂಡ್‌ನ ಸೋಮ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಗುಂಡಿನ ದಾಳಿಯಲ್ಲಿ 14 ನಾಗರಿಕರು ಸಾವನ್ನಪ್ಪಿದ ನಂತರ ಕಾಯಿದೆಯನ್ನು ರದ್ದುಪಡಿಸುವ ನಿರಂತರ ಬೇಡಿಕೆಗೆ ಮತ್ತಷ್ಟು ಬಲ ಬಂದಿದೆ. ಹೀಗಾಗಿ ಅಮಿತ್‌ ಷಾ ಅವರ ಇಂದಿನ ಘೋಷಣೆಯು ಮಹತ್ವದ್ದೆನಿಸಿದೆ.

ಮಣಿಪುರದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ, ವಿವಾದಾತ್ಮಕ ಕಾಯ್ದೆಯನ್ನು ರಾಜ್ಯದಿಂದ ತೆಗೆದುಹಾಕುವ ಬೇಡಿಕೆಯನ್ನು ಪರಿಹರಿಸುವುದಾಗಿ ಎಲ್ಲಾ ಪಕ್ಷಗಳು ಭರವಸೆ ನೀಡಿದ್ದವು. ಎರಡನೇ ಅವಧಿಗೆ ಮಣಿಪುರ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಏರಿದ ಬಿರೇನ್ ಸಿಂಗ್, ಎಎಫ್‌ಎಸ್‌ಪಿಎ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿ ರಾಜ್ಯ ಚುನಾವಣೆಗಳನ್ನು ಎದುರಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಗೂಂಡಾಗಿರಿಯಿಂದ ದೇಶ ಅಭಿವೃದ್ದಿಯಾಗುವುದಿಲ್ಲ: ಬಿಜೆಪಿ ವಿರುದ್ಧ ಕಿಡಿಕಾರಿದ ಅರವಿಂದ್ ಕೇಜ್ರಿವಾಲ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...