Homeಮುಖಪುಟವಿವಾದಾತ್ಮಕ AFPSA ಅಡಿಯಲ್ಲಿರುವ ಪ್ರದೇಶಗಳನ್ನು ಕಡಿಮೆಗೊಳಿಸಲಾಗುವುದು ಎಂದ ಅಮಿತ್ ಶಾ!

ವಿವಾದಾತ್ಮಕ AFPSA ಅಡಿಯಲ್ಲಿರುವ ಪ್ರದೇಶಗಳನ್ನು ಕಡಿಮೆಗೊಳಿಸಲಾಗುವುದು ಎಂದ ಅಮಿತ್ ಶಾ!

- Advertisement -
- Advertisement -

ನಾಗಾಲ್ಯಾಂಡ್, ಅಸ್ಸಾಂ ಮತ್ತು ಮಣಿಪುರದಲ್ಲಿ ಜಾರಿಯಲ್ಲಿರುವ ವಿವಾದಾತ್ಮಕ ಕಾನೂನಾಗಿರುವ, ‘ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆ’ಯಡಿಯಲ್ಲಿ ಒಳಗೊಂಡಿರುವ ಪ್ರದೇಶಗಳನ್ನು ಕಡಿಮೆಗೊಳಿಸಲಾಗುವುದು ಎಂದು ಗೃಹ ಸಚಿವ ಅಮಿತ್ ಶಾ ಅವರು ಪ್ರಮುಖವಾಗಿ ಈಶಾನ್ಯ ರಾಜ್ಯಗಳಿಗೆ ಗುರುವಾರ ತಿಳಿಸಿದ್ದಾರೆ.

ಈ ಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಶ್ಲಾಘಿಸಿದ ಅವರು, “ನಿರಂತರ ಪ್ರಯತ್ನಗಳು ಮತ್ತು ದಂಗೆಯನ್ನು ಕೊನೆಗೊಳಿಸಲು ಹಾಗೂ ಈಶಾನ್ಯದಲ್ಲಿ ಶಾಶ್ವತ ಶಾಂತಿಯನ್ನು ತರಲು ನಡೆದ ಹಲವಾರು ಒಪ್ಪಂದಗಳಿಂದಾಗಿ ಸುಧಾರಿತ ಭದ್ರತಾ ಪರಿಸ್ಥಿತಿ ಮತ್ತು ವೇಗದ ಅಭಿವೃದ್ಧಿ ಸಾಧ್ಯವಾಗಿದೆ” ಎಂದು ಹೇಳಿದ್ದಾರೆ.

ಈಶಾನ್ಯ ಭಾಗದ ಜನರನ್ನು ಅಭಿನಂದಿಸುತ್ತಾ, ಹಿಂದೆ ಬಂದ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ಈ ಪ್ರದೇಶವು ದಶಕಗಳಿಂದ ನಿರ್ಲಕ್ಷಿಸಲ್ಪಟ್ಟಿದೆ ಮತ್ತು ಈಗ ಶಾಂತಿ, ಸಮೃದ್ಧಿ ಮತ್ತು ಅಭೂತಪೂರ್ವ ಅಭಿವೃದ್ಧಿಯ ಹೊಸ ಯುಗಕ್ಕೆ ಸಾಕ್ಷಿಯಾಗಿದೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಮೂರು ಬಂಡಾಯ ಪೀಡಿತ ರಾಜ್ಯಗಳಿಂದ AFSPAಯನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳಲಾಗಿದೆ ಎಂಬುವುದು ಈ ನಿರ್ಧಾರವು ಸೂಚಿಸುವುದಿಲ್ಲ. ಕಾಯಿದೆಯು ಇನ್ನೂ ಕೆಲವು ಪ್ರದೇಶಗಳಲ್ಲಿ ಜಾರಿಯಲ್ಲಿರುತ್ತದೆ ಎಂದು ಗೃಹ ಸಚಿವಾಲಯದ ವಕ್ತಾರರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ಹೇಳಿದೆ.

AFSPA ಕಾಯಿದೆಯು ಭದ್ರತಾ ಪಡೆಗಳಿಗೆ ಎಲ್ಲಿ ಬೇಕಾದರೂ ಕಾರ್ಯಾಚರಣೆ ನಡೆಸಲು ಮತ್ತು ಯಾವುದೇ ಪೂರ್ವ ವಾರಂಟ್ ಇಲ್ಲದೆ ಯಾರನ್ನಾದರೂ ಬಂಧಿಸಲು ಅಧಿಕಾರ ನೀಡುತ್ತದೆ. ಒಂದು ವೇಳೆ ಕಾರ್ಯಾಚರಣೆಯು ತಪ್ಪಾದ ಸಂದರ್ಭದಲ್ಲಿ ಭದ್ರತಾ ಪಡೆಗಳಿಗೆ ಇದು ಒಂದು ನಿರ್ದಿಷ್ಟ ಮಟ್ಟದ ವಿನಾಯಿತಿ ನೀಡುತ್ತದೆ. ಇದು ವ್ಯಾಪಕ ಅಧಿಕಾರವನ್ನು ನೀಡುವುದರ ಜೊತೆಗೆ, ಇದು ನಾಗರಿಕ ವಿಚಾರಣೆಯ ವಿರುದ್ಧ ಪಡೆಗಳಿಗೆ ಕಾನೂನು ವಿನಾಯಿತಿ ನೀಡುತ್ತದೆ.

ಇದನ್ನೂ ಓದಿ: ಧಾರ್ಮಿಕ ವಿಭಜನೆಯು ಭಾರತದ ಐಟಿ ನಾಯಕತ್ವವನ್ನು ನಾಶಪಡಿಸುತ್ತದೆ: ಮಜುಂದಾರ್ ಶಾ

ಆದಾಗ್ಯೂ, ಕಾಯ್ದೆಯ ಅಡಿಯಲ್ಲಿ ಸೇನೆಯು ಮಾನವ ಹಕ್ಕುಗಳ ಉಲ್ಲಂಘನೆ ಮಾಡುತ್ತಿದೆ ಎಂದು ಆರೋಪಿಸಿ ಹೋರಾಟಗಾರದು ಅದನ್ನು ವಾಪಾಸು ಪಡೆಯುವಂತೆ ದಶಕಗಳಿಂದಲೂ ಕರೆ ನೀಡುತ್ತಿದ್ದಾರೆ. ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಕ್ರಿಮಿನಲ್ ಕೃತ್ಯಗಳಲ್ಲಿ ತೊಡಗಿರುವ ಅಧಿಕಾರಿಗಳಿಗೆ AFSPA ರಕ್ಷಣೆ ನೀಡುತ್ತದೆ ಎಂದು ಕಾಯಿದೆಯ ವಿಮರ್ಶಕರು ಹೇಳುತ್ತಿದ್ದಾರೆ. ಯಾಕೆಂದರೆ ಈ ಅಧಿಕಾರಿಗಳನ್ನು ನಾಗರಿಕ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಿಸಲಾಗುವುದಿಲ್ಲ ಮತ್ತು ಮಿಲಿಟರಿಯ ಆಂತರಿಕ ಪ್ರಕ್ರಿಯೆಗಳು ಅಪಾರದರ್ಶಕವಾಗಿವೆ ಎಂದು ಆರೋಪಿಸಲಾಗಿದೆ.

ಕಾಯಿದೆಯಡಿಯಲ್ಲಿ, ನಾಗರಿಕ ನ್ಯಾಯಾಲಯಗಳಲ್ಲಿ ಸೇನೆ ಅಥವಾ ಅರೆಸೇನಾ ಪಡೆಗಳನ್ನು ವಿಚಾರಣೆಗೆ ಒಳಪಡಿಸಲು ಸ್ಥಳೀಯ ಪೊಲೀಸರಿಗೆ ಕೇಂದ್ರ ಸರ್ಕಾರದ ಪೂರ್ವಾನುಮತಿ ಅಗತ್ಯವಿದೆ.

ಕಳೆದ ವರ್ಷ ಡಿಸೆಂಬರ್ 4 ರಂದು ನಾಗಾಲ್ಯಾಂಡ್‌ನ ಸೋಮ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಗುಂಡಿನ ದಾಳಿಯಲ್ಲಿ 14 ನಾಗರಿಕರು ಸಾವನ್ನಪ್ಪಿದ ನಂತರ ಕಾಯಿದೆಯನ್ನು ರದ್ದುಪಡಿಸುವ ನಿರಂತರ ಬೇಡಿಕೆಗೆ ಮತ್ತಷ್ಟು ಬಲ ಬಂದಿದೆ. ಹೀಗಾಗಿ ಅಮಿತ್‌ ಷಾ ಅವರ ಇಂದಿನ ಘೋಷಣೆಯು ಮಹತ್ವದ್ದೆನಿಸಿದೆ.

ಮಣಿಪುರದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ, ವಿವಾದಾತ್ಮಕ ಕಾಯ್ದೆಯನ್ನು ರಾಜ್ಯದಿಂದ ತೆಗೆದುಹಾಕುವ ಬೇಡಿಕೆಯನ್ನು ಪರಿಹರಿಸುವುದಾಗಿ ಎಲ್ಲಾ ಪಕ್ಷಗಳು ಭರವಸೆ ನೀಡಿದ್ದವು. ಎರಡನೇ ಅವಧಿಗೆ ಮಣಿಪುರ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಏರಿದ ಬಿರೇನ್ ಸಿಂಗ್, ಎಎಫ್‌ಎಸ್‌ಪಿಎ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿ ರಾಜ್ಯ ಚುನಾವಣೆಗಳನ್ನು ಎದುರಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಗೂಂಡಾಗಿರಿಯಿಂದ ದೇಶ ಅಭಿವೃದ್ದಿಯಾಗುವುದಿಲ್ಲ: ಬಿಜೆಪಿ ವಿರುದ್ಧ ಕಿಡಿಕಾರಿದ ಅರವಿಂದ್ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...