Homeಮುಖಪುಟಪಶ್ಚಿಮ ಬಂಗಾಳ ಪ್ರವಾಸ: ಜೆ.ಪಿ.ನಡ್ಡಾ ಬಿಟ್ಟು ಅಮಿತ್ ಶಾಗೆ ಮಣೆ ಹಾಕಿದ ಬಿಜೆಪಿ!

ಪಶ್ಚಿಮ ಬಂಗಾಳ ಪ್ರವಾಸ: ಜೆ.ಪಿ.ನಡ್ಡಾ ಬಿಟ್ಟು ಅಮಿತ್ ಶಾಗೆ ಮಣೆ ಹಾಕಿದ ಬಿಜೆಪಿ!

ಪಶ್ಚಿಮ ಬಂಗಾಳದ ಬಿಜೆಪಿ ನಾಯಕರು ಮತ್ತು ರಾಜ್ಯಪಾಲ ಜಗದೀಪ್ ಧಂಕರ್ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕೆಂದು ಒತ್ತಾಯಿಸುತ್ತಿದ್ದಾರೆ.

- Advertisement -
- Advertisement -

ಮುಂದಿನ ವರ್ಷ ನಡೆಯಲಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಹೇಗಾದರೂ ಪಕ್ಷವನ್ನು ಅಧಿಕಾರಕ್ಕೆ ತರಲು ಬಿಜೆಪಿ ಶತಪ್ರಯತ್ನ ನಡೆಸುತ್ತಿದೆ. ಈ ಉದ್ದೇಶದಿಂದ ಪಕ್ಷದ ಸಾಂಸ್ಥಿಕ ವಿಷಯಗಳ ಬಗ್ಗೆ ಮಾಹಿತಿ ಪಡೆಯಲು ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಮುಖಂಡ ಅಮಿತ್ ಶಾ ನವೆಂಬರ್ 5 ರಿಂದ ಎರಡು ದಿನಗಳ ಕಾಲ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ.

ಆದರೆ ಪಶ್ಚಿಮ ಬಂಗಾಳಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನವೆಂಬರ್ 6ಕ್ಕೆ ಭೇಟಿ ನೀಡಬೇಕಿತ್ತು. ಆದರೆ ತಡ ರಾತ್ರಿಯ ಬೆಳವಣಿಗೆಯಲ್ಲಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ನಿಗದಿತ ಭೇಟಿ ರದ್ದುಗೊಂಡಿದೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಯಂತನ್ ಬಸು ಮಾಹಿತಿ ನೀಡಿದ್ದಾರೆ.

“ಜೆ.ಪಿ.ನಡ್ಡಾ ಜಿ ಅವರ ಭೇಟಿ ರದ್ದುಗೊಂಡಿದೆ. ಅಮಿತ್ ಶಾ ಜಿ ಅವರು ನವೆಂಬರ್ 5 ರಿಂದ ಎರಡು ದಿನಗಳ ಪಶ್ಚಿಮ ಬಂಗಾಳದಲ್ಲಿರುತ್ತಾರೆ ಎಂದು ನಿರ್ಧರಿಸಲಾಗಿದೆ” ಎಂದು ತಿಳಿಸಿದ್ದಾರೆ. ’ಅಮಿತ್ ಶಾ ನವೆಂಬರ್ 5 ರಂದು ಮದಿನಿಪುರ ಸಾಂಸ್ಥಿಕ ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆಯಿದೆ ಮತ್ತು ಮರುದಿನ ಅವರು ರಾಜ್ಯದ ಪಕ್ಷದ ಮುಖಂಡರನ್ನು ಭೇಟಿಯಾಗಲಿದ್ದಾರೆ. ಈಗಿನ ವೇಳಾಪಟ್ಟಿಯನ್ನು ಇನ್ನು ಅಂತಿಮಗೊಳಿಸಲಾಗಿಲ್ಲ’ ಎಂದು ಬಸು ತಿಳಿಸಿದ್ದಾರೆ.

ಅಮಿತ್ ಶಾ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಪಕ್ಷ ಬೆಳವಣಿಗೆಯಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದು, ಬಂಗಾಳ ಪ್ರವಾಸದಲ್ಲಿ ಸಂಘಟನೆಯ ವಿವಿಧ ಅಂಶಗಳನ್ನು ಪರಿಶೀಲಿಸಲಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷದ ಕಾರ್ಯತಂತ್ರದ ಬಗ್ಗೆ ಚರ್ಚಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಬಂಗಾಳದ ಉಸ್ತುವಾರಿ ಕೈಲಾಶ್ ವಿಜಯವರ್ಗಿಯಾ ಹೇಳಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದ ನಿರುದ್ಯೋಗ ದರ, ದೇಶದ ಒಟ್ಟು ನಿರುದ್ಯೋಗ ದರಕ್ಕಿಂತ ಉತ್ತಮ: ಮಮತಾ ಬ್ಯಾನರ್ಜಿ

ಅಮಿತ್ ಶಾ, ಪಕ್ಷದ ಹಿರಿಯ ನಾಯಕರಾದ ಕೈಲಾಶ್ ವಿಜಯವರ್ಗಿಯಾ, ಉಪಾಧ್ಯಕ್ಷ ಮುಕುಲ್ ರಾಯ್ ಮತ್ತು ಪಕ್ಷದ ರಾಜ್ಯ ಅಧ್ಯಕ್ಷ ದಿಲೀಪ್ ಘೋಷ್ ಅವರೊಂದಿಗೆ ಮತ್ತು ಬೂತ್, ಜಿಲ್ಲಾ ಮಟ್ಟದ ನಾಯಕರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ಸುದ್ದಿ ಸಂಸ್ಥೆ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾಕ್ಕೆ ತಿಳಿಸಿವೆ.

ಅಮಿತ್ ಶಾ ಈ ವರ್ಷದ ಆರಂಭದಲ್ಲಿ ಪಶ್ಚಿಮ ಬಂಗಾಳದಲ್ಲಿ ವರ್ಚುವಲ್ ರ್‍ಯಾಲಿ ನಡೆಸಿದ್ದರು. ಕೊರೊನಾ ಲಾಕ್‌ಡೌನ್‌ ನಂತರ ಪಶ್ಚಿಮ ಬಂಗಾಳಕ್ಕೆ ಇದು ಅವರ ಮೊದಲ ಪ್ರವಾಸವಾಗಿದೆ.  ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್ ಅವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ ಎಂದು ಟೀಕಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಶಾ ಅವರ ಭೇಟಿ ಮಹತ್ವದ್ದಾಗಿದೆ.

ಪಶ್ಚಿಮ ಬಂಗಾಳದ ಬಿಜೆಪಿ ನಾಯಕರು ಮತ್ತು ರಾಜ್ಯಪಾಲ ಜಗದೀಪ್ ಧಂಕರ್ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕೆಟ್ಟುಹೋಗಿದೆ ಎಂದು ಆರೋಪಿಸಿ, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕೆಂದು ಒತ್ತಾಯಿಸುತ್ತಿದ್ದಾರೆ.

2019 ರ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ 42 ಲೋಕಸಭಾ ಸ್ಥಾನಗಳಲ್ಲಿ 18 ಸ್ಥಾನಗಳನ್ನು ಗೆದ್ದ ಬಿಜೆಪಿ ಆಡಳಿತಾಎ ತೃಣಮೂಲ ಕಾಂಗ್ರೆಸ್ಸಿನ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಿದೆ. ಹೀಗಾಗಿ ಈ ಬಾರಿ ಹೇಗಾದರೂ ಪಕ್ಷವನ್ನು ಅಧಿಕಾರಕ್ಕೆ ತರುವ ಉದ್ದೇಶದಿಂದ ಅಮಿತ್ ಶಾ ಹೊಸ ಪಟ್ಟುಗಳನ್ನು ಹಾಕುತ್ತಿದ್ದಾರೆ. ಜೆ.ಪಿ.ನಡ್ಡಾರ ಪ್ರವಾಸವನ್ನು ರದ್ದುಗೊಳಿಸಿ, ತಾವೇ ಅಲ್ಲಿನ ಸ್ಥಿತಿಗತಿಗಳನ್ನು ತಿಳಿದುಕೊಳ್ಳು ಹೊರಟಿದ್ದಾರೆ.

ಮುಂದಿನ ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ 10 ವರ್ಷಗಳ ಆಡಳಿತವನ್ನು ಕೊನೆಗೊಳಿಸುವುದಾಗಿ ಬಿಜೆಪಿ ಪಕ್ಷದ ಮುಖಂಡರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ನಿರೀಕ್ಷಿತ ಯಶಸ್ಸು ಗಳಿಸುವಲ್ಲಿ ವಿಫಲವಾದ ಪ.ಬಂಗಾಳದ ಬಿಜೆಪಿ ರ್‍ಯಾಲಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...

ಮುಂಬೈ: 2 ದಿನಗಳಿಂದ ಹೊತ್ತಿ ಉರಿಯುತ್ತಿರುವ ಪೊವೈ ಬೆಟ್ಟಗಳು: ನಿವಾಸಿಗಳಿಂದ ಅಧಿಕಾರಿಗಳ ನಿಷ್ಕ್ರಿಯತೆಯ ಆರೋಪ 

ಮುಂಬೈನ ಪೊವೈ ಬೆಟ್ಟಗಳ ಪ್ರದೇಶದಲ್ಲಿ ಸಂಭವಿಸಿದ ಬೆಂಕಿ ಕಳೆದ ಎರಡು ದಿನಗಳಿಂದ ಉರಿಯುತ್ತಿದೆ ಎಂದು ವರದಿಯಾಗಿದೆ. ನಿವಾಸಿಗಳು ಬೆಂಕಿಯ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ನಾಗರಿಕ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆಯು ಸಿಕ್ಕಿಲ್ಲ...

‘ದಲಿತ ಕ್ರೈಸ್ತ’ರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು: ಮಾನವ ಹಕ್ಕುಗಳ ಕಾರ್ಯಕರ್ತ ವಿನ್ಸೆಂಟ್ ಕಥಿರ್

"ದಲಿತ ಕ್ರೈಸ್ತರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು, ಇದರಿಂದಾಗಿ ಜಾತಿ ಹಿಂಸಾಚಾರದ ಬಲಿಪಶುಗಳು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಪ್ರಕಾರ ಸರ್ಕಾರದಿಂದ ಪರಿಹಾರವನ್ನು ಪಡೆಯಬಹುದು" ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಹಾಗೂ...