Homeಮುಖಪುಟಅಮಿತ್ ಶಾ ಪರೋಕ್ಷವಾಗಿ ತುರ್ತು ಪರಿಸ್ಥಿತಿ ಹೇರಲು ಪ್ರಯತ್ನಿಸುತ್ತಿದ್ದಾರೆ: ಟಿಎಂಸಿ ಆರೋಪ

ಅಮಿತ್ ಶಾ ಪರೋಕ್ಷವಾಗಿ ತುರ್ತು ಪರಿಸ್ಥಿತಿ ಹೇರಲು ಪ್ರಯತ್ನಿಸುತ್ತಿದ್ದಾರೆ: ಟಿಎಂಸಿ ಆರೋಪ

"ರಾಜಕೀಯ ಉದ್ದೇಶದಿಂದ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್‌ ಮಹಾನಿರ್ದೇಶಕರನ್ನು ದೆಹಲಿ ಆಗಮಿಸುವಂತೆ ಸಮನ್ಸ್‌ ನೀಡಲಾಗಿದೆ"

- Advertisement -
- Advertisement -

ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳನ್ನು ವಿಚಾರಣೆಗೆ ಕರೆಸಿ ಭಯ ಹುಟ್ಟಿಸುವ ಮೂಲಕ ರಾಜ್ಯದಲ್ಲಿ ಪರೋಕ್ಷವಾಗಿ ತುರ್ತು ಪರಿಸ್ಥಿತಿ ಹೇರಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಯತ್ನಿಸುತ್ತಿದ್ದಾರೆ ಎಂದು ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಆರೋಪಿಸಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಬೆಂಗಾವಲು ವಾಹನದ ಮೇಲೆ ದಾಳಿಯಾದಗಿನಿಂದ ಈ ಆರೋಪ-ಪ್ರತ್ಯಾರೋಗಳು ಆರಂಭವಾಗಿವೆ.

ಇದರ ಭಾಗವಾಗಿ, “ರಾಜಕೀಯ ಉದ್ದೇಶದಿಂದ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್‌ ಮಹಾನಿರ್ದೇಶಕರನ್ನು ದೆಹಲಿ ಆಗಮಿಸುವಂತೆ ಸಮನ್ಸ್‌ ನೀಡಲಾಗಿದೆ” ಎಂದು ಲೋಕಸಭೆಯಲ್ಲಿನ ತೃಣಮೂಲ ಕಾಂಗ್ರೆಸ್‌ನ ಮುಖಂಡ ಕಲ್ಯಾಣ್ ಬ್ಯಾನರ್ಜಿ ದೂರಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ರಾಷ್ಟ್ರೀಯತೆಯ ಹೆಸರಿನಲ್ಲಿ ಅನ್ಯಧರ್ಮಗಳ ಜನರ ಮೇಲೆ ಸವಾರಿ

ಈ ವಿಷಯದ ಬಗ್ಗೆ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್‌ ಭಲ್ಲಾ ಅವರಿಗೆ ಬರೆದಿರುವ ಪತ್ರದಲ್ಲಿ, “ರಾಜ್ಯಕ್ಕೆ ಸಂಬಂಧಿಸಿದ ವಿಷಯದಲ್ಲಿ ಇಬ್ಬರು ಹಿರಿಯ ಅಧಿಕಾರಿಗಳನ್ನು ಚರ್ಚೆಗೆ ಕರೆದಿರುವುದು ಏಕೆ” ಎಂದು ಪ್ರಶ್ನಿಸಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ರಾಜ್ಯಕ್ಕೆ ಸಂಬಂಧಿಸಿದ ವಿಷಯವಾಗಿದೆ. ಕೇಂದ್ರ ಗೃಹ ಸಚಿವರ ನಿರ್ದೇಶನದ ಮೇರೆಗೆ ಹಿರಿಯ ಅಧಿಕಾರಿಗಳಿಗೆ ಸಮನ್ಸ್‌ ನೀಡಲಾಗಿದೆ. ಈ ಮೂಲಕ ರಾಜ್ಯ ಸರ್ಕಾರಕ್ಕೆ ಬೆದರಿಕೆ ಹಾಕುವ ತಂತ್ರವನ್ನು ಕೇಂದ್ರ ಸರ್ಕಾರ ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ರೈತರ ಹೋರಾಟಕ್ಕೆ ಬೆಂಬಲ ನೀಡಿದ ಎನ್‌ಡಿಎ ಮಿತ್ರಪಕ್ಷ RLP

ಒಕ್ಕೂಟ ವ್ಯವಸ್ಥೆಯನ್ನು ಧಿಕ್ಕರಿಸಿ ಕೇಂದ್ರ ಸರ್ಕಾರವು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದೆ. ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಿಧಾನಸಭೆಗೆ ನಿಷ್ಠೆಯಿಂದ ಇರಬೇಕೇ ಹೊರತು ನಿಮಗೆ ಅಥವಾ ನಿಮ್ಮ ಗೃಹ ಸಚಿವರಿಗೆ ಅಲ್ಲ ಎಂದು ದೂರಿದ್ದಾರೆ.

ಪ್ರಕರಣವೊಂದರಲ್ಲಿ ಅಪರಾಧಿಯಾಗಿದ್ದ ಮತ್ತು 59 ಇತರ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆ ಎದುರಿಸುತ್ತಿರುವ ವ್ಯಕ್ತಿಯೊಬ್ಬ ನಡ್ಡಾ ಅವರ ಬೆಂಗಾವಲು ವಾಹನದಲ್ಲಿದ್ದ. ಈತ ರಸ್ತೆ ಬದಿಯಲ್ಲಿದ್ದ ಟಿಎಂಸಿ ಬೆಂಬಲಿಗರಿಗೆ ಪ್ರಚೋದನಾಕಾರಿ ಸನ್ನೆ ಮಾಡುತ್ತಿದ್ದ ಎಂದೂ ಆರೋಪಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಸರ್ಕಾರಿ ಉದ್ಯೋಗಿಗಳು ಟೀ ಶರ್ಟ್, ಜೀನ್ಸ್ ಧರಿಸುವಂತಿಲ್ಲ!

ಕೋಲ್ಕತ್ತದಿಂದ ದಕ್ಷಿಣ 24 ಪರಗಣ ಜಿಲ್ಲೆಯ ಡೈಮಂಡ್ ಹಾರ್ಬರ್ ಪ್ರದೇಶಕ್ಕೆ ತೆರಳುತ್ತಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಬೆಂಗಾವಲು ಪಡೆಯ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿದೆ ಎಂದು ಆರೋಪಿಸಲಾಗಿದೆ.

ಮುಖ್ಯಮಂತ್ರಿಯ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರ ಸಂಸದೀಯ ಕ್ಷೇತ್ರವಾದ ಡೈಮಂಡ್ ಹಾರ್ಬರ್‌ನಲ್ಲಿ ಈ ಘಟನೆ ನಡೆದಿದೆ.


ಇದನ್ನೂ ಓದಿ: ಕರ್ನಾಟಕ ಸರಕಾರ ಕಲ್ಯಾಣ ಕರ್ನಾಟಕವನ್ನು ಸಂಪೂರ್ಣ ನಾಶ ಮಾಡಲು ಹೊರಟಂತಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...