Homeಮುಖಪುಟಅಮಿತ್ ಶಾ ಟ್ವಿಟರ್ ಖಾತೆ ಬ್ಲಾಕ್: ಟ್ವಿಟರ್ ಅನ್ನು ತರಾಟೆಗೆ ತೆಗೆದುಕೊಂಡ ಸಂಸದೀಯ ಸಮಿತಿ

ಅಮಿತ್ ಶಾ ಟ್ವಿಟರ್ ಖಾತೆ ಬ್ಲಾಕ್: ಟ್ವಿಟರ್ ಅನ್ನು ತರಾಟೆಗೆ ತೆಗೆದುಕೊಂಡ ಸಂಸದೀಯ ಸಮಿತಿ

"ಹಿಂಸೆಗೆ ಪ್ರಚೋದನೆ ನೀಡುವ ಕಂಟೆಂಟ್‌ಗಳನ್ನು ತೆಗೆದುಹಾಕುವುದಕ್ಕೆ ನಮ್ಮಲ್ಲಿ ಬಲವಾದ ನಿಯಮಗಳಿವೆ" ಎಂದು ಟ್ವಿಟರ್ ಮತ್ತು ಫೇಸ್‌ಬುಕ್ ಎರಡೂ ಸ್ಪಷ್ಟಪಡಿಸಿವೆ.

- Advertisement -
- Advertisement -

2020 ರ ನವೆಂಬರ್ ತಿಂಗಳಿನಲ್ಲಿ ಗೃಹಮಂತ್ರಿ ಅಮಿತ್ ಶಾ ಅವರ ಟ್ವಿಟರ್ ಖಾತೆಯನ್ನು ಬ್ಲಾಕ್ ಮಾಡಲಾಗಿತ್ತು. ಈ ಕುರಿತು ವಿಚಾರಣೆಗೆ ಹಾಜರಾದ ಫೇಸ್‌ಬುಕ್ ಮತ್ತು ಟ್ವಿಟರ್‌ನ ಕಾರ್ಯನಿರ್ವಾಹಕರನ್ನು ಸಂಸದೀಯ ಸಮಿತಿ ತರಾಟೆಗೆ ತೆಗೆದುಕೊಂಡಿದೆ.

ಸಂಸದೀಯ ಸಮಿತಿಯ ಕಾರ್ಯಸೂಚಿಯಂತೆ, ನಾಗರಿಕರ ಹಕ್ಕುಗಳನ್ನು ಕಾಪಾಡುವುದು, ಸಾಮಾಜಿಕ ಸುದ್ದಿ ಮಾಧ್ಯಮ ವೇದಿಕೆಗಳ ದುರುಪಯೋಗವನ್ನು ತಡೆಯುವುದು ಮತ್ತು ಡಿಜಿಟಲ್ ವೇದಿಕೆಯಲ್ಲಿ ಮಹಿಳೆಯರ ಸುರಕ್ಷತೆ ಕುರಿತ ವಿಷಯಗಳನ್ನು ಚರ್ಚಿಸಬೇಕಿತ್ತು. ಆದರೆ ಇಲ್ಲಿ, “ಅಮಿತ್ ಶಾ ಅವರ ಟ್ವಿಟರ್ ಖಾತೆಯನ್ನು ಏಕೆ ಬ್ಲಾಕ್ ಮಾಡಲಾಯಿತು? ಈ ಹಕ್ಕನ್ನು ನಿಮಗೆ ಯಾರು ನೀಡಿದರು? ಎಂದು ಅಧಿಕಾರಿಗಳನ್ನು ಪ್ರಶ್ನಿಸಲಾಗಿದೆ” ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದಕ್ಕೆ ಉತ್ತರಿಸಿದ ಅಧಿಕಾರಿಗಳು, ಅಮಿತ್ ಶಾ ಅವರ ಖಾತೆಯಿಂದ ಪೋಸ್ಟ್ ಮಾಡಲಾಗಿದ್ದ ಚಿತ್ರಕ್ಕೆ ಸಂಬಂಧಿಸಿದಂತೆ ಕಾಪಿರೈಟ್ಸ್‌ ಸಮಸ್ಯೆ ಇದ್ದುದರಿಂದ ಅವರ ಖಾತೆಯನ್ನು ತಾತ್ಕಾಲಿಕವಾಗಿ ಬ್ಲಾಕ್ ಮಾಡಬೇಕಾಯಿತು. ಇದು ಆಕಸ್ಮಿಕವಾಗಿ ಆದ ತೊಂದರೆ. ಬಳಿಕ ಅವರ ಖಾತೆಯನ್ನು ಮತ್ತೆ ಚಾಲ್ತಿಯಲ್ಲಿಡಲಾಯಿತು” ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: ಭಾರತದ ಸಂಸತ್ತಿಗೆ ಫೇಸ್‌ಬುಕ್ ಸುಳ್ಳು ಹೇಳುತ್ತಿದೆಯೇ? – ರಾಹುಲ್ ಗಾಂಧಿ ಪ್ರಶ್ನೆ

ಅಮೆರಿಕದಲ್ಲಿ ದ್ವೇಷ ಭಾಷಣ ಮತ್ತು ಹೇಳಿಕೆಗಳನ್ನು ನಿಯಂತ್ರಿಸಲು ತೆಗೆದುಕೊಂಡ ಕ್ರಮಗಳ ವಿವಾದದ ಹಿನ್ನಲೆಯಲ್ಲಿ, “ಭಾರತದಲ್ಲಿ ಸಾಮಾಜಿಕ ಮಾಧ್ಯಮಗಳಿಗೆ ಸಂಬಂಧಿಸಿದಂತೆ ಯಾವುದೇ ನಿರ್ದಿಷ್ಟ ಕಾನೂನು ಇಲ್ಲದಿರುವಾಗ ಟ್ವಿಟರ್ ಖಾತೆಯನ್ನು ಹೇಗೆ ಬ್ಲಾಕ್ ಮಾಡಬಹುದು” ಎಂದು ಸಮಿತಿಯಲ್ಲಿದ್ದ ಬಿಜೆಪಿ ಪ್ರತಿನಿಧಿಗಳು ಪ್ರಶ್ನಿಸಿದ್ದಾರೆ.

“ಹಿಂಸೆಗೆ ಪ್ರಚೋದನೆ ನೀಡುವ ಕಂಟೆಂಟ್‌ಗಳನ್ನು ತೆಗೆದುಹಾಕುವುದಕ್ಕೆ ನಮ್ಮಲ್ಲಿ ಬಲವಾದ ನಿಯಮಗಳಿವೆ” ಎಂದು ಟ್ವಿಟರ್ ಮತ್ತು ಫೇಸ್‌ಬುಕ್ ಎರಡೂ ಸ್ಪಷ್ಟಪಡಿಸಿವೆ.

ವಾಷಿಂಗ್ಟನ್ ಕ್ಯಾಪಿಟಲ್‌ ಮೇಲೆ ನಡೆದ ಹಿಂಸಾಚಾರದ ನಂತರ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಖಾತೆಯನ್ನು ಟ್ವಿಟರ್ ನಿರ್ಬಂಧಿಸಿತ್ತು. ಇದು ನಿಯಮಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸ್ಪಷ್ಟ ಉದಾಹರಣೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಜರಂಗದಳದ ಮೇಲೆ ನಿಷೇಧ ಹೇರುವಂತಹ ಅಂಶಗಳು ಕಂಡುಬಂದಿಲ್ಲ: ಫೇಸ್‌ಬುಕ್ ಇಂಡಿಯಾ

2020 ರ ಆಗಸ್ಟ್‌‌ನಲ್ಲಿ ತನ್ನ ನೀತಿಗಳಲ್ಲಿ ಫೇಸ್‌ಬುಕ್ ಪಕ್ಷಪಾತ ಮಾಡುತ್ತಿದೆ ಎಂದು ವಾಲ್‌ಸ್ಟ್ರೀಟ್ ಜರ್ನಲ್ ವರದಿ ಮಾಡಿತ್ತು. ವರದಿಯಲ್ಲಿ, “ಆಡಳಿತರೂಡ ಬಿಜೆಪಿಯ ಬಗ್ಗೆ ತನ್ನ ವ್ಯಾಪಾರ ಹಿತಾಸಕ್ತಿಗಳಿಗಾಗಿ ಒಲವು ತೋರಿಸಿದೆ ಹಾಗೂ ಫೇಸ್‌ಬುಕ್‌ನ ಕಾರ್ಯನಿರ್ವಾಹಕಿಯಾಗಿದ್ದ ಆಂಖೀ ದಾಸ್ ಮುಸ್ಲಿಂ ವಿರೋಧಿ ಟೀಕೆಗಳನ್ನು ಮಾಡಿದ್ದ ಬಿಜೆಪಿ ನಾಯಕನ ಪರವಾಗಿ ಲಾಬಿ ಮಾಡಿದ್ದಾರೆ” ಎಂದು ಹೇಳಲಾಗಿತ್ತು.

ಈ ವರದಿ ಪ್ರಕಟವಾದ ಕೆಲವೇ ದಿನಗಳಲ್ಲಿ ರಾಜಕಾರಣಿಯೊಬ್ಬರ ಖಾತೆಯನ್ನು ಅಮಾನತ್ತು ಮಾಡಿದ್ದ ಫೇಸ್‌ಬುಕ್, ತನ್ನ ಮೇಲಿನ ಆರೋಪಗಳನ್ನು ನಿರಾಕರಿಸಿತ್ತಾದರೂ ದ್ವೇಷ ಭಾಷಣಗಳನ್ನು ನಿಗ್ರಹಿಸಲು ಇನ್ನೂ ಉತ್ತಮವಾಗಿ ಕ್ರಮಕೈಗೊಳ್ಳಬೇಕಾಗಿದೆ ಎಂದು ಒಪ್ಪಿಕೊಂಡಿತ್ತು. ಅಲ್ಲದೆ ಅದರ ಕಾರ್ಯನಿರ್ವಾಹಕಿಯಾಗಿದ್ದ ಆಂಖೀ ದಾಸ್ ಕೂಡಾ ಫೇಸ್‌ಬುಕ್ ತೊರೆದಿದ್ದರು.

ಭಾರತದಲ್ಲಿ ಐದು ಕಚೇರಿಗಳನ್ನು ನಡೆಸುತ್ತಿರುವ ಫೇಸ್‌ಬುಕ್, ಅಕ್ಟೋಬರ್ ತಿಂಗಳೊಂದರಲ್ಲೇ ಶತಕೋಟಿ ಡಾಲರ್‌ಗಳಷ್ಟು ದುಡ್ಡನ್ನು ಹೂಡಿಕೆ ಮಾಡಿದೆ. ಫೇಸ್‌ಬುಕ್ ಭಾರತವನ್ನು ಬಳಕೆದಾರರ ವಿಷಯದಲ್ಲಿ ತನ್ನ ಅತಿದೊಡ್ಡ ಮಾರುಕಟ್ಟೆಯೆಂದು ಪರಿಗಣಿಸಿದೆ.

ಈ ಕಾರಣಕ್ಕೆ ಫೇಸ್‌ಬುಕ್ ಮತ್ತು ಟ್ವಿಟರ್ ಭಾರತದ ಆಡಳಿತಾರೂಢ ಬಿಜೆಪಿಯ ವಿರುದ್ಧ ಕ್ರಮ ತೆಗೆದುಕೊಳ್ಳಲು ಹಿಂಜರಿಯುತ್ತಿದೆ ಎಂದು ಈ ಹಿಂದೆ ಹಲವರು ಆರೋಪಿಸಿದ್ದರು.


ಇದನ್ನೂ ಓದಿ: ತನ್ನ ವ್ಯವಹಾರದ ರಕ್ಷಣೆಗೆ ಭಜರಂಗದಳದ ಪರ ನಿಂತ ಫೇಸ್‌ಬುಕ್‌: ವಾಲ್‌ಸ್ಟ್ರೀಟ್ ಜರ್ನಲ್ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...